- Monday
- April 27th, 2026
2019-20 ನೇ ಸಾಲಿನ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ಮಂಗಳೂರು ಇಲ್ಲಿ ನಡೆದ ಬಿ.ಎಡ್ ಪರೀಕ್ಷೆಯಲ್ಲಿ ಕು. ವಿದ್ಯಾಶ್ರೀ ಡಿ.ವಿ ದೇವರಗುಂಡ ಇವರು ಅತ್ಯುತ್ತಮ ಅಂಕ ಪಡೆದು ಡಿಸ್ಟಿಂಕ್ಷನ್ ಪಡೆದು ತೇರ್ಗಡೆಗೊಂಡಿರುತ್ತಾರೆ . ಇವರು ದೇವರಗುಂಡ ದೊಡ್ಡಮನೆ ವೆಂಕಪ್ಪ ಗೌಡ ಮತ್ತು ಶೇಷವೇಣಿ ಡಿ.ವಿ ಇವರ ಪುತ್ರಿ .
ಸುಳ್ಯ ಹಳೆಗೇಟು ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಹಲವಾರು ದಿನಗಳಿಂದ ಮರ ಮುರಿದು ರಸ್ತೆಗೆ ಉರುಳಿ ವಾಹನ ಸವಾರರಿಗೆ ಅಪಾಯದ ಮುನ್ಸೂಚನೆಯನ್ನು ನೀಡುತ್ತಿದೆ. ಈ ರಸ್ತೆಯು ತಿರುವಿನಿಂದ ಕೂಡಿದ್ದು ಇದಕ್ಕೂ ಮುನ್ನ ಹಲವಾರು ವಾಹನ ಅಪಘಾತಗಳು ನಡೆದು ಹಲವಾರು ಜೀವಗಳು ಬಲಿಯಾಗಿವೆ. ಇದೀಗ ಮಳೆಗಾಲದಲ್ಲಿ ವಾಹನ ಚಲಾಯಿಸುವಾಗ ತಿರುವಿನಲ್ಲಿ ಬಿದ್ದಿರುವ ಮರದ ತುಂಡು ಕೂಡಲೇ ಕಣ್ಣಿಗೆ ಕಾಣದೆ...
ಗುತ್ತಿಗಾರು ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜೂ.30 ರಂದು ಲಯನ್ಸ್ ಸೇವಾ ಭವನ ಗುತ್ತಿಗಾರಿನಲ್ಲಿ ನಡೆಯಿತು. ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಡಿಸ್ಟ್ರಿಕ್ಟ್ 317 ಡಿ ಯ 2 ನೇ ಉಪ ರಾಜ್ಯಪಾಲ ಸಂಜೀತ್ ಶೆಟ್ಟಿ ಪದಗ್ರಹಣ ನೆರವೇರಿಸಿದರು. ಅಧ್ಯಕ್ಷತೆಯನ್ನು ಪೂರ್ವ ಉಪಾಧ್ಯಕ್ಷ ಭರತ್ ಮುಂಡೋಡಿ ವಹಿಸಿದ್ದರು. ವೇದಿಕೆಯಲ್ಲಿ ಪೂರ್ವಾಧ್ಯಕ್ಷ ಬಾಲಕೃಷ್ಣ ಕೆ,...
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಕಾರ್ಯಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಜು.2 ರಂದು ಗುತ್ತಿಗಾರು ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.ಗುತ್ತಿಗಾರು ಗ್ರಾಮ ಸಮಿತಿ ಅಧ್ಯಕ್ಷ ಸನತ್ ಮುಳುಗಾಡು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಕಾಂಗ್ರೆಸ್ ಕಾರ್ಯಕರ್ತ ದೇವಪ್ಪ ಗೌಡ ಪ್ರತಿಜ್ಞಾ ಕಾರ್ಯಕ್ರಮ ಉದ್ಘಾಟಿಸಿದರು. ಗುತ್ತಿಗಾರು ಕಾಂಗ್ರೆಸ್ ಉಸ್ತುವಾರಿ ಹೊಂದಿರುವ ಪಿ.ಸಿ.ಜಯರಾಮ, ಪಂಚಾಯತ್ ಹಾಲಿ ಸದಸ್ಯೆ ರತ್ನಾವತಿಯವರು ವೇದಿಕೆಯಲ್ಲಿ...
