- Monday
- August 3rd, 2026
ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೊಳಗಾದ ದೇಶದ ಜನತೆಗೆ ಆರ್ ಬಿ ಐ ಇಂದು ಸಿಹಿ ಸುದ್ದಿ ನೀಡಿದೆ. ಸಾಲದ ಮೇಲಿನ ಬಡ್ಡಿದರ ಇಳಿಕೆ, ಇ ಎಮ್ ಐ ಪಾವತಿಯ ಅವಧಿಯನ್ನು ಮತ್ತೆ ಮೂರು ತಿಂಗಳಿಗೆ ವಿಸ್ತರಣೆ ಮಾಡುವುದಾಗಿ ಘೋಷಿಸಿದೆ. ಆರ್ ಬಿ ಐ ಮುಖ್ಯಸ್ಥ ಮೇ. ೨೨ ರಂದು ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಘೋಷಿಸಿದ್ದಾರೆ....
ಅಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರಕಾರ ಘೋಷಿಸಿರುವ ಪರಿಹಾರ ಧನವನ್ನು ಶೀಘ್ರವಾಗಿ ವಿತರಣೆ ಮಾಡಬೇಕೆಂದು ಒತ್ತಾಯಿಸಿ ತಾಲೂಕು ದಂಡಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು SDTU ಸುಳ್ಯ ತಾಲೂಕು ಅಧ್ಯಕ್ಷರಾದ ಫೈಝಲ್ ಬೆಳ್ಳಾರೆ, ಕಾರ್ಯದರ್ಶಿ ಕಬೀರ್ ಮಡಿಕೇರಿ, ಜಿಲ್ಲಾ ಖಜಾಂಚಿ ಹಮೀದ್ ಬಿಳಿಯರು, SDPI ಕಾರ್ಯದರ್ಶಿಗಳಾದ ಮುಸ್ತಫ. ಎಂ. ಕೆ SDAU ಜಿಲ್ಲಾ ಸಮಿತಿ ಸದಸ್ಯರಾದ ಅಬ್ದುಲ್ ರಹ್ಮಾನ್...
ಬೆಂಗಳೂರು: ಲಾಕ್ ಡೌನ್ ಕಾರಣದಿಂದ ರಾಜ್ಯದ ದೇವಾಲಯಗಳಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ. ಇದರಿಂದಾಗಿ ಭಕ್ತರು ಸ್ವಲ್ಪಮಟ್ಟಿನ ಸಂಕಷ್ಟಕ್ಕೆ ಒಳಗಾಗಿದ್ದರು. ಆದರೆ ಇದನ್ನು ಪರಿಹರಿಸುವ ಸಲುವಾಗಿ ಧಾರ್ಮಿಕ ದತ್ತಿ ಇಲಾಖೆ ಕೆಲವು ದೇವಸ್ಥಾನಗಳಲ್ಲಿ ಆನ್ ಲೈನ್ ಪೂಜೆಗೆ ಭಕ್ತರಿಗೆ ಅವಕಾಶ ನೀಡಿದೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿರುವ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು,...
ಅಪಘಾತಕ್ಕೊಳಗಾಗಿ ಸುಳ್ಯ ಸರಕಾರಿ ಆಸ್ಪತ್ರೆ ಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿರುವ ನಾರಾಯಣ ಪೂಜಾರಿ ಪದವು ಇವರನ್ನು ಗರುಡ ಯುವಕ ಮಂಡಲದ ಸದಸ್ಯರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಊರವರಿಂದ ಸಂಗ್ರಹಿಸಿದ ಹಣವನ್ನು ಮೇ. 20 ರಂದು ನೀಡಿದರು. ಹಾಗೂ ಇನ್ನೋರ್ವ ಬಾಲಕೃಷ್ಣ ಪೂಜಾರಿ ಕುಳ್ಳಾಜೆ ಇವರು ಕೂಡ ಅಪಘಾತದಿಂದ ಕಾಲು ಮುರಿತಕ್ಕೊಳಗಾಗಿ ಸುಮಾರು ಒಂದು ತಿಂಗಳಿನಿಂದ...
ಆಧುನಿಕ ಭಾರತದ ಮಹಾನ್ ಕನಸು ಹೊತ್ತಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ದುರಂತ ಸಾವನ್ನಪ್ಪಿ ಇವತ್ತಿಗೆ 29 ವರ್ಷ ಗತಿಸಿದೆ. 1991, ಮೇ 21ರಂದು ಚೆನ್ನೈ ಹೊರವಲಯದ ಶ್ರೀಪೆರಂಬುದರೂರ್ ಬಳಿ ಉಗ್ರಗಾಮಿಗಳು ಆತ್ಮಾಹುತಿ ದಾಳಿ ನಡೆಸಿ ರಾಜೀವ್ ಗಾಂಧಿ ಅವರ ಹತ್ಯೆಗೈದಿದ್ದರು. ಈ ಪ್ರಯುಕ್ತ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕೆ. ಪಿ. ಸಿ....
