- Wednesday
- August 19th, 2026
ಕಲ್ಲುಗುಂಡಿಯ ಸಂಪಾಜೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದವರಲ್ಲಿ ಎರಡನೇ ಆರೋಪಿಗೆ ನ್ಯಾಯಾಲಯದ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದುಬಂದಿದೆ.2020 ರ ಅಕ್ಟೋಬರ್ 8ರಂದು ಕಲ್ಲುಗುಂಡಿಯ ಸಂಪತ್ ಎಂಬವರನ್ನು ಸುಳ್ಯದ ಶಾಂತಿನಗರ ಅವರ ಬಾಡಿಗೆ ಮನೆಯ ಸಮೀಪ 8 ಮಂದಿಯ ತಂಡ ಅಟ್ಟಾಡಿಸಿಕೊಂಡು ಹೋಗಿ ಕೊಲೆ ಮಾಡಿತ್ತು. ಬಳಿಕ ಪೋಲೀಸರು ಎಲ್ಲ 8 ಮಂದಿ ಆರೋಪಿಗಳನ್ನು...
ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ನ.13ರಂದು ಬೆಳಗ್ಗಿನ ಜಾವ ಸಂಭವಿಸಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿ ಹೊಡೆದಿದ್ದು, ಚಾಲಕ ಸೇರಿದಂತೆ ಮಂಗಳೂರು ಮೂಲದ ನಾಲ್ವರು ವ್ಯಕ್ತಿಗಳು ಗಾಯಗೊಂಡರೆನ್ನಲಾಗಿದೆ. ಸಂಪಾಜೆಯ ತಾಜುದ್ದೀನ್...
ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ರೈತ ಪರ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ಹರಿಪ್ರಸಾದ್ ಅಡ್ತಲೆ...
ಅರಂತೋಡು ಎಲಿಮಲೆ ರಸ್ತೆ ಅಭಿವೃದ್ಧಿಯ ಕೂಗು ಮತ್ತೆ ಕೇಳಿಬಂದಿದ್ದು, ಜನಪ್ರತಿನಿಧಿಗಳ ಭರವಸೆ ಈಡೇರದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಜನ ತೀರ್ಮಾನಿಸಿದ್ದು ಈ ಬಗ್ಗೆ ಶಾಸಕರಿಗೆ ನಾಗರಿಕ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಮನವಿ ಮಾಡಿ ಬೇಡಿಕೆ ಈಡೇರಿಸಲು ಗಡುವು ನೀಡಿದ್ದಾರೆ. ಪ್ರಸಿದ್ಧ ತೀರ್ಥ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಸಂಪರ್ಕಿಸಲು ಅರಂತೋಡು...
ಅರಂತೋಡು ಎಲಿಮಲೆ ರಸ್ತೆ ಅಭಿವೃದ್ಧಿಯ ಕೂಗು ಮತ್ತೆ ಕೇಳಿಬಂದಿದ್ದು, ಜನಪ್ರತಿನಿಧಿಗಳ ಭರವಸೆ ಈಡೇರದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಜನ ತೀರ್ಮಾನಿಸಿದ್ದು ಈ ಬಗ್ಗೆ ಶಾಸಕರಿಗೆ ನಾಗರಿಕ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಮನವಿ ಮಾಡಿ ಬೇಡಿಕೆ ಈಡೇರಿಸಲು ಗಡುವು ನೀಡಿದ್ದಾರೆ. ಪ್ರಸಿದ್ಧ ತೀರ್ಥ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಸಂಪರ್ಕಿಸಲು ಅರಂತೋಡು...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದಿಂದ , ಅಂತಿಮ ವಾಣಿಜ್ಯ ಪದವಿ ಮತ್ತು ಉದ್ಯಮ ಆಡಳಿತ ಪದವಿ ವಿದ್ಯಾರ್ಥಿಗಳು ಆಯೋಜಿಸಿದ ಅಂತರ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪ್ರೇರಣ ಎಂಬ ಪೆಸ್ಟ್ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ಕಾಲೇಜಿನ ಪ್ರಾಂಶುಪಾಲ ಡಾ ದಿನೇಶ್ ಪಿ ಟಿ...
ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ದಿವಾಕರ ಮುಂಡಾಜೆ ರವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು, ನ.12 ರಂದು ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಈ ಹಿಂದೆ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು ಇತ್ತೀಚೆಗೆ ಅಗಲಿದ ದಿ. ದಿವಾಕರ ಮುಂಡಾಜೆ ರವರ ಸಹೋದರ ಪೃಥ್ವಿಚಂದ್ರ ಮುಂಡಾಜೆ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ...
2024-25ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಮಾಜಿ ನಗರ ಪಂಚಾಯತ್ ಸದಸ್ಯ ಸಾಮಾಜಿಕ ಮುಂದಾಳು ಕೆ ಗೋಕುಲ್ ದಾಸ್ ರವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗೌರವಿಸಲಾಯಿತು.ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್, ಕೆಪಿಸಿಸಿ ಮಾಜಿ...
ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್ಗಳ ಬಿಗ್ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಯಶಸ್ವಿಯಾಗಿ ಐದನೇ ವಾರದ ಡ್ರಾ ನಡೆದಿದ್ದು,ಪ್ರಥಮ ಬಹುಮಾನವನ್ನು ವೀಕ್ಷಿತ, ಉಪ್ಪಿನಂಗಡಿ, ದ್ವಿತೀಯ ಹಸೀನಾ ಚಿಕ್ಕಮಂಗಳೂರು, ತೃತೀಯ ಸೋಮನಾಥ, ಕಲ್ಲಡ್ಕ, ಆಕರ್ಷಕ ಬಹುಮಾನವನ್ನು ಅನಘಾ ಕಾಮತ್ ಪುತ್ತೂರು,...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಇಂದು ಭೇಟಿ ನೀಡಿದರು. ಈ ಸಂದರ್ಭ ದೇವಸ್ಥಾನ ವತಿಯಿಂದ ದೇವಸ್ಥಾನದ ಆನೆ ಯಶಸ್ವಿನಿ ಇದ್ದು ಬ್ಯಾಂಡ್ ವಾಲಗದೊಂದಿಗೆ ಸ್ವಾಗತಿಸಲಾಯಿತು. ಕಾಶಿಕಟ್ಟೆಯಿಂದ ಮೆರವಣಿಗೆಯಲ್ಲಿ ಕರೆ ತರಲಾಯಿತು. ರಾಜಗೋಪುರ ಬಳಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸ್ವಾಗತಿಸಿದರು. ಶ್ರೀಗಳು ದೇವಾಲಯದಲ್ಲಿ...
Loading posts...
All posts loaded
No more posts
