- Tuesday
- August 18th, 2026
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ ಸುಳ್ಯ ವಿದ್ಯುತ್ ವಿತರಣಾಕೇಂದ್ರದಿಂದ ಹೊರಡುವ 11 ಕೆ.ವಿ.ಫೀಡರ್ ಗಳಲ್ಲಿ ತುರ್ತು ನಿಯತಕಾಲಿಕ ಕೆಲಸಹಮ್ಮಿಕೊಂಡಿರುವ ಕಾರಣ ಡಿ.31 ರಂದು ಸುಳ್ಯ-1, ಕೇರ್ಪಳ, ಶ್ರೀರಾಂಪೇಟೆ, ಸಂಪಾಜೆ,ಅರಂತೋಡುಕೋಲ್ಚಾರು, ಕಾವು, ಅಜ್ಜಾವರ, ಕೇನ್ಯ, ಸುಬ್ರಹ್ಮಣ್ಯ ಫೀಡರ್ ಗಳಲ್ಲಿ ಬೆಳಗ್ಗೆ 10 ರಿಂದಸಂಜೆ 6 ರ ತನಕ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕಂದಡ್ಕ ಸಮೀಪ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. 4 ಗಂಟೆ ಸುಮಾರಿಗೆ ಹೆಚ್ ಟಿ ವಿದ್ಯುತ್ ಲೈನ್ ಗೆ ಡಿಕ್ಕಿಯಾಗಿ ಲಾರಿಗೆ ಬೆಂಕಿ ತಗುಲಿದೆ. ಚಾಲಕ ಅಪಾಯದಿಂದ ಪಾರಾಗಿದ್ದು, ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.
ಸುಳ್ಯ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ಸಮಿತಿಯ ವತಿಯಿಂದ ಸುಬ್ರಹ್ಮಣ್ಯ, ನಾಲ್ಕೂರು, ದೊಡ್ಡತೋಟ, ಪಂಜ, ಕಲ್ಮಡ್ಕ, ಗುತ್ತಿಗಾರು, ಸಂಪಾಜೆ, ಪೇರಾಲು, ಸುಳ್ಯ, ಬೆಳ್ಳಾರೆ ಘಟಕದ ಸ್ವಯಂ ಸೇವಕರು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ಶ್ರೀ ದುರ್ಗಾ ದೇವಿಯ ಪ್ರತಿಷ್ಠಾ ಮಹೋತ್ಸವದ ಕಾರ್ಯಕ್ರಮದಲ್ಲಿ ಡಿ.20 ರಿಂದ ಡಿ.26 ರವರೆಗೆ ನಿರಂತರ 7...
ಸುಳ್ಯ:ಮಡಿಕೇರಿ ನಗರ ಸಭೆಯ ಮಾಜಿ ಅಧ್ಯಕ್ಷ ಹಾಗು ಕೆಪಿಸಿಸಿ ಸಂಯೋಜಕರಾದ ಹೆಚ್.ಎಂ.ನಂದಕುಮಾರ್ ಮಡಿಕೇರಿ ಅವರು ಸುಳ್ಯ ಪ್ರೆಸ್ ಕ್ಲಬ್ ಕಟ್ಟಡಕ್ಕೆ ಒಂದು ಲಕ್ಷ ಸಹಾಯ ಧನ ನೀಡಿದ್ದಾರೆ. ಪ್ರೆಸ್ ಕ್ಲಬ್ ಪದಾಧಿಕಾರಿಗಳಿಗೆ ಅವರು ಒಂದು ಲಕ್ಷ ರೂ ಸಹಾಯ ಧನ ಹಸ್ತಾಂತರಿಸಿದರು. ಸುಳ್ಯದ ಅಂಬೆಟಡ್ಕದಲ್ಲಿ ನಿರ್ಮಾಣವಾಗುತ್ತಿರುವ ಪತ್ರಕರ್ತರ ಸಮುದಾಯ ಭವನ ಪ್ರೆಸ್ ಸ್ಥಳಕ್ಕೆ ಭೇಟಿ ನೀಡಿದ...
ಬೆಂಡೋಡಿ ಬಿರ್ಮಡ್ಕದಿಂದ ಎಸ್.ಸಿ ಕಾಲನಿ ವರೆಗೆ ಕಚ್ಚಾ ರಸ್ತೆಗಳು ಮಳೆಗಾಲದಲ್ಲಿ ಮಳೆ ನೀರಿಗೆ ಕೊಚ್ಚಿ ಹೋಗಿದ್ದು ಹಾಗೂ ಕೆಲವು ಕಡೆ ರಸ್ತೆಗಳು ಇಕ್ಕಟ್ಟಾಗಿದ್ದು, ಇದರಿಂದ ವಾಹನ ಸಂಚಾರಕ್ಕೆ ಹಾಗೂ ಜನರಿಗೆ ನಡೆದಾಡಲು ಕಷ್ಟವಾಗುತ್ತಿತ್ತು. ಹಾಗಾಗಿ ಕೊಲ್ಲಮೊಗ್ರ ಗ್ರಾಮಪಂಚಾಯತ್ ಸದಸ್ಯರಾದ ಮಾಧವ ಚಾಂತಾಳ ಅವರ ನೇತೃತ್ವದಲ್ಲಿ ರಸ್ತೆಯ ಫಲಾನುಭವಿಗಳನ್ನು ಸೇರಿಸಿಕೊಂಡು ರಸ್ತೆಯನ್ನು ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ...