ಕಲ್ಲುಗುಂಡಿ ಅತಿಥಿ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿ ಬಾರಿನಲ್ಲಿ ಮದ್ಯ ಸೇವಿಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ತಪಾಸಣೆಗೆ ತೆರಳಿದ ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರು ಬಾರಿನ ಮ್ಯಾನೇಜರ್ ನ ಮೇಲೆ ದೌರ್ಜನ್ಯ ಮಾಡಿದ್ದಾರೆಂದ ಆರೋಪಿಸಿ ಬಾರಿನ ಮಾಲಕ ಸುಧೀರ್ ಶೆಟ್ಟಿ ನೆಟ್ಟಣ ಅವರು ಡಿವೈಎಸ್ಪಿ...
ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ವೆಬ್ಸೈಟ್ ಚಾನೆಲ್ ಗಳಲ್ಲಿ ದೇಶ-ವಿದೇಶದ ಸುದ್ದಿಗಳು ಕ್ಷಣ-ಕ್ಷಣದ ಮಾಹಿತಿಗಳನ್ನು ನೀಡುತ್ತಿದ್ದರು ಸ್ಥಳೀಯ ವೆಬ್ಸೈಟ್ ಗಳ ಸುದ್ದಿಗಳಿಗೆ ಅಧಿಕ ಮಾನ್ಯತೆ ಇದೆ ಎಂದು ಡಿವೈಎಸ್ಪಿ ದಿನಕರ ಶೆಟ್ಟಿ ಸುಳ್ಯದಲ್ಲಿ ನೂತನವಾಗಿ ಆರಂಭಗೊಂಡ ಅಮರ ಸುಳ್ಯ ಸುದ್ದಿ ವೆಬ್ಸೈಟ್ ಗೆ ಚಾಲನೆ ನೀಡುತ್ತಾ ಮಾತನಾಡಿದರು.ಮೊಬೈಲ್ ಗಳಲ್ಲಿ ಹಲವಾರು ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರನ್ನು...
ಸುಳ್ಯ ಬೋರುಗುಡ್ಡೆ ನಿವಾಸಿ ಆರೀಸ್ ಹಾಗೂ ಸಕೀನಾ ದಂಪತಿಗಳ ಪುತ್ರ ಮೊಹಮ್ಮದ್ ಶಯಾನ್ ಬಿ ಎ ಇವರ ಪ್ರಥಮ ವರ್ಷದ ಹುಟ್ಟುಹಬ್ಬಆಚರಣೆಯನ್ನು ಬೋರುಗುಡ್ಡೆ ನಿವಾಸದಲ್ಲಿ ಇಂದುಆಚರಿಸಲಾಯಿತು.
ಸುಳ್ಯ ತಾಲೂಕಿನಾದ್ಯಂತ ಹಾಗೂ ಪ್ರಪಂಚದ ವಿವಿಧ ಭಾಗಗಳಲ್ಲಿ ಇರುವ ಸುಳ್ಯದ ಜನತೆಯ ಅಚ್ಚು ಮೆಚ್ಚಿನ ಪತ್ರಿಕೆ ಅಮರ ಸುಳ್ಯ ಸುದ್ದಿ ಕಳೆದ ಹತ್ತು ವರ್ಷಗಳಿಂದ ಪತ್ರಿಕಾಮುದ್ರಣದ ಮೂಲಕ ಯಶಸ್ವಿಯಾಗಿ ಮೂಡಿಬರುತ್ತಿದೆ. ಆಧುನಿಕ ಇಚ್ಚಾಶಕ್ತಿಗನುಗುಣವಾಗಿ ಕಾಲಗಳು ಬದಲಾಗುತ್ತಿದ್ದು ಕ್ಷಣ ಕ್ಷಣದ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಜನತೆಗೆ ಕ್ಷಣ ಕ್ಷಣದ...
ಮಹತೊಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ಸರಕಾರದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಗೆ ಒಳಪಟ್ಟಿದೆ.ಸುಬ್ರಹ್ಮಣ್ಯ ವು ದಕ್ಷಿಣ ಕನ್ನಡಜಿಲ್ಲೆಯ ಕಡಬ ತಾಲೂಕಿನಲ್ಲಿ ಇದೆ. ದೇವಸ್ಥಾನವು ಊರಿನ ಮಧ್ಯದಲ್ಲಿದ್ದು, ನದಿ-ಕಾಡು-ಪರ್ವತಗಳಿಂದ ಆವೃತವಾಗಿದ್ದು, ಪ್ರಕೃತಿಯ ಅಪ್ರತಿಮ ಸೌಂದರ್ಯಕ್ಕೆ ಭಾಷ್ಯದಂತಿದೆ. ಶ್ರೀ ಸುಬ್ರಹ್ಮಣ್ಯ ದೇವರು ಇಲ್ಲಿಯ ದೇವಳದ ಪ್ರಧಾನ ದೇವತೆ. ಮುಖ್ಯ ದ್ವಾರವು ಪೂರ್ವಾಭಿಮುಖವಾಗಿದೆ. ಭಕ್ತಾದಿಗಳು ಮುಖ್ಯ ಗೋಪುರವಿರುವ ಪಶ್ಚಿಮ ಬಾಗಿಲಿನಿಂದ ಪ್ರವೇಶಿಸಿ ಒಳಸುತ್ತನ್ನು ಪೂರ್ವ ಬಾಗಿಲಿನಿಂದ ಮುಂದುವರೆಸುತ್ತಾರೆ. ಗರ್ಭಗುಡಿಯ...
Loading posts...
All posts loaded
No more posts
