- Sunday
- September 20th, 2026
“ಮಕ್ಕಳಿಗೆ ಅಂಕಗಳಿಗಿಂತ ಬದುಕುವ ವಿವೇಕ ಹಾಗೂ ಆತ್ಮವಿಶ್ವಾಸ ಮುಖ್ಯವಾಗಿದ್ದು, ಪೋಷಕರು ಮಕ್ಕಳನ್ನು ಕೇವಲ ಪರೀಕ್ಷೆಗೆ ಸಿದ್ಧಪಡಿಸದೆ ಜೀವನಕ್ಕೆ ಸಿದ್ಧಪಡಿಸಬೇಕು” ಎಂದು ತರಬೇತುದಾರ ಲೋಕೇಶ್ ಪೀರನಮನೆ ಹೇಳಿದರು. ಬಂಗ್ಲೆಗುಡ್ಡೆ ಸ.ಹಿ.ಪ್ರಾ ಶಾಲಾ ವಠಾರದಲ್ಲಿ ಆ.09ರಂದು ಕೊಲ್ಲಮೊಗ್ರು ಕೆ.ವಿ.ಜಿ ಪ್ರೌಢಶಾಲೆಯ 9ನೇ ತರಗತಿ ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಮತ್ತು ಪೋಷಕರಿಗಾಗಿ ಆಯೋಜಿಸಲಾಗಿದ್ದ “ಅನುಬಂಧ” ಎಂಬ ವಿಶೇಷ ಸಮನ್ವಯ...
ಪೆರುವಾಜೆ: ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕಿನ 21 ಗ್ರಾಮಗಳ ಮಾಗಣೆ ಕ್ಷೇತ್ರವಾಗಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನವು ಜಾತ್ರೆ ಹಾಗೂ ನವರಾತ್ರಿ ಆಚರಣೆಗಳ ಜೊತೆಗೆ ಆಷಾಢ ಮಾಸದಲ್ಲಿಯೂ ವಿಶಿಷ್ಟ ಧಾರ್ಮಿಕ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬಂದಿದೆ.ಪ್ರತಿವರ್ಷ ಆಷಾಢ ಮಾಸದಲ್ಲಿ 48 ದಿನಗಳ ಕಾಲ ನಿರಂತರವಾಗಿ ಶ್ರೀ ಗಣಪತಿ ಹೋಮ ಹಾಗೂ ಶ್ರೀ ದುರ್ಗಾಪೂಜೆ ನೆರವೇರಿಸುವ ಸಂಪ್ರದಾಯ...
ಸುಬ್ರಹ್ಮಣ್ಯ ಆಗಸ್ಟ್ 10 : ಪಶ್ಚಿಮ ಘಟ್ಟದ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದ್ದು ಸಣ್ಣಪುಟ್ಟ ಹಳ್ಳಗಳು ಕೂಡ ತುಂಬಿ ಹರಿಯುತ್ತಿದೆ. ಬಿಳಿನೆಲೆ-ಕೈಕಂಬ ಬಳಿಯ ಚೇರು ಎಂಬಲ್ಲಿ ಧಾರಾಕಾರ ಮಳೆಯಿಂದಾಗಿ ಹಳ್ಳದಲ್ಲಿ ಒಮ್ಮೆಗೆ ನೀರು ಅಧಿಕವಾಗಿ ಬಂದು ಸುಬ್ರಹ್ಮಣ್ಯ-ಗುಂಡ್ಯ-ಧರ್ಮಸ್ಥ ಹೆದ್ದಾರಿಯನ್ನೇ ಬ್ಲಾಕ್ ಮಾಡಿ ಸಂಚಾರ ಅಸ್ತವ್ಯಸ್ತಗೊಳಿಸಿದೆ. ಇದರಿಂದಾಗಿ ವಾಹನಗಳು...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ದಿನಂಪ್ರತಿ ಆಗಮಿಸುವ ಸಾವಿರಾರು ಭಕ್ತಾದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸ್ಥಳೀಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನು ಆಶ್ರಯಿಸುತ್ತಿದ್ದಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬಸ್ ನಿಲ್ದಾಣದ ಆವರಣದಲ್ಲಿ ಸಂಚರಿಸುವುದೇ ಸಾರ್ವಜನಿಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬಸ್ ನಿಲ್ದಾಣದ ಇಕ್ಕೆಲಗಳಲ್ಲಿ, ಎದುರುಗಡೆಯ ಮಾರ್ಗದ ಬದಿಗಳಲ್ಲಿ...
