ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ – ಏ.04ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.04ರಂದು ಶುಕ್ರವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಅಡ್ಕಾರು : ವಿದ್ಯುತ್ ಕಂಬಕ್ಕೆ ಗುದ್ದಿ ಕಾರು ಪಲ್ಟಿ – ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಅಡ್ಕಾರು ಸಮೀಪ ಸುಳ್ಯ ಕಡೆಗೆ ಬರುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಮಾ.03 ರಂದು ಸಂಜೆ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ್ದರಿಂದ ಕೆಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.‌
Ad Widget

ಸ್ವರ್ಣ ಶ್ರೀ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಸುಳ್ಯ. ರೂ. 19.22 ಕೋಟಿ ವ್ಯವಹಾರ ರೂ. 6.51 ಲಕ್ಷ ಲಾಭ.

ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದು 2023ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2024-25 ನೇ ಸಾಲಿನ ಆರ್ಥಿಕ ವರ್ಷವೂ ಸಹಕಾರಿಗೆ ಪೂರ್ಣವಾಗಿ ವ್ಯವಹರಿಸಲು ದೊರಕಿದ ಪ್ರಥಮ ಆರ್ಥಿಕ ವರ್ಷವಾಗಿದ್ದು ಈ ಅವಧಿಯಲ್ಲಿ ಸದಸ್ಯರ ಸಹಕಾರದೊಂದಿಗೆ ರೂ. 19.22 ಕೋಟಿ ವ್ಯವಹಾರ ನಡೆಸಿ...

ಪಾಲಡ್ಕ : ಅಪಘಾತ ಪ್ರಕರಣ – ಆರೋಪಿ ದೋಷಮುಕ್ತ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ದಿನಾಂಕ : 01/03/2024 ರಂದು ಹರಿಶ್ಚಂದ್ರ ಎಂಬುವರು ಚಲಾಯಿಸಿಕೊಂಡು ಬರುತ್ತಿದ್ದ ಅವಿನಾಶ್ ಬಸ್ ಬಸ್ಸನ್ನು ದುಡುಕುತನ ಮತ್ತು ಅಜಾರುಕತೆಯಿಂದ ಚಲಾಯಿಸಿಕೊಂಡು ಹೋಗಿ, ಅದೇ ಮಾರ್ಗವಾಗಿ ಪದ್ಮನಾಭ ರವರು ಚಲಾಯಿಸಿಕೊಂಡು ಹೋಗುತ್ತಿರುವ ಮೋಟಾರ್ ಸೈಕಲ್ ಗೆ ಓವರ್ ಟೆಕ್ ಮಾಡುವ ಬರದಲ್ಲಿ ಆರೋಪಿತನು ತನ್ನ ಬಸ್ಸನ್ನು ಎಡಬದಿಗೆ ಒಮ್ಮೆಗೆ...

ಮಲೆನಾಡು ಜನಹಿತರಕ್ಷಣಾ ವೇದಿಕೆ ಹೋರಾಟದ ಫಲಶ್ರುತಿ – ಶೀಘ್ರವೇ ಜಂಟಿ ಸರ್ವೆಗೆ ಸರಕಾರದ ಆದೇಶ – ಆಯಾಯ ಗ್ರಾ.ಪಂ.ಗೆ ಮಾಹಿತಿ ನೀಡಿ ಜಂಟಿಸರ್ವೆ ನಡೆಸುವಂತೆ ಮನವಿ

ಸಂಘಟನೆಯ ಸಂಚಾಲಕ ಕಿಶೋರ್ ಶಿರಾಡಿ ಸುದ್ದಿಗೋಷ್ಠಿ :ನವಂಬರ್ 15 ರಂದು ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ಹೋರಾಟದ ವಿಚಾರವಾಗಿ ಭಾದಿತ ಗ್ರಾಮಗಳ ಜಂಟಿಸರ್ವೆ ನಡೆಸಬೇಕೆಂಬ ವಿಚಾರವನ್ನಿಟ್ಟುಕೊಂಡು ಹೋರಾಟಕ್ಕೆ ಕರೆಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ನಾಯಕರು, ಧಾರ್ಮಿಕ ಮುಖಂಡರು ,ಸಂಘಟನೆಗಳ ಪ್ರಮುಖರು ಈ ಹೋರಾಟದಲ್ಲಿ ಸಭೆ ನಡೆಸಿ...

ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲ: ‘ರಂಗ ತರಂಗ’ ಬೇಸಿಗೆ ಶಿಬಿರ

ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲದಲ್ಲಿ ಏಳು ದಿನಗಳ ಬೇಸಿಗೆ ಶಿಬಿರ 'ರಂಗ ತರಂಗ' ಎ. 01ರಂದು ಉದ್ಘಾಟನೆಗೊಂಡಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿ (ರಿ) ಬಾಳಿಲ ಇದರ ಅಧ್ಯಕ್ಷರಾಗಿರುವ ಶ್ರೀ ರಾಧಾಕೃಷ್ಣ ರಾವ್ ಯು ವಹಿಸಿದ್ದರು. "ಇನ್ನಷ್ಟು ಹೊಸತನ ಬರಲಿ. ರಂಗ ತರಂಗ ಅಲೆ ಅಲೆಯಾಗಿ ಸಾಗಲಿ …." ಎಂದು ಶುಭಹಾರೈಸಿದರು. ಪಿ. ಜಿ....

