- Friday
- September 18th, 2026
ಕಸ್ತೂರಿರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟಗಳ 7ನೇ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸುವ ಹಿನ್ನೆಲೆಯಲ್ಲಿ ವಿಶೇಷ ಗ್ರಾಮಸಭೆ ಕರೆಯುವಂತೆ ಆ.27 ಗುರುವಾರದಂದು ನಾಲ್ಕೂರು ಗ್ರಾಮದ ನಾಗರಿಕರು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ. ಗ್ರಾಮದ ನಾಗರಿಕರು ಒಗ್ಗೂಡಿ ಸಹಿ ಸಂಗ್ರಹಿಸಿ ಗ್ರಾಮ ಪಂಚಾಯಿತಿಗೆ ಮನವಿ ಪತ್ರವನ್ನು ಸಲ್ಲಿಸಿದ್ದು, ಕರಡು ಅಧಿಸೂಚನೆಯ ಕುರಿತು ಗ್ರಾಮಸ್ಥರ ಅಭಿಪ್ರಾಯ, ಸಲಹೆ ಹಾಗೂ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 29 ಆಗಸ್ಟ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 29) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಗುಂಡ್ಯದಲ್ಲಿ ಕಾರು ಮತ್ತು ಲಾರಿ ಅಪಘಾತದಲ್ಲಿ ಮೃತಪಟ್ಟ ಮಾವಿನಕಟ್ಟೆ ದಿ. ನಾರಾಯಣ ಮತ್ತು ಸುಮಿತ್ರಾ ದಂಪತಿಯ ಪುತ್ರ ಕವನ(ಕಿಶನ್) ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆ.28ರಂದು ಮಾವಿನಕಟ್ಟೆಯಿಂದ ಎಲಿಮಲೆ ವರೆಗೆ ನಡೆಯಿತು. ನಂತರ ಅವರ ಸ್ವಗೃಹದಲ್ಲಿ ಅಂತಿಮ ಸಂಸ್ಕಾರ ನಡೆಸಲಾಯಿತು. ಸಮಾಜಮುಖಿಯಾಗಿದ್ದ ಕಿಶನ್ ಜಾತಿ ಧರ್ಮ ಮೀರಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಅವರ ಅಗಲಿಗೆ...
ಬೆಳ್ಳಾರೆ : ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 17ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಅಂತರ್ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ-2026 ಸೆ.13ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ. ಬೆಳಗ್ಗೆ 10 ರಿಂದ 11.30ರವರೆಗೆ ಸ್ಪರ್ಧೆಯ ಅವಧಿ ನಿಗದಿಪಡಿಸಲಾಗಿದೆ. 1ರಿಂದ 2ನೇ ತರಗತಿ, 3 ರಿಂದ 4 ನೇ ತರಗತಿ, 5ರಿಂದ 7ನೇ ತರಗತಿ ಹಾಗೂ...
