ಕುಕ್ಕೆ ಸುಬ್ರಹ್ಮಣ್ಯ : ಹೋರಿ ದಾಳಿ ; ಗಂಭೀರ ಗಾಯಗೊಂಡ ಇಬ್ಬರು ಮಹಿಳೆಯರು – ಮತ್ತೆ ಮುನ್ನೆಲೆಗೆ ಬಂದ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರ ಸಮಸ್ಯೆ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಮಹಿಳೆಯರಿಬ್ಬರು ಹೋರಿ ದಾಳಿಯಿಂದ ಗಂಭೀರ ಗಾಯಗೊಂಡ ಘಟನೆ ಜು.07ರಂದು ಸಂಭವಿಸಿದ್ದು, ಈ ಘಟನೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ಅಗತ್ಯ ಸೌಲಭ್ಯಗಳ ಅಭಾವದ ಸಮಸ್ಯೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದ ಲಲಿತ್ ಎಂಬುವವರು ಆದಿ...

ಇಂದಿನ(ಜುಲೈ 08) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ನಿಲ್ಲದ ರಬ್ಬರ್ ಭರ್ಜರಿ ಜಿಗಿತ ; ಹೊಸ ಅಡಿಕೆ ದರದಲ್ಲೂ ಚೇತರಿಕೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 08 ಜುಲೈ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Ad Widget

ಕಾರಿನ ಕೀ ಬಿದ್ದು ಸಿಕ್ಕಿದೆ

ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಇಂದು ಕಾರಿನ ಕೀ ಬಿದ್ದು ಸಿಕ್ಕಿರುತ್ತದೆ ಕಳೆದುಕೊಂಡವರು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ 9449948100

ಪಂಚಭೂತಗಳಲ್ಲಿ ಲೀನವಾದ ತೂಗುಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್‌ – ಸರ್ಕಾರದ ಗೌರವದೊಂದಿಗೆ ವಿದಾಯ – ಜನಪ್ರತಿನಿಧಿ ಹಾಗೂ ಅಧಿಕಾರಿಗಳು ಸೇರಿದಂತೆ ಸಾವಿರಾರು ಅಭಿಮಾನಿಗಳಿಂದ ಅಂತಿಮ ದರ್ಶನ

ತೂಗುಸೇತುವೆಗಳ ನಿರ್ಮಿಸುವ ಗ್ರಾಮೀಣ ಜನರ ಬದುಕಿಗೆ ನೆರವಾಗಿ "ಬ್ರಿಡ್ಜ್ ಮ್ಯಾನ್" ಎಂದೇ ಪ್ರಸಿದ್ಧಿಯಾಗಿ ಭಾರತ ಸರ್ಕಾರಿಂದ ಪದ್ಮಶ್ರೀ ಪುರಸ್ಕೃತರಾದ ಡಾ. ಗಿರೀಶ್ ಭಾರದ್ವಾಜ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ಜನಪ್ರತಿನಿಧಿ ಹಾಗೂ ಅಧಿಕಾರಿಗಳು, ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾವಿರಾರು ಜನ ಅಂತಿಮ ದರ್ಶನ ಪಡೆದರು. ಅರಂಬೂರಿನ ಅವರ ನಿವಾಸದಲ್ಲಿ ಅಂತಿಮ ವಿಧಿ...

ಕಲ್ಮಕಾರು : ಮರ ಬಿದ್ದು ಕೊಟ್ಟಿಗೆಗೆ ಹಾನಿ

ಕಲ್ಮಕಾರು ಗ್ರಾಮದ ನಾಗೇಶ್ ಕೊಪ್ಪಡ್ಕ ರವರ ಕೊಟ್ಟಿಗೆಗೆ ಜು.07ರಂದು ರಾತ್ರಿಯ ಗಾಳಿ-ಮಳೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದ್ದು, ಹಂಚುಗಳು ಹಾಗೂ ನೀರಿನ ಟ್ಯಾಂಕ್ ಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ದ್ವಾದಶ ರಾಶಿಗಳ ದಿನ ಭವಿಷ್ಯ

