- Sunday
- September 20th, 2026
ಕೊಲ್ಲಮೊಗ್ರು ಗ್ರಾಮದ ಶಿವಾಲ-ಪಡ್ಪು ಎಂಬಲ್ಲಿ ನಿರ್ಮಾಣವಾದ ಜಲಜೀವನ್ ಮಿಷನ್ ಯೋಜನೆಯು ಆ ಭಾಗದ ಜನರಿಗೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂಬ ಬಗ್ಗೆ ಇತ್ತಿಚೆಗೆ ನಡೆದ ಗ್ರಾಮಸಭೆಯಲ್ಲಿ ಚರ್ಚೆ ನಡೆದಿದ್ದು, ಇದರ ಮುಂದುವರಿದ ಭಾಗವಾಗಿ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ 28 ಮನೆಗಳಿಗೆ ನೀರು ಪೂರೈಕೆ ಮಾಡಲು ಗ್ರಾಮ ಪಂಚಾಯತ್ ಗೆ 7 ದಿನಗಳ...
ಐವರ್ನಾಡು ಗ್ರಾಮದ ಬಜಂತಡ್ಕ ಮಡ್ತಿಲ ದುಗ್ಗಪ್ಪ ಗೌಡರವರು ಆ.14 ರಂದು ನಿಧನರಾದರು. ಅವರಿಗೆ 76 ವರ್ಷ ಪ್ರಾಯವಾಗಿತ್ತು. ಮೃತರು ಪತ್ನಿ ಶ್ರೀಮತಿ ಲಕ್ಷ್ಮೀ, ಪುತ್ರ ನಿವೃತ್ತ ಯೋಧರಾದ ಗಣೇಶ ಬಜಂತಡ್ಕ,ಪ್ರವೀಣ ಬಜಂತಡ್ಕ,ಪುತ್ರಿ ಶ್ರೀಮತಿ ಅನಿತ ಸೊಸೆ, ಅಳಿಯ,ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.
ಆಲೆಟ್ಟಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ಎಸ್ ಡಿ ಎಂ ಕಾಲೇಜು ಉಜಿರೆ ಇಲ್ಲಿಯ ದ್ವಿತೀಯ ವರ್ಷದ ಬಿಕಾಂ ಪದವಿ ವ್ಯಾಸಂಗದಲ್ಲಿರುವ ಅನುಷಾ. ಬಿ ರವರು ಆ.6 ರಂದು ಕೇರಳದ ಕೊಲ್ಲo ನಲ್ಲಿ ನಡೆದ 19 ನೇ ಕೇರಳ ಸ್ಟೇಟ್ ಇಂಟರ್ ಡಿಸ್ಟಿಕ್ ಕ್ಲಬ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಹಾಮ್ಮರ್ ಥ್ರೋ ವಿಭಾಗದಲ್ಲಿ...
ಸುಳ್ಯ ತಾಲೂಕಿನದ್ಯಂತ ಗ್ಯಾಸ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು ಗ್ರಾಹಕರು ಪರದಾಡುವಂತಾಗಿದೆ. ಗ್ಯಾಸ್ ಪ್ಲಾಂಟ್ ನಿಂದ ಗ್ಯಾಸ್ ಸರಬರಾಜಿನ ವಿಷಯದಲ್ಲಿ ಗೊಂದಲ ಉಂಟಾಗಿ ಚಾಲಕರು ಪ್ರತಿಭಟನೆ ನಡೆಸುತ್ತಿದ್ದು ಕಳೆದ ನಾಲ್ಕು ದಿನಗಳಿಂದ ಗ್ಯಾಸ್ ಲಾರಿಗಳು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧೆಡೆ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯವಾಗಿದೆ. ಏಜೆನ್ಸಿಯವರ ಗೋಡೌನ್ ಗಳಲ್ಲಿ ಗ್ಯಾಸ್ ಸಿಲಿಂಡರ್ ಖಾಲಿಯಾಗಿದ್ದು ಗ್ರಾಹಕರು ಪರದಾಡುವಂತಾಗಿದೆ.