ಮಂಡೆಕೋಲು : ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ವತಿಯಿಂದ Magzter App ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಗ್ರಂಥಾಲಯದಲ್ಲಿ ಲಭ್ಯವಿರುವ QR Code ಮೂಲಕ Magzter App ಅನ್ನು ಮೊಬೈಲ್ಗಳಲ್ಲಿ ಉಚಿತವಾಗಿ ಇನ್ಸ್ಟಾಲ್ ಮಾಡಿಕೊಂಡು, ಅದರಲ್ಲಿರುವ ವಿವಿಧ ಇ-ಮ್ಯಾಗಜಿನ್ಗಳು, ಪತ್ರಿಕೆಗಳು ಹಾಗೂ ಡಿಜಿಟಲ್ ಓದುವ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಳ್ಳುವ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 24 ಗಂಟೆಗಳ ತುರ್ತು ಚಿಕಿತ್ಸಾ ಘಟಕವನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ಸೆ.02ರಂದು ಸಾರ್ವಜನಿಕ ಸಹಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಲಾಯಿತು. "ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರೂ ಆರೋಗ್ಯ ಸೇವೆಗಾಗಿ ಸುಬ್ರಹ್ಮಣ್ಯವನ್ನೇ ಅವಲಂಬಿಸಿದ್ದಾರೆ. ಆದರೆ ತುರ್ತು...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ : 29-08-2026ವಾರ : ಶನಿವಾರ 01)ಮೇಷ ರಾಶಿ : ಸಮಾಜದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ. ಹೊಸ ವಸ್ತುಗಳನ್ನು ಖರೀದಿಸುತ್ತೀರಿ. ಹಳೆಯ ಸ್ನೇಹಿತರಿಂದ ಬಂದ ಮಾಹಿತಿ ಸಂತೋಷ ಉಂಟುಮಾಡುತ್ತದೆ. ಕೈಗೊಂಡ ಕೆಲಸಗಳನ್ನು ಸಮಯಕ್ಕೆ ಪೂರ್ಣಗೊಳಿಸುತ್ತೀರಿ. ವೃತ್ತಿ ಮತ್ತು ವ್ಯಾಪಾರದಲ್ಲಿ ಹೊಸ ಹೂಡಿಕೆಗಳು ದೊರೆಯುತ್ತವೆ... ಗಮನಿಸಿ -...
ಸುಳ್ಯ: ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾತ್ಮ ಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆ ಕೊಡಿಯಾಲಬೈಲು ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದು, ತ್ರಿವಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.Under-14, 50+ ಕೆ.ಜಿ. ವಿಭಾಗದಲ್ಲಿ 8ನೇ ತರಗತಿಯ ಕಿಶನ್ಯ ಎಂ. ಆರ್. ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.Under-17, 30+ ಕೆ.ಜಿ. ವಿಭಾಗದಲ್ಲಿ...
ಸುಬ್ರಹ್ಮಣ್ಯ ಆಗಸ್ಟ್ 28 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ವರಮಹಾಲಕ್ಷ್ಮಿ ಪೂಜೆಯನ್ನು ಸಡಗರ ಭಕ್ತಿ ಭಾವದಿಂದ ಆಚರಿಸಲಾಯಿತು. ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರು ಹೊಸಳಿಗಮ್ಮ ದೈವದ ಗುಡಿಯಲ್ಲಿ ಪ್ರಾರ್ಥನೆ ಮಾಡಿ ನಂತರ ಶ್ರೀ ದೇವಳದ ಎದುರುಗಡೆ ಹರಿಯುತ್ತಿರುವ ದರ್ಪಣ ತೀರ್ಥ ನದಿ ತಟದಲ್ಲಿ ಪೂಜಾ ವಿಧಿ ವಿಧಾನಗಳನ್ನು ಪುರೋಹಿತರು...
ಪೆರುವಾಜೆ : ಮೂರು ತಾಲೂಕುಗಳ 22 ಗ್ರಾಮಗಳ ಮಾಗಣೆ ಕ್ಷೇತ್ರವೆಂಬ ಹೆಗ್ಗಳಿಕೆ ಹೊಂದಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ಜಲದುರ್ಗಾದೇವಿ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಶುಕ್ರವಾರ ನಡೆದ ವರಮಹಾಲಕ್ಷ್ಮೀ ಪೂಜೆಯಲ್ಲಿ 1,000ಕ್ಕೂ ಅಧಿಕ ಮಂದಿ ಪೂಜೆ ಸಮರ್ಪಿಸಿದರು. ಪೂರ್ವಾಹ್ನ ದೇವಸ್ಥಾನದ ಸನ್ನಿಧಿಯಲ್ಲಿ ಪೂಜಾ ಕಾರ್ಯಕ್ರಮ ಆರಂಭಗೊಂಡಿತು. ಮಾತೆಯರು ಪಾಲ್ಗೊಂಡು ಶ್ರದ್ಧಾಭಕ್ತಿಯಿಂದ ವರಮಹಾಲಕ್ಷ್ಮೀ ದೇವಿಯನ್ನು...
Loading posts...
All posts loaded
No more posts
