ಬಂದಡ್ಕ : ಪಾಲಾರ್ ಮಲ್ಟಿ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ಶುಭಾರಂಭ

ಡಾ| ಶರಣ್ಯ ಅಖಿಲೇಶ್ ಭಟ್ ಪಾಲಾರ್ ಮಾಲಕತ್ವದ ನೂತನ ಡೆಂಟಲ್ ಕ್ಲಿನಿಕ್ ಬಂದಡ್ಕದ ಜಬಲ್ ನೂರ್ ಕಾಂಪ್ಲೆಕ್ಸ್ ನಲ್ಲಿ ಫೆ.14 ರಂದು ಶ್ರೀ ಗಣಪತಿ ಹವನ ಹಾಗೂ ಶ್ರೀ ಧನಲಕ್ಷ್ಮಿ ಪೂಜಾ ವಿಧಿಯೊಂದಿಗೆ ಶುಭಾರಂಭಗೊಂಡಿತು. ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಡಾ| ಮುರಳಿ ಮೋಹನ್ ಚೂಂತಾರು ಮಾತನಾಡಿ ವೈದ್ಯರುಗಳಿಗೆ ಕೇವಲ ನೋವನ್ನು ಶಮನ...

ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಶಿಕ್ಷಕ ಗುರುರಾಜ್ ನ್ಯಾಯಾಲಯಕ್ಕೆ ಶರಣು

ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಆರೋಪದಲ್ಲಿ ನ್ಯಾಯಾಲಯದಿಂದ ಬಂಧನ ವಾರೆಂಟ್ ಗೊಳಗಾಗಿ ತಲೆಮರೆಸಿಕೊಂಡಿದ್ದ ಸುಬ್ರಹ್ಮಣ್ಯದ ಎಸ್ ಎಸ್ ಪಿ ಯು ಕಾಲೇಜಿನ ಪ್ರೌಢಶಾಲಾ ಶಿಕ್ಷಕ ಗುರುರಾಜ್ ಇಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ವಿದ್ಯಾರ್ಥಿನಿಯೊಬ್ಬಳನ್ನು ಅತ್ಯಾಚಾರ ಮಾಡಿದ ಆರೋಪಕ್ಕೊಳಗಾಗಿ ಬಂಧನಕ್ಕೊಳಗಾಗಿದ್ದು, ಒಂದೇ ದಿನದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು. ಅದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯ ಮನೆಯವರು ಹೈಕೋರ್ಟ್ ಮೊರೆ ಹೋಗಿ ಆರೋಪಿಯ...
Ad Widget

ಶುಭವಿವಾಹ: ಮುರಳಿಕೃಷ್ಣ-ಸತ್ಯವತಿ(ಸರಿತಾ)

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀಮತಿ ಸಾವಿತ್ರಿ ಮತ್ತು ಶ್ರೀ ಮೋಹನಕುಮಾರ ಗೌಡರ ಸುಪುತ್ರ ಚಿ|ರಾ|ಮುರಳಿಕೃಷ್ಣ ಅವರ ವಿವಾಹವು ಕಡಬ ತಾಲೂಕು ಎಡಮಂಗಲ ಗ್ರಾಮದ ನಾಗನಕಜೆ ಶ್ರೀಮತಿ ಉಮಾವತಿ ಮತ್ತು ಶ್ರೀ ನಾರ್ಣಪ್ಪ ಗೌಡರ ಸುಪುತ್ರಿ ಚಿ|ಸೌ|ಸತ್ಯವತಿ(ಸರಿತಾ) ರೊಂದಿಗೆ ಫೆ.21ರಂದು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಹರಿಹರ ಪಲ್ಲತ್ತಡ್ಕ :- ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಚಾಲನೆ

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಪ್ರಾರಂಭವಾಗಿದ್ದು,ಫೆ.20 ರಂದು ಬೆಳಿಗ್ಗೆ 9:00 ಗಂಟೆಯಿಂದ ಹಸಿರು ಕಾಣಿಕೆ ಮೆರವಣಿಗೆ ನಡೆಯಿತು. ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 12:30 ರಿಂದ ಅನ್ನಸಂತರ್ಪಣೆ, ಸಾಯಂಕಾಲ ತಂತ್ರಿಗಳ ಆಗಮನ, ರಾತ್ರಿ 8:00 ಗಂಟೆಗೆ ಮಹಾಪೂಜೆ, ರಾತ್ರಿ 8:15 ರಿಂದ ಅನ್ನಸಂತರ್ಪಣೆ...

ವಿಷ ಸೇವಿಸಿದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಸಾವು

ಪುತ್ತೂರು ವಿವೇಕಾನಂದ ಕಾಲೇಜಿನ ಪಿಯುಸಿ ವಿದ್ಯಾರ್ಥಿಯಾಗಿರುವ ಶ್ರಾವ್ಯ ಬೇರಿಕೆ ವಾರದ ಹಿಂದೆ ಮನೆಗೆ ಬಂದಿದ್ದಾಗ ಇಲಿ ಪಾಷಣ ಸೇವಿಸಿ ಅನಾರೋಗ್ಯಕ್ಕೊಳಗಾಗಿದ್ದರು. ಮನೆಯವರಿಗೆ ಗೊತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ಫೆ. 20 ರಂದು ನಿಧನರಾದರು.ಈಕೆ ಮರ್ಕಂಜ ಗ್ರಾಮದ ಹೈದಂಗೂರು ಬೇರಿಕೆ ರಮೇಶ್ ಭಟ್ ರವರ ಪುತ್ರಿ.ಅನಾರೋಗ್ಯ ಕಾರಣಗಳಿಂದ ವಿಧ್ಯಾಭ್ಯಾಸ ಮಾಡಲು ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ವಿಷ...

