ಕುಕ್ಕೆಯಲ್ಲಿ ನಟಿ ರಕ್ಷಿತಾ ಪ್ರೇಮ್ ರವರಿಂದ ಹುಲಿವೇಷ ವೀಕ್ಷಣೆ

ಸುಬ್ರಹ್ಮಣ್ಯ ಅ.4: ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಪ್ರೇಮ್ ಹಾಗೂ ಅವರ ಪತ್ನಿ ನಟಿ ರಕ್ಷಿತಾ ಪ್ರೇಮ್ ಅವರು ಗುರುವಾರ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ತದನಂತರ ಕಾರಲ್ಲಿ ಹೊರಡುವ ಸಮಯದಲ್ಲಿ ನವರಾತ್ರಿಯ ವಿಶೇಷ ದಿನದಂದು ಕರಾವಳಿಯಲ್ಲಿ ಪ್ರಸಿದ್ಧಿ ಪಡೆದಿರುವ ಹುಲಿ ವೇಷವನ್ನು ಕಂಡು ಕಾರಿನಿಂದ ಇಳಿದರು.ತಕ್ಷಣ...

ರಮೇಶ್ ನಾಯಕ್ ಮದಕ ನಿಧನ

ಉಬರಡ್ಕ ಮಿತ್ತೂರು ಗ್ರಾಮದ ಮದಕ ರಮೇಶ್ ನಾಯಕ್ (57) ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಇಂದು ನಿಧನರಾದರು. ಕೆಲ ವರ್ಷಗಳ ಹಿಂದೆ ವಿದ್ಯುತ್ ಗುತ್ತಿಗೆದಾರರ ಜತೆ ಲೈನ್ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ಶಶಿಕಲಾ, ತಾಯಿ ವಿಮಲಾ, ಸಹೋದರರಾದ ಉಮೇಶ್ ನಾಯಕ್, ದಿವಾಕರ ನಾಯಕ್, ಸಹೋದರಿ ಸತ್ಯವತಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವದಸರಕ್ಕೆ ಆಯ್ಕೆ

ಮೈಸೂರಿನಲ್ಲಿ ನಾಡ ಹಬ್ಬದ ಪ್ರಯುಕ್ತ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಎಸ್ಎಸ್ ಕಾಲೇಜಿನ ಸಾಂಸ್ಕೃತಿಕ ತಂಡ ಯುವದಸರಕ್ಕೆ ಆಯ್ಕೆಯಾಗಿದೆ.. ದಕ್ಷಿಣ ಕನ್ನಡದ ಶಾಸ್ತ್ರೀಯ ನೃತ್ಯಗಳನ್ನು ಪ್ರಸ್ತುತ ಪಡಿಸಿದ ಈ ತಂಡ ತೀರ್ಪುಗಾರರ ಮೆಚ್ಚುಗೆ ಪಡೆದು ಆಯ್ಕೆಯಾಗಿದೆ.. ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ ಟಿ ಅವರ ಮಾರ್ಗದರ್ಶನದಲ್ಲಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಡಾ. ವಿನ್ಯಾಸ್...

ಉಡುಪಿಯ ದಾಯ್ಜಿ ವರ್ಲ್ಡ್ ಟಿ ವಿ ಚಾನೆಲ್ ನ “ಈ ಬಂಧನ” ಕಾರ್ಯಕ್ರಮಕ್ಕೆ ಸುಳ್ಯದ ಸಾಧಕ ಜೋಡಿ ಆಯ್ಕೆ

ಮೂಡಿ ಬರಲಿದೆ ಸಮಾನ ಮನಸ್ಕ ಜೋಡಿಗಳಾದ ಡಾ. ಅನುರಾಧಾ ಕುರುಂಜಿ ಮತ್ತು ಚಂದ್ರಶೇಖರ ಬಿಳಿನೆಲೆ ದಂಪತಿಗಳ ಮನದ ಮಾತು ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರುಗಳಾದ ಡಾ. ಅನುರಾಧಾ ಕುರುಂಜಿ ಮತ್ತು ಚಂದ್ರಶೇಖರ ಬಿಳಿನೆಲೆ ದಂಪತಿಗಳು ದ. ಕ ಮತ್ತು ಉಡುಪಿಯ ಪ್ರಸಿದ್ಧ ಟಿವಿ ಚಾನೆಲ್ ದಾಯ್ಜಿ ವರ್ಲ್ಡ್ ನ “ಈ ಬಂಧನ”ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಈರ್ವರು ಹಲವು...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಸೆ. 4 ರಂದು ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ವಹಿಸಿದ್ದರು.  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಮಂಗಳೂರಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಪುಷ್ಪರಾಜ್ ಕೆ ಅವರು ವಿದ್ಯಾರ್ಥಿಗಳು...

