- Sunday
- August 16th, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಚಳ್ಳ ಗ್ರಾಮದ ದ ಕ ಜಿ ಪಂ ಸರಕಾರಿ ಹಿರಿಯಪ್ರಾಥಮಿಕ ಶಾಲೆಯ ರಂಗಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ರೂ. 1,50,000/ ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13-02-2025 ರಂದು ಅಗದ ತಂತ್ರ ಮತ್ತು ಸ್ವಸ್ಥ ವೃತ್ತ ವಿಭಾಗ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಭಾಗಿತ್ವದಲ್ಲಿ ದಿನಾಂಕ 04/02/2025 ರಂದು ನಡೆದ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪೋಸ್ಟರ್...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಇಂದು ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನ್ಯಾಚ್ಯುರಿಟ ಹೆಲ್ತ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕುಶಾಲನಗರ ಇದರ ಸಿ.ಇ.ಒ ಆದ ಶ್ರೀಮತಿ. ವೈಶಾಖ ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಾಗೂ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯಾಗಾರವನ್ನು...
ಅಜ್ಜಾವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿಂದು ವಿಶ್ವ ವಿಕಲಚೇತನ ದಿನಾಚರಣೆ ಮತ್ತು ವಿಕಲಚೇತನರ ಗ್ರಾಮಸಭೆ ನಡೆಯಿತು. ಸಭಾಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದೇವಕಿ ವಿಷ್ಣು ನಗರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿಶೇಷ ಚೇತನರ ತಾಲ್ಲೂಕು ಸಂಯೋಜಕರಾದ ಚಂದ್ರಶೇಖರ.ಬಿ ಯವರು ಮಾಹಿತಿ ನೀಡಿದರು. ಅಲ್ಲದೆ ಈ ಗ್ರಾಮ ಸಭೆಯಲ್ಲಿ ಆರೋಗ್ಯ ಮಾಹಿತಿಯನ್ನು ಶ್ರೀಮತಿ ಜಯಶ್ರೀ...
ಗುತ್ತಿಗಾರು ಪ್ರಾ.ಕೃ.ಸ.ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ಚುನಾವಣೆ ನಡೆಯಲಿದ್ದು 12 ನಿರ್ದೇಶಕ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಫೆ.13 ರಂದು ನಾಮಪತ್ರ ಸಲ್ಲಿಸಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಜಯಪ್ರಕಾಶ್ ಮೊಗ್ರ, ರವೀಂದ್ರ ಕಾನಾವು ಅಡ್ಡನಪಾರೆ, ನವೀನ್ ಬಾಳುಗೋಡು, ಪದ್ಮನಾಭ ಮೀನಾಜೆ, ಹಿಂದುಳಿದ...
ಹರಿಹರ ಪಳ್ಳತ್ತಡ್ಕ ಗ್ರಾಮದ ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಫೆ.11 ರಂದು ವಾರ್ಷಿಕ ನೇಮೋತ್ಸವ ನಡೆಯಿತು.ಬೆಳಿಗ್ಗೆ ಗಣಹೋಮ, ಭಂಡಾರ ಹೊರಡುವುದು, ಶಿವಪೂಜೆ, ಬ್ರಹ್ಮರಾಕ್ಷಸ ಪೂಜೆ, ಕಲಶಪೂಜೆ ಹಾಗೂ ಮದ್ಯಾಹ್ನ ಮಹಾಪೂಜೆಯ ನಂತರ ಅನ್ನಸಂತರ್ಪಣೆ ನಡೆಯಿತು.ಸಂಜೆ ದೀಪಾರಾಧನೆ, ದುರ್ಗಾಪೂಜೆ ಹಾಗೂ ರಾತ್ರಿ ಮಹಾತಂಬಿಲ ನಡೆದು ನಂತರ ವಿಘ್ನೇಶ್ ಉಬ್ರಾಳ ರವರ ಪ್ರಾಯೋಜಕತ್ವದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ...
ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ನೂತನ ಸದಸ್ಯರ ನೇಮಕ ಮಾಡಿ ಸರಕಾರ ಆದೇಶಿಸಿದೆ. ಈ ಸಮಿತಿಯ ಸದಸ್ಯರ ಸಭೆ ಫೆ. 12 ರಂದು ದೇವಸ್ಥಾನದ ಸಭಾಭವನದಲ್ಲಿ ನಡೆದು ನೂತನ ಅಧ್ಯಕ್ಷರ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಹರಿಪ್ರಕಾಶ್ ಅಡ್ಕಾರು ಅವರು ಅವಿರೋಧವಾಗಿ ಆಯ್ಕೆಯಾದರು. ವ್ಯವಸ್ಥಾಪನ ಸಮಿತಿಯ ನೂತನ ಸದಸ್ಯರುಗಳಾದ ಶ್ರೀ ಕ್ಷೇತ್ರದ ಪ್ರದಾನ...
ದೇವಚಳ್ಳ ಗ್ರಾಮದ ಕಂದ್ರಪ್ಪಾಡಿಯಲ್ಲಿ ಸಾಮಾಜಿಕ ಕಳಕಳಿಯತ್ತ ಯುವ ಮನಸ್ಸುಗಳ ಚಿತ್ತ ಎಂಬ ಪರಿಕಲ್ಪನೆಯೊಂದಿಗೆ 2021ರಲ್ಲಿ ಅಸ್ತಿತ್ವಕ್ಕೆ ಬಂದ ಸೌಹಾರ್ದ ಸ್ಪೋರ್ಟ್ಸ್ ಕ್ಲಬ್ (ರಿ) ಕಂದ್ರಪ್ಪಾಡಿ ಇದರ ಆಶ್ರಯದಲ್ಲಿ 4ನೇ ವರ್ಷದ 6 ತಂಡಗಳ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಫೆಬ್ರವರಿ 2 ರಂದು ಕಂದ್ರಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು...
ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಇಲಾಖೆ ವತಿಯಿಂದ ಜನ ಸಂಪರ್ಕ ಸಭೆಯನ್ನು ಫೆ. 12 ರಂದು ಆಯೋಜಿಸಯಿತು. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರಾದ ಎಂ ಎ ನಟರಾಜ್, ಹಾಗೂ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರುಗಳು ಭಾಗವಹಿಸಿದ್ದರು. ಸಾರ್ವಜನಿಕ ದೂರು ಸ್ವೀಕಾರ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ಸುಳ್ಯ ತಾಲೂಕು ವ್ಯಾಪ್ತಿಯ ಎಲ್ಲಾ ಸರಕಾರಿ...
Loading posts...
All posts loaded
No more posts
