- Sunday
- August 16th, 2026
ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ 18 ಪೇಟೆ ದೇವಸ್ಥಾನಗಳಿಗೊಳಪಟ್ಟ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ 'ಶ್ರೀ ನವರಾತ್ರಿ ಮಹೋತ್ಸವಗಳು' ಅ.07ನೇ ಗುರುವಾರದಂದು ಪ್ರಾರಂಭಗೊಂಡಿದ್ದು ಬೆಳಿಗ್ಗೆ ದೀಪೋಜ್ವಲನ ನೆರವೇರಿತು. ಅ.08ರಂದು ಮಧ್ಯಾಹ್ನ ದೇವಸ್ಥಾನದ ಉಭಯ ದೇವರಿಗೆ ಮಹಾಪೂಜೆ ನಡೆಯಿತು. ಬಳಿಕ ಭೂರಿಭೋಜನ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ...
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2020 - 21 ನೇ ಸಾಲಿನ ವಾರ್ಷಿಕ ಮಹಾಸಭೆಯು ಅ.08ರಂದು ಸಂಘದ ಪ್ರಧಾನ ಕಛೇರಿ ಕೋಟೆಮುಂಡುಗಾರಿನ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಕೂಸಪ್ಪ ಗೌಡ ಮುಗುಪ್ಪುರವರು ಅಧ್ಯಕ್ಷತೆ ವಹಿಸಿ ಸರ್ವರನ್ನು ಸ್ವಾಗತಿಸಿದರು. ಸಂಘದ ಪ್ರಥಮ ದರ್ಜೆ ಕ್ಲರ್ಕ್ ಉಮೇಶ್ ಕಾರ್ಯಸೂಚಿ ಮಂಡಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ಪ್ರತಿ ವರ್ಷವು ಕೂಡ ತನ್ನ ಹುಟ್ಟುಹಬ್ಬವನ್ನು ಶ್ರೀರಾಮ ರಂಗತ್ತಮಲೆ ವಿಶಿಷ್ಟವಾಗಿ ಆಚರಿಸಿಕೊಂಡು ಬರುತ್ತಿದ್ದಾರೆ. ಹೋಟೆಲ್ ವಿಶ್ವಾಸ್ ನಲ್ಲಿ ಉದ್ಯೋಗಿಯಾಗಿರುವ ಇವರು 23ನೇ ಹುಟ್ಟುಹಬ್ಬವನ್ನು ಸಿಬ್ಬಂದಿಗಳಿಗೆ ಡ್ರೆಸ್ ಕೊಡುವುದರ ಜತೆಗೆ ಬಂದ ಎಲ್ಲಾ ಗ್ರಾಹಕರಿಗೆ ಸಿಹಿ ತಿಂಡಿ ಹುಟ್ಟುಹಬ್ಬ ಆಚರಿಸಿಕೊಂಡರು.
ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಇತ್ತೀಚೆಗೆ ನಮ್ಮನ್ನಗಲಿದ ಕಲಾಪೋಷಕ ಎನ್.ನಾಗೇಶ್ ರೈ ಯವರಿಗೆ ಆತ್ಮೀಯರಿಂದ ನುಡಿನಮನ ಕಾರ್ಯಕ್ರಮ ನಡೆಯಿತು.ಸಾಹಿತಿ ಚಿಂತಕ ಡಾ. ಪ್ರಭಾಕರ ಶಿಶಿಲರವರು ದೀಪ ಪ್ರಜ್ವಲಿಸಿ ನುಡಿನಮನಕ್ಕೆ ಚಾಲನೆ ನೀಡಿ" ಬಹಳಷ್ಟು ಜನರ ಹೃದಯ ಗೆದ್ದ ನಾಗೇಶ್ ರೈ ಓರ್ವ ಸಹೃದಯಿ,ಸಾಂಸ್ಕೃತಿಕವಾಗಿ ಮತ್ತು ಡಿಟಿಪಿ ಟೈಪಿಂಗ್ ಕ್ಷೇತ್ರದಲ್ಲಿ ಅವರ ಕೊಡುಗೆ ಅಪಾರ,ತುಳು...
ಗುತ್ತಿಗಾರು ಸ.ಮಾ.ಹಿರಿಯ ಪ್ರಾಥಮಿಕ ಶಾಲೆಗೆ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅ.7 ರಂದು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಸಂಸದರನ್ನು ಶಾಲಾ ವತಿಯಿಂದ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಶಾಲಾ ಪ್ರಭಾರ ಮುಖ್ಯಶಿಕ್ಷಕ ದಯಾನಂದ ಮುತ್ಲಾಜೆ ಸಂಸದರನ್ನು ಸನ್ಮಾನಿಸಿ, ಹೆಚ್ಚುವರಿ ಕೊಠಡಿ ಬೇಡಿಕೆಯ ಬಗ್ಗೆ ಮನವಿ ಸಲ್ಲಿಸಿದರು. ಮನವಿಗೆ...
