ಹೀಟ್ ಸ್ಟ್ರೋಕ್ (ಶಾಖಾಘಾತ)

ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಅರ್ಭಟ ಜೋರಾಗಿದೆ, ಬಾಹ್ಯ ವಾತಾವರಣದ ಉಷ್ಣತೆ 42 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಾಗಿದೆ. ಇಂತಹ ಬಿಸಿಲಿನ ಹೊಡೆತಕ್ಕೆ ನಮ್ಮ ದೇಹ ಬಳಲಿ ಬೆಂಡಾಗಿ ಹೀಟ್ ಸ್ಟ್ರೋಕ್ಗೆ ತುತ್ತಾಗುತ್ತದೆ. ಈ ವಿಪರೀತ ಬಿಸಿಲಿನ ಕಾರಣದಿಂದ ದೇಹಕ್ಕೆ ಉಂಟಾಗುವ ಆಘಾತವನ್ನು ಸನ್‌ಸ್ಟ್ರೋಕ್ ಅಥವಾ ಶಾಖಾಘಾತ ಎಂದೂ ಕರೆಯುತ್ತಾರೆ.ನಮ್ಮ ದೇಹದಲ್ಲಿ ನಿರಂತರವಾಗಿ ಚಯಾಪಚಯ ಜೈವಿಕ ಕ್ರಿಯೆ ನಿರಂತರವಾಗಿ...

ಕನಕಮಜಲು : ಮಾ 27 ಮತ್ತು 28 ರಂದು ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲ

ಕನಕಮಜಲು ಗ್ರಾಮದ ಬಾಳೆಹಿತ್ತಿಲು ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಉತ್ಸವ ಮಾ.‌ 27 ಮತ್ತು 28 ರಂದು ನಡೆಯಲಿದೆ. ಮಾ. 20 ಗುರುವಾರದಂದು ಬೆಳಿಗ್ಗೆ ಗಂಟೆ 7-00ಕ್ಕೆ ಗೊನೆ ಮುಹೂರ್ತ ನಡೆಯಲಿದೆ. ಮಾ. 23 ಆದಿತ್ಯವಾರದಂದು ರಾತ್ರಿ ಗಂಟೆ 7-00ಕ್ಕೆ ದೈವಸ್ಥಾನ ಪುನಃ ಪ್ರತಿಷ್ಠಾ ದಿನದ ಅಂಗವಾಗಿ ಕೈವೀದು...
Ad Widget

ಸುಳ್ಯ : ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.13ರಂದು ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶಾರದ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ ಎ.ಎಸ್. ಆಗಮಿಸಿ ಮಹಿಳಾ ದಿನಾಚರಣೆಯ ಕುರಿತು ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬಳಿಕ ಸಮಾಜದಲ್ಲಿ ವಿವಿಧ ರೀತಿಯಲ್ಲಿ...

ಮಡಪ್ಪಾಡಿ : ಗ್ಯಾಸ್ ಸ್ಟೌವ್ ಹಾಗೂ ಸಿಲಿಂಡರ್ ಕೊಡುಗೆ

ಯುವಕ ಮಂಡಲ(ರಿ) ಮಡಪ್ಪಾಡಿ ಹಾಗೂ ಶ್ರೀ ರಾಮ ಭಜನಾ ಮಂಡಳಿ ಇದರ ಅಧ್ಯಕ್ಷರು ಹಾಗೂ ಸದಸ್ಯರ ಸಹಕಾರದೊಂದಿಗೆ ಕುಶಾಲಪ್ಪ ಪಾರೆಮಜಲು ಇವರಿಗೆ ಗ್ಯಾಸ್ ಸ್ಟೌವ್ ಹಾಗೂ ಸಿಲಿಂಡರ್ ನ್ನು ಕೊಡುಗೆಯಾಗಿ ನೀಡಲಾಯಿತು.ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವಿನಯ ಕುಮಾರ್ ಮುಳುಗಾಡು, ಉಪಾಧ್ಯಕ್ಷರಾದ ಸಚಿನ್ ಬಳ್ಳಡ್ಕ, ನಿರ್ದೆಶಕರಾದ ಕರುಣಾಕರ ಪಾರೆಪ್ಪಾಡಿ, ಯುವಜನ ಸಂಯುಕ್ತ...

ಮಾ.16 : ಕುಕ್ಕುಜಡ್ಕದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಅಮರ ಸಂಘಟನಾ ಸಮಿತಿ (ರಿ.), ಸುಳ್ಯ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಇದರ ಸಹಕಾರದೊಂದಿಗೆ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರವು ಮಾ. 16 ಭಾನುವಾರದಂದು ಕುಕ್ಕುಜಡ್ಕದ ಅಮರಮುಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಲಿರುವುದು. ನಾಗರಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಸಂಘಟಕರು ತಿಳಿಸಿದ್ದಾರೆ.

