ಸುಳ್ಯ : ಮಕ್ಕಳ ಹಕ್ಕು ಮತ್ತು ರಕ್ಷಣೆಯ ಕುರಿತು ಸಂವಾದ ಕಾರ್ಯಕ್ರಮ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಯೂನಿಸೆಫ್ ಹೈದ್ರಾಬಾದ್, ತಾಲೂಕು ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ತಾಲೂಕು ಇದರ ಸಹಭಾಗಿತ್ವದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತು ಸಂವಾದ ಕಾರ್ಯಕ್ರಮ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಮಿತಿ ಸದಸ್ಯ ಶಂಕರಪ್ಪ ರವರ ನೇತೃತ್ವದಲ್ಲಿ...

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ಸುಳ್ಯ ಘಟಕ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ : ನೂತನ ಕೃಷಿ ಕಾಯ್ದೆಗಳು ಕಾರ್ಪೊರೇಟ್ ದಲ್ಲಾಳಿಗಳಿಗೆ ಹಿಡಿತ ಸಾಧಿಸಲು ಅವಕಾಶ – ಕೆ.ಪಿ. ಜಾನಿ

ರೈತ ಕಾರ್ಮಿಕ ದಲಿತ ಒಕ್ಕೂಟವು ರಾಷ್ಟ್ರೀಯ ಮಟ್ಟದಲ್ಲಿ ದೇಶದಾದ್ಯಂತ ಕೇಂದ್ರ ಸರಕಾರದ ಕೃಷಿ ಕಾಯ್ದೆ 2020 ಹಿಂಪಡೆಯಲು ಆಗ್ರಹಿಸಿ ಡಿ.8 ರಂದು ಭಾರತ ಬಂದ್ ಘೋಷಣೆಗೆ ಬೆಂಬಲ ವ್ಯಕ್ತಪಡಿಸಿ, ಸುಳ್ಯ ಜ್ಯೋತಿ ವೃತ್ತದಿಂದ ಗಾಂಧಿನಗರ ತನಕ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿ ಸುಳ್ಯ ಖಾಸಗಿ ಬಸ್ ನಿಲ್ದಾಣ ಬಳಿ ಸಭೆ ನಡೆಸಲಾಯಿತು.ಕೃಷಿ ಕಾಯ್ದೆ 2020 ಹಿಂಪಡೆಯುವಂತೆ...
Ad Widget

ರೈತ, ಕಾರ್ಮಿಕ, ದಲಿತ ಒಕ್ಕೂಟ ಕರೆ ನೀಡಿದ ಭಾರತ ಬಂದ್ ಗೆ ಸುಳ್ಯದಲ್ಲಿ ನೀರಸ ಪ್ರತಿಕ್ರಿಯೆ

ರೈತ ಕಾರ್ಮಿಕ ದಲಿತ ಒಕ್ಕೂಟವು ರಾಷ್ಟ್ರೀಯ ಮಟ್ಟದಲ್ಲಿ ದೇಶದಾದ್ಯಂತ ಕೇಂದ್ರ ಸರಕಾರದ ಕೃಷಿ ಕಾಯ್ದೆ 2020 ಹಿಂಪಡೆಯಲು ಆಗ್ರಹಿಸಿ ಡಿ.08 ರಂದು ಕರೆನೀಡಿದ ಭಾರತ ಬಂದ್ ಗೆ ಸುಳ್ಯ ತಾಲೂಕಿನಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಅಂಗಡಿ ಮುಂಗಟ್ಟುಗಳು , ಬಸ್ ಸಂಚಾರ ಗಳು ಯಥಾವತ್ತಾಗಿ ಎಂದಿನಂತೆ ಕಾರ್ಯಚರಿಸಿದೆ. ಬಂದ್ ನ ಬಿಸಿ ಎಲ್ಲಿಯೂ ಕಂಡುಬರಲಿಲ್ಲ.

