ಅನ್ಸಾರಿಯಾ ಜೀಲಾನಿ ಅನುಸ್ಮರಣೆ ಮತ್ತು ಗ್ರಂಥಾಲಯ ಉದ್ಘಾಟನೆ

ಅನ್ಸಾರಿಯಾ ಎಜುಕೇಶನ್ ಸೆಂಟರ್ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅನ್ಸಾರಿಯಾ ದ‌ಅವಾ ವಿದ್ಯಾರ್ಥಿಗಳ ಒಕ್ಕೂಟವಾದ ಅನ್ಸಾರುಸುನ್ನಃ ಸ್ಟೂಡೆಂಟ್ ಅಸೋಸಿಯೇಷನ್ ಇದರ ಅಧೀನದಲ್ಲಿ ಜೀಲಾನಿ ಅನುಸ್ಮರಣಾ ಸಂಗಮವು ಡಿ.9 ರಂದು ಅನ್ಸಾರಿಯಾ ಮದರಸ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅನ್ಸಾರಿಯಾ ದ‌ಅವಾ ಕಾಲೇಜ್ ವಿದ್ಯಾರ್ಥಿಗಳಿಗಾಗಿ ಸ್ಥಾಪಿಸಲಾಗಿರುವ ಇಮಾಮ್ ಗಝ್ಝಾಲಿ ಗ್ರಂಥಾಲಯದ ಉದ್ಘಾಟನೆಯನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಲತೀಫ್ ಹರ್ಲಡ್ಕ ನಿರ್ವಹಿಸಿದರು....

ಬಾಳಿಲ : ತರವಾಡು ಮನೆಯಲ್ಲಿ ಶ್ರಮದಾನ

ಬಾಳಿಲ ತೋಟದಮೂಲೆ ತರವಾಡು ಮನೆಯ ವಾರ್ಷಿಕೋತ್ಸವದ ಪೂರ್ವಭಾವಿಯಾಗಿ ಡಿ.13 ರಂದು ಶ್ರಮದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.
Ad Widget

ಕೋಟೆ ದೇವಾಲಯದಲ್ಲಿ ಶ್ರಮದಾನ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕ ಬೆಳ್ಳಾರೆ ಇದರ ವತಿಯಿಂದ ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ಡಿ.13 ರಂದು ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರಮದಾನ ನಡೆಸಲಾಯಿತು. ವಲಯದ ಸಂಯೋಜಕರಾದ ವಸಂತ ಗೌಡ ನೆಟ್ಟಾರು, ಸುಂದರನಾಯ್ಕ ಶೇಣಿ ,ಪ್ರಸಾದ ಕೋಟೆಬನ, ಶೇಷಪ್ಪ ನಾಯ್ಕ ಮಠತ್ತಡ್ಕ, ಶ್ರೀನಿವಾಸ ಮಠತ್ತಡ್ಕ, ಗಂಗಾಧರ ಕಿಲಂಗೋಡಿ, ಐತ್ತಪ್ಪ ಕಿಲಂಗೋಡಿ ಶ್ರಮದಾನದಲ್ಲಿ ಭಾಗವಹಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ...

ಬಳ್ಪದಲ್ಲಿ ರಕ್ತದಾನ ಶಿಬಿರ

ಹಿಂದೂ ಜಾಗರಣ ವೇದಿಕೆ ಬಳ್ಪ ಹಾಗೂ ಎ.ಜೆ.ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಡಿ.13 ರಂದು ಬಳ್ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ರಕ್ತದಾನ ಶಿಬಿರ ನಡೆಯಿತು.ಶಿಬಿರದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರಾದ ಲಿಂಗಪ್ಪ ರೈ ಅರ್ಗುಡಿ ನೆರವೇರಿಸಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಹಿ.ಜಾ.ವೇ. ಬಳ್ಪ ಇದರ ಅಧ್ಯಕ್ಷರಾದ ಪ್ರಖ್ಯಾತ್ ರೈ ಪಾರ್ಚೋಡು ಅಧ್ಯಕ್ಷತೆ ವಹಿಸಿದ್ದರು....

