ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಸುಗ್ರೀವಾಜ್ಞೆ ರೈತ ಮತ್ತು ಕಾರ್ಮಿಕ ವಿರೋಧಿಯಾಗಿದೆಯೆಂದು ಎಸ್‌ಡಿಪಿಐ ಪ್ರತಿಭಟನೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ  ಬೆಳ್ಳಾರೆ ವಲಯ ಸಮಿತಿ ವತಿಯಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಸುಗ್ರಿವಾಜ್ಞೆಯು ರೈತ ಮತ್ತು ಕಾರ್ಮಿಕ ವಿರೋಧಿಯಾಗಿದೆ ಎಂದು ಅದರ  ವಿರುದ್ಧ ಬೆಳ್ಳಾರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ವಲಯ ಅಧ್ಯಕ್ಷರಾದ ಸಿದ್ದೀಕ್ ಬೆಳ್ಳಾರೆ ನೇತೃತ್ವದಲ್ಲಿ ಸೆ.25 ರಂದು ಪ್ರತಿಭಟನೆ ನಡೆಯಿತು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ...

ಸುಳ್ಯ : ಮಾಸ್ಕ್ ಧರಿಸದಿದ್ದರೆ ಪೊಲೀಸರಿಂದ ದಂಡ

ಕೊರೋನ ವೈರಸ್ ಮಹಾಮಾರಿಯು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶವನ್ನು ನೀಡಿದ್ದು ಇದರ ಅಂಗವಾಗಿ ಸುಳ್ಯ ನಗರ ಪ್ರದೇಶದಲ್ಲಿ ಮಾಸ್ಕ್ ದರಿಸದೆ ಓಡಾಡುತ್ತಿರುವ ವ್ಯಕ್ತಿಗಳನ್ನು ಜ್ಯೋತಿ ಸರ್ಕಲ್ ಬಳಿ ಹಾಗೂ ಸುಳ್ಯ ಪೊಲೀಸ್ ಠಾಣೆ ಮುಂಬಾಗ ಪರಿಶೀಲನೆ ನಡೆಸುತ್ತಿದ್ದಾರೆ. ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ಹಾಗೂ ಸುಳ್ಯ ಪೊಲೀಸ್ ಉಪನಿರೀಕ್ಷಕ ಹರೀಶ್...
Ad Widget

ಕೂತ್ಕುಂಜ ಗ್ರಾಮದ ಕಾಲೋನಿ ರಸ್ತೆ ಸರಿಪಡಿಸಿಕೊಳ್ಳಲು ಅಧಿಕಾರಿಗಳಿಗೆ ಮನವಿ

ಕೂತ್ಕುಂಜ ಗ್ರಾಮದ ಹೆಬ್ಬಾರಹಿತ್ಲು ಕಾಲೋನಿಯಲ್ಲಿ ಸುಮಾರು 20 ದಲಿತ ಕುಟುಂಬಗಳು ತಮ್ಮ ಮನೆಗಳ ಸಂಪರ್ಕಕ್ಕೆ ಯೋಗ್ಯವಾದ ರಸ್ತೆ ಇಲ್ಲದಿರುವ ಬಗ್ಗೆ ಕೂತ್ಕುಂಜ ಗ್ರಾಮ ಸಮಿತಿ ಸುಳ್ಯ ತಾಲೂಕು ದಲಿತ್ ಸೇವಾ ಸಮಿತಿಯ ಗಮನಕ್ಕೆ ತಂದರು.ಈ ಹಿನ್ನೆಲೆಯಲ್ಲಿ ಸದ್ರಿ ರಸ್ತೆಯನ್ನು ತಾಲೂಕು ಸಮಿತಿಯ ಅಧ್ಯಕ್ಷರ ವಸಂತ ಕುದ್ಪಾಜೆ , ಸಂಚಾಲಕ ನಾರಾಯಣ ತೋಡಿಕಾನ, ಉಪಾಧ್ಯಕ್ಷ ಕುಮಾರ ಬಳ್ಳಕ್ಕ...

