- Thursday
- September 17th, 2026
ಫ್ರೆಂಡ್ಸ್ ಸಂಕೇಶ ಇದರ ಆಶ್ರಯದಲ್ಲಿ 14ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆಪ್ಟೆಂಬರ್ 6ರಂದು ಭಾನುವಾರ ಸಂಕೇಶ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಾಯಿಲಪ್ಪ ಸಂಕೇಶ ಉದ್ಘಾಟಿಸಿದರು. ಗೌರವ ಉಪಸ್ಥಿತರಾಗಿ ಪ್ರೆಂಡ್ಸ್ ಸಂಕೇಶ ಇದರ ಗೌರವಾಧ್ಯಕ್ಷರಾದ ಪುನೀತ್ ಸಂಕೇಶ, ಅಧ್ಯಕ್ಷರಾದ ಜಗ್ಗೇಶ್ ಸಂಕೇಶ ಮತ್ತಿತರರು ಉಪಸ್ಥಿತರಿದ್ದರು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಂಭ್ರಮದೊಂದಿಗೆ...
ಕನ್ನಡ ಸಾಹಿತ್ಯ ಪರಿಷತ್ತು ಸುಳ್ಳ ತಾಲೂಕು ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕ ಸಾಹಿತಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಸೆಪ್ಟೆಂಬರ್ 5ರಂದು ನಡೆಯಿತು. ಹಿರಿಯ ಸಾಹಿತಿಗಳು ನಿವೃತ್ತ ಶಿಕ್ಷಕರಾದ ಎಂ ಟಿ ಶಾಂತಿ ಮೂಲೆಯವರಿಗೆ ಅವರ ಪೈಲಾರು ಸ್ವಗೃಹದಲ್ಲಿ ಪೂರ್ವಾಹ್ನ ಎಂಟು ಗಂಟೆಗೆ ಹಾಗೂ ಸಾಯಂಕಾಲ 6 ಗಂಟೆಗೆ ಹಿರಿಯ ಸಾಹಿತಿಗಳು ನಿವೃತ್ತ ಪ್ರಾಂಶುಪಾಲರಾದ ಡಾ....
ಸುಳ್ಯ: ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿಯಾಗಿದ್ದು, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಅನುರಾಧಾ ಕುರುಂಜಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಜ್ಜಾವರ ವಲಯ...
ಸುಳ್ಯ: ಜನಜಾಗೃತಿ ಮೂಡಿಸುವ ಮೂಲಕ ಆರೋಗ್ಯಕ್ಕೆ ಸಂಬಂಧಿಸಿದ ವ್ಯವಸ್ಥೆಗಳನ್ನು ರೂಪಿಸುವ ಕೆಲಸವನ್ನು ಜೇಸಿಐ ಮಾಡುತ್ತಿದೆ. ಯಾವುದನ್ನು ಹೇಗೆ ಸದ್ಬಳಕೆ ಮಾಡಬೇಕು ಎಂಬ ಅರಿವು ಜನರಲ್ಲಿ ಮೂಡಿದಾಗ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಕರ್ನಾಟಕ ಸರ್ಕಾರದ ಮಾಜಿ ಸಚಿವ ಎಸ್. ಅಂಗಾರ ಹೇಳಿದರು. ಜೇಸಿಐ ಪಯಸ್ವಿನಿ ಸುಳ್ಯ ವತಿಯಿಂದ ಸೆ. 6ರಂದು ಸುಳ್ಯದ ವೆಂಕಟ್ರಮಣ ಕೋ-ಆಪರೇಟಿವ್ ಸೊಸೈಟಿಯ...
ಸುಳ್ಯ: ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕಿನ ಸುಮಾರು 57 ಗ್ರಾಮಗಳ ಭಕ್ತರು ನಂಬಿಕೊಂಡು ಬರುವ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಬಿಜೆಪಿ ಭಕ್ತರ ಹೆಸರಿನಲ್ಲಿ ಅವ್ಯವಹಾರದ ಆರೋಪ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಮಹೇಶ್ ಕರಿಕ್ಕಳ ಆರೋಪಿಸಿದರು. ಸುಳ್ಯದ ಪತ್ರಿಕಾ ಭವನದಲ್ಲಿ ಸೆ. 5ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ: 06-09-2026 ಭಾನುವಾರ*01🐏ಮೇಷರಾಶಿ🐏*📃, ಇಂದು ನಿಮ್ಮ ಪ್ರಯತ್ನಗಳಲ್ಲಿ ಧನಾತ್ಮಕ ಫಲಿತಾಂಶಗಳಿರುತ್ತವೆ ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ಕೆಲವು ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ, ಗಮನಿಸಿ:- ಇಂದು ಮನೆಯಲ್ಲಿನಿರೀಕ್ಷಿತ ಬದಲಾವಣೆಗಳಿರುತ್ತವೆ,ಪರಿಹಾರ:- ಇಂದು ಸಂಜೆ ನವಗ್ರಹ ದೇವಸ್ಥಾನಕ್ಕೆ ಭೇಟಿ...
