ಆಡಳಿತ ನಿರ್ಲಕ್ಷ್ಯತೆ ಮಾಡುತ್ತಿರುವ ಸರ್ಕಾರಗಳನ್ನು ವಜಾಗೊಳಿಸಲು ಇಕ್ಬಾಲ್ ಎಲಿಮಲೆ ಒತ್ತಾಯ

ರಾಷ್ಟ್ರದಾದ್ಯಂತ ಕೊರೊನ ನಿಯಂತ್ರಣದಲ್ಲಿದ್ದರೂ ನಮ್ಮ ದೇಶದಾದ್ಯಂತ ಕೊರೊನ ಎರಡನೇ ಅಲೆ ಉಂಟಾಗಲು ಕೇಂದ್ರ ಮತ್ತು ರಾಜ್ಯ ಸರಕಾರದ ಆಡಳಿತ ವೈಫಲ್ಯವೇ ಕಾರಣ. ಚುನಾವಣೆಯ ಸಭೆ ಸಮಾರಂಭಗಳಿಗೆ ಸಾವಿರಾರು ಜನ ಸೇರಲು ಅವಕಾಶ ಮಾಡಿಕೊಟ್ಟದ್ದು ಎರಡನೇ ಅಲೆ ಉಂಟಾಗಿದೆ. ಎರಡನೇ ಅಲೆ ಬರುತ್ತದೆ ಎಂದು ಗೊತ್ತಿದ್ದರೂ ಸರಕಾರ ವೈದ್ಯಕೀಯ ಸಿದ್ಧತೆ ಮಾಡದೇ ನಿರ್ಲಕ್ಷ್ಯ ಮಾಡಿರುವುದರಿಂದ ಸಾವಿನ ಸಂಖ್ಯೆ...

ಅಮ್ಮ

ಸಾವಿರ ನದಿಗಳಿಗೆಲ್ಲಾ ಒಂದೇನೆ ಸಾಗರ…ನೋವನು ಮರೆಸುವ ನೀನು ಪ್ರೀತಿಯ ಆಗರ…ಕಷ್ಟಗಳ ನುಂಗಿ ಬದುಕೋ ದೇವರ ರೂಪ ನೀನು…ಮನಸ್ಸು ಎಷ್ಟೇ ನೊಂದರೂ ನಗಿಸಿ ನಗುವ ಗುಣವೂ ನಿನ್ನದು…ನಿಸ್ವಾರ್ಥದ ಪ್ರೀತಿಗೊಂದು ಹೆಸರು ನೀನೇ "ಅಮ್ಮ"… ಕನಸಲ್ಲೂ ನಿನ್ನನ್ನು ಬಿಟ್ಟು ಬದುಕಲಾರೆನಮ್ಮ…ನಿನ್ನ ಜೀವ, ನನ್ನ ಜೀವ ಎರಡೂ ಒಂದೇ ಅಮ್ಮ…..ನಿನ್ನಯ ಪ್ರೀತಿಯು ನನಗೆ ಸ್ಪೂರ್ತಿ ಕೊಡುವುದಮ್ಮ…ನಿನ್ನ ಬಿಟ್ಟು ನಾನು ಎಂದೂ...
Ad Widget

ರಾಜಕೀಯ ಬಿಟ್ಟು ಜನರ ಕಷ್ಟಕ್ಕೆ ನೆರವಾಗಿ ಕಾಂಗ್ರೆಸ್ಸಿಗರಿಗೆ ಬಿಜೆಪಿ ಮಂಡಲ ಸಮಿತಿ ತಿರುಗೇಟು

ಕೋವಿಡ್ ನ ತುರ್ತು ಸಂದರ್ಭದಲ್ಲಿ ಕೂಡ ಕೇವಲ ಟೀಕೆ ಮಾಡುವುದನ್ನೇ ಉದ್ಯೋಗ ಮಾಡಿಕೊಳ್ಳುವ ಬದಲು ರಾಜಕೀಯ ಬಿಟ್ಟು ಜನಗಳ ಕಷ್ಟಗಳಿಗೆ ನೆರವಾಗಿ ಎಂದು ಸುಳ್ಯದ ಕಾಂಗ್ರೆಸ್ ನಾಯಕರಿಗೆ ಮಂಡಲ ಬಿಜೆಪಿ ತಿರುಗೇಟು ನೀಡಿದೆದೇಶದ ಎಲ್ಲ ಕಡೆಯೂ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ತನ್ನ ವಿಪರೀತವಾದ ಅಲ್ಪಸಂಖ್ಯಾತರ ಓಲೈಕೆಯ ಪರಿಣಾಮವನ್ನು ಈಗ ಅನುಭವಿಸುತ್ತಿದೆ.ಮೂರು ದಶಕಗಳ ಹಿಂದೆ ಕಾಶ್ಮೀರದಲ್ಲಿ ಹಿಂದೂಗಳ...

