- Tuesday
- August 18th, 2026
ನಿಂತಿಕಲ್ಲು ಸಮೀಪದ ಎಣ್ಮೂರಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಕಾಳಿಕಾಂಬಾ ಫ್ಲೈವುಡ್ & ಹಾರ್ಡ್ ವೇರ್ ಅಲ್ಯೂಮಿನಿಯಂ ವರ್ಕ್ಸ್ ಸಂಸ್ಥೆಯು ನಿಂತಿಕಲ್ಲಿನ ಸಾನಿಧ್ಯ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಜ.10ರಂದು ಶುಭಾರಂಭಗೊಳ್ಳಲಿದೆ. ಬೆಳಗ್ಗೆ 9.00 ಗಂಟೆಗೆ ಸರಿಯಾಗಿ ಸಂಸ್ಥೆಯು ಶುಭಾರಂಭಗೊಳ್ಳಲಿದೆ. ಸಂಸ್ಥೆಯಲ್ಲಿ ಫ್ಲೈವುಡ್, ಸನ್ ಮೇಕ್ ಡೋರ್, ಬಿಜಾಗ್ರ, ಡೋರ್ ಲಾಕ್ಸ್, ಬೀಡಿಂಗ್, ಫೆವಿಕಾಲ್, ಟಚ್ ವುಡ್ ಹಾಗೂ ಇನ್ನಿತರ ಹಾರ್ಡ್...
ಕ್ಯಾನ್ಸರ್ ರೋಗಿಗಳಿಗೆ ತಾನು ಎರಡು ವರ್ಷಗಳಿಂದ ಪ್ರೀತಿಯಿಂದ ಬೆಳೆಸಿದ ತಲೆಕೂದಲನ್ನು ದಾನ ಮಾಡುವ ಮೂಲಕ ಮಂಡೆಕೋಲು ಗ್ರಾಮದ ಮಹೇಶ್ ಪೇರಾಲು ನೋವಿನಲ್ಲಿರುವ ಕ್ಯಾನ್ಸರ್ ಪೀಡಿತರಿಗೆ ಚೈತನ್ಯ ತುಂಬಿದ್ದಾರೆ. ಪುತ್ತೂರಿನ ಮುಳಿಯ ಫೌಂಡೇಷನ್ ಮುಖಾಂತರ ಸ್ವ ಇಚ್ಛೆಯಿಂದ ಕೇಶದಾನ ಮಾಡಿದ್ದಾರೆ. ಜ.7ರಂದು ಕೇಶದಾನ ಮಾಡಿರುವ ಇವರಿಗೆ ಮುಳಿಯ ಫೌಂಡೇಶನ್ ವತಿಯಿಂದ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಇವರು...
ಹೂ ವ್ಯಾಪಾರಿಯ ಪುತ್ರಿ ದೀಕ್ಷಾ ಎಲಿಮಲೆ ಇವರು ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ಮಾಡಿದ್ದಾಳೆ. ಭುನಮನಸನದಲ್ಲಿ 1ಗಂಟೆ 10 ಸೆಂಕೆಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾಳೆ. ಕಳೆದ 8 ತಿಂಗಳಿಂದ ಯೋಗಾಭ್ಯಾಸವನ್ನು ಆನ್ಲೈನ್ ಮೂಲಕ ನಿರಂತರ ಯೋಗ ಕೇಂದ್ರ ಸುಳ್ಯ ಇದರ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ...
ಗೆಳೆಯರ ಬಳಗ ದೇವ, ಜ್ಯೋತಿಲಕ್ಷ್ಮಿ ಮಹಿಳಾ ಮಂಡಲ ದೇವ ಇವುಗಳ ಜಂಟಿ ಆಶ್ರಯದಲ್ಲಿ ಕ್ರೀಡೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ ಜ. 2 ರಂದು ದೇವ ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಭೂಸೇನಾ ಯೋಧ ವಿನಯಕುಮಾರ್ ಹಿರಿಯಡ್ಕ ಉದ್ಘಾಟಿಸಿದರು. ಪುರುಷರಿಗೆ, ಮಹಿಳೆಯರಿಗೆ,ಸಾರ್ವಜನಿಕ ಮಕ್ಕಳಿಗೆ, ಶಾಲಾಮಕ್ಕಳಿಗೆ, ಅಂಗನವಾಡಿ ಮಕ್ಕಳಿಗೆ ಆಟೋಟ ಸ್ಪರ್ಧಾಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಂಜೆ ನಡೆದ ಸಮಾರೋಪ ಸಮಾರಂಭದ...