ಕಳಂಜ : ಆಟೋರಿಕ್ಷಾ – ಸ್ಕೂಟಿ ಡಿಕ್ಕಿ

ಕಳಂಜ ಗ್ರಾಮದ ಪಟ್ಟೆಯಲ್ಲಿರುವ ಬಸ್ ತಂಗುದಾಣದ ಸಮೀಪ ವಿಶ್ವನಾಥ ಎಡಮಂಗಲರವರು ಚಲಾಯಿಸುತ್ತಿದ್ದ ಆಟೋರಿಕ್ಷಾ (ಪಂಚಶ್ರೀ ಆಟೋ) ಹಾಗೂ ಕಳಂಜ ನಿವಾಸಿ ಇಸ್ಮಾಯಿಲ್ ಎಂಬವರು ಚಲಾಯಿಸುತ್ತಿದ್ದ ಹೋಂಡಾ ಆಕ್ಟಿವಾ ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಾಹನಗಳು ಜಖಂಗೊಂಡಿದ್ದು, ಸವಾರರಿಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರಾದ ಗಗನ್ ನಾಲ್ಗುತ್ತು, ಪ್ರಶಾಂತ್ ಪಟ್ಟೆ, ಜೀವನ್ ಕಜೆಮೂಲೆ,...

ಗ್ರಾ.ಪಂ. ಚುನಾವಣೆಯಲ್ಲಿ ಎಲ್ಲಾ ಗ್ರಾಮಗಳಲ್ಲಿ ಕಾಂಗ್ರೆಸ್ಸಿನ ಬೆಂಬಲಿತ ಅಭ್ಯರ್ಥಿಗಳು ಕಣಕ್ಕೆ , ಜತೆಗೆ ಹೆಚ್ಚಿನ ಸ್ಥಾನಗಳನ್ನು ಪಡೆಯುವ ವಿಶ್ವಾಸ – ಜಯಪ್ರಕಾಶ್ ರೈ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿದ್ದು ಈ ಬಾರಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಹೆಚ್ಚಿನ ಪಂಚಾಯತ್ ಗಳಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಡಿ.12 ರಂದು ಸುಳ್ಯ ಪ್ರೆಸ್ ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಳೆದ...

ಹೃದಯವಂತರು ಪ್ರಶಸ್ತಿಗೆ ಭಾಜನರಾದ ಪಂಜದ ಪಶುವೈದ್ಯರಾಗಿರುವ ಡಾಕ್ಟರ್ ದೇವಿಪ್ರಸಾದ್ ಕಾನತ್ತೂರು

ಹೃದಯವಾಹಿನಿ ಮಂಗಳೂರು ಮತ್ತು ಎಸ್.ಕೆ. ಮುನ್ಸಿಪಲ್ ಎಂಪ್ಲಾಯಸ್ ಯೂನಿಯನ್ ಆಶ್ರಯದಲ್ಲಿ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಡಿಸೆಂಬರ್ 12 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ಬೆಳಗ್ಗೆ ಕೋಟ ಶ್ರೀನಿವಾಸ ಪೂಜಾರಿ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಆರಂಭಗೊಂಡು ಶಾಸ್ತ್ರೀಯ ನೃತ್ಯ ರೂಪಕ, ಭಾಷಾ ಬಾಂಧವ್ಯ ಗೋಷ್ಠಿ, ಮಿಮಿಕ್ರಿ, ಸಮೂಹ ಗಾಯನ...