ಕೊಲ್ಲಮೊಗ್ರ : ಕೋವಿಡ್ ವಾರ್ ರೂಂ ರಚನೆ : ತುರ್ತು ಸೇವೆಗೆ ಸಿದ್ಧಗೊಂಡ ತಂಡ

ಕೊಲ್ಲಮೊಗ್ರ : ಕೊವೀಡ್ -19 ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಗ್ರಾ.ಪಂ ಅಧ್ಯಕ್ಷರ ನೇತೃತ್ವದಲ್ಲಿ ಕೊಲ್ಲಮೊಗ್ರ ಗ್ರಾಮದ ಯುವಕರ ತಂಡವೊಂದು ಕೊರೋನ ರೋಗಿಗಳಿಗೆ ಮತ್ತು ಗ್ರಾಮದ ಜನರಿಗೆ ಹಾಗೂ ಪಕ್ಕದ ಗ್ರಾಮದ ಜನರಿಗೆ ಜೌಷಧಿ ಹಾಗೂ ತುರ್ತು ಕಾರ್ಯಗಳಿಗೆ ಸಂಪೂರ್ಣ ಸಹಕಾರ ನೀಡಲು ಸಜ್ಜಾಗಿದೆ. ಕಳೆದ ವರ್ಷದ ಲಾಕ್ ಡೌನ್ ಸಂದರ್ಭದಲ್ಲಿ ತುರ್ತು ಸೇವೆಗಳಿಗೆ...

ತಮಿಳುನಾಡಿನಲ್ಲಿ ಅರಳುತ್ತಿರುವ ತುಳುನಾಡಿನ ವಯೋಲಿನ್ ಪ್ರತಿಭೆ – ಸುಳ್ಯದ ರಾಜೇಶ್ ಕುಂಭಕೋಡು

ಹಿತ್ತಲ ಗಿಡ ಮದ್ದಲ್ಲ ಅನ್ನುವ ಗಾದೆ ಮಾತೊಂದಿದೆ‌. ತನ್ನೂರಿನಲ್ಲಿ ಗುರುತಿಸಲ್ಪಡದೇ ದೂರದ ಚೆನ್ನೈ ಮಹಾನಗರದಲ್ಲಿ ಕುಳಿತು ಸಂಗೀತ ಕ್ಷೇತ್ರದಲ್ಲಿ ಅಪರೂಪದ ಸಾಧನೆಗೈಯುತ್ತಿರುವ ವಯೋಲಿನ್ ವಾದಕ ರಾಜೇಶ್ ಕುಂಭಕೋಡು ಅವರು ಈ ಮಾತಿಗೆ ಜೀವಂತ ಸಾಕ್ಷಿ ಎಂದರೆ ತಪ್ಪಾಗಲಾರದು‌. ವಯೋಲಿನ್ ಕಲಿಯುವ ಏಕೈಕ ಗುರಿಯೊಂದಿಗೆ ಬರಿಗೈಯಲ್ಲಿ ಚೆನ್ನೈ ಗೆ ತೆರಳಿದ ಇವರನ್ನು ಸಂಗೀತ ಮಾತೆ ಕೈ ಹಿಡಿದು...

ಏನೆಕಲ್ಲು : ಅಪ್ರಾಪ್ತೆಯ ಅತ್ಯಾಚಾರ – ಯುವಕನ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತೆಯೊಬ್ಬಳನ್ನು ಪುಸಲಾಯಿಸಿ ಲಾಡ್ಜ್ ಒಂದರಲ್ಲಿ ನಿರಂತರ ಅತ್ಯಾಚಾರಗೈದ ಪರಿಣಾಮ ಆಕೆ ಗರ್ಭಿಣಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೋಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಮೆಟ್ಟಿನಡ್ಕ ನಿವಾಸಿ ಅರುಣ್ ಎಂಬಾತ ಕಳೆದೊಂದು ವರ್ಷದಿಂದ 17 ರ...

