- Wednesday
- May 6th, 2026
ಕೊಡಗಿನ ಸುಂಟಿಕೊಪ್ಪ ಎಂಬಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ಥಳೀಯ ನಿವಾಸಿ ಎಂ.ಎಸ್. ರವಿ ಎಂಬುವವರು ಕನ್ನಡದ ಧ್ವಜ ಮತ್ತು ಕನ್ನಡದ ಪೇಟವನ್ನು ಧರಿಸಿ ಪೇಟೆಯಲ್ಲಿ ಸಂಚರಿಸಿ ಜನರಲ್ಲಿ ವಿಶೇಷ ಆಕರ್ಷಣೆಯನ್ನು ಮೂಡಿಸುತ್ತಿದ್ದಾರೆ. ಇವರು ಸತತ 25 ವರ್ಷಗಳಿಂದ ಕನ್ನಡದ ಕಂಪನ್ನು ಬೀರುತ್ತಿದ್ದಾರೆ. ಡಾಕ್ಟರ್ ರಾಜಕುಮಾರ್ ಅಭಿಮಾನಿ ಬಳಗದಲ್ಲಿ ಗುರುತಿಸಿಕೊಂಡು, ಪ್ರಸ್ತುತ ಸುಂಟಿಕೊಪ್ಪ ಡಾಕ್ಟರ್ ಅಂಬೇಡ್ಕರ್ ಸಂಘದ...
ಕಡಬ ತಾ. ಎಡಮಂಗಲ ಗ್ರಾಮದ ದೋಣಿಮನೆ ದಿ.ಮುತ್ತಪ್ಪ ಗೌಡರ ಪುತ್ರ ದೀಪಕ್ ರ ವಿವಾಹವು ಕಡಬ ತಾ. ಕೊಣಾಜೆ ಗ್ರಾಮದ ಪಟ್ಲ ಮನೆ ರುಕ್ಮಯ್ಯ ಗೌಡರ ಪುತ್ರಿ ಮಲ್ಲಿಕಾ ರೊಂದಿಗೆ ವರನ ಮನೆಯಲ್ಲಿ ಅ.28 ರಂದು ನಡೆಯಿತು.
ದೇವಚಳ್ಳ ಗ್ರಾಮದ ಹಿರಿಯಡ್ಕ ನಿವೃತ್ತ ಶಿಕ್ಷಕ ಬಾಲಕೃಷ್ಣ ಗೌಡ ಮತ್ತು ಶೀಲಾವತಿ ದಂಪತಿಗಳ ಪುತ್ರ ಪುನೀತ್ ರವಿ ಯವರ ವಿವಾಹವು ಗುತ್ತಿಗಾರು ಗ್ರಾಮದ ಕೊಡಂಗೊಳಿ- ಚಿದ್ಗಲ್ಲು ಧರ್ಮಾವತಿ ಮತ್ತು ನಾರಾಯಣ ಗೌಡರ ಪುತ್ರಿ ಕವಿತಾ ಳೊಂದಿಗೆ ಅ.25 ರಂದು ವಧುವಿನ ಮನೆಯಲ್ಲಿ ನಡೆಯಿತು.
ದೇವಚಳ್ಳ ಗ್ರಾಮದ ವಾಲ್ತಾಜೆ ರವೀಂದ್ರ ಹಾಗೂ ಕುಸುಮಾವತಿ ದಂಪತಿಗಳ ಪುತ್ರ ರಕ್ಷಿತ್ ವಿ.ಆರ್. (ವಿನು) ರವರ ವಿವಾಹ ನಿಶ್ಚಿತಾರ್ಥವು ಜಾಲ್ಸೂರು ಗ್ರಾಮದ ಕಾಳಮನೆ ಮಾಧವ ಗೌಡ ಮತ್ತು ಹರಿಣಾಕ್ಷಿ ದಂಪತಿಗಳ ಪುತ್ರಿ ಅಶ್ವಿನಿ ಯೊಂದಿಗೆ ಅ.31 ರಂದು ವಧುವಿನ ಮನೆಯಲ್ಲಿ ನಡೆಯಿತು.
