- Friday
- August 21st, 2026
ಚೆಂಬು, ಗೂನಡ್ಕ ಭಾಗದಲ್ಲಿ ಮಧ್ಯಾಹ್ನ 1.21ಕ್ಕೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದೆ. ಜತೆಗೆ ಭಾರಿ ಶಬ್ಧ ಕೇಳಿ ಬಂದಿದೆ. ಭೂಮಿ ಕಂಪಿಸಿದ ಅನುಭವ ನೀಡಿದ್ದು ಜನರನ್ನು ಭಯಭೀತರನ್ನಾಗಿಸಿದೆ.
ಗುತ್ತಿಗಾರು ಗ್ರಾಮ ಪಂಚಾಯತ್ನ ಈ ಕೆಳಗಿನ ಕಾಣಿಸಿದ ಬಾಡಿಗೆ ಕಟ್ಟಡಗಳನ್ನು ದಿನಾಂಕ 04 - 07 - 2022 ನೇ ಸೋಮವಾರ ಅಪರಾಹ್ನ ಗಂಟೆ 3.00 ಕ್ಕೆ ಸರಿಯಾಗಿ ಗ್ರಾ.ಪಂ. ಕಛೇರಿಯಲ್ಲಿ ಬಹಿರಂಗವಾಗಿ ಏಲಂ ಮಾಡಲಾಗುವುದು. ಮೆಟ್ಟಿನಡ್ಕ ಬಸ್ಸು ತಂಗುದಾಣ ಅಂಗಡಿ ಕೋಣೆ, ಹಾಲೆಮಜಲು ಬಸ್ಸು ತಂಗುದಾಣ ಅಂಗಡಿ ಕೋಣೆ, ಕಮಿಲ ಬಸ್ಸು ತಂಗುದಾಣ ಅಂಗಡಿ...
ಸುಳ್ಯದಲ್ಲಿ ಹಲವಾರು ವರುಷಗಳಿಂದ ಸ್ಟುಡಿಯೋ ನಡೆಸಿಕೊಂಡು ಬರುತ್ತಿರುವ ಗೋಪಾಲಕೃಷ್ಣ ಕೆ.ಎಸ್ ರವರಿಗೆ ರಾಜ್ಯ ಮಟ್ಟದ ಛಾಯಾ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜೂ.28 ರಂದು ನಡೆದ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ಛಾಯಾ ಚಿತ್ರಗ್ರಾಹಕರ ಸಂಘದ ಅಧ್ಯಕ್ಷ ಪರಮೇಶ್, ಕಾರ್ಯದರ್ಶಿ ಮುರಳಿ ಹಾಗೂ ಎಲ್ಲಾ ಪದಾಧಿಕಾರಿಗಳು ಮತ್ತು...
ರಸ್ತೆ ಬದಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದ ವ್ಯಕ್ತಿಗೆ 5 ಸಾವಿರ ದಂಡ ವಿಧಿಸಿ ಆತನಿಂದಲೇ ತ್ಯಾಜ್ಯ ತೆರವುಗೊಳಿಸಿದ ಘಟನೆ ಐವರ್ನಾಡು ಗ್ರಾ.ಪಂ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ನಡೆದಿದೆ. ಜೂ.1 ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಬಗ್ಗೆ ಪಿಡಿಓಗೆ ದೂರು ಹೋಗಿತ್ತು.ತಕ್ಷಣ ಎಚ್ಚೆತ್ತ ಪಿಡಿಒ ಶ್ಯಾಮ್ ಪ್ರಸಾದ್...
ಮನೆಯೊಂದರ ಮೇಲೆ ಮಣ್ಣು ಕುಸಿದು ಹಾನಿಯಾಗಿದೆ. ಚೆಂಬು ಗ್ರಾಮದ ಪೂಜಾರಿಗದ್ದೆ ಗಿರಿಧರ ಎಂಬವರ ಮನೆ ಮೇಲೆ ಕುಸಿದ ಮಣ್ಣು ಕುಸಿದಿದೆ. ರಾತ್ರಿ ಸುಮಾರು 3 ಗಂಟೆ ಸಮಯದಲ್ಲಿ ಶಬ್ಧದೊಂದಿಗೆ ಕುಸಿದ ಮಣ್ಣು ಕುಸಿದಿದೆ. ರಾತ್ರಿಯಿಡೀ ನಿರಂತರ ಮಳೆ ಸುರಿದ ಹಿನ್ನೆಲೆ ಭೂಕುಸಿತ ವಾಗಿರುವ ಸಾಧ್ಯತೆ ಎನ್ನಲಾಗಿದೆ. ಸರಣಿ ಭೂಕಂಪನ ಕೇಂದ್ರ ಸ್ಥಳದಲ್ಲಿ ಭೂಕುಸಿತದಿಂದ ಆಗಿರುವುದರಿಂದ ಸ್ಥಳೀಯರಲ್ಲಿ...
