ಜಯನಗರ ಸರಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ

ಜಯನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ದೇಶದ ಎರಡನೆಯ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಕಾರ್ಯಕ್ರಮ ಅಕ್ಟೋಬರ್ 2 ರಂದು ನಡೆಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಹಸೈನಾರ್ ಜಯನಗರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯ ತೀರ್ಥರಾಮ ಅಡ್ಕಬಳೆ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್...

ರೈತ ಹಾಗೂ ಕಾರ್ಮಿಕ ಮಸೂದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ನಿಂದ ಸುಳ್ಯದಲ್ಲಿ ಕಿಸಾನ್ – ಮಜ್ದೂರ್ ಬಜಾವೋ ದಿವಸ್ ಆಚರಣೆ

ಕೇಂದ್ರ ಮತ್ತು ರಾಜ್ಯ ಸರಕಾರ ರೈತ ಹಾಗೂ ಕಾರ್ಮಿಕ ಮಸೂದೆಗಳ ತಿದ್ದುಪಡಿ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಿಸಾನ್ – ಮಜ್ದೂರ್ ಬಚಾವೋ ದಿವಸ್ ಆಚರಣೆ ಪ್ರತಿಭಟನಾ ಕಾರ್ಯಕ್ರಮವಾಗಿ ಗಾಂಧಿ ಜಯಂತಿ ದಿನವಾದ ಅ.2 ರಂದು ಸುಳ್ಯದ ತಾಲೂಕು ಪಂಚಾಯತ್ ಎದುರು ನಡೆಸಿದರು. ತಾಲೂಕು ಪಂಚಾಯತ್ ಕಟ್ಟಡದ ಮುಖ್ಯ ದ್ವಾರದ ಬಳಿ ಕುಳಿತ ಕಾಂಗ್ರೆಸ್ ನಾಯಕರು...
Ad Widget

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

‌ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ವತಿಯಿಂದ ಒ.02ರಂದು ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಸ್ವಚ್ಯೋತ್ಸವ -ನಿತ್ಯೋತ್ಸವ ಮಾಸಾಚರಣೆ , ಹಾಗೂ ಸ್ವಚ್ಚತೆಯ ಬಗ್ಗೆ ಪ್ರತಿಜ್ಞಾವಿಧಿ ನೆರವೇರಿಸಲಾಯಿತು.ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ‍ ರೈತರ ಕಾಮಗಾರಿಗಳ ಕ್ರಿಯಾ ಯೋಜನೆಯ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಪಂಚಾಯತ್ ಸುಳ್ಯ...

ಗುತ್ತಿಗಾರು ಬಿಎಂಎಸ್ ಘಟಕ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಮತ್ತು ಸ್ವಚ್ಚತಾ ಕಾರ್ಯಕ್ರಮ-

ಗುತ್ತಿಗಾರು ಬಿಎಂಎಸ್ ಘಟಕ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಪ್ರಾಕೃ.ಪ ಸ.ಸಂಘ ಅಧ್ಯಕ್ಷ ವೆಂಕಟ್ ದಂಬೆಕೋಡಿ ಉದ್ಘಾಟಿಸಿ ಶುಭಹಾರೈಸಿದರು. ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಶ್ಯಾಂ ಪ್ರಸಾದ್ ರವರು ಕೇಕ್ ಕತ್ತರಿಸುದರ ಮೂಲಕ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಆಚರಿಸಿದರು....

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಗಾಂಧಿಜಯಂತಿ ಆಚರಣೆ – ಕ್ರಿಯಾಯೋಜನೆಗೆ ಚಾಲನೆ

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ಮ.ಗಾ.ರಾ.ಗ್ರಾ.ಉ.ಖಾತರಿ ಯೋಜನೆಯ ಕ್ರಿಯಾಯೋಜನೆ ತಯಾರಿಗೆ ಚಾಲನೆ ಮತ್ತು ಸ್ವಚ್ಛತಾ ಶ್ರಮದಾನವು ಬಾಳಿಲ ಗ್ರಾಮ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಅ.2 ರಂದು ನಡೆಯಿತು.2021-22ನೇ ಸಾಲಿನ ಎಂ.ಜಿ.ಎನ್.ಆರ್.ಜಿ ಯೋಜನೆಯ ಕ್ರಿಯಾಯೋಜನೆ ತಯಾರಿಗೆ ಚಾಲನೆ ನೀಡಲಾಯಿತು. 'ಸ್ವಚ್ಛೋತ್ಸವ - ನಿತ್ಯೋತ್ಸವ' ಮಾಸಾಚರಣೆ ಅಂಗವಾಗಿ ಸ್ವಚ್ಛತಾ ಪ್ರತಿಜ್ಞೆ ಕೈಗೊಂಡು ಸ್ವಚ್ಛತಾ...

