ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಿಶ್ವ ಉರಗಳ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಗದತಂತ್ರ ವಿಭಾಗದಿಂದ ವಿಶ್ವ ಉರಗಳ ದಿನಾಚರಣೆಯ ಪ್ರಯುಕ್ತ ಜು.16ರಂದು ವಿವಿಧ ರೀತಿಯ ಉರಗಗಳ ಸಂರಕ್ಷಣೆ ಕುರಿತು ಮಾಹಿತಿ ಕಾರ್ಯಗಾರವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ.ವಿ ಅವರು ದೀಪ ಬೆಳಗಿಸುವುದ ಮೂಲಕ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ...

ಇಂದಿನ(ಜುಲೈ 18) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಬೆಲೆಯಲ್ಲಿ ಮತ್ತೆ ಏರಿಕೆ..! ; ರಬ್ಬರ್ ಬೆಲೆಯಲ್ಲಿ ಅಲ್ಪ ಇಳಿಕೆ..!! ; ಅಡಿಕೆ ಮತ್ತು ಕೊಬ್ಬರಿ ಸಂಪೂರ್ಣ ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 18 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Ad Widget

ಮಂಡೆಕೋಲು : ತೂಗುಸೇತುವೆಯ ಬಳಿಯಲ್ಲಿಯೇ ಪದ್ಮಶ್ರೀ ಗಿರೀಶ್ ಬಾರಧ್ವಾಜರಿಗೆ ಶ್ರದ್ಧಾಂಜಲಿ‌ ಅರ್ಪಣೆ

ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಅವರು ನಿರ್ಮಿಸಿದ ತೂಗುಸೇತುವೆ ಬಳಿಯಲ್ಲಿಯೇ ಊರವರಿಂದ ಶ್ರದ್ಧಾಂಜಲಿ ಕಾರ್ಯಕ್ರಮವು ನಡೆಯಿತು. ಮಂಡೆಕೋಲಿನ ಪೆರಾಜೆ ತೂಗುಸೇತುವೆಯು ಸುಮಾರು ಇಪ್ಪತ್ತು ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದು, ಪದ್ಮಶ್ರೀ ಗಿರೀಶ್ ಭಾರದ್ವಾಜರೇ ಈ ಸೇತುವೆಯನ್ನು ಕೂಡ ನಿರ್ಮಿಸಿದ್ದರು. ಈ ತೂಗುಸೇತುವೆ ಕಲ್ಲಡ್ಕ ಪೆರಾಜೆ-ಅಕ್ಕಪ್ಪಾಡಿ ಭಾಗದ ನಾಗರಿಕರ ಬದುಕನ್ನೇ ಬದಲಿಸಿದ ಸೇತುವೆಯಾಗಿದ್ದು, ಆ ಕಾರಣಕ್ಕಾಗಿಯೇ ತೂಗುಸೇತುವೆ ಸಂರಕ್ಷಣಾ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 18-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ*,ಮನೆಯಿಂದ ಹೊರಹೋಗುವಾಗ ನಿತ್ಯ ಉಪಯೋಗಿಸುವ ವಸ್ತುಗಳ ವಿಚಾರದಲ್ಲಿ ಎಚ್ಚರಿಕೆಯಿಂದಿರಿ, ನೀವು ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಂದು ಕಳೆದುಕೊಳ್ಳಬಹುದು. ಕುಟುಂಬದಲ್ಲಿ ನೀವು ಯಾವುದೇ ನಿರ್ಧಾರವನ್ನು ಶಾಂತವಾಗಿ ತೆಗೆದುಕೊಳ್ಳಬೇಕು. ವಾಹನ ಚಾಲನೆ ಮಾಡುವಾಗ ಮತ್ತು ಪ್ರಯಾಣದಲ್ಲಿ ಎಚ್ಚರದಿಂದ ಇರಿ, ಗಮನಿಸಿ:-ಇಂದು ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆ...

ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಹಿತಾ ಗೋಳ್ಯಾಡಿ 

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ (NEET-2026) ಸುಳ್ಯದ ಹೆಮ್ಮೆಯ ಪ್ರತಿಭೆ ಹಿತಾ ಗೋಳ್ಯಾಡಿ ಅವರು 630 ( All India Rank-3419, Category Rank- 1327) ಅಂಕಗಳನ್ನು ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಹಿಂದೆ ನಡೆದ JEE MAIN ಪರೀಕ್ಷೆಯಲ್ಲಿ 96.58 percentile ಪಡೆದಿದ್ದಾರೆ ಹಾಗೂ KCET ಪರೀಕ್ಷೆಯಲ್ಲಿ Veterinary - 1569,...