ದಿನಾಂಕ:14-08-2026 ಶುಕ್ರವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197*01,🐏ಮೇಷರಾಶಿ🐏*📃,ಇಂದು ನಿಮ್ಮ ರಾಶಿಯವರು ಕೆಲಸದಲ್ಲಿ ಪ್ರಭುದ್ಧತೆ ಮೆರೆಯುತ್ತಾರೆ. ಶಿಸ್ತು ಮತ್ತು ಸಂಯಮದಿಂದ ಜೀವನ ಕಟ್ಟಿಕೊಳ್ಳುವ ಪ್ರಯತ್ನ ಸಾಗಲಿ. ನಿಮ್ಮಲ್ಲಿನ ವಿಶೇಷ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುವುದು ನಿಶ್ಚಿತ.ಪ್ರೀತಿಯಲ್ಲಿ ಸಂತೋಷವಾಗಿರುವುದು ಹೇಗೆ ಎಂದು ತಿಳಿಯಿರಿ,ಗಮನಿಸಿ:-ಸ್ವಯಂಭರವಸೆಯನ್ನು ಅಭ್ಯಾಸಮಾಡಿಕೊಳ್ಳಿ,ಪರಿಹಾರ:-ಗಣಪತಿಗೆದೇವರಿಗೆ ಗರಿಕೆ ನೀಡಿ,*02,🐂ವೃಷಭರಾಶಿ🐂*📃,ನಿಮ್ಮಲ್ಲಿ ಇಂದು ಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ...
ಸುಬ್ರಹ್ಮಣ್ಯ ಆಗಸ್ಟ್ 13 : ಪಂಜ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗಕ್ಕೆ ಅದೇ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ಗುಲಾಬಿ.ಎ ಅವರು ಎಕ್ಸಿಕ್ಯೂಟಿವ್ ಟೇಬಲ್ ಅನ್ನು ಕೊಡುಗೆಯಾಗಿ ಬುಧವಾರ ನೀಡಿದರು. ಕೆ.ಪಿ.ಎಸ್. ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ.ಟಿ ಅವರು ಕೊಡುಗೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಪೂವಪ್ಪ ಗೌಡ ಕೋಲ್ಪೆ...
ದಕ್ಷಿಣ ಭಾರತದ ಅತ್ಯುನ್ನತು ಸಮನ್ವಯ ಶಿಕ್ಷಣ ಸಂಸ್ಥೆ ಜಾಮಿಯ ಸಅದಿಯ್ಯ ಇದರ ಶರೀಅತ್ ಕಾಲೇಜು ಹಳೆ ವಿದ್ಯಾರ್ಥಿ ಸಂಘಟನೆ ಎಂ.ಯು.ಎಸ್. ಸುಳ್ಯ ಝೋನ್ ಸಮಿತಿ ವತಿಯಿಂದ ಸಂಪೂರ್ಣ ಸಅದಿ ಸಂಗಮ ಹಾಗು ಮಹಾತ್ಮಾರ ಅನುಸ್ಮರಣಾ ಕಾರ್ಯಕ್ರಮವು ಆಗಸ್ಟ್ 13 ಗುರುವಾರದಂದು, ಸಂಘದ ಅಧ್ಯಕ್ಷರಾದ ಸಯ್ಯಿದ್ ತ್ವಾಹಿರ್ ಸಅದಿ ಯುವರ ಅಧ್ಯಕ್ಷತೆಯಲ್ಲಿ ಸುಳ್ಯ ಅನ್ಸಾರ್ ಭವನದಲ್ಲಿ ನಡೆಯಿತು....
ಐತಿಹಾಸಿಕ ಸ್ಥಳವಾದ ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆಯು ಆ.10 ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಪಿ.ಡಿ.ಓ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅರೆಭಾಷೆ ಅಕಾಡೆಮಿ ಅಧ್ಯಕ್ಷರು ಸದಾನಂದ ಮಾವಜಿ, ಅಮರ ಸುಳ್ಯ ಸಮರ 1837 ಸಮಿತಿ ಅಧ್ಯಕ್ಷ ಚಂದ್ರ ಕೋಲ್ಚಾರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆ.12ರಂದು ಕರ್ನಾಟಕ ಅರಣ್ಯ ಇಲಾಖೆ ಸುಬ್ರಹ್ಮಣ್ಯ ಉಪವಿಭಾಗ, ಮಂಗಳೂರು ವಿಭಾಗ ವತಿಯಿಂದ ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ವಿಶ್ವ ಆನೆ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷರಾದ ಕು. ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ, ಆನೆಗಳಿಂದ ತಾಲೂಕಿನಲ್ಲಿ ಉಂಟಾಗುವ ಸಮಸ್ಯೆಗಳನ್ನು ಹಾಗೂ ಇದಕ್ಕೆ ತಕ್ಕ ಪರಿಹಾರವಾಗಬೇಕು ಎಂದು ತಿಳಿಸುತ್ತಾ ಅಧ್ಯಕ್ಷೀಯ...
ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಆಟಿದ ಸವಿ - 2026ಕಾರ್ಯಕ್ರಮ ಅದ್ದೂರಿಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಮಿಥಾಲಿ ಪಿ.ರೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಆರ್ಕಿರ್ಟೆಕ್ಟ್ ಅಕ್ಷಯ್ ಕೆ.ಸಿ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ....
Loading posts...
All posts loaded
No more posts
