- Friday
- August 14th, 2026
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ 8ನೇ ತರಗತಿಯವರಿಗೆ ನಡೆಸಿದ 2020- 21ನೇ ಶೈಕ್ಷಣಿಕ ವರ್ಷದ ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದ ವಿದ್ಯಾರ್ಥಿನಿ ಪಲ್ಲವಿ ಕೆ ಎಸ್ ನಾಲ್ಕು ವರ್ಷಗಳ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ . ಇವರು ಕಾಣಿಯೂರು ಗ್ರಾಮದ ಅಬ್ಬರ ಮನೆ ಶ್ರೀ ಶಿವರಾಮ ಕೆ ಮತ್ತು...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಮ್ಮಾಜೆ, ಕಲ್ಲಬೆಟ್ಟು, ನೆಲ್ಲಿತೀರ್ಥ, ಗುರುಪುರ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ, ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಮೊರಾರ್ಜಿ ದೇಸಾಯಿ/ ಡಾ|ಬಿ.ಆರ್ ಅಂಬೇಡ್ಕರ್/ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಿಗೆ ೬ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆಯನ್ನು ಜೂ.28ರಿಂದ ಆರಂಭಿಸಲಾಗಿದೆ.ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೬ನೇ ತರಗತಿಯಲ್ಲಿ...
ನೆಹರೂ ಮೆಮೋರಿಯಲ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದಿಂದ "ವೃತ್ತಿ ಜೀವನದ ಕಡೆಗೆ ಮಾರ್ಗಸೂಚಿ"ಎಂಬ ವಿಷಯದ ಬಗ್ಗೆ ರಾಜ್ಯಮಟ್ಟದ ವೆಬಿನರ್ ಜುಲೈ 30ರಂದು ನಡೆಯಿತು.ಮಂಗಳೂರು ವಿಶ್ವವಿದ್ಯಾಲಯದ ಸಂಧ್ಯಾ ಕಾಲೇಜಿನ ಉಪನ್ಯಾಸಕಿ ಕುಮಾರಿ ಕಾವ್ಯ ಪಿ ಹೆಗ್ಡೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಚಾರ್ಯ ಡಾ. ಪೂವಪ್ಪ ಕಣಿಯೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ...
ವ್ಯಕ್ತಿಯೋರ್ವ ಅಮಲೇರಿ ಕಾರು ಚಲಾಯಿಸಿದ ಪರಿಣಾಮ ರೋಗಿಯನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಇನ್ನೊಂದು ಕಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು ರಸ್ತೆಯ ಬದಿಯ ತಡೆಬೇಲಿಗೆ ಢಿಕ್ಕಿ ಹೊಡೆದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ವಿನೋಬನಗರದಲ್ಲಿ ಜು. 30 ರಂದು ನಡೆದಿದೆ. ಸುಳ್ಯದಿಂದ ಜಾಲ್ಸೂರು ಕಡೆಗೆ ತೆರಳುತ್ತಿದ್ದ ಪೇರಾಲಿನ ಹುಕ್ರಪ್ಪ ಗೌಡ ಎಂಬವರ ಮಗ ಮಂಜುನಾಥ್ ಚಲಾಯಿಸುತ್ತಿದ್ದ ಮಾರುತಿ...
ಚೊಕ್ಕಾಡಿ ಪ್ರೌಢಶಾಲೆ ಮತ್ತು ಇತರ ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿರುವ ಚೊಕ್ಕಾಡಿ ಎಜುಕೇಷನ್ ಸೊಸೈಟಿಯ ಆಡಳಿತ ಮಂಡಳಿಯನ್ನು ಪುನರ್ ರಚಿಸಲಾಗಿದೆ. ನೂತನ ಅಧ್ಯಕ್ಷರಾಗಿ ಸಚಿವರೂ ಆಗಿರುವ ಶಾಸಕ ಎಸ್. ಅಂಗಾರ ಹಾಗೂ ಸಂಚಾಲಕರಾಗಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು ಆಯ್ಕೆಯಾಗಿದ್ದಾರೆ. ಜುಲೈ 27 ರಂದು ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಈ ಪುನರ್ ರಚನೆ...
