ತಮಿಳುನಾಡು , ತೆಲಂಗಾಣ ಸರ್ಕಾರದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರದಿಂದ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಆದೇಶ

ಕೊರೋನಾ ಮಹಾಮಾರಿ ವೈರಸ್ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ನಿಂದ ಮುಂದೂಡಿಕೆ ಯಾಗಿದ್ದ ಎಸೆಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಆಂಧ್ರಪ್ರದೇಶ ಸರಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.ಕೊರೋನಾ ಭಯದಿಂದ ಕಳೆದ ಮಾರ್ಚ್ ನಲ್ಲಿ ನಡೆಯಬೇಕಿದ್ದ ಹತ್ತನೇ ತರಗತಿ ಪರೀಕ್ಷೆಯನ್ನು ಎಲ್ಲ ರಾಜ್ಯಗಳು ತಾತ್ಕಾಲಿಕವಾಗಿ ಮುಂದೂಡಿದವು. ತಮಿಳುನಾಡು ತೆಲಂಗಾಣ ರಾಜ್ಯ ಸರ್ಕಾರವು ಪರೀಕ್ಷೆಯನ್ನು ರದ್ದುಪಡಿಸಿ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ...

ಸುಳ್ಯದಲ್ಲಿ ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಇದರ 12 ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯ ವಿಧಾನ ಸಭೆ ಸಮಿತಿ ವತಿಯಿಂದ ಸುಳ್ಯ ಗಾಂಧಿನಗರ ಪಕ್ಷದ ಕಛೇರಿಯ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಎಸ್.ಡಿ.ಪಿ.ಐ ಸುಳ್ಯ ವಿಧಾನ ಸಭೆ ಸಮಿತಿ ಅಧ್ಯಕ್ಷ ಅಬ್ದುಲ್ ಕಲಾಂ ಸುಳ್ಯ ಧ್ವಜಾರೋಹಣ ನೆರವೇರಿಸಿದರು. ನಂತರ ಇತ್ತೀಚೆಗೆ ಭಾರತದ ಗಡಿಯಲ್ಲಿ ನಡೆಸಿದ...
Ad Widget

ಇಂದು ಅಂತರಾಷ್ಟೀಯ ಯೋಗ ದಿನ

ಇಂದು ಮೂರನೇ ಅಂತಾರಾಷ್ಟ್ರೀಯ ಯೋಗ ದಿನವಾಗಿದೆ . ಯೋಗವು ಭಾರತೀಯ ಮೂಲದ , 6000 ಕ್ಕಿಂತಲೂ ಹಳೆಯದಾದ , ಭೌತಿಕ , ಮಾನಸಿಕ ಮತ್ತು ಆಧ್ಯಾತ್ಮಕ ಅಭ್ಯಾಸವಾಗಿದೆ ಬೆಳೆದು ಬಂದಿದೆ.ಜೂ .21 ರಂದು ವಿಶ್ವ ಯೋಗ ದಿನಾಚರಣೆಯನ್ನು ಭಾರತ ಸೇರಿದಂತೆ 177 ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಆಚರಿಸಲಾಗುತ್ತದೆ . ಇದು ಭಾರತದ ಕೊಡುಗೆ ಎಂದು ಹೆಮ್ಮೆಯಿಂದ...

ಐವರ್ನಾಡು ಸಾಮಾನ್ಯ ಸಭೆ- ಸದಸ್ಯರಿಗೆ ಕೃತಜ್ಞತೆ

ಐವರ್ನಾಡು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚೈತ್ರಾ ಕಟ್ಟತ್ತಾರುರವರ ಅಧ್ಯಕ್ಷತೆಯಲ್ಲಿ ಜೂ.20 ರಂದು ನಡೆಯಿತು. ಆಡಳಿತ ಮಂಡಳಿಯ ಅವಧಿಯ ಕೊನೆಯ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಲಾಯಿತು.ಮತ್ತು 5 ವರ್ಷಗಳ ಅವಧಿಯಲ್ಲಿ ಪಂಚಾಯತ್ ನ ವಿವಿಧ ಕಾಮಗಾರಿಗಳು ಮತ್ತು ಸಹಕಾರ ನೀಡಿದವರಿಗೆ ಕೃತಜ್ಞತೆ ಸಲ್ಲಿಸಲಾಯಿತು.ಗ್ರಾಮ ಪಂಚಾಯತ್...

