- Saturday
- April 25th, 2026
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ 2025-26ನೇ ಸಾಲಿನ ಪುಟಾಣಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಮಾ.31 ರಂದು ಬಾಲವಿಕಾಸ ಸಮಿತಿ ಆಧ್ಯಕ್ಷೆ ಶ್ರೀಮತಿ ದೇವಿಕಾ.ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾರತಿ ಕೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಅಂಗನವಾಡಿ ಸಹಾಯಕಿ ಶ್ರೀಮತಿ ಸುಜಾತ ಸಹಕರಿಸಿದರು.ಅಂಗನವಾಡಿ ಪುಟಾಣಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಅಂಗನವಾಡಿಗೆ ವಿವಿಧ ಕೊಡುಗೆಗಳನ್ನು ನೀಡಿದರು.
ನಿನ್ನೆ(ಮಾ.31) ಸಂಜೆಯಿಂದ ರಾತ್ರಿವರೆಗೆ ಹರಿಹರ ಪಳ್ಳತ್ತಡ್ಕ ಹಾಗೂ ಕೊಲ್ಲಮೊಗ್ರು ಪರಿಸರದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಮಳೆಯ ಜೊತೆಗೆ ಬೀಸಿದ ಭಾರೀ ಗಾಳಿಯಿಂದಾಗಿ ಹರಿಹರ ಪಳ್ಳತ್ತಡ್ಕ ಗ್ರಾಮದ ಕಜ್ಜೋಡಿ ಹಾಗೂ ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಭಾಗದಲ್ಲಿ ಕೃಷಿ ತೋಟಗಳಿಗೆ ವಿಪರೀತ ಹಾನಿ ಸಂಭವಿಸಿದ್ದು, ಕೃಷಿಕರಿಗೆ ಅಪಾರ ನಷ್ಟ ಉಂಟಾಗಿದೆ.ಕಜ್ಜೋಡಿ ಭಾಗದ ಕೃಷಿಕರ ತೋಟಗಳಲ್ಲಿ ಅಂದಾಜು ತಲಾ 10...
ಮಾ.31 ರಂದು ಸೇವಾ ನಿವೃತ್ತರಾದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀಧರ ಗೌಡ ಆವರ ನಿವಾಸದಲ್ಲಿ ಹಿರಿಯ ವಿದ್ಯಾರ್ಥಿಗಳು ಗೌರವಾರ್ಪಣೆ ಮಾಡಿ ಶುಭಹಾರೈಸಿದರು. ಈ ಸಂಧರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಉಪಾಧ್ಯಕ್ಷರಾದ ದೇವಿ ಪ್ರಸಾದ್ ಸುಳ್ಳಿ,...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:01/04/2026 ಬುಧವಾರ*01,🐏ಮೇಷರಾಶಿ🐏*📃,ನೆನೆಬಿದ್ದ ಕೆಲಸಗಳಿಂದಾಗಿ ನಿಮ್ಮಲ್ಲಿ ಇಂದು ಲವಲವಿಕೆ ಕಂಡು ಬರುವುದಿಲ್ಲ. ನಿದ್ದೆಗೇಡು ಬುದ್ಧಿಗೇಡು ಎನ್ನುವಂತೆ ಸಣ್ಣಪುಟ್ಟ ವಿಷಯಗಳ ಮೇಲೆ ಕೂಗಾಡುವಿರಿ. ಆದಷ್ಟು ತಾಳ್ಮೆ ಇರಲಿ. ಈ ದಿನವೂ ನಿಮ್ಮ ಮನವು ಅಸ್ತವ್ಯಸ್ತವಾಗಿರುವದು, ಶಾಂತಚಿತರಾಗಿರಲು ಪ್ರಯತ್ನಿಸಿ,ಗಮನಿಸಿ:-ಇಂದು ಪರಿಸ್ಥಿತಿಗಳನ್ನು ಸಮರ್ಥ ರೀತಿಯಿಂದ ಎದುರಿಸಿ,ಪರಿಹಾರ:-ಶಿವನ ಮಂತ್ರವನ್ನು ಪಠಿಸಿ,*02,🐂ವೃಷಭರಾಶಿ🐂*📃,ಬಾಳಸಂಗಾತಿಯ ಆರೋಗ್ಯದ...
ಸುಳ್ಯ ನಗರದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದು 2023ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2025-26 ನೇ ಸಾಲಿನ ಆರ್ಥಿಕ ವರ್ಷವೂ ಸಹಕಾರಿಗೆ ಪೂರ್ಣವಾಗಿ ವ್ಯವಹರಿಸಲು ದೊರಕಿದ ಎರಡನೇ ಆರ್ಥಿಕ ವರ್ಷವಾಗಿದ್ದು ಈ ಅವಧಿಯಲ್ಲಿ ಸದಸ್ಯರ ಸಹಕಾರದೊಂದಿಗೆ ರೂ. 43.81 ಕೋಟಿ ವ್ಯವಹಾರ ನಡೆಸಿ...
ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವವು ಸಂಭ್ರಮದಿಂದ ಜರುಗುತ್ತಿದ್ದು, ಇಂದು ಅಪರಾಹ್ನ ಇತಿಹಾಸ ಪ್ರಸಿದ್ಧ ಶ್ರೀ ಭಗವತಿ ದೊಡ್ಡಮುಡಿ ನಡೆಯಲಿದೆ. ಮಾ.25ರಂದು ಉಗ್ರಾಣ ತುಂಬಿಸುವುದರ ಮೂಲಕ ಜಾತ್ರೋತ್ಸವವು ಆರಂಭಗೊಂಡಿದ್ದು, ಮಾ.31ರಂದು ರಾತ್ರಿ ಭಗವತಿ ದೇವಿ ಸಮಾರಾಧನೆ, ಪುಲ್ಲೂರು ಕಣ್ಣನ್ ಬೆಳ್ಳಾಟ 1, ಮಲೆಕಾರಿ ಬೆಳ್ಳಾಟ 1, ಶ್ರೀ ವಿಷ್ಣುಮೂರ್ತಿ ದೈವದ ತೊಡಂಙಲ್, ರಕ್ತೇಶ್ವರಿ ದೈವದ...
2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಅಮರಮುಡ್ನೂರು ಗ್ರಾಮದ ಕೆರೆಮೂಲೆ ಶ್ರೀಧರ ಗೌಡರು ತಮ್ಮ ಸುದೀರ್ಘ 36 ವರ್ಷಗಳ ಶಿಕ್ಷಕ ವೃತ್ತಿಜೀವನದಿಂದ ಮಾ.31ರಂದು ನಿವೃತ್ತಿ ಹೊಂದಿದರು. ಅಮರಮುಡ್ನೂರು ಗ್ರಾಮದ ಪೈಲಾರಿನ ಕೆರೆಮೂಲೆ ದಿ. ಎಲ್ಯಣ್ಣ ಗೌಡ ಹಾಗೂ ಶ್ರೀಮತಿ ದೇವಮ್ಮ ದಂಪತಿಗಳ ಮಗನಾದ ಶ್ರೀಧರ ಗೌಡರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಚೊಕ್ಕಾಡಿ...
ಸುಳ್ಯ ತಾಲೂಕಿನ ಗುತ್ತಿಗಾರು, ನಡುಗಲ್ಲು, ಹರಿಹರ ಪಳ್ಳತ್ತಡ್ಕ, ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು ಹಾಗೂ ಕಡಬ ತಾಲೂಕಿನ ಸುಬ್ರಹ್ಮಣ್ಯ, ಐನೆಕಿದು ಸೇರಿದಂತೆ ಉಭಯ ತಾಲೂಕುಗಳ ಹಲವು ಕಡೆಗಳಲ್ಲಿ ಇಂದು(ಮಾ.31) ಸಂಜೆಯ ವೇಳೆಗೆ ಗಂಟೆಗಳ ಕಾಲ ಗುಡುಗು-ಸಿಡಿಲು ಹಾಗೂ ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಧಾರಾಕಾರ ಮಳೆ ಸುರಿದ ಪರಿಣಾಮವಾಗಿ ಕುಕ್ಕೆ ಸುಬ್ರಹ್ಮಣ್ಯ...
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ರಬ್ಬರ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಬೇಡಿಕೆಗಳನ್ನು ಇತ್ಯರ್ಥಪಡಿಸದೆ ಇರುವ ಬಗ್ಗೆ ಎ. 01ರಿಂದ ಕೆ ಎಫ್ ಡಿ ಸಿ ವಿಭಾಗೀಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಎದುರು ಅನಿರ್ಧಷ್ಟಾವಧಿ ಪ್ರತಿಭಟನಾ ಹೋರಾಟ ಮತ್ತು ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿರುವ ಕೆ ಎಫ್ ಡಿ ಸಿ ಕಾರ್ಮಿಕ ಸಂಘಟನೆಗಳು ಸುಳ್ಯ...
ಕಲ್ಮಕಾರು ಗ್ರಾಮದ ಯಶವಂತ್ ನಿಡುಬೆ ಅವರು ಭಾರತೀಯ ಭೂಸೇನೆಯಲ್ಲಿ 25 ವರ್ಷಗಳ ಕಾಲ ದೇಶಸೇವೆ ಸಲ್ಲಿಸಿ ಇಂದು ಸೇವಾ ನಿವೃತ್ತರಾದರು. 2002 ರಲ್ಲಿ ಮಂಗಳೂರಿನಲ್ಲಿ ನಡೆದ ಸೇನಾ ನೇಮಕಾತಿಯಲ್ಲಿ ಆಯ್ಕೆಗೊಂಡು ಹೈದರಾಬಾದ್ ನಲ್ಲಿ ತರೆಬೇತಿ ಪಡೆದರು. ಸಿಯಾಚಿನ್ ಗ್ಲಾಸಿಯರ್ ನಲ್ಲಿ ವೃತ್ತಿ ಆರಂಭಿಸಿ, ಟಾಟಾ ನಗರ್, ಅಕ್ನೂರ್ ಸೆಕ್ಟರ್, ಪ್ರಯಾಗ್ ರಾಜ್, ಲಡಾಕ್, ಜಾನ್ಸಿ, ಬರೇಲಿ,...
Loading posts...
All posts loaded
No more posts
