- Friday
- August 14th, 2026
ಕುಂಡಡ್ಕ- ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 2021-23 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ಕೂರಿನಲ್ಲಿ ಜು.20 ರಂದು ನಡೆಯಿತು. ಗೌರವಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಮುಕ್ಕೂರು, ಅಧ್ಯಕ್ಷರಾಗಿ ಜಯಂತ ಕುಂಡಡ್ಕ, ಕಾರ್ಯದರ್ಶಿಯಾಗಿ ಶಶಿಕುಮಾರ್ ಬಿ.ಎನ್., ಕೋಶಾಧಿಕಾರಿಯಾಗಿ ಜೀವನ್ ಕೊಂಡೆಪ್ಪಾಡಿ ಆಯ್ಕೆಯಾದರು. ನೂತನ ಸಮಿತಿಯನ್ನು ಅಭಿನಂದಿಸಿ ಮಾತನಾಡಿದ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು,...
ಮಂಡೆಕೋಲು ಗ್ರಾಮದ ಕಾಡುಸೊರಂಜ - ಅಮೈ ರಸ್ತೆಯು ತೀರಾ ಹದಗೆಟ್ಟಿದ್ದು ಊರಿನ ಯುವಕರು ಸೇರಿ ದುರಸ್ತಿಪಡಿಸಿದರು. ಶ್ರಮದಾನದಲ್ಲಿ ಮಹೇಶ್, ಪ್ರಶಾಂತ್, ಮಿತೇಶ್, ದಯಾನಂದ ಪಿ.ಕೆ.,ಕೃತೇಶ್, ಕಿಶನ್ ಭಾಗವಹಿಸಿದ್ದರು.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಸನ್ಮಾನ ಹಾಗೂ ಉಪನ್ಯಾಸ ಜುಲೈ 21 ರಂದು ಪೂ ಪೂ.ಗಂಟೆ 10ಕ್ಕೆ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಉದ್ಘಾಟನೆಯನ್ನು ನ.ಪಂ.ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ನೆರವೇರಿಸಲಿದ್ದಾರೆ. ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ. ಅಂಕಣಕಾರರು ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ...
ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಗ್ರಾಮ ಪಂಚಾಯತ್ ಅಜ್ಜಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನದ ಪ್ರಯುಕ್ತ "ಹಸಿರು-ಉಸಿರು" ವನಮಹೋತ್ಸವ ಕಾರ್ಯಕ್ರಮ ಜು. 22ರಂದು ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ನಡೆಯಲಿದೆ. ಸುಳ್ಯದ ವಲಯ...
ಪತ್ರಿಕೆ ಹಾಗೂ ವೆಬ್ಸೈಟ್ ನಲ್ಲಿ ಕೆಲಸ ಮಾಡಲು ಆಸಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ. ಪಾರ್ಟ್ ಟೈಮ್ ಆಗಿಯೂ ಕೆಲಸ ಮಾಡಬಹುದು. ತಮ್ಮ ಊರಿನಲ್ಲಿದ್ದುಕೊಂಡು ಕೆಲಸ ಮಾಡಬಹುದು. ಒಂದು ವಾರ ತರಬೇತಿ ನೀಡಲಾಗುವುದು. ಉತ್ತಮ ವೇತನ ಹಾಗೂ ಕಮಿಷನ್ , ಐ.ಡಿ ಕಾರ್ಡ್ ಕೊಡಲಾಗುವುದು. ಆಸಕ್ತರು ತಮ್ಮ ಬಯೊಡೇಟಾ ವಾಟ್ಸಾಪ್ ಮಾಡಿ 9449387044
ಮೆಸ್ಕಾಂ ಕಛೇರಿ ಎದುರು ನಗರ ಪಂಚಾಯತ್ ವತಿಯಿಂದ ಇಂಟರ್ ಲಾಕ್ ಅಳವಡಿಸಲಾಗಿದ್ದು ಅಲ್ಲಿರುವ ವಿದ್ಯುತ್ ಕಂಬ ತೆಗೆಯದೇ ಇಂಟರ್ ಲಾಕ್ ಅಳವಡಿಸಿದ್ದಾರೆ. ಇಲ್ಲಿ ರಸ್ತೆ ತಿರುವಿನಿಂದ ಕೂಡಿದ್ದು ಎಚ್ಚರ ತಪ್ಪಿದರೆ ವಾಹನ ಸವಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ. ಆದ್ದರಿಂದ ಅಪಾಯಕಾರಿ ಸ್ಥಿತಿಯಲ್ಲಿರುವ ವಿದ್ಯುತ್ ಕಂಬ ತೆರವುಗೊಳಿಸಲು ಸ್ಥಳೀಯಾಡಳಿತ ಹಾಗೂ ಮೆಸ್ಕಾಂ ಗಮನಹರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಗುತ್ತಿಗಾರು ಭಾಗದಲ್ಲಿ ಅಂಬ್ಯುಲೆನ್ಸ್ ಇಲ್ಲದೇ ತುರ್ತು ಸೇವೆಗಳಿಗೆ ಪರದಾಡುವಂತ ಸ್ಥಿತಿ ಇತ್ತು. ಇದೀಗ ಖಾಸಗಿಯವರು ಅಂಬ್ಯುಲೆನ್ಸ್ ಸೇವೆ ಆರಂಭಿಸಿದ್ದಾರೆ. ಶಿವ ಆಂಬ್ಯುಲೆನ್ಸ್ ಸೇವೆಆರಂಭವಾಗಿದ್ದು, ಗುತ್ತಿಗಾರು ಪೇಟೆಯ ಜೀಪು ಸ್ಟಾಂಡ್ ಬಳಿ ಈ ಆಂಬ್ಯುಲೆನ್ಸ್ ಇರಲಿದ್ದು ಸಾರ್ವಜನಿಕರು ಅಗತ್ಯ ಸಂದರ್ಭಗಳಲ್ಲಿಈ ನಂಬರ್ ಗಳನ್ನು 9481327944, 6360251248ಸಂಪರ್ಕಿಸಲು ಕೋರಲಾಗಿದೆ.