ಸುಳ್ಯ : ಅಂಜಲಿ ಮೊಂಟೆಸ್ಸರಿ ಶಾಲೆಯ ಸಂಚಾಲಕಿಯವರನ್ನು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನ

ಸುಳ್ಯದಲ್ಲಿ ಪ್ಲೇ ಸ್ಕೂಲ್ ಆರಂಭಿಸಿ ಮಕ್ಕಳ ಲಾಲನೆ ಪಾಲನೆ ಮಾಡಿಕೊಂಡು ಅವರ ಬೆಳವಣಿಗೆಯ ಜೊತೆಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಿ ಸಮಾಜಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಾ ಬರುತ್ತಿದ್ದು ಕಳೆದ ನಾಲ್ಕು ವರ್ಷಗಳಿಂದ ಅಂಜಲಿ ಮೊಂಟೆಸ್ಸರಿ ಶಾಲೆಯು ಬೊಂಬೆ ಹಬ್ಬಗಳನ್ನು ಆಚರಿಸಿಕೊಂಡು ಬರುತ್ತಿದೆ. ಮೈಸೂರು ಭಾಗದಲ್ಲಿ ಈ ಹಿಂದಿನಿಂದಲೂ ಆಚರಿಸಿಕೊಂಡು ಬರುತ್ತಿರುವ ಸಂಪ್ರದಾಯದ ಕುರಿತು ಸುಳ್ಯದಲ್ಲಿಯೂ ಆಚರಣೆ...

ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿದ ಒಂಭತ್ತು ಮಹಿಳಾ ಗೃಹರಕ್ಷಕಿಯರಿಗೆ ಸನ್ಮಾನ : ಮಹಿಳೆಯರು ದೈವಾಂಶ ಸಂಭೂತರು‌ – ಡಾ\\ ಚೂಂತಾರು

ಮಹಿಳೆ ಅತ್ಯಂತ ಸಹನಾಮಯಿ ಮತ್ತು ಮಾತೃ ಹೃದಯದವರು. ಪ್ರತಿಯೊಬ್ಬ ಮಹಿಳೆಯೂ ದೇವಿಯ ಸಮಾನರು. ಮಹಿಳೆ ತನ್ನ ಮನೆಕೆಲಸದ ಜೊತೆ ಜೊತೆ ಗೆ ಸಮಾಜದ ಜವಾಬ್ದಾರಿಯನ್ನು ನಿಭಾಯಿಸುವುದು ಸುಲಭದ ಕೆಲಸವಲ್ಲ. ಈ ಹಿನ್ನೆಲೆಯಲ್ಲಿ ಮನೆ ಮಕ್ಕಳು ಕುಟುಂಬವನ್ನು ನಿಭಾಯಿಸುತ್ತಾ ಸಾಮಾಜಿಕ ಬದ್ಧತೆ ಕಳಕಳಿ ಮತ್ತು ಕಾಳಜಿಯಿಂದ ಗೃಹರಕ್ಷಕಿಯಾಗಿ ಕೆಲಸ ಮಾಡುತ್ತಾ ಸಮಾಜ ಸೇವೆಯನ್ನು ಮಾಡುವುದು ಅತ್ಯಂತ ಪ್ರಶಂಸನೀಯ....