ಸುಬ್ರಹ್ಮಣ್ಯ : ಅರಣ್ಯಾಧಿಕಾರಿಗಳಿಂದ ಯುವಕನಿಗೆ ಹಲ್ಲೆ ಆರೋಪ – ನಡೆಯಲಾಗದ ಸ್ಥಿತಿ ತಲುಪಿದ ಯುವಕ – ಅರಣ್ಯಾಧಿಕಾರಿಗಳಿಂದ ನಿರಾಕರಣೆ

ಅಕ್ರಮ ಹರಳು ಕಲ್ಲು ಅಗೆತಕ್ಕೆ ಸಂಬಂಧಿಸಿ ವಿಚಾರಣೆಗಾಗಿಕೊಲ್ಲಮೊಗ್ರು ಗ್ರಾಮದ ಇಬ್ಬರು ವ್ಯಕ್ತಿಗಳನ್ನು ಸುಬ್ರಹ್ಮಣ್ಯದ ಅರಣ್ಯಾಧಿಕಾರಿಗಳು ಕರೆದೊಯ್ದು ಓರ್ವ ಯುವಕನಿಗೆ ತೀವ್ರ ಹಲ್ಲೆ ನಡೆಸಿದ್ದರೆಂಬ ಆರೋಪ ಕೇಳಿಬಂದಿದ್ದು, ಆ ಯುವಕ ನಡೆಯಲಾಗದ ಸ್ಥಿತಿಯಲ್ಲಿದ್ದಾರೆ. ಆದರೆ ಈ ಹಲ್ಲೆ ಆರೋಪವನ್ನು ಅರಣ್ಯಾಧಿಕಾರಿಗಳು ನಿರಾಕರಿಸಿದ್ದಾರೆ.ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯಕೊಲ್ಲಮೊಗ್ರು ಗ್ರಾಮದ ಮೋಹನ ಕೊಳಗೆ ಎಂಬವರನ್ನು ಏ.27 ರಂದು ಅರಣ್ಯಾಧಿಕಾರಿಗಳು ಕೊಲ್ಲಮೊಗ್ರದಿಂದ...

ಸುಳ್ಯದಲ್ಲಿ ಇಂದು 78 ಸೋಂಕಿತರು ಪತ್ತೆ

ಸುಳ್ಯ ತಾಲೂಕಿನಲ್ಲಿ ಇಂದು 78 ಕೊರೋನಾ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ವರದಿ ನೀಡಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಕುವುದರ ಜತೆಗೆ ಕೋವಿಡ್ ಮಾರ್ಗಸೂಚಿ ಪಾಲಿಸಬೇಕೆಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಕೃಷ್ಣ ಕಲ್ಲಗದ್ದೆ ನಿಧನ

ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿ ಕೃಷ್ಣ (40) ಅಲ್ಪಕಾಲದ ಅಸೌಖ್ಯದಿಂದ ಮೇ.4 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಜಾನಕಿ, ಹಾಗೂ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಜಿಲ್ಲೆಯಲ್ಲಿ ಕೊರೊನ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ - ನಾಳೆ ಬೆಳಿಗ್ಗೆ 6 ರಿಂದ 9ರವರೆಗೆ ಮಾತ್ರ ಖರೀದಿಗೆ ಅವಕಾಶ

ಕೊರೋನಾ ನಿಯಂತ್ರಣಕ್ಕಾಗಿ ದ.ಕ.ಜಿಲ್ಲೆಯಲ್ಲಿ ಮತ್ತಷ್ಟು ಕಠಿಣ ನಿರ್ಧಾರಕ್ಕೆ ಜಿಲ್ಲಾಡಳಿತ ಬಂದಿದೆ. ಬೆಳಿಗ್ಗೆ 6 ರಿಂದ 9ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು. ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್ ಮಾಡಲಾಗುವುದು.ಮೇ.15...
Loading posts...

All posts loaded

No more posts

error: Content is protected !!