- Wednesday
- August 19th, 2026
ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ ಗ್ರಾಮಿಣ ಅಭಿವೃದ್ಧಿ ಸಚಿವ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಫೆ. 21 ರಂದು ಬೆಳಗ್ಗೆ 10 ಗಂಟೆಗೆ ಖಾಸಗಿ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಪಕ್ಷದ ಧ್ವಜ ಹಾಗೂ ರಾಷ್ಟ್ರ ಧ್ವಜ ಹಿಡಿದು ಪ್ರತಿಭಟನೆಯನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಮಾಡಲಿದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಪಕ್ಷದ...
ಮಳೆಗಾಲದಲ್ಲಿ ದ್ವೀಪದಂತಾಗುತ್ತಿದ್ದ ಮಡಪ್ಪಾಡಿ ಗ್ರಾಮದ ಎಳುವೆ ಭಾಗದ ನಿವಾಸಿಗಳ ಬಹುದಿನಗಳ ಬೇಡಿಕೆಯಾಗಿದ್ದ ಸೇತುವೆ ನಿರ್ಮಾಣ ಕಾಮಗಾರಿಗೆ ಸಚಿವ ಎಸ್ ಅಂಗಾರ ಫೆ.17 ರಂದು ಚಾಲನೆ ನೀಡಿದರು. ಸುಮಾರು ಒಂದು ಕೋಟಿ ರೂ ವೆಚ್ಚದಲ್ಲಿ ಕಡ್ಯ ಹೊಳೆಗೆ ಎಳುವೆ ಬಳಿ ಸೇತುವೆ ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ಬಿಜೆಪಿ ಮಂಡಲ...
ಎಸ್ಕೆಎಸ್ಎಸ್ಎಫ್ ಅಡ್ಕ ಇರುವಂಬಳ್ಳ ಶಾಖೆಯಲ್ಲಿ ಅಧ್ಯಕ್ಷರಾದ ಸಿದ್ದೀಕ್ ಅಡ್ಕ ರವರ ಅಧ್ಯಕ್ಷತೆಯಲ್ಲಿ ಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿ ಎಸ್ ಮುಹಮ್ಮದ್ ಮದನಿ ಉಸ್ತಾದ್ ದುಆ ನೆರವೇರಿಸಿದರು. ಧ್ವಜಾರೋಹಣ ಕಾರ್ಯಕ್ರಮವನ್ನು ಸುಳ್ಯ ರೇಂಜ್ ಮದ್ರಸಾ ಮೆನೇಜ್ ಮೆಂಟ್ & ಜಂಮ್ಯೂಹತುಲ್ ಮುಅಲ್ಲಿಮೀನ್ ಕೋಶಾಧಿಕಾರಿಯಾದ ಹಸೈನಾರ್ ದರ್ಮತಣ್ಣಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಎಸ್ಕೆಎಸ್ಎಸ್ಎಫ್ ಕಾರ್ಯಕರ್ತ ಉಮ್ಮರ್ ಬಂಟ್ರಬೈಲ್ ರವರಿಂದ...
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ನ ಸುಮಾರು 45 ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಯಲ್ಲಿ ಮಂಗಳೂರಿನ ವಿವಿದೆಡೆ ಹೊರಸಂಚಾರ ಮಾಡಿದರು. ನರಹರಿಪರ್ವತ, ಮಂಗಳೂರು ಹಾಲು ಉತ್ಪಾದಕ ಘಟಕ, ಪಿಲಿಕುಳ ನಿಸರ್ಗಧಾಮ, ಸ್ಕೌಟ್ಸ್ ಭವನ, ಪಿಲಿಕುಳ ವಿಜ್ಞಾನ ಪ್ರಾಯೋಗಿಕ ಕೇಂದ್ರ, ಪಣಂಬೂರು ಬೀಚ್ ಮುಂತಾದೆಡೆ ತೆರಳಿ ಮಾಹಿತಿ ಪಡೆದು ಸಂತಸಪಟ್ಟರು. ಸ್ಕೌಟ್ಸ್ ಶಿಕ್ಷಕ...
ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯ ಅಗರಿಕಜೆ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ಹಾಗೂ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವವು ಫೆ.15 ಮತ್ತು ಫೆ.16ರಂದು ಭಕ್ತಿ ಸಡಗರದಿಂದ ನೆರವೇರಿತು. ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮಹಾಗಣಪತಿ ಹೋಮ, ದೈವಗಳಿಗೆ ಕಲಶಾಭಿಷೇಕ, ಪೂರ್ವಕ ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನೆರವೇರಿತು. ಸಂಜೆ ಕುಕ್ಕೆಶ್ರೀ...
