ಸುಳ್ಯ ನ.ಪಂ.ಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ

. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿಯನ್ನು ಸರಕಾರ ನಿಗದಿಪಡಿಸಿದೆ.

ಕಲ್ಲುಗುಂಡಿ ಭಾರಿ ಮಳೆ – ಮನೆಗಳಿಗೆ ನುಗ್ಗಿದ ನೀರು

ಕಲ್ಲುಗುಂಡಿಯಲ್ಲಿ ನಿರಂತರ ಸುರಿದ ಮಳೆಗೆ ಕೂಲಿಶೆಡ್ ಬಳಿ ರಸ್ತೆ ಬದಿಯಲ್ಲಿದ್ದ ನಾಲ್ಕು ಮನೆಗಳಿಗೆ ನೀರು ನುಗ್ಗಿದೆ. ಧಿಡೀರ್ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
Ad Widget

ಸುಬ್ರಹ್ಮಣ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸರ್ಪ ಸಂಸ್ಕಾರ ಕ್ರಿಯಾಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅ.8ರಂದು ಪತ್ತೆಯಾಗಿದೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೃಷ್ಣ ಮಯ್ಯ ಭಟ್ (55 ವ.) ಎಂದು ಗುರುತಿಸಲಾಗಿದೆ.ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಾಳ ನಿವಾಸಿಯಾಗಿರುವ ಕೃಷ್ಣ ಮಯ್ಯ ಭಟ್ ಕಳೆದ 5 ವರ್ಷಗಳಿಂದ ಸುಬ್ರಹ್ಮಣ್ಯ ದೇವಳದಲ್ಲಿ ಸರ್ಪಸಂಸ್ಕಾರ ಕ್ರಿಯಾ ಕರ್ತನಾಗಿ...

ಭಾರಿ ಮಳೆ : ಕೊಲ್ಲಮೊಗ್ರ ಸೇತುವೆ ಮೇಲೆ ಉಕ್ಕಿ ಹರಿದಿದ್ದು ಮನೆಗಳಿಗೆ ನುಗ್ಗಿದ ನೀರು

ಕೊಲ್ಲಮೊಗ್ರ, ಕಲ್ಮಕಾರು ಪರಿಸರದಲ್ಲಿ ಇಂದು ವ್ಯಾಪಕ ಮಳೆಯಾಗುತ್ತಿದ್ದು ಕೊಲ್ಲಮೊಗ್ರದ ಸಮೀಪದ ಸೇತುವೆ ಮೇಲೆ ನೀರು ಹರಿಯುತ್ತಿದ್ದು ಸಮೀಪದ ಮನೆಗಳಿಗೆ ನೀರು ನುಗ್ಗಿದೆ ಎಂದು ತಿಳಿದುಬಂದಿದೆ. ಸೇತುವೆ ಶಿಥಿಲಗೊಂಡಿದ್ದು ಅಪಾಯದಲ್ಲಿದ್ದು ಇಲಾಖೆ ಈ ಬಗ್ಗೆ ಗಮನ ಹರಿಸಬೇಕಾಗಿ ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಬಾರಿಯ ಅತೀ ಹೆಚ್ಚು ಮಳೆ ಇಂದು ಸುರಿದಿದ್ದು ಯಾವುದೇ ಹೆಚ್ಚಿನ ಹಾನಿಯಾಗಿರುವ ವರದಿಯಾಗಿಲ್ಲ.

ಶಾಂತಿನಗರದಲ್ಲಿ ವ್ಯಕ್ತಿಯೊಬ್ಬರ ಕೊಲೆ

ಸುಳ್ಯದ ಶಾಂತಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆಗೈದ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಈತ ಕೊಡಗಿನಲ್ಲಿ ನಡೆದ ಪ್ರಭಾವಿ ಮುಖಂಡರ ಕೊಲೆ ಪ್ರಕರಣದ ಆರೋಪಿ ಎಂದು ತಿಳಿದುಬಂದಿದೆ. ಕೊಲೆಯಾದ ವ್ಯಕ್ತಿ ಸಂಪತ್ ತಿಳಿದು ಬಂದಿದ್ದು ಈ ಹಿಂದೆ ಬಾಲಚಂದ್ರ ಕಳಗಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಇಂದು 6 ಗಂಟೆಗೆ ಅವರ ನಿವಾಸದಿಂದ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಅಲ್ಲಿಗೆ ಬಂದ...