ಇತಿಹಾಸ ಪ್ರಸಿದ್ದವಾದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಹಿಂದೂ ದಾರ್ಮಿಕ ಭಾವನೆಗಳಿಗೆ ದಕ್ಕೆಯಾಗುವಂತಹ ವಸ್ತ್ರಗಳನ್ನು ಧರಿಸಿಕೊಂಡು ದೇಗುಲ ಪ್ರವೇಶಿಸುವುದು ಹಿಂದೂ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟುಮಾಡುತ್ತಿದೆ. ಆದ್ದರಿಂದ ಶೀಘ್ರವೇ ದೇವಸ್ಥಾನದ ಆಡಳಿತ ಮಂಡಳಿಯು ಹಿಂದೂ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ದೇವಸ್ಥಾನ ಪ್ರವೇಶಿಸಬೇಕಾಗಿ ಭಕ್ತಾದಿಗಳಿಗೆ ಸೂಚನೆಯನ್ನು ನೀಡಬೇಕಾಗಿ ವಿನಂತಿ ಹಾಗೂ ಪಾಶ್ಚಿಮಾತ್ಯ ಹಾಗೂ ದೇಹದ ಅಂಗಾಂಗಳನ್ನು...
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆಯು ಮರ್ದಾಳ ಗ್ರಾಮಪಂಚಾಯತ್ ಅದ್ಯಕ್ಷರಾದ ಹರೀಶ್ ಕೊಡಂದೂರು ಅವರ ಅಧ್ಯಕ್ಷತೆಯಲ್ಲಿ ಅ.05 ರಂದು ಮರ್ದಾಳ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ಆ ಭಾಗದ ರೈತರ ಬಗ್ಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಸಮಗ್ರ ಮಾಹಿತಿ ನೀಡಿದರು ಹಾಗೂ ಸರ್ಕಾರಿ ಅಧಿಕಾರಿಗಳ ಕೆಲವೊಂದು ತಪ್ಪು...
ಐವರ್ನಾಡು ಪಾಲೆಪ್ಪಾಡಿಯಲ್ಲಿ ಮಹೇಶ್ ಮಾಲಕತ್ವದ ಶ್ರೀ ಶಬರಿ ಇಂಜಿನಿಯರಿಂಗ್ ವರ್ಕ್ಸ್ ಶಾಪ್ ಅ.7 ರಂದು ಶುಭಾರಂಭಗೊಂಡಿದೆ.ಇಲ್ಲಿ ಗೇಟು,ಗೂಡು, ಕಬ್ಬಿಣದ ಮಾಡಿನ ಕೆಲಸ ಹಾಗೂ ಎಲ್ಲಾ ಬಗೆಯ ವೆಲ್ಡಿಂಗ್ ಕೆಲಸಗಳನ್ನು ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.
ಕಸ್ತೂರಿ ಸಿರಿಗನ್ನಡ ವೇದಿಕೆ (ರಿ.), ಬೆಳಗಾವಿ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ 75 ಸಾಧಕರಿಗೆ ವಿದ್ಯಾ ವಿಭೂಷಣ ಪ್ರಶಸ್ತಿಯನ್ನು ಪ್ರಧಾನ ಮಾಡಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶ್ರೀಮತಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಆಯ್ಕೆ ಆಗಿದ್ದು, ಅಕ್ಟೋಬರ್ 10ರಂದು ನಡೆಯುವ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಗೌರವ ವಿದ್ಯಾ ವಿಭೂಷಣ...
ಜೇಸಿಐ ಕಿನ್ನಿಗೋಳಿ ಸಿಟಿ, ಪ್ರಾಂತ್ಯ ಇ, ವಲಯ15, ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜಿಲ್ಲಾ ಮಟ್ಟದ ಮುದ್ದು ಕೃಷ್ಣ ಫೋಟೊ ಸ್ಪರ್ಧೆ ಯನ್ನು ಏರ್ಪಡಿಸಿದ್ದು, ಸುಳ್ಯದ ರೋಟರಿ ವಿದ್ಯಾ ಸಂಸ್ಥೆಯ ಎಲ್.ಕೆ.ಜಿ ವಿದ್ಯಾರ್ಥಿ ಶ್ರೀಹಾನ್ ಎಂ.ಎಸ್., 3ರಿಂದ 6ವರ್ಷದ ವಿಭಾಗದ 40 ಸ್ಪರ್ದಿಗಳಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದು ದಿನಾಂಕ 03.10.2021 ರಂದು ಯುಗಪುರುಷ ಸಭಾಭವನ, ಕಿನ್ನಿಗೋಳಿ,...
Loading posts...
All posts loaded
No more posts
