ಮಂಡೆಕೋಲು : ಅಧ್ಯಕ್ಷೆಯಾಗಿ ವಿನುತಾ ಪಾತಿಕಲ್ಲು – ಉಪಾಧ್ಯಕ್ಷರಾಗಿ ಅನಿಲ್ ತೋಟಪ್ಪಾಡಿ

ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ವಿನುತಾ ಪಾತಿಕಲ್ಲು ಮತ್ತು ಉಪಾಧ್ಯಕ್ಷರಾಗಿ ಅನಿಲ್ ತೋಟಪ್ಪಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ 14 ಮತ್ತು ಕಾಂಗ್ರೆಸ್ 1 ಸ್ಥಾನ ಪಡೆದಿತ್ತು. ಇಲ್ಲಿ ಅವಿರೋಧ ಆಯ್ಕೆ ನಡೆದಿದೆ.

ಸಂಪಾಜೆ ಗ್ರಾ.ಪಂ.ಅಧ್ಯಕ್ಷರಾಗಿ ಜಿ.ಕೆ.ಹಮೀದ್ – ಉಪಾಧ್ಯಕ್ಷೆಯಾಗಿ ಲಿಸ್ಸಿ ಮೊನಾಲಿಸಾ

ಸಂಪಾಜೆ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಿ.ಕೆ.ಹಮೀದ್ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಲಿಸ್ಸಿ ಮೊನಾಲಿಸಾ ಆಯ್ಕೆಯಾಗಿದ್ದಾರೆ. ಇಲ್ಲಿ ಕಾಂಗ್ರೆಸ್ 13 ಮತ್ತು ಬಿಜೆಪಿ 1 ಸ್ಥಾನ ಪಡೆದುಕೊಂಡಿತ್ತು.
Ad Widget

ಕಾಂಚೋಡು ಜಾತ್ರೋತ್ಸವ ಸಂಪನ್ನ

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ. 11 ರಿಂದ ಫೆ. 14 ರ ತನಕ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಿತು. ಫೆ. 14 ರಂದು ಬೆಳಗ್ಗೆ ಬೆಳಗ್ಗಿನ ಪೂಜೆ, ಶ್ರೀ ದೇವಳದಲ್ಲಿ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಬಳಿಕ ಕಲ್ಲೇರಿತ್ತಾಯ ದೈವದ ಭಂಡಾರ ತೆಗೆದು...

ಸುಬ್ರಹ್ಮಣ್ಯ : ಎಬಿವಿಪಿ ವತಿಯಿಂದ ಹುತಾತ್ಮರ ದಿನಾಚರಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಫೆ.14 ರಂದು ಹುತಾತ್ಮರ ದಿನಾಚರಣೆ ಹಾಗೂ ಸ್ವಚ್ಛತೆ ಕಾರ್ಯಕ್ರಮ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾದ -ಯತೀಶ್ ಆರ್ವಾರ್ ಬೌದ್ಧಿಕನ್ನು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತ್ ಕುಕ್ಕೆ ಸುಬ್ರಹ್ಮಣ್ಯ...

ಅರಂತೋಡು : ರಿಕ್ಷಾ ಚಾಲಕರ ವತಿಯಿಂದ ಸಚಿವ ಅಂಗಾರರಿಗೆ ಅಭಿನಂದನೆ

ಅರಂತೋಡು ರಿಕ್ಷಾ ಚಾಲಕ ಮಾಲಕರ ವತಿಯಿಂದ ನೂತನ ಸಚಿವ ಎಸ್ ‌ಅಂಗಾರರಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಹರೀಶ್ ಕಂಜಿಪಿಲಿ, ತಾ.ಪಂ‌.ಅಧ್ಯಕ್ಷ ಚನಿಯ ಕಲ್ತಡ್ಕ, ತಾ.ಪಂ.ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ ಹಾಗೂ ಗ್ರಾ.ಪಂ‌. ಸದಸ್ಯರು ಹಾಗೂ ರಿಕ್ಷಾ ಚಾಲಕರು ಉಪಸ್ಥಿತರಿದ್ದರು.

ಸುಳ್ಯ : ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ಸಭೆ – ಪುಲ್ವಾಮ ಹುತಾತ್ಮ ಸೈನಿಕರಿಗೆ ನುಡಿನಮನ

ಸುಳ್ಯ ಬಿಜೆಪಿ ಮಂಡಲದ ಸಾಮಾಜಿಕ ಜಾಲತಾಣ ಪ್ರಕೋಷ್ಟಕದ ಸಭೆಯು ಸುಳ್ಯದ ಬಿಜೆಪಿ ಕಛೇರಿಯಲ್ಲಿ ಫೆ.14ರಂದು ನಡೆಯಿತು.ಫೆ.28ರಂದು ಮಂಗಳೂರಿನಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟಕದ ಜಿಲ್ಲಾ ಕಾರ್ಯಕಾರಿಣಿ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಅಜಿತ್ ಉಳ್ಳಾಲ್, ಸಹ ಸಂಚಾಲಕ ದೀರಜ್ ಮಂಗಳೂರು, ಅಕ್ಷಯ್, ಸಾಮಾಜಿಕ ಜಾಲತಾಣ ಜಿಲ್ಲಾ...

