- Friday
- May 8th, 2026
ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸಂಪಾಜೆ ಹೋಬಳಿ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಸಿ.ಎನ್ ದಿವಾಕರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ...
ಕುಂಡಲಿನಿ ಯೋಗ ಶಾಲಾ ಬೆಂಗಳೂರು ಇವರು ನಡೆಸಿದ ರಾಷ್ಟ್ರ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಶರತ್ ಮರ್ಗಿಲಡ್ಕ ರವರು ಟಾಪ್ 10ರಲ್ಲಿ 4ನೇ ಪಡೆದಿರುತ್ತಾರೆ.ಈ ಮೊದಲು ದಸರಾ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದರು. ಯೋಗ ಗುರು ಸಂತೋಷ್ ಮುಂಡಕಜೆ ಯವರ ಶಿಷ್ಯ.
ನಾಲ್ಕೂರು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಪತ್ತು ನಿರ್ವಹಣಾ ಸಮಿತಿ ನಾಲ್ಕೂರು ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿ ನಾಲ್ಕೂರು ಘಟಕದ ಸ್ವಯಂ ಸೇವಕರಾದ ಕರುಣಾಕರ ಸಂಪ್ಯಾಡಿ, ನವಿನ ಕುಮಾರ, ಲೋಹಿತ್ ಚೆಮ್ನೂರು ಇವರು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತೆ ಹಾಗೂ ದೇವಸ್ಥಾನಕ್ಕೆ ಬೇಕಾದ ಕಟ್ಟಿಗೆ ಒಡೆಯುವ ಕಾರ್ಯ...
ವಿಶ್ವ ಹಿಂದೂ ಪರಿಷದ್ ಭಜರಂಗದಳ ಸುಳ್ಯ ಪ್ರಖಂಡ ವತಿಯಿಂದ ಬೈಠಕ್ ಹಾಗೂ ಭಜರಂಗದಳ ಪ್ರಥಮ ನಗರ ಸಂಯೋಜಕರಾದ ದಿವಂಗತ ಸಂತೋಷ್ ಮಡ್ತಿಲರಿಗೆ ಶ್ರದ್ದಾಂಜಲಿ ಸಭೆ ನಡೆಯಿತು. 2001ರ ಸಮಯದಲ್ಲಿ ತಾಲೂಕು ಸಂಯೋಜಕರಾದ ಶೈಲೇಶ್ ಅಂಬೆಕಲ್ಲು ನುಡಿ ನಮನ ಸಲ್ಲಿಸಿದರು. ಸಂತೋಷ್ ಮಡ್ತಿಲರವರು ಸಂಘಟನೆಯ ಕಾರ್ಯಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರ ಬಗ್ಗೆ ಭಜರಂಗದಳ ಜಿಲ್ಲಾ ಸಹ ಸಂಯೋಜಕ್ ಲತೀಶ್...
ಚೊಕ್ಕಾಡಿ ಶ್ರೀ ಉಳ್ಳಾಕುಲು ದೈವಸ್ಥಾನದ ಚಾವಡಿ ಬಳಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟ ಅಮರಪಡ್ನೂರು ಚೊಕ್ಕಾಡಿ ಮತ್ತು ಅಮರಮುಡ್ನೂರು ಇದರ ಸದಸ್ಯರಿಂದ ಒಂದು ದಿನದ ಶ್ರಮದಾನ ನಡೆಯಿತು. ಶ್ರಮದಾನದಲ್ಲಿ ಒಕ್ಕೂಟದ ಸದಸ್ಯರು ಭಾಗವಹಿಸಿದರು.