ಎಸ್.ಕೆ.ಎಸ್.ಎಸ್.ಎಫ್ ಅಡ್ಕ ಇರುವಂಬಳ್ಳ ಶಾಖಾ ಸಮಿತಿಯ 2022-24ನೇ ಸಾಲಿನ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಡಿಸೆಂಬರ್ 22 ರಂದು ರಿಟರ್ನಿಂಗ್ ಆಫಿಸರ್ ಶಹೀದ್ ಪಾರೆ ಸುಳ್ಯ & ಸಂಪನ್ಮೂಲ ವ್ಯಕ್ತಿ ಶಮೀಮ್ ಅರ್ಶದಿ ಮಂಡೆಕೋಲು ರವರ ನೇತೃತ್ವದಲ್ಲಿ ಝೈನಿಯಾ ತರಬೇತಿ ಕೇಂದ್ರದಲ್ಲಿ ನಡೆಯಿತು.ಸಭೆಯಲ್ಲಿ ಸುಳ್ಯ ಮದ್ರಸಮೇನೇಜ್ಮೆಂಟ್& ಜಮ್ಯೂಹತುಲ್ ಮುಹಲ್ಲಿಮ್ ಕೋಶಾಧಿಕಾರಿ ಹಸೈನಾರ್ ಧರ್ಮತಣ್ಣಿ ,...
ಶೋಚನೀಯ ಸ್ಥಿತಿಯಲ್ಲಿರುವ ಜಯನಗರದ ಸ್ಮಶಾನವನ್ನು ರೋಟರಿ ಕ್ಲಬ್ ವತಿಯಿಂದ ಅಭಿವೃದ್ಧಿ ಮಾಡಲು ನಿರ್ಧರಿಸಿದ್ದೇವೆ. ಈಗಾಗಲೇ ಆ ನಿಟ್ಟಿನಲ್ಲಿ ಕೆಲಸ ಸಾಗುತ್ತಿದ್ದು ರುದ್ರಭೂಮಿ ಛಾವಣಿ ಕೆಲಸ, ಸಿಲಿಕಾನ್ ಛೇಂಬರ್ ಅಳವಡಿಕೆ, ಶೌಚಾಲಯ, ಸ್ನಾನಗೃಹ, ಶಿವನ ಮೂರ್ತಿ ಹಾಗೂ ಪಾರ್ಕ್ ನಿರ್ಮಾಣ ಮಾಡಲು ನೀಲನಕ್ಷೆ ತಯಾರಿಸಿ ಕಾರ್ಯ ಆರಂಭಿಸಲಾಗಿದೆ ಎಂದು ರೋಟರಿ ಕ್ಲಬ್ ಸುಳ್ಯದ ಅಧ್ಯಕ್ಷ ಪ್ರಭಾಕರ ನಾಯರ್...
ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿ ಧನ್ಯಕುಮಾರ್ ದೇರುಮಜಲು ಹಾಗೂ ರಕ್ಷಿತ್ ಶೀರಡ್ಕ ಮಾಲಕತ್ವದ ಜಿ.ಟಿ.ಆರ್ ಹಬ್ (GTR Hub) ರೆಸ್ಟೋರೆಂಟ್ ಡಿ.26 ರಂದು ಉದ್ಘಾಟನೆಗೊಂಡಿತು. ಇಲ್ಲಿ ಗ್ರಾಹಕರಿಗೆ ಚಿಕ್ಕನ್ ಟಿಕ್ಕ, ಶವರ್ಮ,ಅಲ್-ಫಾಹಮ್, ಊಟ, ಉಪಹಾರ, ಪೋರ್ಕ್, ಬಿರಿಯಾನಿ,ಸೂಪ್, ಐಸ್ ಕ್ರೀಮ್, ಟೀ ಹಾಗೂ ಪಾರ್ಸೆಲ್ ವ್ಯವಸ್ಥೆಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದ್ದಾರೆ.
ಸೋಣಂಗೇರಿ ಸಮೀಪ ಹೊಸಗದ್ದೆ ರಸ್ತೆ ಬದಿಯ ಪೊದೆಯಲ್ಲಿ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯದ 2015-2016ನೇ ಸಾಲಿನ ಬಿ.ಎ ಬಳಗದ ಹಿರಿಯ ವಿದ್ಯಾರ್ಥಿವೃಂದದ 5ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಡಿ.26 ರಂದು ಕೆ.ಎಸ್.ಎಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಗೆಳೆಯರೆಲ್ಲರ ಒಟ್ಟುಗೂಡುವಿಕೆಯೊಂದಿಗೆ ಪ್ರತಿ ವರ್ಷದಂತೆ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.ಮಧ್ಯಾಹ್ನದ ಭೋಜನದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಬಿ.ಎ...
Loading posts...
All posts loaded
No more posts