ಭಾರತ್ ಬಂದ್ ಗೆ ಬೆಳ್ಳಾರೆಯಲ್ಲಿ ನೀರಸ ಪ್ರತಿಕ್ರಿಯೆ

ನೂತನ ಕೃಷಿ ಕಾನೂನು ಖಂಡಿಸಿ ರೈತಪರ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ಬೆಳ್ಳಾರೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಬ್ಯಾಂಕ್, ಸರ್ಕಾರಿ ಬಸ್ಸು, ಆಟೋರಿಕ್ಷಾ, ಖಾಸಗಿ ವಾಹನಗಳು, ಪೆಟ್ರೋಲ್ ಬಂಕ್ ಎಂದಿನಂತೆ ಸೇವೆ ನೀಡುತ್ತಿದ್ದು ಜನಸಂಚಾರ ಎಂದಿನಂತಿದೆ.

ಪೈಚಾರು : ಹಿಜಾಮ ಮಾಹಿತಿ ಶಿಬಿರ

ಅಲ್ ಅಮೀನ್ ಯೂತ್‌ ಸೆಂಟರ್ (ರಿ) ಪೈಚಾರ್ಇದರ ವತಿಯಿಂದ ಹಿಜಾಮ ಶಿಬಿರವು ಕುವ್ವತ್ತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ಡಿ. 6 ರಂದು ನಡೆಯಿತು.ಕಾರ್ಯಕ್ರಮದಲ್ಲಿ ಅಲ್ ಅಮೀನ್ ಯೂತ್ ಸೆಂಟರ್ ಇದರ ಗೌರವಾಧ್ಯಕ್ಷರಾದ.ಇಬ್ರಾಹಿಮ್ ಪೈಝಿಯಾವರು ದುವಾಃ ನೆರವೇರಿಸಿದರು. ಉದ್ಘಾಟನೆಯನ್ನು ಕುವ್ವತ್ತುಲ್ ಇಸ್ಲಾಂ ಮದರಸ ಸದರ್ ಮುಹಲ್ಲಿಮ್ ಮುಯ್ಯದ್ದೀನ್ ಲತೀಫಿಯವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಎವೈಸಿ ಇದರ ಅಧ್ಯಕ್ಷರಾದ ಕರೀಮ್...

ಕಾವು : ವಿದ್ಯುತ್ ಕಂಬಕ್ಕೆ ಟಿಪ್ಪರ್ ಡಿಕ್ಕಿ – ಸುಳ್ಯಕ್ಕೆ ವಿದ್ಯುತ್ ವ್ಯತ್ಯಯ

ಕಾವು ಸಮೀಪದ ಮದ್ಲ ಬಳಿ 33 ಕೆವಿ ವಿದ್ಯುತ್ ಲೈನ್ ನ ಕಂಬಕ್ಕೆ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಿದ್ಯುತ್ ಕಂಬ ಮುರಿದಿದ್ದು ಇದರಿಂದ ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಟಿಪ್ಪರ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಸಾಮೂಹಿಕ ತಂಬಿಲ,ಅಗೇಲು ಸೇವೆ

ಕಲ್ಮಡ್ಕ ಗ್ರಾಮದ ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೈವಕ್ಕೆ 7ನೇ ವರ್ಷದ ಸಾಮೂಹಿಕ ತಂಬಿಲ ಮತ್ತು ಶ್ರೀ ಮುಳ್ಳುಗುಳಿಗ ದೈವಕ್ಕೆ ಅಗೇಲು ಸಮ್ಮಾನ ಕಾರ್ಯಕ್ರಮ ಡಿ.06 ರ ಸಂಜೆ ಮೊಕ್ತೇಸರರಾದ ರಾಮಚಂದ್ರ ಎಡಪತ್ಯ ಮತ್ತು ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿಯ ನೇತೃತ್ವದಲ್ಲಿ ನಡೆಯಿತು. ಸಾಮೂಹಿಕ ತಂಬಿಲ ಹಾಗೂ ಅಗೇಲು ಸೇವೆಯನ್ನು ಕೃಷ್ಣಮಣಿಯಾಣಿ...