ಸಂಪಾಜೆಯ ಕಾರ್ಮಿಕ ಸಂಘದ ಸದಸ್ಯರಾಗಿದ್ದು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿರುವ ದ.ಕ.ಸಂಪಾಜೆ ಪಂಚಾಯತ್ ಸದಸ್ಯರಾದ ವಿಮಲ ಆರ್.ಪ್ರಸಾದ್ ಮತ್ತು ಚೆಂಬು ಗ್ರಾಮ ಪಂಚಾಯತ್ ಸದಸ್ಯೆ ಕುಸುಮಾ ಯೋಗೇಶ್ವರ ಇವರನ್ನು ಸಂಘಟನೆಯ ವತಿಯಿಂದ ಇಂದು (ಜ.10) ಕಲ್ಲುಗುಂಡಿಯ ಸಂಘದ ಕಛೇರಿಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಕೆ.ಪಿ.ಜೋನಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಕೊರೊನಾ ಎಂಬ ಮಹಾಮಾರಿಯಿಂದ ನಮ್ಮ-ನಮ್ಮ ಜೀವನದಲ್ಲಿ ಸಾಕಷ್ಟು ಬದಲಾವಣೆ ಕಂಡಿದೆ. ಈ ಸಮಯವನ್ನು ಹಾಳು ಮಾಡದೇ ಸದುಪಯೋಗ ಪಡಿಸಿಕೊಂಡ ಅದೆಷ್ಟೋ ಮಂದಿ ಇದ್ದಾರೆ. ಆ ಸಾಲಿಗೆ ಇಲ್ಲೊಬ್ಬಳು ಸೇರುತ್ತಾಳೆ. ಅವಳೇ ಶ್ರೇಯಾ ಮೇರ್ಕಜೆ, ಶ್ರೀ ಗುರುಪ್ರಸಾದ್ ಮೇರ್ಕಜೆ ಮತ್ತು ಪ್ರಮೀಳ ಮೇರ್ಕಜೆರವರ ಪುತ್ರಿ. ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ 7ನೇ ತರಗತಿ ಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾಳೆ. ಜತೆಗೆ...
ಬೆಂಗಳೂರಿನ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜ.10 ರಂದು ನಡೆದ ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ ಹಿರಿಯೂರು, ಚಿತ್ರದುರ್ಗದವರು ಆಯೋಜಿಸಿದ್ದ 2020-2021ನೇ ಸಾಲಿನ ದ್ವಿತೀಯ ವಿಶ್ವ ಕನ್ನಡ ಸಾಹಿತ್ಯೋತ್ಸವ ಸಮಾರಂಭದ ವೇದಿಕೆ ಕವಿಗೋಷ್ಠಿಯಲ್ಲಿ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರು ಸ್ವರಚಿತ ಕವನ ವಾಚಿಸಿ, ವೇದಿಕೆಯ ವತಿಯಿಂದ ಸನ್ಮಾನವನ್ನು ಸ್ವೀಕರಿಸಿದರು. ಲತಾಶ್ರೀ...
ಸದೃಢ ದೇಶ ಕಟ್ಟಲು ಸಜ್ಜನಿಕೆಯ ರಾಜಕಾರಣವೇ ಮೆಟ್ಟಿಲಾಗಬೇಕು. ಸಮಾಜದ ಅಶಕ್ತ ವರ್ಗದವರ ಕಣ್ಣೀರು ಒರೆಸಲು ಸಹೃದಯರ ಅವಶ್ಯಕತೆಯಿದೆ ಎಂಬುದರ ಫಲಿತಾಂಶವೇ ಪೆರುವಾಜೆ ವಾರ್ಡ್ 2ರ ಅಭ್ಯರ್ಥಿಗಳ ವಿಜಯ. ಮತದಾರ ಬಾಂಧವರ ಧೃಢ ನಿಶ್ಚಯ ಹಾಗೂ ಕಾರ್ಯಕರ್ತರು ಮಾಡಿದ ಸೇವಾ ಆಂದೋಲನವೇ ಈ ನಮ್ಮ ಗೆಲುವಿಗೆ ಕಾರಣವಾಗಿದೆ ಎಂದು ಭಾರತೀಯ ಜನತಾ ಪಾರ್ಟಿಯ ಸುಳ್ಯ ಮಂಡಲದ ಪ್ರಧಾನ...
Loading posts...
All posts loaded
No more posts