ಗುತ್ತಿಗಾರು ಪ್ರೌಢಶಾಲಾ ನೂತನ ಕೊಠಡಿ ಉದ್ಘಾಟನೆ

ಗುತ್ತಿಗಾರು ಪ್ರೌಢಶಾಲೆಗೆ ಶಿಕ್ಷಣ ಇಲಾಖಾ ಅನುದಾನ ಮೂಲಕ ರೂ.15.75 ಲಕ್ಷ ರೂಪಾಯಿ ಖರ್ಚಿನಲ್ಲಿ ನಿರ್ಮಾಣಗೊಂಡ ನೂತನ ಕೊಠಡಿಯ ಉದ್ಘಾಟನೆ ಇಂದು ನಡೆಯಿತು. ಶಾಸಕ ಎಸ್ ಅಂಗಾರ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಶಾಲೆಗೆ ಹೊಸದಾಗಿ ಮಂಜೂರದ 2 ಹೊಸ ಕೊಠಡಿಯ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆಯ ಮೂಲಕ ಶಾಸಕರು ಚಾಲನೆ ನೀಡಿದರು. ಈ...

ಸಂಪಾಜೆ ಆನೆ ದಾಳಿಗೆ ಕೃಷಿ ಹಾನಿ

ಸಂಪಾಜೆ ಗ್ರಾಮದ ಕುಯಿಂತೋಡು ಕೆಪಿ ಜಗದೀಶರವರ ತೋಟಕ್ಕೆ ಜೂ. 19 ರಂದು ರಾತ್ರಿ ಕಾಡಾನೆ ದಾಳಿ ನಡೆಸಿದ್ದು ತೆಂಗಿನಮರ ಹಾಗೂ ಬಾಳೆ ಕೃಷಿಗೆ ಹಾನಿ ಮಾಡಿದ್ದು ಅಪಾರ ಹಾನಿ ಮಾಡಿದೆ.

ಗುತ್ತಿಗಾರು ಬಸ್ ತಂಗುದಾಣ ಉದ್ಘಾಟನೆ

ಮುತ್ತಪ್ಪನಗರದಲ್ಲಿ ನಿರ್ಮಾಣಗೊಂಡ ನೂತನ ಬಸ್ಸು ತಂಗುದಾಣವನ್ನು ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕ ಎಸ್.ಅಂಗಾರ, ತಾ.ಪಂ ಸದಸ್ಯೆ ಯಶೋಧ ಬಾಳೆಗುಡ್ಡೆ, ಗುತ್ತಿಗಾರು ಗ್ರಾ.ಪಂ ಅಧ್ಯಕ್ಷ ಅಚ್ಯುತ ಗುತ್ತಿಗಾರು, ಉಪಾಧ್ಯಕ್ಷೆ ಸವಿತಾ ಕುಳ್ಳಂಪಾಡಿ, ಸದಸ್ಯರಾದ ವೆಂಕಟ್ ವಳಲಂಬೆ, ಶ್ರೀದೇವಿ ಕೊಂಬೊಟ್ಟು, ಭಾಗೀರಥಿ ಕಾಜಿಮಡ್ಕ, ಬಿ.ಕೆ ಶ್ರೀಧರ, ಮತ್ತಿತ್ತರ ಗಣ್ಯರು ಉಪಸ್ಥಿತರಿದ್ದರು.