*01,ಮೇಷ ರಾಶಿ* ,ದೂರ ಪ್ರಯಾಣಗಳಲ್ಲಿ ಎಚ್ಚರಿಕೆಯಿಂದ ವರ್ತಿಸಿ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ.ಬಂಧು-ಮಿತ್ರರೊಂದಿಗೆ ಆಕಸ್ಮಿಕ ಕಲಹಗಳು ಉಂಟಾಗುತ್ತವೆ. ವೃತ್ತಿ ಹಾಗೂ ಉದ್ಯೋಗದಲ್ಲಿಇತರರೊಂದಿಗೆ.ವಿವಾದಗಳಿಂದ ದೂರವಿರುವುದು ಒಳಿತು. ದೈವಚಿಂತನೆ ಹೆಚ್ಚಾಗುತ್ತದೆ, ಗಮನಿಸಿ:-ನಿಮ್ಮ ವ್ಯಾಪಾರ ಹೆಚ್ಚುಅನುಕೂಲಕರವಾಗಿರುವುದಿಲ್ಲ, ಪರಿಹಾರ:- ಶ್ರೀ ಆಂಜನೇಯ ಸ್ವಾಮಿಯ ಪ್ರಾರ್ಥನೆ ಮಾಡಿ, *02,ವೃಷಭ ರಾಶಿ* ,ಸ್ಥಿರಾಸ್ತಿ ವ್ಯವಹಾರಗಳಲ್ಲಿ ಹೊಸ ಒಪ್ಪಂದಗಳು ಅನುಕೂಲಕರವಾಗುತ್ತವೆ. ಹೊಸ ವ್ಯಾಪಾರ ಆರಂಭಿಸಿದರೆ ನಿರೀಕ್ಷಿತ...

ಬಾಳಿಲ : ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಸ್ಥಾಪಕರಾದ ದಿವಂಗತ ನೆಟ್ಟಾರು ವೆಂಕಟಸುಬ್ಬರಾವ್ ರವರ ಸ್ಮೃತಿ ದಿನಾಚರಣೆ

ಬಾಳಿಲ : ಜು.06 ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಸ್ಥಾಪಕರಾದ ದಿವಂಗತ ನೆಟ್ಟಾರು ವೆಂಕಟಸುಬ್ಬರಾವ್ ಇವರ ಸ್ಮೃತಿ ದಿನಾಚರಣೆ ಮತ್ತು ನವೀಕೃತ ಶಾಲಾ ಕಛೇರಿಯ ಉದ್ಘಾಟನೆಯು ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು. ಸ್ಮೃತಿ ದಿನಾಚರಣೆಯ ಮುಖ್ಯ ಆಮಂತ್ರಿತರಾಗಿ ಭಾಗವಹಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ರಾಮಪ್ರಸಾದ್ ಕಾಂಚೋಡು ಮಾತನಾಡುತ್ತಾ ಸಂಸ್ಥಾಪಕರ ತ್ಯಾಗ ಬದ್ಧತೆ ಹಾಗೂ ಸಮರ್ಪಣಾ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ : ವೈದ್ಯರ ನೇಮಕಕ್ಕೆ ಭರವಸೆ – ಹೋರಾಟ ಮುಂದುವರಿಸಲು ಗ್ರಾಮಸ್ಥರ ನಿರ್ಧಾರ

ಕುಕ್ಕೆ ಸುಬ್ರಹ್ಮಣ್ಯ, ಜುಲೈ 7: ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ತಿಮ್ಮಯ್ಯ ಅವರು ಸೋಮವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು. ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೈದ್ಯರ...

ಬ್ರಿಡ್ಜ್ ಮ್ಯಾನ್ ಪದ್ಮಶ್ರೀ ಡಾ.ಗಿರೀಶ್ ಭಾರಧ್ವಾಜ್ ನಿಧನಕ್ಕೆ ಸುಳ್ಯ ಬಿಜೆಪಿ ಸಂತಾಪ

“ತೂಗು ಸೇತುವೆಯ ಸರದಾರರು, ಗ್ರಾಮೀಣ ಪ್ರದೇಶ ಸಾಮಾನ್ಯ ಜನರಿಗೆ ತೂಗು ಸೇತುವೆ ನಿರ್ಮಿಸಿ ಸಂಪರ್ಕ ವ್ಯವಸ್ಥೆ ಕಲ್ಪಿಸಿದ ಪದ್ಮಶ್ರೀ ಡಾ.ಗಿರೀಶ್ ಭಾರಧ್ವಾಜ್ ನಿಧನರಾಗಿದ್ದು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆಯೆಂದು” ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಸುಳ್ಯ ಮಾತ್ರವಲ್ಲದೆ ದೇಶದ ಆನೇಕ ಕಡೆ ನೂರಾರು ಸೇತುವೆ ನಿರ್ಮಿಸಿ ಗ್ರಾಮೀಣ ಭಾರತದ ಜನರಿಗೆ...

ಮಳೆಯ ಹಿನ್ನೆಲೆ ದ.ಕ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ; ನಾಳೆ(ಜು.08) ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 08 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...
Loading posts...

All posts loaded

No more posts

error: Content is protected !!