ಅಚ್ರಪ್ಪಾಡಿ ಶಾಲೆಗೆ ದಾನಿಗಳಿಂದ ಹಣ ಠೇವಣಿ ಮತ್ತು ಪುಸ್ತಕ ಕೊಡುಗೆ

ಕೆಲವು ವರ್ಷಗಳ ಹಿಂದೆ ಮುಚ್ಚುವ ಹಂತಕ್ಕೆ ಬಂದಿದ್ದ ಅಚ್ರಪ್ಪಾಡಿ ಕಿ.ಪ್ರಾ. ಶಾಲೆ ಇಂದು ಊರಿನವರ ಹಾಗೂ ದಾನಿಗಳ ನೆರವಿನಿಂದ ಅಭಿವೃದ್ಧಿಯತ್ತ ‌ಸಾಗುತ್ತಿದೆ. ಹಿಂದೆ ನಿಶ್ಚಯಿಸಿದಂತೆ 1ನೇ ತರಗತಿಗೆ ಪ್ರತಿ ವರ್ಷ ಸೇರುವ ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರದಂತೆ 2020-21 ನೇ ಶೈಕ್ಷಣಿಕ ವರ್ಷದಲ್ಲಿ ಸುಬ್ರಹ್ಮಣ್ಯ ಪೋಲಿಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ರೋಹಿತಾಶ್ವ ಇವರು ರೂ...

ಕೆ.ಟಿ.ವಿಶ್ವನಾಥ್ ರಿಗೆ ಸಮಾಜ ರತ್ನ ರಾಜ್ಯ ಪ್ರಶಸ್ತಿ

ಜ್ಞಾನ ಮಂದಾರ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಲಾಗುವ 2021 ಸಾಲಿನ ಸಮಾಜರತ್ನ ರಾಜ್ಯ ಪ್ರಶಸ್ತಿಗೆ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಭಾಜನರಾಗಿದ್ದಾರೆ . ಸಾಂಸ್ಕೃತಿಕ , ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದ್ದು ಜ .17 ರಂದು ಮಂಗಳೂರಿನಲ್ಲಿ ನಡೆಯಲಿರುವ ಜ್ಞಾನ...
Ad Widget

ಸಹಕಾರಿ ಧುರೀಣ ಪಿ.ಸಿ.ಜಯರಾಮ್ ರಿಗೆ ಸಮಾಜ ರತ್ನ ಪ್ರಶಸ್ತಿ

ಸಹಕಾರಿ,ಸಾಮಾಜಿಕ ಹಾಗೂ ರಾಜಕೀಯ ಧುರೀಣರಾಗಿರುವ ಪಿ.ಸಿ.ಜಯರಾಮ್ ರಿಗೆ ಸಹಕಾರಿ ಕ್ಷೇತ್ರದ ಸಾಧನೆಗಾಗಿ ಸಮಾಜ ರತ್ನ ಪ್ರಶಸ್ತಿ ಭಾಜನರಾಗಿದ್ದಾರೆ. ಅವರು ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಸುಳ್ಯ ವೆಂಕಟರಮಣ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜ .17 ರಂದು ಮಂಗಳೂರಿನಲ್ಲಿ ನಡೆಯುವ ಕನ್ನಡ ಕಲಾ ಪ್ರತಿಭೋತ್ಸವದಲ್ಲಿ ಸಮಾಜರತ್ನ ಪ್ರಶಸ್ತಿ ನೀಡಲಾಗುವುದು ಎಂದು ತಿಳಿದುಬಂದಿದೆ.

ಲವ್ ಜಿಹಾದ್ ತಡೆಗಟ್ಟಲು ಕಠಿಣ ಕಾನೂನು ಕ್ರಮ ಜಾರಿಗೊಳಿಸುವಂತೆ ವಿಹಿಂಪ, ಬಜರಂಗದಳ ಸರಕಾರಕ್ಕೆ ಮನವಿ

ಲವ್ ಜಿಹಾದ್ ತಡೆಗಟ್ಟಲು ಕಠಿಣ ಕಾನೂನು ಕ್ರಮ ಜಾರಿಗೊಳಿಸುವಂತೆ ವಿಶ್ವಹಿಂದೂ ಪರಿಷದ್ ಬಜರಂಗದಳ ಸುಳ್ಯ ಇದರ ವತಿಯಿಂದ ತಹಶೀಲ್ದಾರ್ ರ ಮೂಲಕ ಮಾನ್ಯ ಮುಖ್ಯ ಮತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಪ್ರಖಂಡ ಅಧ್ಯಕ್ಷ ರಾದ ಸೋಮಶೇಖರ್ ಪೈಕ, ಕಾರ್ಯದರ್ಶಿ ರಂಜಿತ್ ಸುಳ್ಯ, ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ, ತಾಲೂಕು ಸಹ...