ಗುತ್ತಿಗಾರು ಗ್ರಾಮದ ವಿವಿಧ ಬೂತ್ಗಳ ಬಿಜೆಪಿ ಕಾರ್ಯಕರ್ತರ ಸಭೆಯು ಅ.30ರಂದು ಚಿಕ್ಮುಳಿಯಲ್ಲಿ ನಡೆಯಿತು. ಗುತ್ತಿಗಾರು ಗ್ರಾಮದ ಬೂತ್ ಸಂಖ್ಯೆ 121, 122ನೇ ಬೂತಿನ ಕಾರ್ಯಕರ್ತರ ಸಭೆಯು ಅ 30 ರಂದು ದೇವಿಪ್ರಸಾದ್ ಚಿಕ್ಮುಳಿ ಇವರ ಮನೆಯಲ್ಲಿ ನಡೆಯಿತು. ಸಭೆಗೆ ಮಾನ್ಯ ಶಾಸಕರಾದ ಶ್ರೀ ಎಸ್ ಅಂಗಾರ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಮತ್ತು ಸುಳ್ಯ ಮಂಡಲ...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಸಾಮಾಜಿಕ ಜಾಲತಾಣದ ಪದಗ್ರಹಣ ಸಮಾರಂಭ ಇಂದು ಸುಳ್ಯದ ಬಿಜೆಪಿ ಕಚೇರಿಯಲ್ಲಿ ನಡೆಯಿತು. ವೇದಿಕೆಯಲ್ಲಿ ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಭಾ.ಜ.ಪಾ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಜಿಲ್ಲಾ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಅಜಿತ್ ಉಳ್ಳಾಲ, ಜಿಲ್ಲಾ ಸಹ ಸಂಚಾಲಕ ಸಂದೀಪ್...
ದೇವಚಳ್ಳ ಗ್ರಾಮದ ಮಾವಿನಕಟ್ಟೆ ರಾಧಾಕೃಷ್ಣ ಶ್ರೀಕಟೀಲ್ ರವರ ಪುತ್ರಿ ರಮ್ಯಶ್ರೀ ಯ ವಿವಾಹ ನಿಶ್ಚಿತಾರ್ಥವು ಮಂಡೆಕೋಲು ಗ್ರಾಮದ ಕೊಡೆಂಚಿಕಾರ್ ದಿ. ಬಾಲಕೃಷ್ಣ ಗೌಡರ ಪುತ್ರ ಕುಮಾರ್ ರೊಂದಿಗೆ ಅ.31 ರಂದು ಮಾವಿನಕಟ್ಟೆಯ ಶ್ರೀ ವಿಷ್ಣು ಕಲಾಮಂದಿರದಲ್ಲಿ ನಡೆಯಿತು.
ಸುಳ್ಯ ಭಾಗದ ಹೆಚ್ಚು ಜನ ಕೃಷಿಕರಾಗಿದ್ದು ಅತೀ ಹೆಚ್ಚು ಅಡಿಕೆ ಹಾಗೂ ಜತೆಗೆ ರಬ್ಬರ್ ಬೆಳೆಗಾರರನ್ನು ಹೊಂದಿದ್ದಾರೆ. ಈ ಬಾರಿ ಕೃಷಿಕರಿಗೆ ಅಡಿಕೆ ಧಾರಣೆ ಏರಿಕೆಯಿಂದ ರೈತರ ಮೊಗದಲ್ಲಿ ಖುಷಿ ಕಂಡಿದೆ.ಅಡಿಕೆ ಹಾಗೂ ರಬ್ಬರ್ ಧಾರಣೆ ಯ ಬಗ್ಗೆ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಡಪ್ಪಾಡಿಯ ಎಂ.ಡಿ.ವಿಜಯಕುಮಾರ್ ಧಾರಣೆ ಏರಿಳಿತದ ಬಗ್ಗೆ ದಾಖಲಿಸಿದ್ದಾರೆ. 1980 ರಲ್ಲಿ...
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿರುವ ಶ್ರೀನಿವಾಸ ಇಂದಾಜೆ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಪತ್ರಕರ್ತರಾಗಿ ಹಾಗೂ ಸಂಘದ ಅಧ್ಯಕ್ಷರಾಗಿ ಪತ್ರಕರ್ತರ ಗ್ರಾಮವಾಸ್ತವ್ಯದಂತಹ ಕಾರ್ಯಕ್ರಮದ ಮೂಲಕ ಸಮಾಜಮುಖಿ ಕಾರ್ಯಕ್ರಮ ಸಂಘಟಿಸಿ ಮೆಚ್ಚುಗೆ ಗಳಿಸಿದ್ದರು. ಸುಳ್ಯದ ಮಡಪ್ಪಾಡಿ ಗ್ರಾಮದಲ್ಲಿ ನಡೆದ ಗ್ರಾಮವಾಸ್ತವ್ಯ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆದಿತ್ತು.
Loading posts...
All posts loaded
No more posts