ಗುತ್ತಿಗಾರು ಸ್ವಚ್ಚೋತ್ಸವ-ನಿತ್ಯೋತ್ಸವ ಮಾಸಾಚರಣೆ

ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ-ನಿತ್ಯೋತ್ಸವ ಮಾಸಾಚರಣೆ ಕಾರ್ಯಕ್ರಮ ಇಂದು ನಡೆಯಿತು. ಈ ಪಿಡಿಒ ಶ್ಯಾಮ್ ಪ್ರಸಾದ್, ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗ್ರಾ.ಪಂ. ಮಾಜಿ ಸದಸ್ಯರು,ಗ್ರಾ.ಪಂ.ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು, ವರ್ತಕರು,ರಿಕ್ಷಾ ಚಾಲಕ ಮಾಲಕರು ಭಾಗವಹಿಸಿದ್ದರು.

ಯುವಜನ ಸಂಯುಕ್ತ ಮಂಡಳಿಯಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಮಣಿಕ್ಕಾರ ಗೋಪಾಲಕೃಷ್ಣ ಶಾನುಭೋಗ್ ರಿಗೆ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರಧಾನ

ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ಯುವಜನ ಸೇವಾ ಸಂಸ್ಥೆ ಸುಳ್ಯ ಗಾಂಧಿ ಜಯಂತಿ ಆಚರಣೆ ಹಾಗೂ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರಧಾನ ಸಮಾರಂಭ ಇಂದು ನಡೆಯಿತು. ಶಾಸಕ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಿ, ಬೆಳ್ಳಾರೆಯ ಮಣಿಕ್ಕಾರ ಗೋಪಾಲಕೃಷ್ಣ ಶಾನುಭೋಗ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಪ್ರೋ. ಸುಬ್ಬಪ್ಪ ಕೈಕಂಬ ಗಾಂಧೀಜಿಯವರ ಸ್ವರಾಜ್ಯ ಚಿಂತನೆ ಬಗ್ಗೆ...

ಸುಳ್ಯ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 151 ನೇ ಜಯಂತಿ ಆಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ದೇಶದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಸುಳ್ಯ ತಹಸಿಲ್ದಾರ್ ಅನಂತ ಶಂಕರ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಉದ್ಘಾಟನೆ ನೀಡಿದರು. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವಸ್ವಾಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ...

ಸಂಪಾಜೆ ಗ್ರಾ.ಪಂ. ನೇತೃತ್ವದಲ್ಲಿ ಗ್ರಾಮ ಮಟ್ಟದ ಸ್ವಚ್ಛತಾ ಕಾರ್ಯಕ್ರಮ

ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಗ್ರಾಮ ಮಟ್ಟದ ಸ್ವಚ್ಛತಾ ಕಾರ್ಯಕ್ರಮ, ಗ್ರಾಮಸಭೆ ರೈತರ ಕ್ರಿಯ ಯೋಜನೆಗೆ ಚಾಲನೆ ಕಾರ್ಯಕ್ರಮ ಸಂಪಾಜೆ ಪೊಲೀಸ್ ಹೊರಠಾಣೆ ಹತ್ತಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ ವಾಸುದೇವ ಕಟ್ಟಮನೆ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. ಸಭೆಯ ಅಧ್ಯಕ್ಷತೆಯನ್ನು ಸೋಮಶೇಖರ್ ಕೆ. ಆರ್.ವಹಿಸಿದರು. ಕಾರ್ಯಕ್ರಮದಲ್ಲಿ ಕಾರ್ಮಿಕ ಮುಖಂಡರಾದ ಕೆ.ಪಿ.ಜೋನಿ ಗಾಂಧೀಜಿ ಗುಣಗಾನ ಮಾಡಿದರು....

9ನೇ ದಿನಕ್ಕೆ ಕಾಲಿಟ್ಟ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಮುಷ್ಕರ : ಇಂದು ಸುಳ್ಯದಲ್ಲಿ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ರಾಜ್ಯವ್ಯಾಪಿ ಮುಷ್ಕರ 9ನೇ ದಿನಕ್ಕೆ ಕಾಲಿಟ್ಟಿದ್ದು, ಸುಳ್ಯದ ತಾಲೂಕು ಆಸ್ಪತ್ರೆ ಮುಂಭಾಗದಲ್ಲಿ ಸುಳ್ಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದಿಂದ ಅ.02 ರಂದು ಪ್ರತಿಭಟನಾ ಸಭೆ ಜರುಗಿತು. ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ ಎಂ.ಬಿ.ಫೌಂಡೇಶನ್ ನ ಶ್ರೀ ಎಂ.ಬಿ.ಸದಾಶಿವ ರವರು ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು,...
Loading posts...

All posts loaded

No more posts

error: Content is protected !!