ಗುರಿ

ಸಮಯವು ನಿಲ್ಲದು ಎಂದಿಗೂ ನಿನಗೆ…ಸಾಗುತಲಿರು ನೀ ಗುರಿಯೆಡೆಗೆಮನಸಲಿ ನೋವಿನ ಬದಲು ಛಲವನು ತುಂಬಿಸುನೀ ನಿನ್ ಎದೆಯೊಳಗೆ… ಕನಸಿನ ಗೋಪುರ ಕಟ್ಟುತ ಕೂರದಿರುನನಸಾಗಿಸುವ ಪ್ರಯತ್ನಪಡು…ಸ್ವಾರ್ಥರಹಿತ ಮನದಲಿ ಸಾಗು ನೀತಲುಪಿಯೆ ತಲುಪುವೆ ಗುರಿಯನ್ನು… ಯಾರಿಗೂ ಅಂಜದೆ, ಯಾರಿಗೂ ಅಳುಕದೆಸಾಗುತಲಿರು ನೀ ಗುರಿಯೆಡೆಗೆ…ಇಲ್ಲಿ ಯಾರಿಗೆ ಯಾರೂ ಆಗರುನೀನೇ ಎಲ್ಲವೂ ನಿನಗಿಲ್ಲಿ… ಸೋಲನು ಸೋಲಿಸಿ, ಗೆಲುವನು ಚುಂಬಿಸಿತಲುಪು ನೀ ನಿನ್ನ ಗುರಿಯನ್ನು…ಸಮಯವು...

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ – ದರ್ಶನ ಬಲಿ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.13 ರಂದು ಬೆಳಿಗ್ಗೆ ಗಣಪತಿ ಹವನ, ಉಷಾಃಪೂಜೆ, ಶಿವೇಲಿ, ನವಕ ಕಲಶಾಭಿಷೇಕ ನಡೆದು, ಮಧ್ಯಾಹ್ನ 12.00 ಕ್ಕೆ ಮಹಾಪೂಜೆ, ಶಿವೇಲಿ, ಅನ್ನಪ್ರಸಾದ ವಿತರಣೆ ನಡೆಯಿತು. ರಾತ್ರಿ 7.30 ಕ್ಕೆ ಶಿವೇಲಿ, ದರ್ಶನ ಬಲಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಫೆ.14 ರಂದು ಬೆಳಿಗ್ಗೆ...

ಎಲಿಮಲೆ : 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ

ಕಳೆದ ವರ್ಷ ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆದ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಎಲಿಮಲೆಯಲ್ಲಿ ಫೆ.13 ರಂದು ನಡೆಯಿತು. ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕೃ.ಷಾ. ಮರ್ಕಂಜ, ಪದಾಧಿಕಾರಿಗಳು, ಎ.ವಿ.ತೀರ್ಥರಾಮ, ವಿಷ್ಣು ಭಟ್ ಮೂಲೆತೋಟ, ಗೋಪಿನಾಥ್ ಮೆತ್ತಡ್ಕ, ಶ್ರೀಧರ ಕೆ., ಪ್ರಮೀಳಾ ಗೋಪಿನಾಥ್, ದಯಾನಂದ ಕೆ. ಮತ್ತಿತರರು...

ಎಲಿಮಲೆ : ಮುಖ್ಯ ಶಿಕ್ಷಕ ಗೋಪಿನಾಥ್ ಮೆತ್ತಡ್ಕರಿಗೆ ಅಭಿನಂದನೆ

ಸುಮಾರು 26 ವರುಷಗಳ ಕಾಲ ಸುದೀರ್ಘ ಕಾಲ ಸೇವೆ ಸಲ್ಲಿಸಿ ಪದೋನ್ನತಿಗೊಂಡು ಸರಕಾರಿ ಪ್ರೌಢಶಾಲೆ ಅಜ್ಜಾವರ ಇಲ್ಲಿಗೆ ಮುಖ್ಯ ಶಿಕ್ಷಕರಾಗಿ ತೆರಳಿರುವ ಗೋಪಿನಾಥ್.ಎಂ ಇವರಿಗೆ ಸರಕಾರಿ ಪ್ರೌಢಶಾಲೆ ಎಲಿಮಲೆ, ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಇದರ ವತಿಯಿಂದ ಬೀಳ್ಕೊಡುಗೆ ಹಾಗೂ ಅಭಿನಂದನಾ ಸಮಾರಂಭ ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆಯಿತು. ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ಸಂಚಾಲಕ...
Loading posts...

All posts loaded

No more posts

error: Content is protected !!