ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಪಿಂಡಿಮನೆ ಇಂದು ಮೃತ್ಯು

ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರಂತೋಡಿನ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಅರಂತೋಡು ಗ್ರಾಮದ ಪಿಂಡಿಮನೆ ನಿವಾಸಿ ಮಾಧವ ಗೌಡರ ಮಗ ಪ್ರವೀಣ್ (39) ಎಂದು ಗುರುತಿಸಲಾಗಿದೆ. ಕೆಲ ವರ್ಷಗಳ ಹಿಂದೆ ಮೆಸ್ಕಾಂ ಸ್ಟೇಷನ್ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಾರದ ಹಿಂದೆ ರಾತ್ರಿ...

ತೊಡಿಕಾನ ದೇವರಗುಂಡಿ ಸುತ್ತ ಬೇಲಿ‌ ಅಳವಡಿಕೆ – ಅನಾಚಾರ ನಡೆಯದಂತೆ ಆಡಳಿತ ಮಂಡಳಿ ಕ್ರಮ – ಇದು ಅಮರ ಸುದ್ದಿ ವರದಿಯ ಫಲಶ್ರುತಿ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೋಡಿಕಾನ ಮೂಲ ಸ್ಥಾನವಾದ ದೇವರ ಗುಂಡಿಯ ಪಾವಿತ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ತಂತಿ ಬೇಲಿಯನ್ನು. ಅಳವಡಿಸಲಾಗಿದೆ. ಇತ್ತೀಚೆಗೆ ಈ ಸ್ಥಳದಲ್ಲಿ ಅಶ್ಲೀಲ ಪೋಟೋ, ವಿಡಿಯೋ ಶೂಟಿಂಗ್ ನಡೆದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಅಮರ ಸುದ್ದಿ ವೆಬ್ಸೈಟ್ ವರದಿ ಪ್ರಕಟಿಸಿತ್ತು. ಬಳಿಕ ಅದು ರಾಜ್ಯಮಟ್ಟದ ಸುದ್ದಿಯಾಗಿತ್ತು. ವಿಶ್ವ ಹಿಂದೂ ಪರಿಷತ್...
Ad Widget

ಉಗ್ರರ ಬೆಂಬಲಿಸುವ ಗೋಡೆ ಬರಹದ ಬಗ್ಗೆ ಎಬಿವಿಪಿ ಖಂಡನೆ – ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯ

ಮಂಗಳೂರಿನಲ್ಲಿ ಉಗ್ರ ಸಂಘಟನೆಗೆ ಜೈಕಾರ ಹಾಕುವ ಗೋಡೆ ಬರಹವನ್ನು ಖಂಡಿಸಿ ಬರೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಎ.ಬಿ.ವಿ.ಪಿ ಸುಳ್ಯ ನಗರ ವತಿಯಿಂದ ತಹಶಿಲ್ದಾರ್ ಮುಖಾಂತರ ಮಾನ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು .2008 ನವೆಂಬರ್ 26 ದೇಶ ಕಂಡ ಕರಾಳ ದಿನ. ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರರ ಕೃತ್ಯದಿಂದ ಮುಂಬೈ ಮಹಾನಗರದಲ್ಲಿ ಸೈನಿಕರು, ಪೋಲಿಸರು, ಸೇರಿ...

ಕೇನ್ಯ : ಕಣ್ಕಲ್ ತರವಾಡು ಮನೆಯಲ್ಲಿ ದೈವಗಳ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ

ಕೇನ್ಯ ಗ್ರಾಮದ ಕಣ್ಕಲ್ ತರವಾಡು ಮನೆಯಲ್ಲಿ ಧರ್ಮದೈವ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠೆ, ಬ್ರಹ್ಮಕಲಶ ಮತ್ತು ನೂತನ ತರವಾಡು ಮನೆಯ ಪ್ರವೇಶೋತ್ಸವವು ನ. 29 ಮತ್ತು ನ. 30ರಂದು ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು. ನ. 29ರಂದು ಸಂಜೆ ವಿವಿಧ ವೈದಿಕ ಕಾರ್ಯಗಳು, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ನ.30 ರಂದು...

ಗ್ರಾಮ ಪಂಚಾಯತ್ ಚುನಾವಣೆ ನಿಮಿತ್ತ ಕೋವಿ ಡೆಪಾಸಿಟ್ ಇಡಲು ಸೂಚನೆ

ಡಿಸೆಂಬರ್ 27 ರಂದು ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆ ನಿಮಿತ್ತ ಡಿ. 5 ರ ಒಳಗೆ ಸುಬ್ರಹ್ಮಣ್ಯ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಕೋವಿ ಲೈಸೆನ್ಸ್ ಹೊಂದಿರುವವರು ತಮ್ಮ ಕೋವಿಗಳನ್ನು ಸುಬ್ರಹ್ಮಣ್ಯ ಪೋಲಿಸ್ ಠಾಣೆಯಲ್ಲಿ ಡೆಪಾಸಿಟ್ ಇಡಬೇಕಾಗಿ ಠಾಣಾಧಿಕಾರಿಗಳು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಸುಳ್ಯ ಮಂಡಲ ಪ್ರಶಿಕ್ಷಣ ವರ್ಗ ಸಮಾರೋಪ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಪೆರುವಾಜೆ ಜೆ. ಡಿ. ಸಭಾಂಗಣದಲ್ಲಿ 2ದಿನಗಳ ಕಾಲ ನಡೆದ ಸುಳ್ಯ ಮಂಡಲ ಪ್ರ ಶಿಕ್ಷಣ ವರ್ಗ ಇದರ ಸಮಾರೋಪ ಸಮಾರಂಭ ಇಂದು ನಡೆಯಿತು. ಸಮಾರೋಪ ಭಾಷಣಕಾರರಾಗಿ ಆಗಮಿಸಿದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಮಾತನಾಡಿ ಅಂತ್ಯೋದಯದ ಕಲ್ಪನೆ ಸಾಕಾರವಾಗಬೇಕು, ದೇಶ ಪರಮವೈಭವಕ್ಕೆ ಕೊಂಡು...