ಕೊಡಗಿನ ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ಪೆರಾಜೆಯ ಶಿವಪ್ರಸಾದ್ ಎಂದು ಗುರುತಿಸಲಾಗಿದೆ.
ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದರಿಂದ ವಿದ್ಯಾರ್ಥಿಗಳಿಗೆ ತರಗತಿ ನಡೆಯದ ಕಾರಣ ತೊಂದರೆಯಾಗುತ್ತಿದೆ ಹಾಗೂ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ, ತರಗತಿಗಳು ಯಥಾವತ್ತಾಗಿ ನಡೆಯಬೇಕೆಂದು ಒತ್ತಾಯಿಸಿ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತಹಶೀಲ್ದಾರ್ ಅನಿತಾಲಕ್ಷ್ಮೀ ಹಾಗೂ ಸಚಿವರುಗಳಾದ ಎಸ್.ಅಂಗಾರ ಮತ್ತು ಸುನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅಂಜಿಕಾರು ತಿಮ್ಮಪ್ಪ ಎಂಬವರ ಮಗ ನಿಕ್ಷಿತ್ ರಿಗೆ ಮಂಜೂರಾದ ಮೂಲಭೂತ ಸೌಲಭ್ಯ ವಾತ್ಸಲ್ಯ ಕಿಟ್ ಅನ್ನು ಅರಂಬೂರು ಒಕ್ಕೂಟ ಉಪಾಧ್ಯಕ್ಷರಾದ ವಿಶ್ವನಾಥ್ ವಿತರಿಸಿದರು. ತೀರಾ ಬಡತನದಲ್ಲಿರುವ ಈ ಕುಟುಂಬಕ್ಕೆ ಪ್ರತಿ ತಿಂಗಳು ಧರ್ಮಸ್ಥಳದಿಂದ 1000/- ಸಹಾಯಧನವನ್ನು ನೀಡಲಾಗುತ್ತಿದೆ. ಈ ಸಂದರ್ಭ ಸಂಪಾಜೆ ವಲಯ ಮೇಲ್ವಿಚಾರಕರು ಸುಧೀರ್ ನೆಕ್ರಾಜೆ,...
ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ಜನಾರ್ದನ ಬೆಳಗಜೆ, ಅಧ್ಯಕ್ಷರಾಗಿ ನಾಗಪ್ಪ ಗೌಡ ಪಿ., ಉಪಾಧ್ಯಕ್ಷರಾಗಿ ಧನಂಜಯ ಎಂ., ಕಾರ್ಯದರ್ಶಿಯಾಗಿ ನೇಮಿರಾಜ್ ಪಿ., ಜತೆ ಕಾರ್ಯದರ್ಶಿ ಜೀವನ್ ಎಸ್, ಖಜಾಂಜಿಯಾಗಿ ಬಾಲಕೃಷ್ಣ ಕೆ, ಕ್ರೀಡಾ ಕಾರ್ಯದರ್ಶಿಯಾಗಿ ವಿನಯಕುಮಾರ್ ಕೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ ಎ, ಆಂತರಿಕ...
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠದ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಮಂಡಿಸಿದ ಸಂಸ್ಕೃತ-ಸಂಸ್ಕೃತಿಗೆ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಕೊಡುಗೆ ಒಂದು ಅಧ್ಯಯನ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನು ನೀಡಿದೆ.ಡಾ. ಕುಮಾರ ಸುಬ್ರಹ್ಮಣ್ಯ ಭಟ್. ಎ ಸಹಾಯಕ ಪ್ರಾಧ್ಯಾಪಕರು ಸಂಸ್ಕೃತ ವಿಭಾಗ ವಿಶ್ವವಿದ್ಯಾಲಯ ಕಾಲೇಜು ಇವರು ಮಾರ್ಗದರ್ಶಕರಾಗಿದ್ದಾರೆ.ಈ ಮಹಾಪ್ರಬಂಧವು ಶ್ರೀ...
Loading posts...
All posts loaded
No more posts