ಪುತ್ತೂರು: ಸೇನಾ ನೇಮಕಾತಿಗಳು ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು ಅಗ್ನಿಪಥ್, ಪೊಲೀಸ್ ಕಾನ್ಸ್ಟೇಬಲ್ (PC) ಮತ್ತು ಅರಣ್ಯ ಇಲಾಖೆಯ ವಾಚರ್ ಹುದ್ದೆಗಳ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉಚಿತ ದೈಹಿಕ ಸಾಮರ್ಥ್ಯ/ಫಿಟ್ನೆಸ್ ತರಬೇತಿಯನ್ನು ಪ್ರಾರಂಭಿಸಿದೆ. ನೇಮಕಾತಿ ಪ್ರಕ್ರಿಯೆಯ ದೈಹಿಕ ಪರೀಕ್ಷೆಗೆ ಪೂರ್ವ ತಯಾರಿ ನಡೆಸುತ್ತಿರುವವರು ಹಾಗೂ ಭವಿಷ್ಯದ ಸಶಸ್ತ್ರ...
ಸುಳ್ಯ ಮೆಸ್ಕಾಂ ಉಪ ವಿಭಾಗ ಕಛೇರಿಯು ಸೋರುತ್ತಿದ್ದು ಗ್ರಾಹಕರು ಜಾರಿ ಬಿದ್ದು ತೊಂದರೆಯಾಗುವ ಮೊದಲು ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.ಬಿಲ್ ಪಾವತಿ ಹಾಗೂ ಮತ್ತಿತರ ಕೆಲಸಗಳಿಗೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕಿದೆ.
ಸುಳ್ಯ ಚೆನ್ನಕೇಶವ ದೇವಸ್ಥಾನದ ಎದುರು, ಶ್ರೀ ದೇವಿ ಕಾಂಪ್ಲೆಕ್ಸ್ ಬಳಿ ಮ್ಯಾನ್ ಹೋಲ್ ಕುಸಿದು ಬೀಳುವ ಸ್ಥಿತಿಯಲ್ಲಿದ್ದು ಅಪಾಯ ಆಹ್ವಾನಿಸುತ್ತಿದೆ. ದ್ವಿಚಕ್ರ ವಾಹನ ಸವಾರರು ಜಾಗ್ರತೆಯಿಂದ ಸಂಚರಿಸಬೇಕಿದೆ. ಸಂಬಂಧಪಟ್ಟವರು ತುರ್ತು ಕ್ರಮ ಕೈಗೊಂಡು ಸಂಭಾವ್ಯ ಅಪಾಯ ತಪ್ಪಿಸಬೇಕಿದೆ.
“ತೋಟಗಾರಿಕಾ ಬೆಳೆಗಳನ್ನು ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ನೋಂದಣಿಯ ಅಂತಿಮ ದಿನಾಂಕವನ್ನು ಆ.17 ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಜಿಲ್ಲಾ ತೋಟಗಾರಿಕಾ ಜಂಟಿ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಹವಾಮಾನ ಆಧಾರಿತ ಬೆಳೆವಿಮೆ...
ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಗಳೂರು ಇದರ ಹಾಸನ ಜಿಲ್ಲಾ ಶಾಖೆಯ ವತಿಯಿಂದ ಡಾ| ನಿಶ್ಚಿತಾ ಕಿಶೋರ್ ಅವರಿಗೆ ಆ.08 ರಂದು “ಡಾ| ಬಿ.ಸಿ ರಾಯ್ ವೈದ್ಯ ಸೇವಾ ಸ್ಮಾರಕ ಗೌರವ ಪ್ರಶಸ್ತಿ” ಯನ್ನು ನೀಡಿ ಗೌರವಿಸಲಾಯಿತು. ಸಕಲೇಶಪುರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ physician ಆಗಿರುವ ಇವರು ಕಳೆದ 18 ವರ್ಷದಿಂದ ಸರ್ಕಾರಿ ವೈದ್ಯರಾಗಿ...
Loading posts...
All posts loaded
No more posts
