- Tuesday
- August 18th, 2026
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸರಕಾರಿ ಪ್ರೌಢಶಾಲೆ ಎಣ್ಮೂರು ವತಿಯಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ ಜ. 24 ರಂದು ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಡಾ|ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಪೆರುವಾಜೆ ಬೆಳ್ಳಾರೆ ಇಲ್ಲಿನ ಸಹಾಯಕ ಪ್ರಾಧ್ಯಾಪಕಿ ಡಾ| ಸುಪ್ರಿಯಾ.ಪಿ.ಆರ್ ಹೆಣ್ಣು ಮಕ್ಕಳ ಆರೋಗ್ಯ, ಶಿಕ್ಷಣ, ದಿನದ...
ಸುಳ್ಯ ಮತ್ತು ಕಡಬ ತಾಲೂಕಿನ ಸಾಮಾನ್ಯ ಸೇವಾ ಕೇಂದ್ರ ಹಾಗೂ ಗ್ರಾಮ ಮಟ್ಟದ ಕಾರ್ಯನಿರ್ವಾಹಕರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ಜ.24 ರಂದು ತರಬೇತಿ ಕಾರ್ಯಗಾರವನ್ನು ಮಾನವ ಸಂಪನ್ಮೂಲ ಹಿರಿಯ ನಿರ್ದೇಶಕರಾದ ಶ್ರೀಮತಿ ಮಮತಾ ಹರೀಶ್ ರಾವ್ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...
ಮದುವೆ ಕಾರ್ಯಕ್ರಮಕ್ಕೆ ತೆರಳಿ ಹಿಂದಿರುಗುವ ವೇಳೆ ಒಮ್ನಿ ಕಾರು ತೋಟಕ್ಕೆ ಉರುಳಿದ ಘಟನೆ ಇಂದು ದೊಡ್ಡತೋಟ ಬಳಿ ನಡೆದಿದೆ. ಒಮ್ನಿ ಕಾರು ತೋಟಕ್ಕೆ ಉರುಳಿಬಿದ್ದ ಪರಿಣಾಮ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ನಾಲ್ವರು ಜಖಂ ಆಗಿದ್ದಾರೆ. ಒಮ್ನಿ ಕಾರಿನಲ್ಲಿದ್ದ ಬೈತಡ್ಕ ಭರತ್ ಕುಮಾರ್, ಬಾಲಕೃಷ್ಣ, ದಿನೇಶ ಹಾಗೂ ಗುಣಪಾಲ ಎಂಬವರು ಗಾಯಗೊಂಡಿದ್ದಾರೆ. ಅವರೆಲ್ಲರೂ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ 62 ಪಲಾನುಭವಿಗಳಿಗೆ 500 ಲೀಟರ್ ಸಾಮರ್ಥ್ಯದ ಸಿಂಟೆಕ್ಸ್ ಟ್ಯಾಂಕ್ ವಿತರಣಾ ಕಾರ್ಯಕ್ರಮವನ್ನು ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ ಟ್ಯಾಂಕ್ ವಿತರಿಸುವ ಮೂಲಕ ಉದ್ಘಾಟನೆ ಮಾಡಿದರು. ನಂತರ ಮಾತನಾಡಿದ ಅವರು...
ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಜ.30 ಆದಿತ್ಯವಾರದಂದು ಜರುಗಲಿದೆ. ಜಾತ್ರೋತ್ಸವದ ಅಂಗವಾಗಿ ಪೂರ್ವಾಹ್ನ ಗಂಟೆ 8.00ರಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ ಮತ್ತು ಶುದ್ಧಿ ಕಲಶ ನಡೆಯಲಿದೆ. ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 5.00ರಿಂದ ವಿಷ್ಣುಪ್ರಿಯ...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಿಂದ ಜ.29 ಶನಿವಾರದ ವರೆಗೆ ಜರುಗಲಿದೆ. ಜಾತ್ರೋತ್ಸವದ ಅಂಗವಾಗಿ ಜ.26ರಂದು ಬೆಳಗ್ಗೆ 9.30ರಿಂದ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನ್ನಿಧ್ಯದಲ್ಲಿ ವಿಶೇಷ ತಂಬಿಲ ಸೇವೆ, ನಾಗತಂಬಿಲ ನಡೆಯಲಿದೆ.ಬೆಳಗ್ಗೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಮರಪಡ್ನೂರು ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಚೊಕ್ಕಾಡಿ ಉಳ್ಳಾಕುಲು ದೈವಸ್ಥಾನದಲ್ಲಿ ಶ್ರಮದಾನ ನಡೆಸಲಾಯಿತು. ಶ್ರಮದಾನದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.
ಬೆಳ್ಳಾರೆ: ಎಸ್ ಡಿ ಪಿ ಐ ರಾಜ್ಯಾಧ್ಯಕ್ಷರಾಗಿ ಮೊದಲ ಬಾರಿಗೆ ಬೆಳ್ಳಾರೆಗೆ ಆಗಮಿಸಿದ ಅಬ್ದುಲ್ ಮಜೀದ್ ಮೈಸೂರು ರವರನ್ನು ಬೆಳ್ಳಾರೆ ಮಸೀದಿ ಬಳಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಸೇರಿ ಶಾಲು ಹೊದಿಸಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ, ಕೋಶಾಧಿಕಾರಿ ಹಾಜಿ.ಕೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಾಳಿಲ-ಮುಪ್ಪೇರಿಯ ಒಕ್ಕೂಟದ ಸದಸ್ಯರಿಂದ ಜ.23ರಂದು ಅಯ್ಯನಕಟ್ಟೆಯ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಇಲ್ಲಿ ಶ್ರಮದಾನ ನಡೆಸಲಾಯಿತು. ಶ್ರಮದಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತ ಯತೀಶ್. ಕೆ, ಒಕ್ಕೂಟದ ಅಧ್ಯಕ್ಷರಾದ ವೆಂಕಪ್ಪ ನಾಯ್ಕ ಪೋಸೋಡು, ಬಾಳಿಲ ಒಕ್ಕೂಟದ ಸೇವಾ ಪ್ರತಿನಿಧಿ ಹಾಗೂ ಅಯ್ಯನಕಟ್ಟೆ...
Loading posts...
All posts loaded
No more posts