ಮೆಸ್ಕಾಂ ಹಾಗೂ ರಾಜ್ಯದ ಇನ್ನಿತರ ವಿದ್ಯುತ್ ಕಂಪೆನಿಗಳಲ್ಲಿ ದುಡಿಯುತ್ತಿರುವ ಸಾವಿರಾರು ಗುತ್ತಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 3 ರಂದು ಮೆಸ್ಕಾಂ ನ ಎಲ್ಲಾ ಉಪವಿಭಾಗದ ಕಛೇರಿ ಎದುರು ಅಧಿಕಾರಿಗಳಿಗೆ ಮನವಿ ಸಲ್ಲಿಕೆ ನಡೆಯಲಿದೆ.ಸುಳ್ಯದಲ್ಲೂ ನೂರಾರು ನೌಕರರು ಲಾಕ್ ಡೌನ್ ವೇಳೆಯಲ್ಲಿ ದುಡಿದಿದ್ದು , ಗುತ್ತಿಗೆ ಕಾರ್ಮಿಕರ ಬಗ್ಗೆ ಮೆಸ್ಕಾಂ ನಿರ್ಲಕ್ಷ್ಯ ಧೋರಣೆ...
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ನೂತನ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ಇವರ ಪ್ರತಿಜ್ಞಾವಿಧಿ ಕಾರ್ಯಕ್ರಮ ಸಂಪಾಜೆ ವಲಯದ ಕೊಯನಾಡು ಫುಡ್ ಪಾರ್ಕ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪಿ ಎಲ್ ಸುರೇಶ್, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ...
ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಮಾಸಾಶನ ವಿತರಣೆಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಸುಳ್ಯ ಇದರ ವತಿಯಿಂದ ಬೆಳ್ಳಾರೆ ವಲಯದ ಕೊಡಿಯಾಲ ಗ್ರಾಮದ ಕೊರಪೊಳು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಿರ್ಗತಿಕರ ಮಾಸಾಶನ ಮಂಜೂರು ಗೊಂಡಿರುತ್ತದೆ .ಮಂಜೂರಾದ ಮೊತ್ತವನ್ನು ತಾಲೂಕಿನ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ವಿತರಿಸಿದರು .ಈ ಸಂದರ್ಭ ಜಿಲ್ಲಾ ಯೋಜನಾಧಿಕಾರಿ ಮಹಾಂತೇಶ್, ವಲಯ ಮುರಳಿಧರ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ರಾದ ಡಿ.ಕೆ ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ,ಸಲೀಂ ಅಹಮದ್ ಮತ್ತು ಈಶ್ವರ ಖಂಡ್ರೆ ರವರ ಪದಗ್ರಹಣ ಶಮಾರಂಭದ ಪ್ರತಿಜ್ಞಾ ಕಾರ್ಯಕ್ರಮ ಅರಂತೋಡು ವಲಯ ಕಾಂಗ್ರೆಸ್ ವತಿಯಿಂದ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು .ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ವಲಯ ಕಾಂಗ್ರೆಸ್ ಅಧ್ಯಕ್ಷ ರಾದ ಜನಾರ್ದನ ಅಡ್ಕಬಳೆ ವಹಿಸಿದರು.ಹಿರಿಯ...
ಬೆಂಗಳೂರು : ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ತಮ್ಮ ಸೇವೆಯನ್ನು ಖಾಯಂಗೊಳಿಸುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ 507 ಮಂದಿ ಗುತ್ತಿಗೆ ಆಧಾರಿತ ವೈದ್ಯರು ಜುಲೈ 8 ರಂದು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಅಲ್ಲದೇ ತಮ್ಮನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಂತಹ ಸಂದರ್ಭದಲ್ಲಿ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ಡಿ. ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮವು ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ನಡೆಯಿತು. ಪ್ರತಿಜ್ಞಾ ದಿನದ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹಮದ್ ಕುಂಞ, ಸುಳ್ಯ ತಾಲೂಕು ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಹಮೀದ್ ಜಿ....
Loading posts...
All posts loaded
No more posts