ಕುಕ್ಕೆ ಆನ್ ಲೈನ್ ಸೇವೆಗೆ ಪ್ರತ್ಯೇಕ ವೆಬ್ ಸೈಟ್- ಸಚಿವ ಕೋಟ

ಗುತ್ತಿಗಾರು.ಜೂ.೨೦: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಮೂಲಕ ಆನ್‌ಲೈನ್ ಸೇವೆ ಬುಕ್ ಮಾಡುತ್ತಿದ್ದಾರೆಂದು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್‌ಲೈನ್ ಸೇವೆ ನಡೆಸಲು ಗುತ್ತಿಗೆ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್‌ಲೈನ್ ಸೇವೆಗೆ ಪ್ರತ್ಯೇಕ ವೆಬ್‌ಸೈಟ್ ಆರಂಭಿಸಲು ನಿರ್ಧರಿಸಲಾಗಿದೆ ಎಂದು...

ಲಯನ್ಸ್ ಕ್ಲಬ್ ಗುತ್ತಿಗಾರು ಅಧ್ಯಕ್ಷರಾಗಿ ವಿನೋದ್ ಕುಮಾರ್ ಮುಂಡೋಡಿ ,ಕಾರ್ಯದರ್ಶಿ ಪ್ರವೀಣ್ ಮುಂಡೋಡಿ

ಗುತ್ತಿಗಾರು ಲಯನ್ಸ್ ಕ್ಲಬ್ ನ 2020 – 21 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ವಿನೋದ್ ಕುಮಾರ್ ಮುಂಡೋಡಿ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಯಾಗಿ ಪ್ರವೀಣ್ ಮುಂಡೋಡಿ ಖಜಾಂಚಿಯಾಗಿ ಜಯರಾಂ ಕಡ್ಲಾರು, ಐಪಿಪಿಯಾಗಿ ಮೋಹನ್ ಕೆ, ಪ್ರಥಮ ಉಪಾಧ್ಯಕ್ಷರಾಗಿ ಮಣಿಕುಮಾರ್ ಮುಂಡೋಡಿ, ದ್ವಿತೀಯ ಉಪಾಧ್ಯಕ್ಷರಾಗಿ ಲಿಜೊ ಜೋಸ್, ಮೆಂಬರ್ ಶಿಪ್ ಚೇರ್ಮನ್ ಆಗಿ ಕೆ. ಬಾಲಕೃಷ್ಣ, ಕ್ಲಬ್...

ಕನಕಮಜಲು: ಯುವಕ ಮಂಡಲದ ವತಿಯಿಂದ ಉಚಿತ ಹಲಸಿನ ಹಣ್ಣು ವಿತರಣೆ

ಕನಕಮಜಲಿನಲ್ಲಿ ಯುವಜನ ವಿಕಾಸ ಕೇಂದ್ರ ಕನಕಮಜಲು ಇದರ ವತಿಯಿಂದ ರಾಜ್ಯ ಹೆದ್ದಾರಿ ಬದಿಯಲ್ಲಿ ಉಚಿತ ಹಲಸಿನಹಣ್ಣು ವಿತರಣಾ ಕಾರ್ಯ ಇಂದು ನಡೆಯುತ್ತಿದೆ. ಗ್ರಾಮಾಂತರ ಭಾಗಗಳಲ್ಲಿ ಯಥೇಚ್ಛವಾಗಿ ಬೆಳೆಯುತ್ತಿರುವ ಹಲಸಿನ ಹಣ್ಣು ಮಳೆಗಾಲ ಆರಂಭವಾದಂತೆ ಒಂದೇ ಬಾರಿಗೆ ಹಣ್ಣಾಗಿ ಕೊಳೆತು ಹಾಳಾಗಿ ಹೋಗುತ್ತಿದೆ. ಇದನ್ನು ಮನಗಂಡ ಕನಕಮಜಲು ಯುವಕ ಮಂಡಲದವರು ಹಲಸಿನ ಹಣ್ಣುಗಳನ್ನು ಸಂಗ್ರಹಿಸಿ ಕನಕಮಜಲಿನ ಆನೆಗುಂಡಿ...
Loading posts...

All posts loaded

No more posts

error: Content is protected !!