ಅಂಜಲಿ ಮೊಂಟೆಸ್ಸರಿ ಸ್ಕೂಲ್‌ನಲ್ಲಿ ನವರಾತ್ರಿ ಪ್ರಯುಕ್ತ ಗೊಂಬೆ ಹಬ್ಬ – ವೀಕ್ಷಣೆ ಮಾಡಲು ಸಾರ್ವಜನಿಕರಿಗೆ ಅವಕಾಶ

ಸುಳ್ಯದ ಆಯುರ್ವೇದ ಕಾಲೇಜು ಮುಂಭಾಗವಿರುವ ಅಡ್ಕಾ‌ರ್ ಆರ್ಕೆಡ್‌ನಲ್ಲಿ ಕಾರ್ಯಚರಿಸುತ್ತಿರುವ ಅಂಜಲಿ ಮೊಂಟೆಸ್ಸರಿ ಸ್ಕೂಲ್‌ನಲ್ಲಿ ನವರಾತ್ರಿ ಪ್ರಯುಕ್ತ ಗೊಂಬೆ ಹಬ್ಬವನ್ನು ಪ್ರತಿ ವರ್ಷ ಆಚರಿಸಲಾಗುತ್ತಿದ್ದು, ಈ ವರ್ಷದ ಗೊಂಬೆ ಹಬ್ಬದ ಉದ್ಘಾಟನೆ ಅ.3 ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಶೀತಲ್ ಯು.ಕೆ.ಪ್ರಭಾರ ಶಿಕ್ಷಣಾಧಿಕಾರಿಗಳು ಸುಳ್ಯ ಹಾಗೂ ಸರಕಾರಿ ನೌಕರರ ಸಂಘದ ಅಧ್ಯಕ್ಷೆ, ಶಿಕ್ಷಕಿ ಧನಲಕ್ಷ್ಮಿ ಕುದ್ಪಾಜೆ ಆಗಮಿಸಿ...

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ಅಂತ್ಯ – ಕರ್ತವ್ಯಕ್ಕೆ ಹಾಜರು

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನಿರ್ಧಿಷ್ಟ ಮುಷ್ಕರ ಕೈಗೊಂಡಿದ್ದ ಗ್ರಾಮ ಆಡಳಿತಾಧಿಕಾರಿಗಳ ಸಂಘದೊಂದಿಗೆ ಸರಕಾರ ನಡೆಸಿದ ಮಾತುಕತೆ ಫಲಪ್ರದವಾಗಿರುವುದರಿಂದ ಮುಷ್ಕರ ಹಿಂಪಡೆದು ಅ.4ರಿಂದ ಕರ್ತವ್ಯಕ್ಕೆ ಗ್ರಾಮ ಆಡಳಿತಾಧಿಕಾರಿಗಳು ಹಾಜರಾಗಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.26ರಿಂದ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದರು. ಆರಂಭದಲ್ಲಿ ಸೆ.30ರಂದು ಕಂದಾಯ ಸಚಿವ ಕೃಷ್ಣ ಬೈರೇ ಗೌಡ ಅವರು ಗ್ರಾಮ ಆಡಳಿತಾಧಿಕಾರಿಗಳ...

ಅನ್ಯಕೋಮಿನ ಯುವಕನ ಮೇಲೆ ಹಲ್ಲೆ ಪ್ರಕರಣ 3 ನೇ ಆರೋಪಿತನಿಗೆ ಜಾಮೀನು ಮಂಜೂರು

ಸುಳ್ಯ ವಿದ್ಯಾರ್ಥಿನಿ ಜೊತೆಗೆ ಬಸ್ಸಿನಲ್ಲಿ ಅನುಚಿತ ವರ್ತನೆ ತೋರಿದ ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮೂರು ಜನರನ್ನು ಸುಳ್ಯ ಪೋಲಿಸ್ ಬಂಧಿಸಿದ್ದರು. ಈ ಮೊದಲು ಇಬ್ಬರಿಗೆ ಜಾಮೀನು ದೊರೆತಿದ್ದು, ಇದೀಗ ಮೂರನೇ ಆರೋಪಿಯಾದ ಸುಶ್ಮಿತ್ ಗೆ ಜಾಮೀನು ದೊರೆತಿದೆ.‌ ಇವರ ಪರವಾಗಿ ಪುತ್ತೂರಿನ ನ್ಯಾಯವಾದಿ ಬಿ.ನರಸಿಂಹ ಪ್ರಸಾದ್ ವಾದಿಸಿದ್ದಾರೆ.
Loading posts...

All posts loaded

No more posts

error: Content is protected !!