- Tuesday
- August 18th, 2026
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11 ಶುಕ್ರವಾರದಂದು ಆರಂಭಗೊಂಡಿದ್ದು ಫೆ.14 ಸೋಮವಾರದ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದ್ದು, ಇಂದು ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಬೆಳಗ್ಗೆ ಗಣಪತಿ ಹವನ, ಕಲಶ ಪೂಜೆ, ಕಲಶಾಭಿಷೇಕ ನಡೆಯಿತು. ಕಲ್ಲೇರಿತ್ತಾಯ ಮಹಿಳಾ ಭಜನಾ ತಂಡದಿಂದ ಭಜನಾ ಸೇವೆ...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ ಫೆ.16ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದ್ದು, ಇಂದು(ಫೆ.12) ಬೆಳಗ್ಗೆ ಉಗ್ರಾಣ ಮುಹೂರ್ತ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಸುನಿಲ್ ರೈ ಪುಡ್ಕಜೆ,ಅರ್ಚಕರಾದ ಉದಯಕುಮಾರ.ಕೆ.ಟಿ, ವ್ಯವಸ್ಥಾಪನ...
ವಿದ್ಯಾರ್ಥಿ ಸಮುದಾಯ ವಿದ್ಯಾಭ್ಯಾಸ ಮಾಡುವ ಬದಲಿಗೆ ರಾಜಕೀಯ ಕಾರಣಗಳಿಂದ ವೈಮನಸ್ಸು ಬೆಳೆಯುತ್ತಿರುವುದು ಅಪಾಯಕಾರಿ. ಅಲ್ಲದೇ ಧ್ವಜ ಸ್ತಂಭದ ಮೇಲೆ ರಾಷ್ಟ್ರ ಧ್ವಜ ಮಾತ್ರ ಹಾರಿಸಬೇಕೆ ಹೊರತು ಕೇಸರಿ ಧ್ವಜಗಳನ್ನು ಅಲ್ಲ. ಅಂತಹ ಕೃತ್ಯಗಳನ್ನು ನಡೆಸಿದವರ ಮೇಲೆ ಪೋಲಿಸರು ಕೇಸು ದಾಖಲಿಸಬೇಕು ಎಂದು ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಭರತ್ ಮುಂಡೋಡಿ ಹೇಳಿದರು.ಅವರು ಫೆ.11ರಂದು ಪ್ರೆಸ್ ಕ್ಲಬ್ ನಲ್ಲಿ...
ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ತೋಟಗಾರಿಕಾ ಇಲಾಖೆ ಸುಳ್ಯ ಇದರ ವತಿಯಿಂದ ಫೆ.11 ರಂದು ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮ ಮತ್ತು ರೈತ ಉತ್ಪಾದಕ ಸಂಸ್ಥೆ ರಚಿಸುವ ಬಗ್ಗೆ ಮಾಹಿತಿ ಹಾಗೂ ತಾಳೆ ಬೆಳೆ ಕೃಷಿ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.ಸುಬ್ರಹ್ಮಣ್ಯ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅರಂತೋಡು ಹಿಂದೂ ರುದ್ರಭೂಮಿ ಅಭಿವೃದ್ಧಿಗೆ 2.5 ಲಕ್ಷ ಅನುದಾನ ಮಂಜೂರಾಗಿದ್ದು ಮಂಜೂರಾತಿ ಪತ್ರವನ್ನು ಜಿಲ್ಲಾನಿರ್ದೇಶಕರಾದ ಪ್ರವೀಣ್ ಕುಮಾರ್ ಪಂಚಾಯತ್ ಅಧ್ಯಕ್ಷರಾದ ಹರಿಣಿ ದೇರಾಜೆಯವರಿಗೆ ಹಸ್ತಾಂತರಿಸಿ ಶೀಘ್ರವಾಗಿ ಕಾಮಗಾರಿ ಪೂರ್ತಿಗೊಳ್ಳಲಿ ಎಂದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ವೇತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಯೋಜನಾಧಿಕಾರಿ...
