- Tuesday
- August 18th, 2026
ಬೆಳ್ಳಾರೆ – ದರ್ಖಾಸ್ತು ರಸ್ತೆ ಅಗಲೀಕರಣ ಮತ್ತು ಡಾಮರೀಕರಣಕ್ಕೆ ಗುದ್ದಲಿ ಪೂಜೆಯು ಡಿ.09 ರಂದು ಬೆಳ್ಳಾರೆಯಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯರವರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಆದಷ್ಟು ಬೇಗ ರಸ್ತೆ ಕಾಮಗಾರಿ ಮುಗಿಯುವಂತೆ ಮತ್ತು ರಸ್ತೆ ಬದಿಯ ಮನೆಯವರು ರಸ್ತೆ ಅಗಲೀಕರಣ ಸಂದರ್ಭದಲ್ಲಿ ಸಹಕಾರ ನೀಡಬೇಕು ಎಂದು ಹೇಳಿದರು. ಬೆಂಗಳೂರು ರಾಜ್ಯ ಹೆದ್ದಾರಿ ಅಭಿವೃದ್ಧಿ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ ವಾರ್ಷಿಕ ಕ್ರೀಡಾಕೂಟ 'ಅಖಾಡ -2024' ದಿನಾಂಕ 6.12.2024 ರಿಂದ 10.12.2024 ರ ವರೆಗೆ ನಡೆಯಲ್ಲಿದ್ದು, ಕ್ರೀಡಾಕೂಟದ ಉದ್ಘಾಟನೆಯನ್ನು ದಿನಾಂಕ 09.12.2014ರಂದು ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ಕ್ರೀಡಾಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ,...
ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಆದಿತ್ಯವಾರದಂದು ಬೆಳಿಗ್ಗೆ ಪುಣ್ಯ ನದಿ ಕುಮಾರಧಾರದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ನಡೆಯಿತು. ಶ್ರೀ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಅವಭೃತೋತ್ಸವದ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು. ಸಹಸ್ರಾರು ಭಕ್ತಾದಿಗಳು...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ ಚಂಪಾಷಷ್ಠಿ ಮಹೋತ್ಸವವು ನಡೆಯುತ್ತಿದ್ದು, ಈ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಹಲವಾರು ಸಂಘಸಂಸ್ಥೆಗಳು ಸೇರಿದಂತೆ ಸಾರ್ವಜನಿಕರು ವಿವಿಧ ರೀತಿಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಡಿ.07 ರಂದು ಬಾಳುಗೋಡಿನ ವಿಶ್ವ ಯುವಕ ಮಂಡಲದ ಸುಮಾರು 53 ಸದಸ್ಯರು ಶ್ರೀ ದೇವರ ಅನ್ನ ಪ್ರಸಾದ ವಿತರಣೆಯ...
ಅಡ್ಪಂಗಾಯದ ಮಂದಿರದಲ್ಲಿ ಅಯ್ಯಪ್ಪ ಸ್ವಾಮಿಯ ಭಕ್ತಿ ಗೀತೆ ಬಿಡುಗಡೆ ಇಂದು ನಡೆಯಿತು. ಹಿರಿಯ ಗುರುಸ್ವಾಮಿಗಳಾದ ಶಿವಪ್ರಕಾಶ್ ಗುರುಸ್ವಾಮಿ ಅಡ್ಪಂಗಾಯ ಇವರು ಅಯ್ಯಪ್ಪ ಸ್ವಾಮಿಯ ಭಕ್ತಿಗೀತೆ ಬಿಡುಗಡೆಗೊಳಿಸಿದರು.ಪೆರುಮಾಳ್ ಲಕ್ಷ್ಮಣ ಇವರು ಸಾಹಿತ್ಯ ಬರೆದು ಬಾಲಚಂದ್ರ ಬಿ ಕಾಸರಗೋಡು ಹಾಗೂ ಪುಷ್ಪಾವತಿ ಡಿ ಇವರು ಹಾಡಿದನೀನು ಹರಸದೆ ನನಗೆ ಬಾಳು ಎಲ್ಲಿದೆ ಹಾಗೂ ಸ್ವಾಮಿಯ ನೋಡಲು ಚಂದ ಎಂಬ...