ರೈತರ ಹೋರಾಟ ರೈತರ ಹಕ್ಕಿಗಾಗಿಯೇ ಹೊರತು ರಾಜಕೀಯ ಪಕ್ಷಕ್ಕಾಗಿ ಅಲ್ಲ. ರೈತರ ಬಗ್ಗೆ ಮಾತನಾಡುವ ನೈತಿಕತೆ ಪಕ್ಷದಿಂದ ಪಕ್ಷಕ್ಕೆ ಜಿಗಿಯುವ ಇವರಿಗೆ ಇಲ್ಲ – ಲೋಲಜಾಕ್ಷ ಭೂತಕಲ್ಲು

ದೇಶದಾದ್ಯಂತ ರೈತರ ಪ್ರತಿಭಟನೆ ರೈತರ ಹಕ್ಕಿಗಾಗಿ ನಡೆಯುತ್ತಿದ್ದು, ಆಡಳಿತ ಪಕ್ಷದಲ್ಲಿ ಇರುವ ರೈತ ಸಂಘಟನೆಯವರು ರೈತ ಮೋರ್ಚಾದ ಹೆಸರಿನಲ್ಲಿ ಪ್ರಾಮಾಣಿಕ ರೈತರನ್ನು ಕಡೆಗಣಿಸುವುದು ಸರಿಯಲ್ಲ. ತಮ್ಮ ರಾಜಕೀಯ ಲಾಭಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಜಿಗಿಯುವ ಇವರು ರೈತರ ಬಗ್ಗೆ ಮಾತನಾಡುವ ನೈತಿಕತೆ ಇವರಲ್ಲಿ ಇಲ್ಲ ಎಂದು ಹಸಿರು ಸೇನೆ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ...

ಜಿಲ್ಲಾ ಸಹಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಕೆ.ಟಿ.ವಿಶ್ವನಾಥರಿಗೆ ಸನ್ಮಾನ

ದ.ಕ.ಜಿಲ್ಲಾ ಸಹಕಾರಿ ನೌಕರರ ಸಹಕಾರ ಸಂಘದ 89ನೇ ವಾರ್ಷಿಕ ಮಹಾಸಭೆ ಮಂಗಳೂರಿನ ಸಂಘದ ಪ್ರಧಾನ ಕಚೇರಿಯ ಉನ್ನತಿ ಸಭಾಭವನದಲ್ಲಿ ಇಂದು ನಡೆಯಿತು.ಈ ಸಂದರ್ಭದಲ್ಲಿ ಬೆಂಗಳೂರಿನ ಜ್ಞಾನ ಮಂದಾರ ಅಕಾಡೆಮಿಯಿಂದ ಸಮಾಜರತ್ನ ಸೇವಾ ಪ್ರಶಸ್ತಿಗೆ ಭಾಜನರಾಗಿರುವ ಸಂಘದ ನಿರ್ದೇಶಕ, ವೆಂಕಟರಮಣ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥರನ್ನು ಸನ್ಮಾನಿಸಲಾಯಿತು.   ಡಿ.ಸಿ‌.ಸಿ‌‌.ಬ್ಯಾಂಕ್‌ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ರವೀಂದ್ರ ಸನ್ಮಾನಿಸಿದರು. ಮಹಾಪ್ರಬಂಧಕ...

ಕಳಂಜ ಬಾಳಿಲ ಸಹಕಾರಿ ಸಂಘದ ಮಹಾಸಭೆ

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2019 - 20 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.12 ರಂದು ಸಂಘದ ಪ್ರಧಾನ ಕಛೇರಿ ಕೋಟೆಮುಂಡುಗಾರಿನ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಕೂಸಪ್ಪ ಗೌಡ ಮುಗುಪ್ಪುರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷೆ ಶ್ರೀಮತಿ ಮಾಲಿನಿ ಪ್ರಸಾದ್, ನಿರ್ದೇಶಕರಾದ ಕೆ.ಅಜಿತ್ ರಾವ್, ಬಿ.ಸುಭಾಶ್ಚಂದ್ರ ರೈ,...
Loading posts...

All posts loaded

No more posts

error: Content is protected !!