ಸುಳ್ಯ: ಆಂಬುಲೆನ್ಸ್ ಚಾಲಕಮಾಲಕ ಸಂಘದ ವತಿಯಿಂದ ಚೊಕ್ಕಾಡಿ ಪ್ರೌಢ ಶಾಲೆಗೆ ಅಗತ್ಯ ವೈದ್ಯಕೀಯ ಸಾಮಗ್ರಿಗಳ ಕೊಡುಗೆ

ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ-ಮಾಲಕರ ಸಂಘದ ವತಿಯಿಂದ ಸಮಾಜಮುಖಿ ಸೇವೆಯ ಅಂಗವಾಗಿ ಚೊಕ್ಕಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಿಸಲಾದ ಮೆಡಿಕಲ್ ರೂಮ್‌ಗೆ ಅಗತ್ಯವಿರುವ ಬೆಡ್, ಬೆಡ್ ಶೀಟ್ ಹಾಗೂ ದಿಂಬುಗಳನ್ನು ಉಚಿತವಾಗಿ ಕೊಡುಗೆಯಾಗಿ ನೀಡಲಾಯಿತು.ಶಾಲಾ ವಿದ್ಯಾರ್ಥಿಗಳ ತುರ್ತು ಆರೋಗ್ಯ ಸೇವೆಗೆ ಅನುಕೂಲವಾಗುವ ಉದ್ದೇಶದಿಂದ ಈ ಅಗತ್ಯ ಸಾಮಗ್ರಿಗಳನ್ನು ಸಂಘದ ವತಿಯಿಂದ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ...

ಮಾಧವ ಪೆರುಮುಂಡ ನಿಧನ

ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಪೆರುಮುಂಡ ಪಿ. ಯಂ ಮಾಧವರವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು. 29 ರಂದು ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಮೋಹನಾಂಗಿ,ಪುತ್ರ ಯತೀಶ, ಪುತ್ರಿಯರಾದ ಜಯಕುಮಾರಿ, ಲತಾಮಣಿ, ಉಷಾ, ಅಳಿಯಂದಿರು, ಮೊಮ್ಮಕ್ಕಳು, ಸಹೋದರ, ಸಹೋದರಿಯರನ್ನು, ಕುಟುಂಬಸ್ಥರನ್ನು ಅಗಲಿದ್ದಾರೆ.
Ad Widget

ಆ 4-ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್  ಸಂಯುಕ್ತ ಖಾಝಿ ಅಸ್ಸಯ್ಯಿದ್ ಜಿಫ್ರಿ ಮುತ್ತುಕೋಯ ತಂಙಲ್ ಖಾಝಿ ಸ್ವೀಕಾರ ಕಾರ್ಯಕ್ರಮ

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಸಂಯುಕ್ತ  ಖಾಝಿಯಾಗಿ ಸ್ವೀಕರಿಸಲಾಗಿರುವ ಬಹು-ಸಯ್ಯಿದುಲ್ ಉಲಮಾ ಅಸ್ಸಯ್ಯದ್ ಜಿಫ್ರಿ ಮುತ್ತುಕೋಯ ತಂಙಲ್ ರವರ ಖಾಝಿ ಸ್ವೀಕಾರ  ಕಾರ್ಯಕ್ರಮವು ಆ. 4ರಂದು ಸಂಜೆ 4 ಘಂಟೆಗೆ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ಜರುಗಲಿದ್ದು, ಈ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಬಯಂಬಾಡಿ ಅಧ್ಯಕ್ಷತೆ...

ಗುತ್ತಿಗಾರು: ಸ. ಪ. ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಮುಂಡೋಡಿ ಗದ್ದೆಯಲ್ಲಿ ಭತ್ತದ ನಾಟಿ

ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ಇದರ ಆಶ್ರಯದಲ್ಲಿ ದಿ| ಪುರುಷೋತ್ತಮ ಮುಂಡೋಡಿ ಇವರ ಗದ್ದೆಯಲ್ಲಿ ಭತ್ತದ ನಾಟಿ ಹಾಗೂ ಪ್ರತೀಕ್ಷೆಕೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅನಂತೇಶ್ವರಿ ಮುಂಡೋಡಿ ಉದ್ಘಾಟಿಸಿದರು. ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ವಿದ್ಯಾರ್ಥಿಗಳು ನಾಟಿ ಕಾರ್ಯ ನಡೆಸಿಕೊಟ್ಟರು. ಸ್ಕೌಟ್...

ವನಜ-ಸುಜನಾ ರಂಗಮನೆ ಪ್ರಶಸ್ತಿಗೆ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿ ಆಯ್ಕೆ

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ಆಶ್ರಯದಲ್ಲಿ, ರಂಗ ನಿರ್ದೇಶಕ  ಜೀವನ್ ರಾಂ ಸುಳ್ಯ ಇವರ ಮಾತಾಪಿತೃಗಳ ನೆನಪಿನಲ್ಲಿ ಕೊಡ ಮಾಡುವ 2027ನೇ ಸಾಲಿನ ವನಜ-ಸುಜನಾ ರಂಗಮನೆ ಪ್ರಶಸ್ತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಯಕ್ಷಗಾನ ಮೇಳದ ಪ್ರಸಿದ್ಧ ಕಲಾವಿದರಾದ ಉಬರಡ್ಕ ಉಮೇಶ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ.ಮೂಲತಃ ಸುಳ್ಯ ತಾಲೂಕಿನ  ಉಬರಡ್ಕ ಮಿತ್ತೂರು ಗ್ರಾಮದ...