ಲವಪ್ಪ ಪೈಲಾರು ನಿಧನ

ಅಮರಮುಡೂರು ಗ್ರಾಮದ ಪೈಲಾರು ನಿವಾಸಿ ಮೂಕಮಲೆ ಲವಪ್ಪ ಗೌಡ ರವರು ಫೆ.20 ರಂದು ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು. ಹಲವಾರು ವರ್ಷಗಳಿಂದ ಪೈಲಾರಿನಲ್ಲಿ ಅಂಗಡಿ ನಡೆಸುತ್ತಿದ್ದರು. ಮೃತರು ಪತ್ನಿ ಶ್ರೀಮತಿ ನೀಲಾವತಿ, ಓರ್ವ ಪುತ್ರ ಜಯಪ್ರಕಾಶ್ ಪೈಲಾರು,ಸಹೋದರ,ಸಹೋದರಿಯರನ್ನು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಹರಿಹರಪಲ್ಲತ್ತಡ್ಕ : ದೇವಸ್ಥಾನಕ್ಕೆ ಇನ್ವರ್ಟರ್ ಕೊಡುಗೆ

ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ಫೆ.20 ರಂದು ತಿಶೋರ್ ಕುಮಾರ್ ಮುಚ್ಚಾರ ಮತ್ತು ಶಿವಪ್ರಸಾದ್ ಗೋಳ್ಯಾಡಿ ಅವರು ಇನ್ವರ್ಟರ್ ಅನ್ನು ಕೊಡುಗೆಯಾಗಿ ನೀಡಿದರು.ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ಡಾ| ಚಂದ್ರಶೇಖರ ಕಿರಿಭಾಗ, ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್...

ದುಗಲಡ್ಕ ನೀರಬಿದಿರೆ ರಸ್ತೆ ಬಗ್ಗೆ ಕಾಂಗ್ರೆಸ್ ನಿಂದ ಪ್ರತಿಭಟನೆಯ ದೊಂಬರಾಟ : ಬಿಜೆಪಿ ವ್ಯಂಗ್ಯ

ಹಲವು ವರ್ಷಗಳ ಬೇಡಿಕೆ ಯಾಗಿರುವ ಜಟ್ಟಿಪಳ್ಳ ನೀರಬಿದಿರೆ ದುಗ್ಗಲಡ್ಕ ರಸ್ತೆಯು ಹಂತ ಹಂತದಲ್ಲಿ ಅಭಿವೃದ್ಧಿ ಗೊಳ್ಳುತ್ತಿದ್ದು ಕೆಲಸ ಮಾಡಲು ತಿಳಿಯದ ಕಾಂಗ್ರೆಸ್ಸಿಗರು ಪ್ರತಿಭಟನೆ -ಪಾದಯಾತ್ರೆ ಯ ದೊಂಬರಾಟ ಮಾಡುತ್ತಿದ್ದಾರೆಈ ರಸ್ತೆಯ ಆಯ್ದ ಭಾಗದಲ್ಲಿ ಕಾಂಕ್ರಿಟಿಕರಣ ನಡೆದಿದ್ದು ಈ ರಸ್ತೆಯು ಸುಳ್ಯ ನಗರದಿಂದ ಸುಬ್ರಹ್ಮಣ್ಯ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಹಿನ್ನೆಲೆಯಲ್ಲಿ ಸದ್ರಿ ರಸ್ತೆಯನ್ನು ಆಗಲ...

ಎನ್ ಎಂ ಸಿ: ವೃತ್ತಿ ಮಾರ್ಗದರ್ಶನ ತರಬೇತಿ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಪ್ಲೇಸ್ಮೆಂಟ್ ಮತ್ತು ಕೆರಿಯರ್ ಗೈಡೆನ್ಸ್ ಸೆಲ್ ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತುಮಂಗಳೂರು ವಿಶ್ವವಿದ್ಯಾನಿಲಯದ ಎಂಪ್ಲಾಯ್ಮೆಂಟ್ ಆಫೀಸರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಎಸ್ ಜೆ  ಹೇಮಚಂದ್ರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹಾಗೂ ಉದ್ಯೋಗಾವಕಾಶದ ಕುರಿತು ಮಾಹಿತಿ ನೀಡಿದರು. ...

ಅಮರ ಸುಳ್ಯ ವಾಹನ ಚಾಲಕ ಮಾಲಕರ ಸಂಘದ ಮಹಾಸಭೆ : ಅಧ್ಯಕ್ಷರಾಗಿ ಪಿ.ಜಿ.ಜಯರಾಮ ಪುನರಾಯ್ಕೆ

ಅಮರ ಸುಳ್ಯ ವಾಹನ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಸಂಘದ ಪಾರ್ಕಿಂಗ್ ಸ್ಥಳದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ.ಜಿ.ಜಯರಾಮ ರವರು ವಹಿಸಿದ್ದರು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಪಿ.ಜಿ.ಜಯರಾಮ, ಕಾರ್ಯದರ್ಶಿ ಯಾಗಿ ನಝೀರ್ ಶಾಂತಿನಗರ ಪುನರಾಯ್ಕೆಯಾದರು. 13 ಜನ ನಿರ್ದೇಶಕ ರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿ ನಝೀರ್ ಶಾಂತಿನಗರ...
Loading posts...

All posts loaded

No more posts

error: Content is protected !!