- Friday
- May 8th, 2026
ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.08 ರಂದು ಹರಿಹರ ಪಳ್ಳತ್ತಡ್ಕ, ಬಾಳುಗೋಡು ಹಾಗೂ ಐನೆಕಿದು ಗ್ರಾಮಗಳ ಸಹಭಾಗಿತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.ಈ ಸಂದರ್ಭದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಗೀತಾ ವಿಶ್ವನಾಥ್ ಬಿಳಿಮಲೆ, ಕಾರ್ಯದರ್ಶಿ ಶ್ರೀಮತಿ ಮನೋರಮಾ, ಕೋಶಾಧಿಕಾರಿ ಶ್ರೀಮತಿ ವಿಜಯ ಕೂಜುಗೋಡು, ಗೌರವಾಧ್ಯಕ್ಷರಾದ...
ಮನುಷ್ಯ ತನ್ನ ಜೀವನದಲ್ಲಿ ಹೇಗೆ ತನ್ನ ಬದುಕನ್ನು ರೂಪಿಸಿಕೊಳ್ಳಬೇಕು ಎಂಬುವುದು ಒಬ್ಬ ಕವಿಹೃದಯವಿರುವ ವ್ಯಕ್ತಿಯಲ್ಲಿ ವಿಶಾಲವಾದ ಮನೋಸ್ಥೈರ್ಯ ಹಾಗೂ ಆಶಾವಾದವನ್ನು ಹುಟ್ಟುಹಾಕುತ್ತದೆ. ಬದುಕು ಮೂರು ದಿನದ ಸಂತೆಯಾದರೂ ನಗುನಗುತ್ತಾ ಕಳೆಯುವುದೇ ಒಂದು ಉತ್ಸಾಹ ತುಂಬಿದ ಬದುಕಿಗೆ ಪ್ರೇರಣೆ. ತಾನೂ ಬದುಕಿ ಇತರರನ್ನೂ ಜೀವನೋತ್ಸಾಹದ ಹಾದಿಯಲ್ಲಿ ಬೆಸೆಯುವುದು ಜೀವತುಂಬಿದ ಬದುಕು ಎನಿಸುವುದು. ಇಂತಹ ಬದುಕಿಗೆ ಸ್ಫೂರ್ತಿಯ ಚಿಲುಮೆ...
ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆ.ವಿ.ಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಡಾ| ಕುರುಂಜಿ ವೆಂಕಟ್ರಮಣ ಗೌಡರ 12ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆ.07ರಂದು ನಡೆಯಿತು. ಕಾಲೇಜಿನ ರಷಶಾಸ್ತ್ರ ಮತ್ತು ಭೈಷಜ್ಯ ಕಲ್ಪನದ ವಿಭಾಗ ಮುಖ್ಯಸ್ಥರೂ, ಕೆವಿಜಿ ಆಯುರ್ವೇದ ಫಾರ್ಮಸಿ...
ಸವಣೂರು : ಅಭ್ಯುದಯ ಯುವಕ ಮಂಡಲ(ರಿ.) ಚೆನ್ನಾವರ ಪಾಲ್ತಾಡಿ ಇದರ ವತಿಯಿಂದ ಉಳ್ಳಾಕುಲು ಸೇವಾ ಸಮಿತಿ ಚೆನ್ನಾವರ ಇದರ ಸಹಯೋಗದಲ್ಲಿ 4ನೇ ವರ್ಷದ "ಆಟಿದ ಕೂಟ-ಕೆಸರ್ಡ್ ಒಂಜಿ ದಿನ" ಕಾರ್ಯಕ್ರಮ ಆ.10ರಂದು ಚೆನ್ನಾವರ ಗುತ್ತಿನ ಗದ್ದೆಯಲ್ಲಿ ನಡೆಯಲಿದೆ.ಚೆನ್ನಾವರ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಚೆನ್ನಾವರಗುತ್ತು ಕಾರ್ಯಕ್ರಮ ಉದ್ಘಾಟಿಸುವರು.ಕ್ರೀಡಾಂಗಣ ಉದ್ಘಾಟನೆಯನ್ನು ಅಬುದಾಭಿ ಇಂಡಿಯನ್ ಸ್ಕೂಲ್,...
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸುಳ್ಯ ವಲಯ ಮೇಲ್ವಿಚಾರಕರು, ನೌಕರರು ಹಾಗೂ ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿವರ್ಗದವರ ವತಿಯಿಂದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರಿಗೆ ಸುಳ್ಯದ ಸಿ.ಎ ಬ್ಯಾಂಕ್ ನ...