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ ವಿಭಾಗದ ಫಾರೆಸ್ಟರ್ ಉಮೇಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಕಳೆದ ಶನಿವಾರ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೂ ಕರೆದೊಯ್ಯಲಾಯಿತಾದರೂ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ಕೌಟುಂಬಿಕ...
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದೇವಿ ಹೈಟ್ಸ್ನ ಅನುಗ್ರಹ ಸಭಾಂಗಣದಲ್ಲಿ ಜು.28 ರಂದು ನಡೆಯಿತು. ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ಆಸ್ಕರ್ ಆನಂದ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಶುಭಹಾರೈಸಿದರು. ನೂತನ ಅಧ್ಯಕ್ಷರಾಗಿ ಪದ್ಮನಾಭ ಬೀಡು, ಕಾರ್ಯದರ್ಶಿ ಕೆ.ವಿನಯಕುಮಾರ್, ಸರ್ಜೆಂಟ್ ಆರ್ಮ್ ರಾಜಗೋಪಾಲ, ನಿಕಟಪೂರ್ವಾಧ್ಯಕ್ಷ ಮೋನಪ್ಪ ಗೌಡ...
ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ಸಹಾಯಕ ಕಮಿಷನರ್ ಡಾ. ಯತೀಶ್ ಉಳ್ಳಾಲ್ ಅವರ ನೇತೃತ್ವದಲ್ಲಿ ಅಧ್ಯಕ್ಷತೆಯಲ್ಲಿ ಸಂಪಾಜೆ ಗ್ರಾಮದ ಸಮಸ್ಯೆ ಬಗ್ಗೆ ಸಭೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ ಹಮೀದ್ಗ್ರಾಮದ ಸಮಸ್ಯೆಗಳ ಸಂಪೂರ್ಣ ವಿವರ ನೀಡಿದರು. ಸಹಾಯಕ ಕಮಿಷನರ್ ಪ್ಲಾಟಿಂಗ್ ಸಮಸ್ಯೆ ಬಗ್ಗೆ ಪ್ರತಿ ಸರ್ವೆ ನಂಬರ್ ಮಾಹಿತಿ ಪಡೆದು, ಜಂಟಿ ಸರ್ವೆ...
ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ 33/11 ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿ ಮುಕ್ತಾಯದ ಹಂತ ತಲುಪಿದ್ದು ಶೀಘ್ರ ಕಾರ್ಯಾರಂಭಗೊಳ್ಳಲಿದೆ. ಇದರಿಂದ ಈ ಭಾಗದ ಕೃಷಿಕರ,ವರ್ತಕರ, ಕಿರು ಇಂಡಸ್ಟ್ರಿಗಳ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.
ಕಿರಣ ರಂಗ ಅಧ್ಯಯನ ಸಂಸ್ಥೆ ಗುತ್ತಿಗಾರು ಸಾರಥ್ಯದಲ್ಲಿ ಕಲಾಮಾಯೆ(ರಿ.) ಏನೆಕಲ್, ನೆಗೆ ನೆನ್ನೆಕ್ಕಿ ತಂಡ ಪ್ರಸ್ತುತ ಪಡಿಸಿದ ಅಮರ ಸುಳ್ಯ ಸುದ್ದಿ ಮತ್ತು ಸೋಲಾರ್ ಪಾಯಿಂಟ್ ನಿಂತಿಕಲ್ಲು ಸಹಕಾರದೊಂದಿಗೆ ಸೀನಿಯರ್ ಟಿವಿ ಆನ್ಲೈನ್ "ಅರೆಭಾಷೆ ಪದ್ಯ ಕವನಗಳ ಗಮ್ಮತ್" ಕಾರ್ಯಕ್ರಮ ಜನಮೆಚ್ಚುಗೆ ಗಳಿಸಿ ಯಶಸ್ವಿಯಾಗಿ ನಡೆಯಿತು.ಇದು ಕೇವಲ ಸ್ಪರ್ದೆಯಾಗಿ ನಡೆಸದೆ ಬರಹಗಾರರಿಗೆ, ಓದುಗರಿಗೆ, ಕೇಳುಗರಿಗೆ ಒಂದು...
Loading posts...
All posts loaded
No more posts
