ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವೆಂಕಪ್ಪಗೌಡ

ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹಾಗು ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್ ರವರನ್ನು ಕೊಡಗು ಜಿಲ್ಲಾ ಉಸ್ತುವಾರಿ ಮಂಜುಳಾ ರಾಜ್, ಉಸ್ತುವಾರಿ ಕಾರ್ಯದರ್ಶಿ ಯಂ.ವೆಂಕಪ್ಪ ಗೌಡ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಕಾರ್ಡಿನೇಟರುಗಳಾದ ಕಾವು ಹೇಮನಾಥ ಶೆಟ್ಟಿ, ಎಡ್ವಿನ್ ರಿಚರ್ಡ್, ಕೆ.ಪಿ ರಾಜು, ಪ್ರದೀಪ ರೈ ಪಾಂಬಾರು, ಜಿ ಬಿ ಜಾನ್ ಬೆಂಗಳೂರು...

ಜಾನುವಾರು ಸಾಗಾಟಗಾರರ ಮೇಲೆ ದಾಳಿ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ ಬೆನ್ನಲ್ಲೇ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಮತ್ತು ದಿಢೀರ್ ವರ್ಗಾವಣೆ – ಎಸ್.ಡಿ.ಪಿ.ಐ ಖಂಡನೆ

ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ ದಾಳಿ ನಡೆಸುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ದ.ಕ ಜಿಲ್ಲಾಧಿಕಾರಿಯವರು ಆದೇಶ ನೀಡಿದ ಕಾರಣಕ್ಕಾಗಿ ಸಂಘಪರಿವಾರದ ಕಾರ್ಯಕರ್ತರು ಸಾಮಾಜಿಕ ಜಾಲತಾಣದ ಮೂಲಕ ಜಿಲ್ಲಾಧಿಕಾರಿಯವರನ್ನೇ ಕೊಲೆ ಮಾಡುವಂತಹ ಘೋರ ಸಂದೇಶ ರವಾನಿಸಿರುವುದು ಮತ್ತು ಜಿಲ್ಲಾಧಿಕಾರಿಯವರು ಹೇಳಿಕೆ ನೀಡಿದ ಬೆನ್ನಲ್ಲೇ ಅವರನ್ನು ದಿಢೀರ್ ಆಗಿ ಸರ್ಕಾರ ವರ್ಗಾವಣೆ ಮಾಡಿರುವುದು ಆಘಾತಕಾರಿ ನಡೆ...
Ad Widget

ಅಮರ್, ಅಕ್ಬರ್, ಅಂಥೋಣಿ ಕೇವಲ ಕಥೆ ಮಾತ್ರವಲ್ಲ ಜೀವನದಲ್ಲೂ ರೂಪಿಸಿದ ಸೋಣಂಗೇರಿ ಹೊಸಗದ್ದೆ ನಿವಾಸಿಗಳು

ಧರ್ಮ ಧರ್ಮವೆಂದು ಪರಸ್ಪರ ವೈಮನಸ್ಸನ್ನು ಹೊಂದಿಕೊಂಡು ಸಮಾಜದ ಹಿತವನ್ನು ಆಂತಕದತ್ತ ಕೊಂಡೊಯ್ಯಲು ಮುನ್ನುಗ್ಗುತ್ತಿರುವ ಕೆಲವು ಸಮಾಜದ ವೈರಿಗಳು ಇರುವ ಈ ಸಂದರ್ಭದಲ್ಲಿ ಜಾತಿಧರ್ಮಕ್ಕೆ ಯಾವುದೇ ಅವಕಾಶವಿಲ್ಲ. ಕೇವಲ ಮಾನವೀಯತೆಗೆ ಮಾತ್ರ ನಮ್ಮಲ್ಲಿ ಮೌಲ್ಯವೆಂದು ತೋರಿಸಿಕೊಟ್ಟ ಸೋಣಂಗೇರಿ ಹೊಸಗದ್ದೆ ಮೂಲದ ಬಾಲಶೇಖರ ಹೊಸಗದ್ದೆ, ಅಬ್ದುಲ್ ರಹಿಮಾನ್ ಹಾಗೂ ಜೋಸೆಫ್  ಎಂಬ ನಿಜವಾದ ಅಮರ್, ಅಕ್ಬರ್, ಅಂಥೋಣಿಯವರ ಸೌಹಾರ್ಧತೆಯ...

ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ವರ್ಗಾವಣೆ – ನೂತನ ಜಿಲ್ಲಾಧಿಕಾರಿಯಾಗಿ ಡಾ. ರಾಜೇಂದ್ರ ಕೆ.ವಿ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ‌ ಸಿಂಧೂ ಬಿ. ರೂಪೇಶ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ದ. ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ. ಡಾ.ರಾಜೇಂದ್ರ ಕೆ.ವಿ ಅವರು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನಿಯೋಜಿಸಿದೆ. ಡಾ.ರಾಜೇಂದ್ರ ರವರು ಪುತ್ತೂರು ಎ.ಸಿ.ಯಾಗಿ...

ಜು. 30 ರಂದು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ,ಸನ್ಮಾನ, ಉಪನ್ಯಾಸ ಕಾರ್ಯಕ್ರಮ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಉಪನ್ಯಾಸ ಜು.30 ರಂದು ಪೂ 10 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ನಡೆಯಲಿದೆ.ತಾ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್ . ಭವಾನಿಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವರಾಮ ಕಾರಂತ ಬಾಲವನ...