ಕನಕಮಜಲು ಕೋವಿಡ್ 19 ಪರೀಕ್ಷೆ – 3 ಪಾಸಿಟಿವ್

ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇದರ ವತಿಯಿಂದ ಕೊವಿಡ್ 19 ಪರೀಕ್ಷೆ ಅ.8 ರಂದು ಕನಕಮಜಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಈ ವೇಳೆ 36 ಜನ ಪರೀಕ್ಷೆಗೆ ಒಳಪಟ್ಟಿದ್ದು, ಇದರಲ್ಲಿ 3 ಜನರಿಗೆ ಸೋಂಕು ದೃಢ ಪಟ್ಟಿರುವುದಾಗಿ ಅವರಿಗೆ ಹೋಂ ಕಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆಯಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಅರಂತೋಡಿನಲ್ಲಿ ನಾಳೆ (ಅ.08) ರಂದು ಕೋವಿಡ್-19 ತಪಾಸಣಾ ಶಿಬಿರ

ಜಿಲ್ಲಾಡಳಿತದ ಆದೇಶದ ಪ್ರಕಾರ ಜನರ ಸುರಕ್ಷತೆಯ ದೃಷ್ಟಿಯಿಂದ ಕೋವಿಡ -19 ಉಚಿತ ಪರೀಕ್ಷಾ ಶಿಬಿರಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಅರಂತೋಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅ. 08 ಗುರುವಾರ, ಪೂರ್ವಾಹ್ನ 10.30 ಕ್ಕೆ ಉಚಿತ ಪರೀಕ್ಷಾ ಶಿಬಿರ ನಡೆಯಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವ ನಾಗರಿಕರು ಸದರಿ ಶಿಬಿರದಲ್ಲಿ ಪರೀಕ್ಷೆಗಳನ್ನು ಮಾಡಿಕೊಳ್ಳಬೇಕಾಗಿ ಈ ಮೂಲಕ ಸಾರ್ವಜನಿಕ ಪ್ರಕಟಣೆ...

ಕಲ್ಮಕಾರಿನಲ್ಲಿ ಅ‌.8 ರಂದು ಕೋವಿಡ್-19 ತಪಾಸಣಾ ಶಿಬಿರ

ಕೊಲ್ಲಮೊಗ್ರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಕಾರು ಗ್ರಾಮದ ನಿವಾಸಿಗಳಿಗಾಗಿ ವಿಶೇಷ ಕೋವಿಡ್ ತಪಾಸಣಾ ಶಿಬಿರವನ್ನು ಅ.8 ರಂದು ಗುರುವಾರ ಪೂರ್ವಾಹ್ನ 10 ಗಂಟೆಗೆ ಕಲ್ಮಕಾರು ಹಳೆ ಅಂಗನವಾಡಿ ಕೇಂದ್ರದ ಬಳಿ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪರೀಕ್ಷೆ ನಡೆಸಿಕೊಳ್ಳಬಹುದು.🔹ಪರೀಕ್ಷೆ ನಡೆಸಲು ಬರುವವರು ತಮ್ಮ ಮೊಬೈಲ್ ಪೋನ್ ಜೊತೆಗೆ ತರಬೇಕು.🔹 ನೋಂದಾವಣೆಯ ಬಳಿಕ ನಿಮ್ಮ ಮೊಬೈಲ್...

ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರರಾಗಿ ಶೌವಾದ್ ಗೂನಡ್ಕ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮೀಡಿಯಾ ಪ್ಯಾನಲಿಸ್ಟ್ (ಮಾಧ್ಯಮ ವಕ್ತಾರ) ಆಗಿ ಎನ್.ಎಸ್.ಯು.ಐ. ಮುಖಂಡ ಶೌವಾದ್ ಗೂನಡ್ಕರವರನ್ನು ನೇಮಕಗೊಳಿಸಿ ಕೆ.ಪಿ.ಸಿ.ಸಿ.ಆಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಆದೇಶವನ್ನು ಹೊರಡಿಸಿದ್ದಾರೆ. ಶೌವಾದ್ ಗೂನಡ್ಕರವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಸ್ಥಾನ ಪಡೆದ ಅತ್ಯಂತ ಕಿರಿಯ ವಯಸ್ಸಿನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶೌವಾದ್ ಗೂನಡ್ಕರವರ ಸಂಘಟನಾ ಹಾಗೂ ವಾಕ್ ಚಾತುರ್ಯತೆಯನ್ನು...

ಮಾಸ್ಕ್ ಧರಿಸದವರ ಮೇಲೆ ಹಾಕಲಾಗುತ್ತಿದ್ದ ದಂಡ ಪ್ರಮಾಣ ಇಳಿಕೆ ಮಾಡಿ ಸರ್ಕಾರ ಆದೇಶ

ಕೊರೋನಾ ಸೋಂಕು ನಿಯಂತ್ರಿಸುವಲ್ಲಿ, ಮಾರ್ಗಸೂಚಿ ಪಾಲಿಸದವರ ವಿರುದ್ದ ಸರ್ಕಾರ ಘೋಷಿಸಿದ್ದ ದುಬಾರಿ ದಂಡ ವಸೂಲಾತಿ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮಾಸ್ಕ್ ಧರಿಸದವರ ಮೇಲೆ ಹಾಕಲಾಗುತ್ತಿದ್ದ ದಂಡ ಶುಲ್ಕವನ್ನು ಇಳಿಕೆ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ. ಈ ಮುಂಚೆ ಮಾಸ್ಕ್ ಧರಿಸದವರ ವಿರುದ್ಧ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ 1000 ರೂ....
Loading posts...

All posts loaded

No more posts

error: Content is protected !!