- Friday
- September 18th, 2026
ಗುತ್ತಿಗಾರು: ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಹಬ್ಬಗಳ ಪ್ರಯುಕ್ತ ಗುತ್ತಿಗಾರಿನ ಆಸರೆ ಎಲೆಕ್ಟ್ರಾನಿಕ್ಸ್ ಮತ್ತು ಹೋಂ ಅಪ್ಲಯನ್ಸಸ್ನಲ್ಲಿ ಸ್ಟೀಲ್ ಹಾಗೂ ಕಂಚಿನ ವಸ್ತುಗಳ ಹೊಸ ಸ್ಟಾಕ್ಗಳ ಮೇಲೆ ಅಮೋಘ ದರ ಕಡಿತ ಮಾರಾಟ ಆಯೋಜಿಸಲಾಗಿದೆ. ಹಬ್ಬದ ಸಂಭ್ರಮಕ್ಕೆ ಅಗತ್ಯವಿರುವ ವಿವಿಧ ಬಗೆಯ ಸ್ಟೀಲ್, ಹಿತ್ತಾಳೆ ಹಾಗೂ ಕಂಚಿನ ವಸ್ತುಗಳು ಇಲ್ಲಿ ಲಭ್ಯವಿದ್ದು, ಗ್ರಾಹಕರ ಅನುಕೂಲಕ್ಕಾಗಿ...
ಸುಬ್ರಹ್ಮಣ್ಯ: ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ.), ಸುಬ್ರಹ್ಮಣ್ಯ ವತಿಯಿಂದ 56ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವನ್ನು ಸೆ.14ರಿಂದ 20ರವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಳದ ರಥಬೀದಿಯಲ್ಲಿರುವ ಸಭಾಂಗಣದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು. ಉತ್ಸವದ ಅಂಗವಾಗಿ 108 ತೆಂಗಿನಕಾಯಿ ಗಣಪತಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಕಾಶಿಕಟ್ಟೆ ಮಹಾಗಣಪತಿ ದೇವಸ್ಥಾನದಲ್ಲಿ...
ಸಮಾಜದಲ್ಲಿ ಸದ್ದಿಲ್ಲದೆ, ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಮೌನಸಾಧಕರನ್ನು ಗುರುತಿಸಿ ಗೌರವಿಸುವುದು ಜೇಸಿಐ ಭಾರತ ವಲಯ 15ರ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿಯಾಗಿರುತ್ತದೆ. ಇದರನ್ವಯ ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಜೇಸಿಐ ಸಪ್ತಾಹ ಸುಸ್ನಿಲ 2026 ಕಾರ್ಯಕ್ರಮಕ್ಕೆ ಆಗಮಿಸಿದ ಜೇಸಿಐ ಭಾರತ ವಲಯ ಯ15ರ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ವಲಯ ಸಂಯೋಜಕರಾದ...
ಬೆಂಗಳೂರಿನ ಶ್ರೀ ಜ್ಞಾನ ಮಂದಾರ ಎಜ್ಯುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ ತನ್ನ ಬೆಳ್ಳಿ ಹಬ್ಬದ ಸಂಭ್ರಮದ ಅಂಗವಾಗಿ ನೀಡುವ ಪ್ರತಿಷ್ಠಿತ 'ವಚನ ಮಂದಾರ' ರಾಜ್ಯ ಪ್ರಶಸ್ತಿಯನ್ನು ಇತ್ತೀಚೆಗೆ ಬೆಂಗಳೂರಿನ ಜೆ.ಎಸ್.ಎಸ್. ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗಾಯಕಿ ಸುಮ ಕೆ.ಎಸ್. ಬಾಳಿಲ ರವರಿಗೆ ಪ್ರದಾನ ಮಾಡಲಾಯಿತು. ಸುಮ ಕೆ ಎಸ್ ರವರಿಗೆ ಈ ಹಿಂದೆ ಪಂಡಿತ ಪುಟ್ಟರಾಜ...
ಶ್ರೀ ಹರಿಹರೇಶ್ವರ ದೇವಸ್ಥಾನ ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹರಿಹರ, ಬಾಳುಗೋಡು, ಐನೆಕಿದು ಇವರ ಸಹಭಾಗಿತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ.28ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸ್ಥಾಪಕಾಧ್ಯಕ್ಷರಾದ ಶ್ರೀಮತಿ ತಾರಾ...
ಸುಬ್ರಹ್ಮಣ್ಯ : ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ಕುಮಾರಧಾರ ದಲ್ಲಿ ನಡೆಯಿತು. ಗಿಡ ನಡುವ ಮೂಲಕ ವೃಕ್ಷಾರೋಪಣಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್.ಎಸ್.ಇಂಜಾಡಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ಪ್ರಕೃತಿ ವಿಕೋಪ ತಡೆಯಲು ಹೆಚ್ಚಿನ ವೃಕ್ಷ ಸಂಪತ್ತು ಅತ್ಯಗತ್ಯ. ಸಂಘ...
ಐವತೋಕ್ಲು ಗ್ರಾಮದ ಅಳ್ಪೆ ಮನೆತನದ ದಿವಂಗತ ಕೆಂಚಪ್ಪಗೌಡರ ಮೊಮ್ಮಗ ಹಾಗೂ ದಿವಂಗತ ಯಶವಂತ್ ಕೆ. ಮತ್ತು ಮಮತಾ ದಂಪತಿಗಳ ಪುತ್ರ ಹವನ್ ಅಳ್ಪೆ ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹವನ್ ಅಳ್ಪೆ ಅವರು ಸರಸ್ವತಿ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ ಇಲ್ಲಿನ...
ಮಡಪ್ಪಾಡಿ, ಆ.30: ಮಡಪ್ಪಾಡಿಯ ಶೆಟ್ಟಿಮಜಲು ಕ್ರೀಡಾಂಗಣದ ಬಳಿ ಭಾನುವಾರ ಸಂಜೆ 6.30ಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಮಡಪ್ಪಾಡಿ ಗ್ರಾಮ ಸಮಿತಿಯ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆ ಕುರಿತು ಚರ್ಚೆ ನಡೆಸಲಾಯಿತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗೆ ಆಕ್ಷೇಪಣಾ ಪತ್ರ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 31 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 31) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಕಲಾಮಾಯೆ ಸಾಂಸ್ಕೃತಿಕ ವಿದ್ಯಾಸಂಸ್ಥೆ(ರಿ ) ಏನೆಕಲ್ ವತಿಯಿಂದ 5 ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧಾ ಕಾರ್ಯಕ್ರಮ ದಿನಾಂಕ 30, ಆಗಸ್ಟ್ 2026:ಆದಿತ್ಯವಾರ ಶ್ರೀ ಆದಿಶಕ್ತಿ ಭಜನಾ ಮಂದಿರ (ರಿ ) ಏನೆಕಲ್ ಇಲ್ಲಿ ನಡೆಯಿತುಕಾರ್ಯಕ್ರಮದ ಉದ್ಘಾಟನೆಯನ್ನು ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ದ ಅಧ್ಯಕ್ಷರಾದ ಶ್ರೀ ಭವಾನಿ ಶಂಕರ್ ಪೂಂಬಾಡಿ ನೆರವೇರಿಸಿದರು,...
Loading posts...
All posts loaded
No more posts