ಅಚ್ರಪ್ಪಾಡಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಾದ ಸುಳ್ಯದ ಸೀ ಫುಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮಂಗಳೂರಿನ 4 ಹೆಚ್ ಟ್ರಸ್ಟ್ ವತಿಯಿಂದ ಬ್ಯಾಗ್,ಪುಸ್ತಕ, ಸಮವಸ್ತ್ರ ವಿತರಣೆ ಕಾರ್ಯಕ್ರಮ ಇಂದು ನಡೆಯಿತು.ಈ ಕಾರ್ಯಕ್ರಮದಲ್ಲಿ ಎಸ್.ಡಿ.ಯಂ.ಸಿ ಅಧ್ಯಕ್ಷರಾದ ಹರೀಶ್ ಕಡಪಳ, ಉಪಾಧ್ಯಕ್ಷರಾದ ಜಯಶ್ರೀ, ಮುಖ್ಯಶಿಕ್ಷಕಿ ಶ್ರೀಮತಿ ಶ್ವೇತಾ, ಸಹಶಿಕ್ಷಕರಾದ ಚಿನ್ನಸ್ವಾಮಿ, ಶಾಲಾ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಅಚ್ರಪ್ಪಾಡಿ...
ಪಂಜ ಹೋಬಳಿ ನಾಡ ಕಛೇರಿಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಜು.19 ರಂದು ಸಚಿವ ಎಸ್ ಅಂಗಾರ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ,ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಕಂದಾಯ ನಿರೀಕ್ಷಕ ಎಂ ಎಲ್ ಶಂಕರ, ಡಾ. ರಾಮಯ್ಯ ಭಟ್ , ಶಿವರಾಮಯ್ಯ ಕರ್ಮಜೆ ,ತಾಲೂಕು ಪಂಚಾಯತ್ ಮಾಜಿ ಸದಸ್ಯ...
ಮರ್ಕಂಜದ ಬಿಎಸ್ಎನ್ಎಲ್ ಕೇಂದ್ರವು ಕಳೆದ ಕೆಲವು ವರ್ಷಗಳಿಂದ ಸ್ವಚ್ಚಗೊಳಿಸದೆ ಅರಣ್ಯ ಪ್ರದೇಶದ ಮಧ್ಯೆ ಇದ್ದಂತ್ತಿತ್ತು. ಇದನ್ನು ಮರ್ಕಂಜ ಗ್ರಾ.ಪಂ. ಸದಸ್ಯರಾದ ರಾಜೇಂದ್ರ ಕೊಚ್ಚಿ ನೇತೃತ್ವದಲ್ಲಿ ಸ್ವಚ್ಚಗೊಳಿಸಲಾಯಿತು. ಈ ಸಂದರ್ಭದಲ್ಲಿ ಡಿಲ್ಲಿಕುಮಾರ ಕಾಯರ,ಪುಂಡರೀಕ ನಾಯಕ್ ಗೂಡಂಬೆ,ಚೆನ್ನಕೇಶವ ದೋಳ,ಯತೀಶ್ ಕಂಜಿಪಿಲಿ,ಹರೀಶ್ ಕಾಯಿಪಳ್ಳ,ಗಗನ್ ಅಲ್ಪೆ,ಸೋಮಶೇಖರ್ ಅಡಿಗೈ ದೋಳ ಮೊದಲಾದವರು ಬೆಳೆದಿದ್ದ ಗಿಡ ಗಂಟೆ ಕಡಿದು ಸ್ವಚ್ಚ ಮಾಡಿದರು. ಗಿರಿಜಾ ಅಡಿಗೈ...
Loading posts...
All posts loaded
No more posts