ಶ್ರೀ ತಂಬುರಾಟಿ ಭಗವತಿ ಪ್ರಾದೇಶಿಕ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆಯು ದಿನಾಂಕ 08 ರಂದು ಸಮಿತಿಯ ಅಧ್ಯಕ್ಷ ರಾದ ಶ್ರೀಜಿತ್ ಅರಂತೋಡು ರವರ ಅಧ್ಯಕ್ಷತೆ ಯಲ್ಲಿ ರಬ್ಬರ್ ಉತ್ಪಾದಕರ ಸಂಘ ದ ಸಭಾಭವನ ಅರಂತೋಡಿನಲ್ಲಿ ನಡೆಯಿತು ಹಿರಿಯ ರಾದ ಜನಾರ್ಧನ. ಎ. ಎಂ, ಗೋವಿಂದ ಎ. ಕೆ ಮತ್ತು...
ಗೂನಡ್ಕ : ಬೈಕ್ ಸ್ಕಿಡ್ ಆಗಿ ಸವಾರನೋರ್ವ ಗಾಯಗೊಂಡ ಘಟನೆ ಇದೀಗ ಗೂನಡ್ಕದಲ್ಲಿ ಸಂಭವಿಸಿದೆ. ಗೂನಡ್ಕ ಶಾಲೆಯ ಎದುರುಗಡೆ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಗಾಯಗೊಂಡಿದ್ದು, ಆತನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಸುಳ್ಯದ ಜಾಲ್ಸೂರಿನಲ್ಲಿ ಕರ್ತವ್ಯ ನಿರತ ಫಾರೆಸ್ಟ್ ವಾಚರ್ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಡಿ.7ರಂದು ವರದಿಯಾಗಿದೆ. ಜಾಲ್ಸೂರಿನ ಗೇಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚರ್ ಸದಾಶಿವ (50) ಎಂಬವರೇ ಮೃತಪಟ್ಟ ದುರ್ದೈವಿ. ಅಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋದರೂ ಫಲಕಾರಿಯಾಗಲಿಲ್ಲವೆನ್ನಲಾಗಿದೆ..
ಯುವಕ ಮಂಡಲ (ರಿ) ಕನಕಮಜಲು, ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ (ಕಾವಾ) ಮೈಸೂರು ಆಶ್ರಯದಲ್ಲಿ ನಡೆದ ಸು-ಯೋಗ 2024 ನಿಸರ್ಗ ಚಿತ್ರಕಲಾ ಶಿಬಿರದ ಸಮಾರೋಪ ಸಮಾರಂಭವು ಡಿ. 08 ರಂದು ಶ್ರೀ ಬಾಲ ನಿಲಯ ಮೂರ್ಜೆ ಕನಕಮಜಲು ನಡೆಯಿತು.ಸಮಾರೋಪ ಸಮಾರಂಭದ ಸಭಾಧ್ಯಕ್ಷತೆಯನ್ನು ಕು| ಭಾಗೀರಥಿ ಮುರುಳ್ಯ ಮಾನ್ಯ ಶಾಸಕರು ಸುಳ್ಯ ವಿಧಾನಸಭಾ ಕ್ಷೇತ್ರ ವಹಿಸಿದರು. ಮುಖ್ಯ ಅಥಿತಿಗಳಾಗಿ...
ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪದವಿ ವಿಭಾಗದ ಖೋಖೋ ಪಂದ್ಯಾಟದಲ್ಲಿ ಕು. ಅನ್ವಿತಾ ಬೊಮ್ಮೆಟ್ಟಿ ಆಯ್ಕೆಯಾಗಿ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿರುತ್ತಾರೆ. ಮಂಗಳೂರಿನ ಹಂಪನಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಈಕೆ ಕಲ್ಮಡ್ಕ ಗ್ರಾಮದ ಬಾಲಕೃಷ್ಣ ನಾಯ್ಕ ಬೊಮ್ಮೆಟ್ಟಿ ಹಾಗೂ ಮೀನಾಕ್ಷಿ ದಂಪತಿಗಳ ಪುತ್ರಿ.
Loading posts...
All posts loaded
No more posts
