- Tuesday
- August 11th, 2026
ಸೆ 28 : ಪಶು ಆಸ್ಪತ್ರೆ ಸುಳ್ಯದಲ್ಲಿ ವಿಶ್ವ ರೇಬಿಸ್ ದಿನಾಚರಣೆ ಮತ್ತು ಪ್ರಾಣಿ ಕಲ್ಯಾಣ ಜಾಗೃತಿ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ವಿಶ್ವರೇಬಿಸ್ ದಿನಾಚರಣೆಯ ಅಂಗವಾಗಿ ವಿವಿಧ ಪ್ರಚಾರ ಸಾಮಗ್ರಿಗಳನ್ನು ಮತ್ತು ಸಾಕು ಪ್ರಾಣಿಗಳಿಗಾಗಿ ಲಸಿಕಾ ಕಾರ್ಡ್ ಗಳನ್ನು ಅನಾವರಣಗೊಳಿಸಲಾಯಿತು. "2030ರ ಒಳಗಾಗಿ ಭಾರತದಿಂದ ನಾಯಿಗಳಿಂದ ಹರಡುವ ರೇಬಿಸ್ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕಿನ...
ಸುಬ್ರಹ್ಮಣ್ಯ : ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಹಾಗೂ ಭಾರತೀಯ ಅಂಚೆ ಇಲಾಖೆಯ ಜಂಟಿ ಆಶ್ರಯದಲ್ಲಿ ಸೆ.29 ಹಾಗೂ ಸೆ.30 ರಂದು ಬೃಹತ್ ಉಚಿತ ಆಧಾರ್ ನೋಂದಣಿ, ತಿದ್ದುಪಡಿ, ಆರೋಗ್ಯ ವಿಮೆ ಹಾಗೂ ಅಪಘಾತ ವಿಮಾ ನೋಂದಣಿ ಶಿಬಿರವು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ರಾಜೀವ್ ಗಾಂಧಿ ಸೇವಾ ಸಭಾಭವನದಲ್ಲಿ ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 4:00...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 7ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸುಳ್ಯದ ವಿವಿಧೆಡೆ ಸರ್ವರ್ ಸಮಸ್ಯೆಯಿಂದ ಸಮೀಕ್ಷೆದಾರರು ಹಾಗೂ ಸಾರ್ವಜನಿಕರು ಪರದಾಡುವಂತಾಯಿತು. ಈಗಾಗಲೇ ಶಿಕ್ಷಕರು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿದ್ದು, ತಾಂತ್ರಿಕ ಕಾರಣಗಳಿಂದ ಆ್ಯಪ್ ಕಾರ್ಯನಿರ್ವಹಿಸದೆ ಪ್ರತಿದಿನದ ಸಮೀಕ್ಷೆ ಕುಂಠಿತವಾಗುತ್ತಿದೆ. ಇಂದಿನಿಂದ ಗ್ರಾಮ ಪಂಚಾಯಿತಿಗಳ ಮೂಲಕವೂ...
“ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡದೆ ಡೀಮ್ಡ್ ಅರಣ್ಯ ಜಮೀನಿನ ಜಂಟಿ ಸರ್ವೇಗೆ ಮುಂದಾಗಿರುವ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಸರ್ವೇ ಇಲಾಖೆಯ ಅಧಿಕಾರಿಗಳ ಧೋರಣೆ ರೈತ ವಿರೋಧಿಯಾಗಿದೆ” ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಹೇಳಿದರು.ಸುಬ್ರಹ್ಮಣ್ಯದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಸ್ಥಳೀಯಾಡಳಿತ ಮತ್ತು...
ಸುಬ್ರಹ್ಮಣ್ಯ ಸೆಪ್ಟಂಬರ್ 28 : ನವರಾತ್ರಿ ಆರಂಭವಾದ ಹಿಂದೆಯಿಂದ ನಿರಂತರವಾಗಿ ಕುಕ್ಕೆಯಲ್ಲಿ ಮಳೆ ಸುರಿಯುತ್ತಿದ್ದರೂ ಕೂಡ ರವಿವಾರ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಿ ಸೇವೆ ಸಲ್ಲಿಸಿದ ದೃಶ್ಯ ಕಂಡು ಬಂತು. ಶ್ರೀದೇವಳದ ಅಂಗಣದಲ್ಲಿ ಭಕ್ತರ ಜನಜಂಗುಳಿ ಕಂಡು ಬಂತು. ಹಾಗೆಯೇ ವಾಹನಗಳ ಪಾರ್ಕಿಂಗ್ ಸ್ಥಳಗಳೆಲ್ಲವೂ ಪೂರ್ತಿಯಾಗಿದ್ದವು. ಶ್ರೀ ದೇವಳದ...