ಸಂಪಾಜೆ ಗ್ರಾಮದ ಮುಂಡಡ್ಕ ಪಾಂಬರ್ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಪೂಜೆಯ ಮೂಲಕ ಶ್ರೀರಾಮ್ ಭಟ್ ಸಂಪಾಜೆ ನೇರವೇರಿಸಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಗದೀಶ್ ರೈ ಗುದ್ದಲಿ ಪೂಜೆ ನೇರವೇರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ಮಾತನಾಡಿ "ಗ್ರಾಮದ...
ಈ ವರ್ಷ ಒಟ್ಟು 20 ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ 2024-25ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು ಮೂರನೇ ಸುತ್ತಿನಲ್ಲಿ ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ವರ್ಷದ ಶೈಕ್ಷಣಿಕ ಸಾಲಿನಲ್ಲಿ ಇಲ್ಲಿ ತರಬೇತಿ ಪಡೆದ ಒಟ್ಟು 20 ವಿದ್ಯಾರ್ಥಿಗಳು ನವೋದಯ...
ಕಡಬ : ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ಚಂದನ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ 2024 ನೇ ಸಾಲಿನ ಚಂದನ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ವೇದಿಕೆಯ 20ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಆಗಸ್ಟ್ 03 ರಂದು ಸುಳ್ಯ ದಲ್ಲಿ ನಡೆದಿದ್ದು, ಸಾಹಿತ್ಯ ಕೃಷಿಗಾಗಿ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಇವರು ಕಡಬ ತಾಲೂಕಿನ ಹೊಸಂಗಡಿ ಬಸದಿ...
ಶ್ರೀ ಕೃಷ್ಣ ಭಜನಾ ಮಂಡಳಿ(ರಿ.) ಗುತ್ತಿಗಾರು ಹಾಗೂ ಯುವಕ ಮಂಡಲ(ರಿ.) ಗುತ್ತಿಗಾರು ಇವರುಗಳ ಸಂಯುಕ್ತಾಶ್ರಯದಲ್ಲಿ ಆ.15 ರಂದು ನಡೆಯಲಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.ಈ ಕಾರ್ಯಕ್ರಮವನ್ನು ಗೌರವಾಧ್ಯಕ್ಷರಾದ ರವಿಪ್ರಕಾಶ್ ಬಳ್ಳಡ್ಕ, ಅಧ್ಯಕ್ಷರಾದ ಪೂರ್ಣಚಂದ್ರ ಪೈಕ, ಕಾರ್ಯದರ್ಶಿ ಲೀಲಾಧರ ಬದಿಯಡ್ಕ, ಖಜಾಂಜಿಗಳಾದ ನಾರಾಯಣ ಕುಚ್ಚಾಲ, ನಿರ್ದೇಶಕರಾದ ವೆಂಕಟ್ ಹುಲಿಕೆರೆ, ಸುರೇಶ್ ಮುತ್ಲಾಜೆ, ಸುಕೇಶ್...
ಸುಬ್ರಹ್ಮಣ್ಯ ಆಗಸ್ಟ್ 7 : "ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯಿಂದ ಈಗಾಗಲೇ ಅಗತ್ಯವಿರುವಲ್ಲಿಗೆ ವಿದ್ಯುತ್ ಮಾರ್ಗಗಳ ಬದಲಾವಣೆ, ವಿದ್ಯುತ್ ಪರಿವರ್ತಕಗಳ ಬದಲಾವಣೆ, ಕಂಬಗಳ ಬದಲಾವಣೆ ಕೆಲಸ ನಡಿಯುತ್ತಿದ್ದು, ಮಳೆಗಾಲದ ಸಮಯವಾದ್ದರಿಂದ ಬಹಳಷ್ಟು ವಿದ್ಯುತ್ ವ್ಯತ್ಯಯ ಆಗುವುದು ಸರ್ವೇಸಾಮಾನ್ಯ, ಆದರೆ ಗ್ರಾಹಕರ ಸಹಕಾರದೊಂದಿಗೆ ಎಲ್ಲಾ ಕೆಲಸಗಳನ್ನು ಮಾಡಲು ಸಾಧ್ಯವಾಗಿದೆ. ಈ ನಿಟ್ಟಿನಲ್ಲಿ ಮೆಸ್ಕಾಂ ಗ್ರಾಹಕರಿಗೆ ಸುರಕ್ಷತೆಯೊಂದಿಗೆ ಗುಣಮಟ್ಟದ...
Loading posts...
All posts loaded
No more posts