ವಾಹನದಲ್ಲಿ ಪ್ರಯಾಣ-ರಸ್ತೆಯ ಮೇಲಿಡಬೇಕು ನಮ್ಮ ಕಣ್ಣು, ಮೂಗು, ಬಾಯನ್ನ...ಎಚ್ಚರ ತಪ್ಪಿದರೆ ನಮ್ಮಯ ಜೀವಕ್ಕೆ ಅಪಘಾತ-ಮನೆಯವರ ಬದುಕಿಗೆ ಸಿಡಿಲಾಘಾತ...ಬೇಕಾಬಿಟ್ಟಿ ಪ್ರಯಾಣ-ಅದಾಗಬಹುದು ನಮ್ಮ ಬದುಕಿನ ಕೊನೆಯಣ್ಣ...ವೇಗದ ಹಾದಿ-ಆಗಬಹುದು ಅಪಘಾತಕ್ಕೆ ಬುನಾದಿ...ನಿಗದಿತವಾದ ಸ್ಪೀಡು-ಜೀವಕ್ಕಿಲ್ಲ ಯಾವುದೇ ಕೇಡು...ಓವರ್ ಸ್ಪೀಡು-ಅದಂತೂ ತುಂಬಾ ಬ್ಯಾಡು...ಅತೀ ವೇಗದ ಸಂಚಾರ-ನಮ್ಮಯ ಬದುಕಿಗೆ ಸಂಚಕಾರ...ನಿಯಮಿತವಾದ ವಾಹನ ಚೆಕ್ಅಪ್ಪು-ನಮಗೂ, ನಮ್ಮ ಗಾಡಿಗೂ ಎಂದೂ ಆಗದು ಬ್ರೇಕ್ಅಪ್ಪು...ಪದೇಪದೇ ಓವರ್ಟೇಕ್ ಮಾಡೋ ಖಯಾಲಿ-ಈ...
“ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಗುರಿ ಮುಖ್ಯ. ಗುರಿ ಸಾಧಿಸುವ ದಾರಿ ತೋರಿಸುವ ಶಿಕ್ಷಕ ವೃತ್ತಿ ಶ್ರೇಷ್ಠ” ಎಂದು ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಹೇಳಿದರು. ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವತಿಯಿಂದ ಜ್ಞಾನದೀಪ ಸಂಸ್ಥೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ದಿನದ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳು ಸಂಸ್ಥೆಯ...
ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಗೆ ಎರ್ಮಾಯಿಲ್ ಬಳಿ ಶನಿವಾರ ಸೆ.05ರಂದು ರಾತ್ರಿ 9:15ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್ನಲ್ಲಿದ್ದ 37 ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಸ್ ಎರ್ಮಾಯಿಲ್ ಸಮೀಪ ಬರುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಬಸ್ನ್ನು...
ಶಿಕ್ಷಣ ಕ್ಷೇತ್ರದಲ್ಲಿ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸುವುದರೊಂದಿಗೆ ಶಾಲಾ ಅಭಿವೃದ್ಧಿಗೆ ದಾನಿಗಳು ಹಾಗೂ ಸಂಘ-ಸಂಸ್ಥೆಗಳ ಸಹಕಾರವನ್ನು ಸಮರ್ಪಕವಾಗಿ ಬಳಸಿಕೊಂಡು ಹಲವು ಪ್ರಗತಿಪರ ಕಾರ್ಯಗಳನ್ನು ಕೈಗೊಂಡಿರುವ ಎಣ್ಮೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ಭುವನೇಶ್ವರಿ ಕೆ. ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ದಿ....
Loading posts...
All posts loaded
No more posts
