- Friday
- August 14th, 2026
“ಸಿಟ್ಟು” ಅಥವಾ “ಕೋಪ” ಎನ್ನುವುದು ಮನುಷ್ಯರಾದ ನಮ್ಮಲ್ಲಿರುವ ಸಹಜವಾದ ಗುಣ. ನಾವು ಅಂದುಕೊಂಡ ಕೆಲಸ ಕೈಗೂಡದಿದ್ದರೆ, ನಮ್ಮ ಬದುಕು ನಾವಂದುಕೊಂಡಂತೆ ನಡೆಯದಿದ್ದರೆ ಅಥವಾ ನಮ್ಮವರು ಯಾರಾದರೂ ನಮ್ಮ ಮನಸ್ಸಿಗೆ ನೋವುಂಟುಮಾಡಿದರೆ.. ಹೀಗೆ ಜೀವನದಲ್ಲಿ ನಮಗೆ ಹಲವಾರು ಕಾರಣಗಳಿಂದ ಹಲವಾರು ಸಂದರ್ಭಗಳಲ್ಲಿ ಈ “ಸಿಟ್ಟು” ಅಥವಾ “ಕೋಪ” ಬಂದೇ ಬರುತ್ತದೆ, ಅದು ಸ್ವಾಭಾವಿಕ.ಆದರೆ “ನಮ್ಮ ಜೀವನದಲ್ಲಿ ಬರುವಂತಹ...
61 ದಿನ ಪೂರೈಸಿದ "ಭಾವ ತೀರ ಯಾನ" ಸಿನಿಮಾ ಎ.22 ರಂದು ಕೊನೆಯ ಪ್ರದರ್ಶನ ನೀಡುವುದೆಂದು ಚಿತ್ರದ ನಿರ್ದೇಶಕರು ತೀರ್ಮಾನಿಸಿದ್ದರು. ಆದರೇ ಎ.22 ರಂದು ಪ್ರೇಕ್ಷಕರ ಭಾರಿ ಬೆಂಬಲದ ಹಿನ್ನೆಲೆಯಲ್ಲಿ ಪುತ್ತೂರಿನ ಭಾರತ್ ಸಿನೇಮಾಸ್ ನವರು ಚಿತ್ರಪ್ರದರ್ಶನ ನಿಲ್ಲಿಸುವುದು ಬೇಡ ಮುಂದುವರೆಸೋಣ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಆದುದರಿಂದ ಎ.23 ಬುಧವಾರ ಸಂಜೆ 4.45ಕ್ಕೆ ಚಿತ್ರದ ಪ್ರದರ್ಶನಗೊಳ್ಳಲಿದೆ. ಈ ಚಿತ್ರಕ್ಕೆ...
ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಕಾರಿನ ಬಾಳೆಬೈಲು ಎಂಬಲ್ಲಿನ ನಾಗರಿಕರು ರಸ್ತೆ ದುರವಸ್ಥೆಯ ಹಿನ್ನೆಲೆಯಲ್ಲಿ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರ ಮಾಡುವುದಾಗಿ ನಿರ್ಧರಿಸಿ ಏ.20 ರಂದು ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಮಾಡಿರುವುದಾಗಿ ತಿಳಿದುಬಂದಿದೆ.ಕಲ್ಮಕಾರು ಶಕ್ತಿನಗರದಿಂದ ಬಾಳೆಬೈಲು ಭಾಗಕ್ಕೆ ತೆರಳುವ ರಸ್ತೆಯು ತೀರಾ ಹದಗೆಟ್ಟು ವಾಹನ ಸಂಚಾರಕ್ಕೆ ಕಷ್ಟಕರವಾಗಿದ್ದು, ಈ ಭಾಗದ ಸಾರ್ವಜನಿಕರು...
ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಸುಳ್ಯ, ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ಎ. 18ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ಸಂಗೀತ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡ ಮಾಡುವ ಚಂದನ ಪ್ರತಿಭಾರತ್ನ ಪ್ರಶಸ್ತಿ 2024 ನ್ನು ಸುಳ್ಯದ ಗಾಯಕರಾದ ವಿಜಯ್ ಕುಮಾರ್ ಸುಳ್ಯ ನೀಡಿ ಗೌರವಿಸಿರುತ್ತಾರೆ. ಟಿ.ಎ.ಪಿ.ಸಿ.ಎಂ.ಎಸ್...
ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ (ರಿ) ಆಶ್ರಯದಲ್ಲಿ ಎ. 11 ರಿಂದ ಎ. 20ರವರೆಗೆ ನಡೆದ ವಾಲಿಬಾಲ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಪ್ರಯುಕ್ತ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಎ. 20 ರಂದು ಹೊನಲು ಬೆಳಕಿನಲ್ಲಿ ನಡೆಯಿತು. ಸುಳ್ಯ ತಾಲೂಕಿನ 18 ಗ್ರಾಮಗಳ 18 ತಂಡಗಳು ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ್ದವು....
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 60 ನೇ ದಿನ ಪೂರೈಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.22 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಚಿತ್ರದ ಕೊನೆಯ ಪ್ರದರ್ಶನ ಕಾಣಲಿದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡಬಲ್ಲ ಈ ಚಲನಚಿತ್ರ ವಿಕ್ಷೀಣೆ...
ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಏಪ್ರಿಲ್ 22 ಮತ್ತು 23ರಂದು ಶ್ರೀ ದೇವಿಯ ಜಾತ್ರೋತ್ಸವ ಹಾಗೂ ದೈವಗಳ ನೇಮ ಉತ್ಸವ ನಡೆಯಲಿದೆ. ಇದರ ಅಂಗವಾಗಿ ಶ್ರಮದಾನ ನಡೆಯುತ್ತಿದ್ದು, ಎ.20 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಶ್ರಮದಾನ ನಡೆಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಇದರ ಸಹಯೋಗದೊಂದಿಗೆ ರಾಷ್ಟ್ರೀbಯ ಹಬ್ಬ ಆಚರಣೆ ಘಟಕದ ವತಿಯಿಂದ ದಿನಾಂಕ 17/04/25 ರಂದು ಅಂಬೇಡ್ಕರ್ ಜಯಂತಿಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಅತಿಥಿಗಳು ಅಂಬೇಡ್ಕರ್ ರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನುಗೈದರು. ವಿದ್ಯಾರ್ಥಿಗಳು ಅಂಬೇಡ್ಕರ ಹಾಡುಗಳನ್ನು ಗೀತ ಗಾಯನದ ಮೂಲಕ...
ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ವಾಷ್ಠರ್ ಸಂಗೀತ ಸೌರಭ -2025 ಕಾರ್ಯಕ್ರಮವು ಇತ್ತೀಚಿಗೆ ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನೆರವೇರಿತು. ವಾಷ್ಠರ್ ಸಂಗೀತ ಸೌರಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ...
Loading posts...
All posts loaded
No more posts