ಗುತ್ತಿಗೆ ನೌಕರರ ಮುಷ್ಕರದ ಹಿನ್ನಲೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ

ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಂದ ಅನಿರ್ದಿಷ್ಟವಧಿ ಮುಷ್ಕರ  ಆರಂಭಗೊಂಡಿದ್ದು, ಇದರ ಹಿನ್ನಲೆಯಲ್ಲಿ ಸುಳ್ಯ ಸರಕಾರ ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ವೈದ್ಯರುಗಳು, ನರ್ಸ್‌ಗಳು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು ೨೫ಕ್ಕೂ ಅಧಿಕ ಗುತ್ತಿಗೆ ಮತ್ತು ಹೊರಗುತ್ತಿಗೆ ಅಡಿಯಲ್ಲಿ ಡಿ'ಗ್ರೂಫ್ ನೌಕರರು ಸೇವೆ ಸಲ್ಲಿಸುತ್ತಿದ್ದು, ಆಸ್ಪತ್ರೆಯ ಸ್ವಚ್ಛತೆಯಿಂದ ಹಿಡಿದು ತುರ್ತುವಿಭಾಗದ ಎಲ್ಲಾ ಘಟಕಗಳಲ್ಲಿಯೂ ಇವರ ಕೊರತೆ...

ರೈತ ಮಸೂದೆ ತಿದ್ದುಪಡಿ ವಿರೋಧಿಸಿ ಸುಳ್ಯ ಎಸ್‌ಡಿಪಿಐ ಸಂಘದ ವತಿಯಿಂದ ಪ್ರತಿಭಟನೆ

ಕೇಂದ್ರ ಸರಕಾರ ಜಾರಿಗೆ ತಂದ ರೈತ ಮಸೂದೆ ತಿದ್ದುಪಡಿಯನ್ನು ವಿರೋಧಿಸಿ ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಸುಳ್ಯ ನಗರ ಸಮಿತಿಯ ವತಿಯಿಂದ ಸುಳ್ಯ ತಾಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾ ಸಭೆಯನ್ನು ನಡೆಸಲಾಯಿತು.ಸುಳ್ಯ ವಿಧಾನ ಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಧ್ಯಕ್ಷ ಅಬ್ದುಲ್...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(25.09.2020 ಶುಕ್ರವಾರ ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 400ಡಬಲ್ ಚೋಲ್ 300 - 400 ಫಠೋರ 220 - 290ಉಳ್ಳಿಗಡ್ಡೆ 110 - 220ಕರಿಗೋಟು 110 - 210 ಕಾಳುಮೆಣಸುಕಾಳುಮೆಣಸು 250 - 335 ಕೊಕ್ಕೋಒಣ ಕೊಕ್ಕೋ :- 150 -...

ಅಡ್ತಲೆ : ವಿದ್ಯುತ್ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳ ಅಳಲು

ಅರಂತೋಡು ಗ್ರಾಮದ ಅಡ್ತಲೆ ಪ್ರದೇಶಕ್ಕೆ ನಿರಂತರ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಕರೆಂಟ್ ಇದ್ದರೆ ಮಾತ್ರ ಇರುವ ನೆಟ್ವರ್ಕ್, ವಿದ್ಯಾರ್ಥಿಗಳ ಆನ್ಲೈನ್ ಶಿಕ್ಷಣಕ್ಕೆ ತೊಡಕುಂಟಾಗುತ್ತಿದ್ದು ಜನಪ್ರತಿನಿಧಿಗಳು ಇಂತಹ ಪ್ರದೇಶಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಯಾವ ಜನಪ್ರತಿನಿಧಿಗಳೂ ಈ ಭಾಗದ ಸಮಸ್ಯೆಯನ್ನು ಕೇಳದಂತಹ ಪರಿಸ್ಥಿತಿ ಏರ್ಪಟ್ಟಿದೆ. ಕುಡಿಯುವ ನೀರಿನ ಸಮಸ್ಯೆ ಕೂಡ ಕೆಲವೆಡೆ...