“ಭಾವ ತೀರ ಯಾನ” ಚಲನಚಿತ್ರ 6ನೇ ವಾರದಲ್ಲಿ ಯಶಸ್ವಿ ಪ್ರದರ್ಶನ – ಏ.03ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಪ್ರದರ್ಶನ ಕಾಣುತ್ತಿದೆ. ಏ.03ರಂದು ಗುರುವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಪೈಕ ಶ್ರೀ ಶಿರಾಡಿ ರಾಜನ್ ದೈವ ಮತ್ತು ಪರಿವಾರ ದೈವಗಳ ನೇಮೋತ್ಸವದ ಪ್ರಯುಕ್ತ ಗೊನೆ ಮುಹೂರ್ತ

ಗುತ್ತಿಗಾರು ಪೈಕ ಹನ್ನೆರಡು ಒಕ್ಕಲಿಗೊಳಪಟ್ಟ ಶ್ರೀ ಶಿರಾಡಿ ರಾಜನ್ ದೈವ ಮತ್ತು ಪರಿವಾರ ದೈವಗಳ ನೇಮೋತ್ಸವ ಏ.08 ಮತ್ತು 09 ರಂದು ನಡೆಯಲಿದೆ. ಆ ಪ್ರಯುಕ್ತ ಏ.02 ರಂದು ಮೂಹೂರ್ತದ ಗೊನೆ ಕಡಿಯಲಾಯಿತು. ಈ ಸಂದಭ೯ ಆಡಳಿತ ಮಂಡಳಿಯ ಮತ್ತು ಜೀರ್ಣೋದ್ಧಾರ ಸಮಿತಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಊರವರು ಉಪಸ್ಥಿತರಿದ್ದರು.

ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆಯಲ್ಲಿ ಸುಳ್ಯಕ್ಕೆ ಬಹುಮಾನ –  ರಾಜ್ಯ ಮಟ್ಟದಲ್ಲಿ  ತೃತೀಯ ಬಹುಮಾನ ಪಡೆದ ಕಾವ್ಯಶ್ರೀ ಬಿ. ಶೇಣಿ

ಭಾರತೀಯ ಅಂಚೆ ಇಲಾಖೆ ವತಿಯಿಂದ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪತ್ರ ಲೇಖನ ಸ್ಪರ್ಧೆ ಢಾಯಿ  ಆಖರ್ - 2024  ಇದರಲ್ಲಿ ಸುಳ್ಯ ಅಂಚೆ ಉಪ ವಿಭಾಗ ವ್ಯಾಪ್ತಿಯ ಅಮರಮುಡ್ನೂರು  ಗ್ರಾಮದ ಶೇಣಿಯ ಕಾವ್ಯಶ್ರೀ ಬಿ  ರಾಜ್ಯ ಮಟ್ಟದಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ. ಕಾವ್ಯಶ್ರೀಯವರಿಗೆ ಎ. 2 ರಂದು ಅವರ ಶೇಣಿ ಮನೆಯಲ್ಲಿ ಸುಳ್ಯಉಪ...

ಸುಳ್ಯದ ಕೋಟೆಕ್ಕಲ್ ಆರ್ಯವೈದ್ಯ ಶಾಲೆಯ ವೈದ್ಯ ಕುಂಞರಾಮನ್ ವೈದ್ಯರ್ ನಿಧನ

ಸುಳ್ಯದ ಹಿರಿಯ ಆಯುರ್ವೇದ ಪಂಡಿತ ಹಾಗೂ ಕೋಟೆಕ್ಕಲ್ ಆರ್ಯವೈದ್ಯ ಶಾಲೆಯ ವೈದ್ಯರಾಗಿದ್ದ ಕುಂಞ್ಞರಾಮನ್ ವೈದ್ಯರ್ ರವರು ಅಲ್ಪಕಾಲದ ಅಸೌಖ್ಯದಿಂದ ಎ.1ರಂದು ನಿಧನರಾದರು. ಅವರಿಗೆ (80) ವರ್ಷ ವಯಸ್ಸಾಗಿತ್ತು. ಕಳೆದ 60 ವರ್ಷಗಳಿಂದ ಸುಳ್ಯದಲ್ಲಿ ಕೋಟೆಕಲ್ಲು ಔಷದಿಗಳ ಹಂಚಿಕೆ ದಾರರಾಗಿದ್ದ ಇವರು ಆಯುರ್ವೇದ ಔಷದಿ ವೃತ್ತಿಯಲ್ಲಿ ಸುಳ್ಯದಲ್ಲಿ ತುಂಬಾ ಹೆಸರುವಾಸಿಯಾಗಿದ್ದರು. ಇವರು ಕಳೆದ ಕೆಲವು ತಿಂಗಳುಗಳಿಂದ ಅಸೌಖ್ಯದಿಂದ...
Loading posts...

All posts loaded

No more posts

error: Content is protected !!