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿಗೆ ಕೋಟೆ ಪೌಂಡೇಶನ್ ವತಿಯಿಂದ ವಿಜ್ಞಾನ ಪ್ರಯೋಗಾಲಯಕ್ಕೆ ಮೂರು ಲಕ್ಷಕ್ಕೂ ಅಧಿಕ ಮೊತ್ತದ ಉಪಕರಣಗಳ ಕೊಡುಗೆ

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿಗೆ ಜು.15 ಬುಧವಾರದಂದು ಕೋಟೆ ಪೌಂಡೇಶನ್ ವತಿಯಿಂದ ಸುಮಾರು ಮೂರು ಲಕ್ಷಕ್ಕೂ ಅಧಿಕ ಮೊತ್ತದ ಉಪಕರಣಗಳನ್ನು ರಮೇಶ್ ಸಿ.ಕೆ ಡೈರೆಕ್ಟರ್ ಆಫ್ ಪ್ರೊಜೆಕ್ಟ್ ಆಪರೇಷನ್ ಕೋಟೆ ಪೌಂಡೇಶನ್ ವಿಜ್ಞಾನ ಪ್ರಯೋಗಾಲಯಕ್ಕೆ ಹಸ್ತಾಂತರಿಸಿದರು. ಇವರಿಗೆ ಸಂಸ್ಥೆಯ ವತಿಯಿಂದ ಸನ್ಮಾನ ಏರ್ಪಡಿಸಲಾಯಿತು. ನಂತರ ಮಾತನಾಡಿದ ಅವರು "ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳ...

ಮಳೆಯ ಹಿನ್ನೆಲೆ ದ.ಕ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ; ನಾಳೆ(ಜು.18) ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 18 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...

ಅಡ್ಕಾರು : ನಡುವಡ್ಕ ಸಮೀಪ ರಿಕ್ಷಾ – ಕಾರು ಡಿಕ್ಕಿ

ಅಡ್ಕಾರಿನ ನಡುವಡ್ಕ ಎಂಬಲ್ಲಿ ಕಾರು ಮತ್ತು ರಿಕ್ಷಾ ಡಿಕ್ಕಿಯಾದ ಘಟನೆ ಜು.17ರಂದು ಸಂಭವಿಸಿದೆ. ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

ಕರಾವಳಿ-ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ – ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಜುಲೈ 17 ಹಾಗೂ 18 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಪರಿಣಾಮವಾಗಿ ಭೂಕುಸಿತ ಸಂಭವಿಸುವ ಸಾಧ್ಯತೆ ಎದುರಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ(IMD) ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

ಸುಳ್ಯ ಹಾಗೂ ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿಗಳ ವರ್ಗಾವಣೆ

ಸುಳ್ಯ ವಲಯಾರಣ್ಯಾಧಿಕಾರಿ ಮಂಜುನಾಥ್.ಎನ್ ಹಾಗೂ ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿ ವಿಮಲ್ ಬಾಬು ಕುಶಾಲನಗರ ಅರಣ್ಯ ತರಬೇತಿ ಕೇಂದ್ರದ ವಲಯಾರಣ್ಯಾಧಿಕಾರಿಗಳಾಗಿ ವರ್ಗಾವಣೆಗೊಂಡಿದ್ದಾರೆ. ಮಂಜುನಾಥ್ ಅವರ ಸ್ಥಾನಕ್ಕೆ ಹನೂರು ವನ್ಯಜೀವಿ ವಿಭಾಗದ ವಲಯಾರಣ್ಯಾಧಿಕಾರಿ ನಿರಂಜನ್ ಶೆಟ್ಟಿ ಆಗಮಿಸಲಿದ್ದಾರೆ. ವಿಮಲ್ ಬಾಬು ಅವರ ಸ್ಥಾನಕ್ಕೆ ಕುದುರೆಮುಖ ವನ್ಯಜೀವಿ ವಿಭಾಗದ ವಲಯಾರಣ್ಯಾಧಿಕಾರಿ ಚೇತನ್ ಹೆಚ್.ಪಿ ಆಗಮಿಸಲಿದ್ದಾರೆ.
Loading posts...

All posts loaded

No more posts

error: Content is protected !!