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ಸ್ಕೌಟ್ಸ್ ಮತ್ತು ಗೈಡ್ಸ್ ನ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂದು ಬಗೆಬಗೆಯ ಸುಮಾರು 70 ಬಗೆಯ ಪೌಷ್ಟಿಕ ಆಹಾರಯುಕ್ತ ಖಾದ್ಯಗಳನ್ನು ತಯಾರಿಸಿ ಸಂತಸಪಟ್ಟರು. ಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು ನಿರ್ಣಾಯಕರಾಗಿ ಭಾಗವಹಿಸಿ ಸಹಕರಿಸಿದರು. ಶಾಲಾ ಮುಖ್ಯಗುರು ಸುಬ್ಬಯ್ಯ.ವೈ.ಬಿ ಮಕ್ಕಳ ಚಟುವಟಿಕೆಗೆ ಪ್ರಶಂಸೆ ವ್ಯಕ್ತಪಡಿಸಿದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ...
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಅಣ್ಣಪ್ಪಾದಿ ದೈವಗಳ ನೇಮೋತ್ಸವಗಳು ಇಂದಿನಿಂದ ಆರಂಭಗೊಂಡು ಫೆ. 14ರವರೆಗೆ ನಡೆಯಲಿದ್ದು ಫೆ.11ರಂದು(ಇಂದು) ಊರ ಭಕ್ತಾದಿಗಳಿಂದ ಮತ್ತು ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಿಂದ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ವೈಭವದ ಮೆರವಣಿಗೆಯ ಮೂಲಕ ನಡೆಯಿತು. ದೇವಸ್ಥಾನದ ಧರ್ಮದರ್ಶಿಗಳಾದ ಪರಮೇಶ್ವರಯ್ಯ ಕಾಂಚೋಡು ತೆಂಗಿನಕಾಯಿ ಒಡೆಯುವ ಮೂಲಕ ಹಸಿರು...
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ತನಕ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಪರವಾಗಿ ಹಸಿರು ಕಾಣಿಕೆ ಸಮರ್ಪಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಕಾರ್ಯದರ್ಶಿ...
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವರ ಮತ್ತು ಅಮ್ಮನವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಅಣ್ಣಪ್ಪ ಸ್ವಾಮಿ, ಧರ್ಮದೈವಗಳಾದ ಕಾಳರಾಹು, ಕಾಳರ್ಕಾಯಿ, ಕುಮಾರಸ್ವಾಮಿ ಮತ್ತು ಕಲ್ಲೇರಿತ್ತಾಯ ಹಾಗೂ ಇತರ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ತನಕ ನಡೆಯಲಿದ್ದು ಇದರ ಪೂರ್ವಸಿದ್ಧತೆಯಾಗಿ ಫೆ.10ರಂದು ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಆವರಣದಲ್ಲಿ ಊರಿನ ಯುವಕರಿಂದ ಅಲಂಕಾರ ಸೇವೆ ನಡೆಯಿತು.
ಇತಿಹಾದ ಪ್ರಸಿದ್ಧ ಕಂದ್ರಪ್ಪಾಡಿ ರಾಜ್ಯದೈವ ಹಾಗೂ ಪುರುಷ ದೈವ ದೈವಸ್ಥಾನದಲ್ಲಿ ಜಾತ್ರಮಹೋತ್ಸವಕ್ಕೆ ಫೆ. 10 ರಂದು ಮುಹೂರ್ತ ನಡೆಯಿತು. ಕಂಚುಕಲ್ಲಿಗೆ ತೆಂಗಿನಕಾಯಿ ಒಡೆಯುವ ಮೂಲಕ ಜಾತ್ರೆಗೆ ಮುಹೂರ್ತ ಕಾರ್ಯಕ್ರಮ ನಡೆಯಿತು. ಫೆ. 10 ರಿಂದ ಜಾತ್ರೆ ನಡೆದು ಧ್ವಜಾರೋಹಣ ನಡೆಯುವವರೆಗೆ ದೈವಸ್ಥಾನದ ವ್ಯಾಪ್ತಿಗೊಳಪಟ್ಟ ಮನೆಗಳಲ್ಲಿ ಯಾವುದೇ ಶುಭಕಾರ್ಯ ನಡೆಸುವಂತಿಲ್ಲ ಎಂಬ ಧಾರ್ಮಿಕ ಕಟ್ಟುಪಾಡು ಇಲ್ಲಿ ನಡೆದುಕೊಂಡು...
Loading posts...
All posts loaded
No more posts