ಎನ್ ಎಸ್ ಎಸ್ ಶಿಬಿರದ ಮೆಲುಕು

ರಾಷ್ಟ್ರೀಯ ಸೇವಾ ಯೋಜನೆಯು 1969 ಸೆಪ್ಟೆಂಬರ್ 24ರಂದು ಜನ್ಮ ತಾಳಿದ್ದು, ಇದನ್ನು ಭಾರತ ಸರಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯು ನಡೆಸುತ್ತಿದ್ದು, ಇದು ಒಂದು ಸಾರ್ವಜನಿಕ ಸೇವಾ ಸಂಸ್ಥೆಯಾಗಿದೆ. ಈ ಯೋಜನೆಯಲ್ಲಿ ಹಲವಾರು ಹೊಸ ಹೊಸ ವಿಚಾರಧಾರೆಗಳನ್ನು ಕಲಿಯಬಹುದಾಗಿದ್ದು, ಇದರೊಂದಿಗೆ ರಾಷ್ಟ್ರ ಪ್ರೇಮ ಮತ್ತು ಸೇವಾ ಮನೋಭಾವನೆಗಳನ್ನು ಬೆಳೆಸಬಹುದಾಗಿದೆ.ನಾನು ಪ್ರಾಥಮಿಕ ಶಿಕ್ಷಣ ಪಡಿಯುತ್ತಿದ್ದ ಸಂದರ್ಭದಲ್ಲಿ...

ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ

ಭಾರತೀಯ ಮಜ್ದೂರ್ ಸಂಘ ಬೆಳ್ತಂಗಡಿ ಮತ್ತು ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಬೆಳ್ತಂಗಡಿ ವತಿಯಿಂದ ಅನುಗ್ರಹ ಸಭಾಭವನ ಬೆಳ್ಳಾರೆ ಇಲ್ಲಿ ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಹಾಗೂ ಸಮಾಲೋಚನಾ ಸಭೆ ಸೆ.23 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಮುಖರಾದ ಶಶಿಕುಮಾರ್ ಅಧ್ಯಕ್ಷತೆ...

ವಿವಿಧ ಸಂಘಟನೆಗಳ ವತಿಯಿಂದ ನಾಳೆ ನಡೆಯಬೇಕಾಗಿದ್ದ ಪ್ರತಿಭಟನೆ ಸೆ.28 ಕ್ಕೆ ಮುಂದೂಡಿಕೆ

ರೈತ ,ಕಾರ್ಮಿಕ ,ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ 25 ರಂದು ಸುಳ್ಯದಲ್ಲಿ ನಡೆಯಬೇಕಿದ್ದ ಪ್ರತಿಭಟನೆಯನ್ನು 28.9.2020 ರ ಸೋಮವಾರಕ್ಕೆ ಮುಂದೂಡುವುದೆಂದು ಇಂದು ಸುಳ್ಯದಲ್ಲಿ ನಡೆದ ರೈತ ,ಕಾರ್ಮಿಕ, ದಲಿತ ಮತ್ತು ಪ್ರಗತಿಪರ ಸುಮಾರು ಹತ್ತು ಸಂಘಟನೆಗಳ ಪ್ರಮುಖರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ರಾಜ್ಯಮಟ್ಟದಲ್ಲಿ ಕರೆ ಕೊಟ್ಟ ಬಂದ್ ವಿಷಯದ ಗಂಭೀರತೆಯನ್ನು ಅರ್ಥಮಾಡಿಕೊಂಡ ಸಂಘಟನೆಗಳು ನಾವೂ...
Loading posts...

All posts loaded

No more posts

error: Content is protected !!