ಸುಳ್ಯ ತಹಶೀಲ್ದಾರ್ ಆಗಿ ಕು.ಅನಿತಾಲಕ್ಷ್ಮೀ

ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸುಳ್ಯಕ್ಕೆ ಹೊಸ ತಹಶೀಲ್ದಾರ್‌ ಆಗಿ ಕು.ಅನಿತಾಲಕ್ಷ್ಮೀ ಅವರನ್ನು ನೇಮಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಸುಳ್ಯ ತಹಶೀಲ್ದಾರ್ ಅನಂತಶಂಕರ್ ರವರು ಕಡಬ ತಹಶೀಲ್ದಾರ್‌ ಆಗಿಯೂ ಕಾರ್ಯ ನಿರ್ವಹಿಸುತ್ತಿರುವುದರಿಂದ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಶಾಖೆಯ ತಹಶೀಲ್ದಾರ್ ಆಗಿರುವ ಕು. ಅನಿತಾಲಕ್ಷ್ಮೀ ಅವರನ್ನು ಸುಳ್ಯ ತಹಶೀಲ್ದಾರ್‌...

ಸಂಪಾಜೆ ಗ್ರಾಮ ಪಂಚಾಯತ್ ನ ಏಳು ಕ್ಷೇತ್ರಗಳಲ್ಲಿ ಎಸ್‌ಡಿಪಿಐ ಸ್ಪರ್ಧೆ

ಎಸ್‌ಡಿಪಿಐ ಸಂಪಾಜೆ ವಲಯ ಸಮಿತಿ ಮತ್ತು ಪಕ್ಷದ ಸಂಪಾಜೆ ವಲಯ ಚುನಾವಣಾ ಸಮಿತಿಯ ಜಂಟಿ‌ ಸಭೆಯು ಸಂಪಾಜೆಯಲ್ಲಿ ವಲಯಾದ್ಯಕ್ಷ ಮಹಮ್ಮದ್ ಕುಂಞಯವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಪಾಜೆ ವಲಯ ಉಸ್ತುವಾರಿ ಗಳಾದ ಅಶ್ರಫ್ ಟರ್ಲಿ‌ ಮತ್ತು ಫಾರೂಕ್ ಕಾನಕ್ಕೋಡ್ ರವರು ಸಭೆಯ ವಿಷಯಗಳನ್ನು ಮಂಡಿಸಿದರು ಮತ್ತು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಭಾವ್ಯ ಅಭ್ಯರ್ಥಿಗಳ ಪರಿಚಯವನ್ನು ಮಾಡಿ...

ಮಾವಿನಕಟ್ಟೆ ರಬ್ಬರ್ ಉತ್ಪಾದಕರ ಸಂಘ ಉದ್ಘಾಟನೆ : ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ – ಉಪಾಧ್ಯಕ್ಷ ಕೇಶವ ಹೊಸೊಳಿಕೆ

ದೇವಚಳ್ಳ ಗ್ರಾಮದ ಮಾವಿನಕಟ್ಟೆಯಲ್ಲಿ ನೂತನವಾಗಿ ರಬ್ಬರ್ ಉತ್ಪಾದಕರ ಸಂಘ ರಚನೆಗೊಂಡಿದ್ದು ಇದರ ಉದ್ಘಾಟನೆ ಮತ್ತು ಸೆಮಿನಾರ್ ಕಾರ್ಯಕ್ರಮ ಇಂದು ನಡೆಯಿತು. ರಬ್ಬರ್ ಬೋರ್ಡ್ ನ ಪುತ್ತೂರು ಡಿವಿಶನ್ ನ ಉಪ ರಬ್ಬರ್ ಉತ್ಪಾದಕರ ಕಮಿಷನರ್ ಚಂದ್ರನ್ ಕರಾಥ ದೀಪ ಬೆಳಗಿಸಿ, ಉದ್ಘಾಟಿಸಿದರು. ಮಾವಿನಕಟ್ಟೆ ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಬಾಬು ಗೌಡ ಅಚಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು....
Loading posts...

All posts loaded

No more posts

error: Content is protected !!