ಬದುಕು ಒಂದು ಜಂಜಾಟ, ವಿಧಿಯ ಜೊತೆಗೆ ಕಾದಾಟ,ಸೋಲು-ಗೆಲುವಿನ ಮಧ್ಯೆ ನಮ್ಮ ಪರದಾಟ…ಬದುಕೇ ಸೆಣಸಾಟ, ಯಾತಕೆ ಕಾದಾಟ…ಮುಗಿಯದ ಈ ಆಟ, ಬದುಕಿನ ಸೆಣಸಾಟ…ಈ ಬದುಕಿನ ಹಾದಿಲಿ ನೋವು-ನಲಿವು ಸಾಮಾನ್ಯ, ಸರಿದೂಗಿಸಿ ಸಾಗುವವನೇ ಅಸಾಮಾನ್ಯ, ಇಲ್ಲಿ ಅಸಾಮಾನ್ಯ…ಬದುಕಿನ ಪ್ರತಿ ಹೆಜ್ಜೆಲೂ ಸೋಲು ಕಲಿಸುವುದು ಪಾಠ, ಸೋತು ಗೆದ್ದವರು ಸೃಷ್ಟಿಸುವರು ಇತಿಹಾಸ…ಈ ನೋವಿನ ಬದುಕಿನಲಿ ಯಾರು ಯಾರಿಗೂ ಅಲ್ಲ, ನಮ್ಮವರೇ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯದ ಸುಬ್ರಹ್ಮಣ್ಯ ಕಾರ್ಯಕ್ಷೇತ್ರದಲ್ಲಿ ಫೆ.18 ರಂದು ಡಿಜಿಟಲ್ ಸೇವಾ ಕೇಂದ್ರವನ್ನು ಉದ್ಘಾಟಿಸಲಾಯಿತು.ಡಿಜಿಟಲ್ ಸೇವಾ ಕೇಂದ್ರವನ್ನು ಬಳ್ಪ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಕಾರ್ಯದರ್ಶಿಯಾದ ಮೋನಪ್ಪ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಜನಜಾಗೃತಿ ವೇದಿಕೆಯ ನಿಕಟಪೂರ್ವ ಅದ್ಯಕ್ಷರು ಹಾಗೂ ಹಾಲಿ ಸದಸ್ಯರಾದ ವಿಮಲಾ ರಂಗಯ್ಯ...
ಮೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಕೊಲ್ಲಮೊಗ್ರು ಗ್ರಾಮದ ಮಲ್ಲಾಜೆ ಬೆಂಡೋಡಿ ರಸ್ತೆಯ ಮಲ್ಲಾಜೆ ಎಂಬಲ್ಲಿ ರೂ.10 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಂಕ್ರೀಟೀಕರಣದ ಮೂಲಕ ಈ ಭಾಗದ ಜನರ ಬಹುವರ್ಷದ ಬೇಡಿಕೆಗೆ ಸ್ಪಂದಿಸಿ ಫೆ.18 ರಂದು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಸುಳ್ಯ...
ಹರಿಹರಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಳದಲ್ಲಿ ಫೆ.20 ರಿಂದ 22 ರವರೆಗೆ ನಡೆಯುವ ಜಾತ್ರೋತ್ಸವ ಮತ್ತು ಇತರ ಸಂದರ್ಭದಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರ ವ್ಯವಹಾರಕ್ಕೆ ಅವಕಾಶ ನೀಡದಂತೆ ಮತ್ತು ದೇವಳದಲ್ಲಿ ಏಕರೂಪ ವಸ್ತ್ರಸಂಹಿತೆ ಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಹಿಂದು ಜಾಗರಣ ವೇದಿಕೆ ಸುಳ್ಯ ತಾಲೂಕು ಸಮಿತಿ ವತಿಯಿಂದ ದೇವಳದ ಅಭಿವೃದ್ಧಿ ಸಮಿತಿ ಸಂಚಾಲಕರಿಗೆ ಮನವಿ ಸಲ್ಲಿಸಲಾಯಿತು. ಈ...
Loading posts...
All posts loaded
No more posts