ಕೆವಿಜಿ ಮೆಡಿಕಲ್ ಕಾಲೇಜಿನ ಬೆಳ್ಳಿ ಹಬ್ಬದ ಅಂಗವಾಗಿ ‘ಆರೋಗ್ಯಕರ ಪಾದಕ್ಕಾಗಿ ಕಾಲು ನಡಿಗೆ’ ಜಾಥಾ; ಆಗಸ್ಟ್ 7ರಂದು ಡಯಾಬಿಟಿಕ್ ಫುಟ್ ಕ್ಯಾಂಪ್ | ಕಾರ್ಯಕ್ರಮದ ಮಾಹಿತಿ ನೀಡಿದ ಡಾ| ಕೆ.ವಿ‌. ಚಿದಾನಂದ

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ತನ್ನ ಬೆಳ್ಳಿ ಹಬ್ಬವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ವತಿಯಿಂದ "ಆರೋಗ್ಯಕರ ಪಾದಕ್ಕಾಗಿ ಕಾಲು ನಡಿಗೆ" ಎಂಬ ವಿಶೇಷ ಜಾಥಾ ಕಾರ್ಯಕ್ರಮವನ್ನು ಆ. 7ರಂದು ಬೆಳಿಗ್ಗೆ 8 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ| ಕೆ.ವಿ....

ಕನಕಮಜಲು : ಸ್ವಚ್ಛತಾ ಕಾರ್ಯಕ್ರಮ

ಕನಕಮಜಲು : ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಆಶ್ರಯದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ ಜುಲೈ 26 ಆದಿತ್ಯವಾರದಂದು ನಡೆಯಿತು. ಕನಕಮಜಲು ನೆಡಿಲು ಹಾದು ಹೋಗುವ ರಸ್ತೆ ಬದಿಯ ಕಳೆ ಗಿಡಗಳನ್ನು ತೆರವುಗೊಳಿಸಿ ಸ್ವಚ್ಛತೆಯನ್ನು ನಡೆಸಲಾಯಿತು. ಎಲ್ಲರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದಿರುತ್ತದೆ. ಈ ಸಂದರ್ಭದಲ್ಲಿ ಯುವಕ ಮಂಡಲ ಅಧ್ಯಕ್ಷ ಅಶ್ವಥ್ ಅಡ್ಕಾರ್,...

ಜು 29,30,31 ಬೆಳ್ಳಾರೆಯ ತಂಬಿನಮಕ್ಕಿಯಲ್ಲಿ ಸಾದಾತ್ ಆಂಡ್ ನೇರ್ಚೆ-2026

ಬೆಳ್ಳಾರೆ ಗ್ರಾಮದ ತಂಬಿನಮಕ್ಕಿಯ ದಾರುಲ್ ಹುದಾ ವಿದ್ಯಾಸಂಸ್ಥೆಯ ಕ್ಯಾಂಪಸಿನಲ್ಲಿ ಸಾದಾತ್ ಆಂಡ್ ನೇರ್ಚೆಯು ಜು 29,30,31 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜು 29 ರಂದು ಅಸ್ವರ್ ನಮಾಝಿನ ಬಳಿಕ ಸಯ್ಯಿದ್ ಮುಸ್ತಫಾ ಪೂಕೋಯ ತಂಙಲ್ ಮಂಬಾಡ್ ನೇತೃತ್ವದಲ್ಲಿ ಬೆಳ್ಳಾರೆ ಮಖಾಂ ಝಿಯಾರತ್ ನಡೆಯಲಿದೆ.ಸಂಜೆ 5 ಘಂಟೆಗೆ ಉಮರಾ ಮುಖಂಡ ಲತ್ವೀಫ್ ಹಾಜಿ ಹರ್ಲಡ್ಕ ಧ್ವಜಾರೋಹಣವನ್ನು...

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ಪದಗ್ರಹಣ ಸಮಾರಂಭ, ಸಾಧಕರಿಗೆ ಸನ್ಮಾನ ಮತ್ತು ಕೊಡುಗೆಗಳ ಹಸ್ತಾಂತರ

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ನೂತನ ಅಧ್ಯಕ್ಷ ಆರೀಫ್ ಬಿ.ಎಂ. ನೇತೃತ್ವದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು. 25ರಂದು ಬೆಳ್ಳಾರೆ ಅಮ್ಮು ರೈ ಕಾಂಪ್ಲೆಕ್ಸಿನ ದೇವಿ ಹೈಟ್ಸಿನ ಅನುಗ್ರಹ ಸಭಾಂಗಣದಲ್ಲಿ ಜರುಗಿತು. ಪಾಸ್ಟ್ ಡಿಸ್ಟ್ರಿಖ್ಟ್ ಗವರ್ನರ್ ರೋ. ಎ. ಆರ್. ರವೀಂದ್ರ ಭಟ್ ಪದಗ್ರಹಣ ನಡೆಸಿಕೊಟ್ಟರು. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಶುಶ್ರೂಷಕ ಅಧೀಕ್ಷಕರಾಗಿ ಸೇವೆ...

ಇಂದಿನ(ಜುಲೈ 28) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ರಬ್ಬರ್ ಹಾಗೂ ಕಾಳುಮೆಣಸು ಧಾರಣೆಯಲ್ಲಿ ಸಂಪೂರ್ಣ ಸ್ಥಿರತೆ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 28 ಜುಲೈ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...

All posts loaded

No more posts

error: Content is protected !!