ಸುಳ್ಯಕ್ಕೆ ವಿದ್ಯುತ್ ಸರಬರಾಜು ಆಗುತ್ತಿದ್ದ ಹಳೆಯ 33ಕೆ.ವಿ. ವಿದ್ಯುತ್ ಲೈನ್ ಸುಸ್ಥಿತಿಯಲ್ಲಿಡುವಂತೆ ಬಿಜೆಪಿ ಮನವಿ

ಸುಳ್ಯಕ್ಕೆ ವಿದ್ಯುತ್ ಸರಬರಾಜಾಗುವ 33ಕೆ.ವಿ ವಿದ್ಯುತ್ ಮಾರ್ಗದಲ್ಲಿ ಆಗಾಗ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಹಿಂದೆ ಹೊಸ ವಿದ್ಯುತ್ ಮಾರ್ಗ ಎಳೆಯುವ ಸಂದರ್ಭದಲ್ಲಿ ಹಳೆಯ ವಿದ್ಯುತ್ ಮಾರ್ಗವನ್ನು ಸುಸ್ಥಿತಿಯಲ್ಲಿ ಇಡುವುದಾಗಿ ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದರೂ, ಹಳೆಯ ವಿದ್ಯುತ್ ಮಾರ್ಗವನ್ನು ಯಾವುದೇ ನಿರ್ವಹಣೆ ಮಾಡದೇ ಇದ್ದುದರಿಂದ ಬದಲಿ ಮಾರ್ಗವಾಗಿ ಹಳೆಯ ವಿದ್ಯುತ್ ಲೈನ್ ಅನ್ನು ಬಳಸಲು ಸಾಧ್ಯವಿಲ್ಲದಂತಾಗಿದೆ.....

‌ಜಟ್ಟಿಪಳ್ಳ : ತೆಂಗಿನ ಮರ ಬಿದ್ದು ವಿದ್ಯುತ್ ಕಂಬ ತುಂಡು – ಅಪಾಯದಿಂದ ಪಾರಾದ ಅಟೋರಿಕ್ಷಾ ಪ್ರಯಾಣಿಕರು

ಜಟ್ಟಿಪಳ್ಳ ರಸ್ತೆಯ ವಿಶ್ವಕಾಂಪ್ಲೆಕ್ಸ್ ಎದುರು ಭಾಗದಲ್ಲಿ ರಸ್ತೆಗೆ ತೆಂಗಿನಮರ ಬಿದ್ದ ಪರಿಣಾಮ ವಿದ್ಯುತ್ ಲೈನ್ ಗೆ ಹಾನಿಯಾಗಿದ್ದು ಕಂಬ ಮುರಿದಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಅಟೋ ದ ಎದುರು ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಪುತ್ತೂರು : 4ನೇ ವಾರಕ್ಕೆ ಕಾಲಿಟ್ಟ ಭಾವ ತೀರ ಯಾನ – ಮಾ.13 ಮತ್ತು 14 ರಂದು ಸಂಜೆ 7.15 ಕ್ಕೆ ಶೋ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು ನಾಲ್ಕನೇ ವಾರಕ್ಕೆ ಕಾಲಿರಿಸಿದೆ. ಮಾ. 13 ಮತ್ತು 14 ರಂದು ಸಂಜೆ 7.15 ಕ್ಕೆ  ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ...

ಮಾರ್ಚ್ 15 ರಿಂದ 18 ರವರೆಗೆ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವ

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15,16,17 ಹಾಗೂ 18 ರಂದು ವಿಜ್ರಂಭಣೆಯಿಂದ ನಡೆಯಲಿದೆ. ಮಾ.15 ರಂದು ಬೆ.10 ರಿಂದ ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾ.7.00 ರಿಂದ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಲಿದೆ....

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜ‌ರ್ ರೈಲಿಗೆ ತಿಂಗಳಾಂತ್ಯದೊಳಗೆ ಹಸಿರು ನಿಶಾನೆ: ಕ್ಯಾ. ಚೌಟ

ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜ‌ರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದ್ದು, ರೈಲ್ವೆ ಸಚಿವ ವಿ. ಸೋಮಣ್ಣ ಅವರ ದಿನಾಂಕ ನಿಗದಿಪಡಿಸಿಕೊಂಡು ಮಾರ್ಚ್ ಅಂತ್ಯದೊಳಗೆ ಈ ರೈಲು ಸೇವೆಗೆ ಚಾಲನೆ ನೀಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾ.12ರಂದು ರೈಲ್ವೆ ಖಾತೆ ರಾಜ್ಯ ಸಚಿವ...
Loading posts...

All posts loaded

No more posts

error: Content is protected !!