ಬಕ್ರೀದ್ ಹಬ್ಬ ಆಚರಣೆ ಕುರಿತು ಪೊಲೀಸ್ ಅಧಿಕಾರಿಗಳ ಮತ್ತು ಮುಖ್ಯ ಮುಖಂಡರ ಸಭೆ

ಕೊರೋನ ವೈರಸ್ ಮಹಾಮಾರಿಯ ಹಿನ್ನೆಲೆಯಲ್ಲಿ ಹಲವಾರು ತಿಂಗಳುಗಳಿಂದ ಮಸೀದಿ ಸಾಮೂಹಿಕ ಪ್ರಾರ್ಥನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಲಾಕ್ಡೌನ್ ಸಡಿಲಿಕೆಯ ನಂತರ ಕೆಲವೇ ಕೆಲವು ಮಸೀದಿಗಳಲ್ಲಿ ಸರಕಾರದ ಆದೇಶವನ್ನು ಮತ್ತು ಮಾರ್ಗಸೂಚಿಗಳಿಗೆ ಅನುಗುಣವಾಗಿ ಪ್ರಾರ್ಥನೆಯನ್ನು ನಿರ್ವಹಿಸಲು ಪ್ರಾರಂಭಿಸಿದರು. ಇದರ ನಡುವೆ ಮುಸಲ್ಮಾನ ಬಾಂಧವರ‌ ಬಕ್ರಿದ್ ಹಬ್ಬ‌ ಆ.1ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಹಿನ್ನೆಲೆಯಲ್ಲಿ...

ಜುಲೈ 30 ರಂದು ಐವರ್ನಾಡಿನಲ್ಲಿ ಅಣಬೆ ಕೃಷಿ ತರಬೇತಿ ಕಾರ್ಯಗಾರ

ಸಂಜೀವಿನಿ ಸ್ವ- ಸಹಾಯ ಸಂಘದ ಸದಸ್ಯರಿಗೆ ಉಚಿತ ಅಣಬೆ ಕೃಷಿ ತರಬೇತಿ ಕಾರ್ಯಗಾರ ಜು. 30 ರಂದು ಐವರ್ನಾಡು ಗ್ರಾಮ ಪಂಚಾಯತ್ ಮಾದರಿ ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಲಿದೆ.

ಇಂದಿನ ಪರಿಸ್ಥಿತಿಯಲ್ಲಿ ಮಾಧ್ಯಮವನ್ನು ಅನುಮಾನದ ದೃಷ್ಟಿಯಲ್ಲಿ ಜನಸಾಮಾನ್ಯನು ನೋಡುವಂತಾಗಿದೆ: ತಾರನಾಥ ಕಾಪಿಕಾಡ್

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಸುಳ್ಯದ ಪರಿವಾರಕಾನದ ಉಡುಪಿ ಗ್ರ್ಯಾಂಡ್ ಪರಿವಾರ್ ಸಭಾಂಗಣದಲ್ಲಿ ಜು.28ರಂದು ಜರುಗಿತು. ಸುಳ್ಯ ತಾಲೂಕು ಯೂನಿಯನ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ತಹಶಿಲ್ದಾರ್ ಅನಂತಶಂಕರ್ ಅವರು ಉದ್ಘಾಟಿಸಿ, ಶುಭಹಾರೈಸಿದರು.ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ತಾರನಾಥ ಗಟ್ಟಿ ಕಾಪಿಕಾಡ್...

ಅಮರಮುಡ್ನೂರು ಪಂಚಾಯತ್ ಗೆ ಎಸಿಬಿ ದಾಳಿ

ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಆಗಿದೆ ಎಂದು ಗ್ರಾಮಸ್ಥರೊಬ್ಬರು ದೂರು ನೀಡಿರುವ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಇಂದು ದಾಳಿ ನಡೆಸಿದ್ದು ಸಂಬಂಧಿಸಿದ ದಾಖಲೆಗಳು ಪಡೆದುಕೊಂಡು ತೆರಳಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಪಂಚಾಯತ್ ಅಧಿಕಾರಿಗಳು ಸಂಪರ್ಕಕ್ಕೆ ಲಭ್ಯರಾಗಿಲ್ಲ.

ದ.ಕ.ಮಿತಿಮೀರಿದ ಅಕ್ರಮ ಜಾನುವಾರು ಸಾಗಾಟ ಮತ್ತು ಹಲ್ಲೆ ಪ್ರಕರಣ – ಸೂಕ್ತ ಕಾನೂನು ಕ್ರಮ ಕೈಗೊಂಡು ಕಡಿವಾಣ ಹಾಕಲು ಡಿಸಿ ಆದೇಶ

ಅಕ್ರಮ ಜಾನುವಾರು ಸಾಗಾಟ, ಹತ್ಯೆ ಮತ್ತು ಸಾಗಿಸುವ ವಾಹನ,ಜನರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಖಡಕ್ ಸೂಚನೆ ರವಾನಿಸಿದ್ದಾರೆ. ಜು. 27 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು, ಮುಖ್ಯ ಪಶುವೈದ್ಯಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಅಕ್ರಮ ಜಾನುವಾರು...
Loading posts...

All posts loaded

No more posts

error: Content is protected !!