ಕಲಬುರಗಿ ರಂಗ ಸಂಗಮ ಕಲಾವೇದಿಕೆಯು ಕಳೆದ 9 ವರ್ಷಗಳಿಂದ ನೀsಡುತ್ತಾ ಬಂದಿರುವ ಎಸ್.ಬಿ.ಜಂಗಮಶೆಟ್ಟಿ ರಾಜ್ಯ ಮಟ್ಟದ ರಂಗ ಪ್ರಶಸ್ತಿಗೆ ಹಿರಿಯ ರಂಗಕರ್ಮಿ, ರಂಗಮಾಂತ್ರಿಕ ಜೀವನರಾಂ ಸುಳ್ಯರನ್ನು ಆಯ್ಕೆಯಾಗಿದ್ದಾರೆ.ಪ್ರಶಸ್ತಿ ಆಯ್ಕೆಗಾಗಿ ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಅಧ್ಯಕ್ಷ ಎಲ್.ಬಿ.ಶೇಖ್ ಮಾಸ್ತರ್ ಅಧ್ಯಕ್ಷತೆಯಲ್ಲಿ, ಹಿರಿಯ ರಂಗಕರ್ಮಿ ಎಚ್.ಎಸ್. ಬಸವಪ್ರಭು, ಶಾಂತಾ ಕುಲಕರ್ಣಿ, ಸಾಹಿತಿ ಬಿ.ಎಚ್.ನಿರಗುಡಿ, ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ್,...
ರಾಜಸ್ಥಾನದ ಉದಯಪುರ ಎಂಬಲ್ಲಿ ನಡೆದ ಟೈಲರ್ ಕನ್ನಯ್ಯ ಲಾಲ್ ರವರ ಭೀಕರ ಹತ್ಯೆಯನ್ನು ಖಂಡಿಸಿ ಸುಳ್ಯ ವಿಶ್ವ ಹಿಂದೂ ಪರಿಷದ್, ಬಜರಂಗದಳ ಪ್ರಖಂಡದ ವತಿಯಿಂದ ಪ್ರತಿಭಟನಾ ಸಭೆಯು ಸುಳ್ಯ ತಾಲೂಕು ಕಛೇರಿ ಮುಂಭಾಗದಲ್ಲಿ ಜೂ.30 ರಂದು ನಡೆಯಿತು. ಬಳಿಕ ಸೇರಿದ ಸಂಘಟನೆಯ ಕಾರ್ಯಕರ್ತರು ತಹಶಿಲ್ದಾರರ ಮುಖಾಂತರ ಹತ್ಯೆಗೈದ ಕೊಲೆಗಡುಕರಿಗೆ ತಕ್ಕ ಶಿಕ್ಷೆ ವಿಧಿಸುವಂತೆ ರಾಷ್ಟ್ರಪತಿಯವರಿಗೆ ಮನವಿಯನ್ನು...
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ನಿನ್ನೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ , ದೇವರ ದರ್ಶನ ಪಡೆದು, ಸರ್ಪ ಸಂಸ್ಕಾರ ಪೂಜೆ ನೆರವೇರಿಸಿ ಇಂದು ಸುಳ್ಯ ಮಾರ್ಗವಾಗಿ ಮಡಿಕೇರಿಗೆ ತೆರಳಿದರು. ಸುಳ್ಯ ನಗರದಲ್ಲಿ ಸುಳ್ಯ ಪೋಲೀಸರು ಬಂದೋಬಸ್ತ್ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಕೊಡಗು ಹಾಗೂ ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ೫ನೇ ಬಾರಿ ಕಂಪನದ ಅನುಭವ ಉಂಟಾಗಿದೆ. ಚೆಂಬು, ಗೂನಡ್ಕ ಹಾಗೂ ಉಬರಡ್ಕದಲ್ಲಿ 10.45 ಕ್ಕೆ ಕಂಪಿಸಿದೆ ಎಂದು ತಿಳಿದು ಬಂದಿದೆ. ಜನರು ಕಂಪನಕ್ಕೆ ಹೆದರಿ ಮನೆಯಿಂದ ಹೊರಗೆ ಬಂದಿದ್ದಾರೆ ಎನ್ನಲಾಗಿದೆ.
Loading posts...
All posts loaded
No more posts
