ಚೆಂಬು : ಹರಿಪ್ರಸಾದ್ ಮೇಲೆಮನೆ ಹೃದಯಾಘಾತದಿಂದ ನಿಧನ

ಚೆಂಬು ಗ್ರಾಮದ ಊರುಬೈಲು ಮೇಲೆಮನೆ ಹರಿಪ್ರಸಾದ್ ಸೆ.16 ರಂದು ಹೃದಯಾಘಾತದಿಂದ ನಿಧನರಾದರು. ಅವರಿಗೆ 32 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ , ತಾಯಿ, ಸಹೋದರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಉಡುಪಿಯಲ್ಲಿ ನಡೆದ ಜಿಲ್ಲಾ ರೈತ ಮೋರ್ಚಾ ಕಾರ್ಯಕಾರಿ ಸಮಿತಿ ಸಭೆಗೆ ರಾಜ್ಯ ಉಪಾಧ್ಯಕ್ಷ ಎ.ವಿ ತೀರ್ಥರಾಮ ಭೇಟಿ

ಉಡುಪಿಯಲ್ಲಿ ಸೆ.15 ರಂದು ನಡೆದ ಜಿಲ್ಲಾ ರೈತ ಮೋರ್ಚಾ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಈ ಸಭೆಗೆ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷರು ಹಾಗೂ ಮಂಗಳೂರು ವಿಭಾಗದ ಪ್ರಭಾರಿಗಳು ಆಗಿರುವ ಎ.ವಿ ತೀರ್ಥರಾಮ ಭೇಟಿ ಮಾಡಿದರು. ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರಕಾರಗಳು ಹಮ್ಮಿಕೊಂಡ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ರೈತ...
Ad Widget

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(16.09.2020 ಗುರುವಾರ ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 400ಡಬಲ್ ಚೋಲ್ 300 - 400 ಫಠೋರ 220 - 290ಉಳ್ಳಿಗಡ್ಡೆ 110 - 220ಕರಿಗೋಟು 110 - 210 ಕಾಳುಮೆಣಸುಕಾಳುಮೆಣಸು 250 - 335 ಕೊಕ್ಕೋಒಣ ಕೊಕ್ಕೋ :- 150 -...

ಮೋದಿ ಎಂದರೆ ಸಾಧನೆಯ ಹಾದಿ: ಜನ್ಮದಿನದಂದು ನರೇಂದ್ರ ಬದುಕಿನ ಸಿಂಹಾವಲೋಕನ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು 70ನೇ ಜನ್ಮ ದಿನ ಆಚರಿಸಿಕೊಳ್ಳುತ್ತಿದ್ದಾರೆ. ಪ್ರಧಾನಿ ದೇಶವಲ್ಲದೆ ಆಚೆಗೂ ಅಭಿಮಾನಿಗಳನ್ನು ಸೃಷ್ಟಿಸಿಕೊಂಡವರು. ಇವರ ಆಡಳಿತ ವೈಖರಿ, ಮಾತಿನ ಶೈಲಿ ಯುವಪೀಳಿಗೆಯನ್ನು ಹುಚ್ಚೆಬ್ಬಿಸುತ್ತಿದೆ. ದಿನಕ್ಕೆ 18 ಗಂಟೆ ಕೆಲಸ ಮಾಡುವ ಛಾತಿಯನ್ನು ಅವರು ಕರಗತ ಮಾಡಿಕೊಂಡಿದ್ದಾರೆ. ಇಂದು (ಸೆ.17) ಅವರ 70ನೇ ಜನ್ಮದಿನವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದಾಮೋದರ...

70ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ಗಣ್ಯರಿಂದ ಶುಭಾಶಯ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು 70ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮೋದಿಗೆ ಕೇಂದ್ರ ಸಚಿವರು, ಪಕ್ಷದ ನಾಯಕರು ಹಾಗೂ ವಿರೋಧ ಪಕ್ಷದ ಮುಖಂಡರು ಸೇರಿದಂತೆ ಹಲವು ಗಣ್ಯರು ಹಾಗೂ ದೇಶದ ಮೂಲೆ-ಮೂಲೆಗಳಲ್ಲಿರುವ ಅಭಿಮಾನಿಗಳು ವಿಶ್‌ ಮಾಡಿದ್ದಾರೆ. ಕೊರೊನಾ ಸೋಂಕಿನ ಅಬ್ಬರ ಇರುವುದರಿಂದ ಈ ಬಾರಿ ಮೋದಿ ಜನ್ಮದಿನದ ಅದ್ಧೂರಿ ಆಚರಣೆ ಇಲ್ಲ. ಬದಲಿಗೆ ಈ ದಿನವನ್ನು...