ಪತ್ರಕರ್ತ ದುರ್ಗಾಕುಮಾರ್ ಗೆ ದಿ. ರಾಜೇಶ್ ಶಿಬಾಜೆ ಮಾಧ್ಯಮ ಗೌರವ ಪ್ರಶಸ್ತಿ

ಪತ್ರಕರ್ತರ ವೇದಿಕೆ ಬೆಂಗಳೂರು ಇದರ ಉಡುಪಿ ಘಟಕದ ವತಿಯಿಂದ ನೀಡಲಾಗುವ ದಿ.ರಾಜೇಶ್ ಶಿಬಾಜೆ ಮಾಧ್ಯಮ ಗೌರವ ಪ್ರಶಸ್ತಿಗೆ ಸುಳ್ಯದ ಪ್ರತಿಭಾನ್ವಿತ ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಭಾಜನರಾಗಿದ್ದಾರೆ. ಜನವಾಹಿನಿ ಪತ್ರಿಕೆಯ ವರದಿಗಾರರಾಗಿದ್ದ ರಾಜೇಶ್ ಶಿಬಾಜೆಯವರು ಹಲವು ವರ್ಷಗಳ ಹಿಂದೆ ವಾಹನ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಅವರ ಸ್ಮರಣಾರ್ಥ ಮಾಧ್ಯಮ ಗೌರವ ಪ್ರಶಸ್ತಿಯನ್ನು ಪತ್ರಕರ್ತರ ವೇದಿಕೆ...

ಪಂಜ : ಚಿತ್ರಕಲಾ ಶಿಕ್ಷಕ ಮಹಾಬಲ ಕುಳ ವಿಧಿವಶ

ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಚಿತ್ರ ಕಲಾ ಶಿಕ್ಷಕ, ಸಂಘಟಕ ಪಂಜದ ಮಹಾಬಲ ಕುಳ ನ.11 ಬೆಳಗ್ಗಿನ ಜಾವ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ನ.10 ರಂದು ಪಂಜದ ಕೃಷ್ಣನಗರದಲ್ಲಿರುವ ಅವರ ಮನೆಯ ಬಳಿ ಇರುವ ಮರದ ಗೆಲ್ಲು ಕಡಿಯಲೆಂದು ಮರ ಏರಿದ್ದ ವೇಳೆ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರು...

ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ್ ಡಿ.ವಿ.ಯವರಿಗೆ ಸಮಾಜ ರತ್ನ ರಾಜ್ಯ ಪ್ರಶಸ್ತಿ

ಬೆಂಗಳೂರಿನ ಜ್ಞಾನ ಮಂದಾರ ಅಕಾಡೆಮಿ ನೀಡುವ ಸಮಾಜ ರತ್ನ ರಾಜ್ಯ ಪ್ರಶಸ್ತಿಗೆ ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ್ ಡಿ.ವಿ.ಯವರು ಭಾಜನರಾಗಿದ್ದಾರೆ. ಜ.17 ರಂದು ಮಂಗಳೂರಿನಲ್ಲಿ ನಡೆಯುವ ಜ್ಞಾನ ಮಂದಾರ ಉತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಿಳಿದುಬಂದಿದೆ.

ಮಯೂರಿ ಯುವತಿ ಮಂಡಲ ಚೊಕ್ಕಾಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷೆ ಪೂರ್ಣಿಮ ಚಿಕ್ಕಿನಡ್ಕ, ಕಾರ್ಯದರ್ಶಿ ವೀಣಾ ಪಡ್ಪು

Poornima chikkinadka Veena padpu Nandini Chennamule ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇದರ 2019-20 ನೇ ಸಾಲಿನ ಮಹಾಸಭೆಯ ನವೆಂಬರ್ 8 ರಂದು ನಡೆಯಿತು. ಶ್ರೀಮತಿ ಉಷಾಲತಾ ಪಡ್ಪು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಜತೆ ಕಾರ್ಯದರ್ಶಿ ಶ್ರೀಮತಿ ಹೇಮಲತಾ ಪಡ್ಪು ವರದಿ ವಾಚಿಸಿ, ಖಜಾಂಜಿ ಸನ್ನಿಧಿ ಪೂಜಾರಿಮನೆ ಲೆಕ್ಕ ಪತ್ರ ಮಂಡಿಸಿದರು. ಸರ್ವ ಸದಸ್ಯರ...

ಪಂಜದಲ್ಲಿ ಯಕ್ಷಗಾನ ಗಾನ ವೈಭವ- 2020 ಉದ್ಘಾಟನೆ

ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಪಂಜ, ಕಲಾಭಿಮಾನಿಗಳ ಸಹಕಾರದೊಂದಿಗೆ ಯಕ್ಷಗಾನ ಗಾನ ವೈಭವ -2020 ನ.10 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಸಭಾ ಭವನದಲ್ಲಿ ಉದ್ಘಾಟನೆ ಗೊಂಡಿತು.ಕಾರ್ಯಕ್ರಮವನ್ನು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ ದೀಪ ಬೆಳಗಿಸಿ ಉದ್ಘಾಟಿಸಿದರು.ಪಂಜ ಶ್ರೀ ಶಾರದಾಂಬಾ ಭಜನಾ ಮಂಡಳಿ ಯ ಅಧ್ಯಕ್ಷ...

ತೊಡಿಕಾನ : ಹೋಟೆಲ್ ಮಾಲಕ ಆತ್ಮಹತ್ಯೆ

ತೊಡಿಕಾನದಲ್ಲಿ ಹೋಟೆಲ್ ನಡೆಸುತ್ತಿದ್ದ ಮುಪ್ಪಸೇರು ಧರ್ಮಪಾಲ ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ನಡೆದಿದೆ. ಆತ್ಮಹತ್ಯೆ ಗೆ ಕಾರಣ ತಿಳಿದುಬಂದಿಲ್ಲ. ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಾಯಿ,ಪತ್ನಿ, ಇಬ್ಬರು ಮಕ್ಕಳು ಹಾಗೂ ಸಹೋದರ ರನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!