ಗಾಂಧಿನಗರ : ಬೈಕ್ ಮತ್ತು ಜೀಪ್ ಮುಖಾಮುಖಿ ಡಿಕ್ಕಿ

ಗಾಂಧಿನಗರ ಅರಣ್ಯ ಇಲಾಖೆಯ ಸಮೀಪ ಬೈಕ್ ಮತ್ತು ಜೀಪ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ನಡೆದಿದೆ. ಬೈಕ್ ಸವಾರನಿಗೆ ಅಲ್ಪಸ್ವಲ್ಪ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ನೆಟ್ಟಾರು : ಬಲೆ ತುಳು ಲಿಪಿ ಕಲ್ಪುಗ ಕಾರ್ಯಗಾರ ಸಮಾರೋಪ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಅಕ್ಷಯ ಯುವಕ ಮಂಡಲ (ರಿ.) ನೆಟ್ಟಾರ್ ಮತ್ತು ಅಕ್ಷತಾ ಮಹಿಳಾ ಮಂಡಲ ನೆಟ್ಟಾರ್ ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕಿನ ನೆಟ್ಟಾರ್ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಸಭಾಭವನದಲ್ಲಿ ನವೆಂಬರ್ 29, 2020 ರವಿವಾರದಂದು "ಬಲೆ ತುಲು ಲಿಪಿ ಕಲ್ಪುಗ" ಕಾರ್ಯಗಾರದ ಸಮಾರೋಪ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಮುಖ್ಯ...

ಮೊಗರ್ಪಣೆ ಜುಮಾ ಮಸ್ಜಿದ್ ಆಡಳಿತ ಕಮಿಟಿ ಗೆ ಯಾವುದೇ ಅಧ್ಯಕ್ಷರನ್ನು ಆಯ್ಕೆ ಮಾಡಲಿಲ್ಲ – ನಿಕಟಪೂರ್ವ ಪ್ರ. ಕಾರ್ಯದರ್ಶಿ ಇಬ್ರಾಹಿಂ

ಮೊಗರ್ಪಣೆ ಇದಾಯತ್ ಉಲ್ ಇಸ್ಲಾಂ ಜಮಾಅತ್ ಕಮಿಟಿಯ ಮಹಾಸಭೆ ನವಂಬರ್ 27 ರಂದು ಮೊಗರ್ಪಣೆ ಮದರಸ ಸಭಾಂಗಣದಲ್ಲಿ ನಡೆದಿತ್ತು. ಸಭೆಯಲ್ಲಿ ವಿವಿಧ ವಿಷಯಗಳ ಚರ್ಚೆಗಳು ನಡೆದು ನೂತನ ಪದಾಧಿಕಾರಿಗಳ ಆಯ್ಕೆ ಸಂದರ್ಭ ಅಧ್ಯಕ್ಷರನ್ನು ಆಯ್ಕೆ ಮಾಡುವ ವಿಚಾರದಲ್ಲಿ ಇಬ್ಬರು ವ್ಯಕ್ತಿಗಳ ಹೆಸರನ್ನು ಸೂಚಿಸಲಾಗಿತ್ತು. ಆದರೆ ಒಮ್ಮತ ಬಾರದ ಕಾರಣ ಕೆಲವು ದಿನಗಳ ಬಳಿಕ ಅಧ್ಯಕ್ಷರ ಆಯ್ಕೆಗೆ...

ಗ್ರಾಮ ಪಂಚಾಯತ್ ಚುನಾವಣೆ ಘೋಷಣೆ : ಡಿಸೆಂಬರ್ 22 ಮತ್ತು 27ರಂದು ಎರಡು ಹಂತಗಳಲ್ಲಿ ಮತದಾನ- ಇಂದಿನಿಂದಲೇ ನೀತಿ ಸಂಹಿತೆ ಜಾರಿ

ರಾಜ್ಯದ 5762 ಗ್ರಾಮ ಪಂಚಾಯತ್ ಗಳಲ್ಲಿ ಚುನಾವಣೆ ಘೋಷಣೆಯಾಗಿದ್ದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣಾ ಆಯೋಗವು ಇಂದು ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಡಿಸೆಂಬರ್​ 22ರಂದು ಪ್ರಥಮ ಹಂತ ಹಾಗೂ ಡಿ.27ಕ್ಕೆ ಎರಡನೇ ಹಂತದ ಚುನಾವಣೆ ನಿಗದಿಯಾಗಿದೆ. ಡಿ. 30ರಂದು ಮತಎಣಿಕೆ ನಡೆಯಲಿದೆ.ಇಂದಿನಿಂದಲೇ ನೀತಿಸಂಹಿತೆ ಜಾರಿಯಾಗಿದೆ. ಮೊದಲನೆ ಹಂತದ ಡಿಸೆಂಬರ್ 22 ರಂದು...
Loading posts...

All posts loaded

No more posts

error: Content is protected !!