ಸೆ. 24, 25 – ಮರ್ಕಂಜ ಸೊಸೈಟಿ ವತಿಯಿಂದ ಉಚಿತ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಾವಣೆ ಶಿಬಿರ

ಆಯುಷ್ಮಾನ್ ಭಾರತ್ ಕಾರ್ಡ್ ನೋದಾವಣಾ ಶಿಬಿರಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಉಚಿತ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಾವಣೆ ಮತ್ತು ಕಾರ್ಡ್ ವಿತರಣಾ ಶಿಬಿರ ಸೆ.24 ಮತ್ತು ಸೆ.25 ರಂದು ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಲಿದೆ. ಗ್ರಾಮಸ್ಥರು ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಘದ ಅಧ್ಯಕ್ಷ ಮಹಾಬಲ ಕಟ್ಟಕೋಡಿ ತಿಳಿಸಿದ್ದಾರೆ.

ಕನಕಮಜಲು : ಸೆ.22 ಮತ್ತು 23 ರಂದು ಆಯುಷ್ಮಾನ್ ಭಾರತ್ ಕಾರ್ಡ್ ಅಭಿಯಾನ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸೆ.22 ಮತ್ತು 23 ರಂದು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಅಭಿಯಾನ ಸಹಕಾರಿ ಸಂಘದ ರೈತ ಭವನದಲ್ಲಿ ನಡೆಯಲಿದೆ. ಗ್ರಾಮಸ್ಥರು ಸದುಪಯೋಗವನ್ನು ಪಡೆದುಕೊಳ್ಳ ಬೇಕೆಂದು ಅಧ್ಯಕ್ಷರು ತಿಳಿಸಿದ್ದಾರೆ.

ಸಂಪಾಜೆ : ಅರಮನೆತೋಟ ಮಹಾವಿಷ್ಣುಮೂರ್ತಿ ದೈವಸ್ಥಾನದ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭೆ ಕು. ಗೀತಾ ಹೆಚ್.ಸಿ ಗೆ ಸನ್ಮಾನ

ಕೊಡಗು ಸಂಪಾಜೆಯ ಅರಮನೆತೋಟಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಸೆ.16 ರಂದು ಬೆಳಿಗ್ಗೆ ಕನ್ಯಾ ಸಂಕ್ರಾಂತಿ ಪೂಜೆ ನಡೆಯಿತು, ಈ ಸಂದರ್ಭದಲ್ಲಿ ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿರುವ ಕು. ಗೀತಾ ಹೆಚ್.ಸಿ ಇವಳನ್ನು ಸನ್ಮಾನಿಸಲಾಯಿತು. ದೈವಸ್ಥಾನದ ಆಡಳಿತ ಮಂಡಳಿ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈಕೆ ಈ ಬಾರಿಯ ದ್ವಿತೀಯ ಪಿಯುಸಿ...

ಕಳಂಜ : ರೋಜ್ ಗಾರ್ ದಿನಾಚರಣೆ ಮತ್ತು ಅಣಬೆ ಕೃಷಿ ತರಬೇತಿ

ಪಂಚಮಿ ಸಂಜೀವಿನಿ ಒಕ್ಕೂಟ ಕಳಂಜ ಮತ್ತು ದ.ಕ.ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ರೋಜ್ ಗಾರ್ ದಿನಾಚರಣೆ ಮತ್ತು ಅಣಬೆ ಕೃಷಿ ತರಬೇತಿಯು ಸೆ.16 ರಂದು ಕಳಂಜ ಗ್ರಾ.ಪಂ.ನ ಗೌರಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಮಿ ಸಂಜೀವಿನಿ ಕಳಂಜ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕುಲ್ಸು ವಹಿಸಿದ್ದರು. ಅಣಬೆ ಕೃಷಿಯ ಬಗ್ಗೆ...

ಉಬರಡ್ಕ : ಉಚಿತ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ.ಉಬರಡ್ಕ ಮಿತ್ತೂರು ಇದರ ಆಶ್ರಯದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಆರೋಗ್ಯ ಯೋಜನೆಯಾದ ಆಯುಷ್ಮಾನ್ ಕಾರ್ಡ್ ಅಭಿಯಾನವು ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ಸೆ.16 ರಂದು ನಡೆದ ಕಾರ್ಯಕ್ರಮವನ್ನು ಉಬರಡ್ಕ ಮಿತ್ತೂರು ಪ್ರಾ.ಕೃ. ಪತ್ತಿನ ಸ.ಸಂಘದ ನಿರ್ದೇಶಕರಾದ ರತ್ನಾಕರ ಗೌಡ ಬಳ್ಳಡ್ಕ ದೀಪ ಬೆಳಗಿಸಿ...
Loading posts...

All posts loaded

No more posts

error: Content is protected !!