ಅರಂತೋಡು : ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 17ನೇ ವಿಶೇಷ ವಾರ್ಷಿಕ ಶಿಬಿರ ಚೆಂಬು ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು."ನಶಾ ಮುಕ್ತ ಭಾರತ ಅಭಿಯಾನ" ಘೋಷವಾಕ್ಯದಡಿಯಲ್ಲಿ ಶಿಬಿರ ಆಯೋಜಿಸಲಾಗಿತ್ತು. ಸ್ಥಳೀಯ ಪ್ರಗತಿಪರ ಕೃಷಿಕರಾದ ಶ್ರೀ ಚಂದ್ರಶೇಖರ್ ಹೊಸೂರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಚೆಂಬು...
ಕೇರಳ ರಾಜ್ಯದ ಕಾಸರಗೋಡಿನ ಪಾಂಗಾಳ ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ದುರ್ಗಾಂಬಾ ವೇದಿಕೆಯಲ್ಲಿ ಸುಪ್ರಸಿದ್ಧ ಕವಿ ಡಾ. ಸುರೇಶ್ ನೆಗಳಗುಳಿ ಅಧ್ಯಕ್ಷತೆಯಲ್ಲಿ ಸೆ.27ರಂದು ನಡೆದ ಕಾಸರಗೋಡು ದಸರಾ ಕವಿಗೋಷ್ಠಿ-2025ರಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆ ಸ್ವರಚಿತ 'ಬಾಳು ಬಂಗಾರವಾಗಲಿ' ಶೀರ್ಷಿಕೆಯ ಕವನ ವಾಚಿಸಿದರು.
ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನ ಘಟಕದ 17 ನೇ ವಾರ್ಷಿಕ ವಿಶೇಷ ಶಿಬಿರ ಸೆ 20 ಶನಿವಾರದಂದು ಸರಕಾರಿ ಪ್ರೌಢ ಶಾಲೆ ಚೆಂಬು, ಮಡಿಕೇರಿ ಇಲ್ಲಿ ನಡೆಯಿತು. ಶಿಬಿರದ ಉದ್ಘಾಟನೆಯನ್ನು ಗೋಪಾಲಕೃಷ್ಣ ಹೊಸೂರುರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಆರ್ ಗಂಗಾಧರ ಸಂಚಾಲಕರು...
ಸುಬ್ರಹ್ಮಣ್ಯ ಸೆಪ್ಟೆಂಬರ್ 27 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಎಲ್ಲಾ ಸಂಘ-ಸಂಸ್ಥೆಗಳನ್ನು ಒಳಗೊಂಡಂತೆ ಸ್ವಚ್ಛತಾ ಕಾರ್ಯಕ್ರಮ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಶನಿವಾರ ಸುಬ್ರಹ್ಮಣ್ಯದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ಪರಿಸರದಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು. ಬಾಲಕಿಯರ ಹಾಸ್ಟೆಲಿನ ಸುಮಾರು 60ಕ್ಕೂ ಮಿಕ್ಕಿ ವಿದ್ಯಾರ್ಥಿನಿಯರು, ಹಾಸ್ಟೆಲ್ ವಾರ್ಡನ್, ಸಹಾಯಕಿಯರು, ಅಡುಗೆಯವರು, ಸುಬ್ರಹ್ಮಣ್ಯ...
ಅರಣ್ಯ ಇಲಾಖೆಯ ಜಾಗವನ್ನು ಅತಿಕ್ರಮಿಸಿರುವುದನ್ನು ತೆರವು ಮಾಡುವಂತೆ ಮೇಲ್ಮನವಿ ಪ್ರಾಧಿಕಾರ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವೃತ್ತದ ಆದೇಶದಂತೆ ಕಡಬ ತಾಲೂಕಿನ ಏನೆಕಲ್ಲು ಗ್ರಾಮದಲ್ಲಿ ಅತಿಕ್ರಮಿಸಲಾಗಿದ್ದ ಅರಣ್ಯ ಜಾಗವನ್ನು ಪಂಜ ವಲಯ ಅರಣ್ಯಾಧಿಕಾರಿಗಳು ತೆರವು ಮಾಡಿದ ಘಟನೆ ಸೆ.26 ಶುಕ್ರವಾರದಂದು ನಡೆದಿದೆ.ಕಡಬ ತಾಲೂಕಿನ ಏನೆಕಲ್ಲು ಗ್ರಾಮದಲ್ಲಿ ಕುಮಾರ್ ಪಿ. ಎಂಬವರು 1.44 ಎಕ್ರೆ ಮೀಸಲು ಅರಣ್ಯ...
Loading posts...
All posts loaded
No more posts
