ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆ ಪ್ರಕರಣ – ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ನ್ಯಾಯಾಂಗ ಬಂಧನ

ಸುಳ್ಯದ ಪೈಚಾರಿನಿಂದ ಕರೆತಂದು ಸುಳ್ಯ ಬಸ್ಸು ನಿಲ್ದಾಣದ ಬಳಿಯಲ್ಲಿ ಮುಸ್ಲಿಂ ಯುವಕನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಇಬ್ಬರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಬಂಧಿತರು ಹಿಂದು ಪರ ಸಂಘಟನೆಗಳ ಕಾರ್ಯಕರ್ತರಾದ ವರ್ಷಿತ್, ಮಿಥುನ್ ಎಂದು ತಿಳಿದು ಬಂದಿದೆ. ಸದ್ಯ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಅವರಿಗೆ ನ್ಯಾಯಾಧೀಶರು 14 ದಿನಗಳ ವರೆಗೆ ನ್ಯಾಯಾಂಗ...

ಸುಳ್ಯ : ನಿಲ್ಲಿಸಿದ್ದ ಓಮಿನಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಸುಳ್ಯ:ಅಮರ ಶ್ರೀ ಹಾಲ್ ಹತ್ತಿರದ ಸ್ನೇಹ ಶಾಲೆಯ ರಸ್ತೆ ಬಳಿ ಕೆಲ ದಿನಗಳಿಂದ ಓಮಿನಿ ಕಾರು ನಿಲುಗಡೆ ಮಾಡಲಾಗಿದ್ದು ಇದೀಗ ಓಮಿನಿ ಕಾರಿನಲ್ಲಿ ಕೊಳೆತ ಮಾದರಿಯಲ್ಲಿ ಶವವೊಂದು ಪತ್ತೆಯಾಗಿದೆ.
Ad Widget

ಏನೆಕಲ್ಲು: ಅನಾರೋಗ್ಯದಿಂದ ಪೂಜಾರಿಮನೆ ಪುಂಡರೀಕ ಗೌಡ ಮೃತ್ಯು

ಏನೆಕಲ್ಲು ಗ್ರಾಮದ ಪೂಜಾರಿಮನೆ ದಿ. ಕುಮಾರ ಗೌಡರ ಪುತ್ರ ಪುಂಡರೀಕ ಗೌಡ ಪೂಜಾರಿಮನೆಯವರು ಶಂಕಿತ ಇಲಿಜ್ವರದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.23 ರಂದು ನಿಧನರಾದರು. ಅವರಿಗೆ 40 ವರ್ಷ ವಯಸ್ಸಾಗಿತ್ತು. ಮೃತರು ತಾಯಿ ಚೂಡಾಮಣಿ, ಪತ್ನಿ ವಿಶಾಲಾಕ್ಷಿ, ಪುತ್ರರಾದ ಧನುಶ್, ಪ್ರತೀಕ್, ವಿನುತ್, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಸರಕಾರಕ್ಕೆ ಗಡುವು – ಸೆ.26 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನ

ಗ್ರಾಮ ಆಡಳಿತಾಧಿಕಾರಿಗಳ ರಾಜ್ಯ ಸಂಘದ ಸಭೆಯ ನಿರ್ಣಯದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಡೆಸುವ ಬಗ್ಗೆ ಗ್ರಾಮ ಆಡಳಿತಾಧಿಕಾರಿಗಳು ತೀರ್ಮಾನಿಸಿದ್ದು, ಈ ಬಗ್ಗೆ ಮನವಿ ಪತ್ರವನ್ನು ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಸಲ್ಲಿಸಿದರು.ತಮ್ಮ ಮನವಿ ಪತ್ರದಲ್ಲಿ ವಿವಿಧ ಬೇಡಿಕೆಗಳನ್ನು ಸರಕಾರದ ಮುಂದಿರಿಸಿದ್ದು ಈ ಬೇಡಿಕೆಗಳು ಈಡೇರುವವರೆಗೆ ಸೆ.26 ರಿಂದ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ...

ದೊಡ್ಡೇರಿ ಶಾಲೆಯಲ್ಲಿ ತೆಂಗಿನಗಿಡ ನೆಡುವ ವಿವಾದ ಸುಖಾಂತ್ಯ

ದೊಡ್ಡೇರಿ ಶಾಲೆಯಲ್ಲಿ ಇಂದು ಊರವರು ಹಾಗೂ ಎಸ್ ಡಿ ಎಂ ಸಿ ಸಭೆ ನಡೆಯಿತು.ಶಾಲಾ ಮೈದಾನದಲ್ಲಿ ತೆಂಗಿನ ಸಸಿ ನೆಡಲು ತೆಗೆದ ಗುಂಡಿಗಳನ್ನು ಮುಚ್ಚಿ ಶಾಲಾ ಹಿಂಬದಿಯಲ್ಲಿ ಇರುವ ಜಾಗವನ್ನು ಸ್ವಚ್ಛಗೊಳಿಸಿ ಸಸಿಗಳನ್ನು ನೆಡುವ ಬಗ್ಗೆ ನಿರ್ಣಯಿಸಲಾಗಿದ್ದು, ಸಭೆ ಸೌಹಾರ್ದಯುತವಾಗಿ ಅಂತ್ಯವಾಯಿತು. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾ ಪ್ರೇಮಿಗಳ ಸಂಘವನ್ನು ರಚಿಸುವುದೆಂದು ತೀರ್ಮಾನಿಸಲಾಯಿತು.

ಕೊಲ್ಲಮೊಗ್ರದಲ್ಲಿ ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕ ಕಾರ್ಯಕ್ರಮ

ದ ಕ ಜಿಲ್ಲಾ ಪಂಚಾಯತ್ ಮಂಗಳೂರು, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಕೊಲ್ಲಮೊಗ್ರು ಗ್ರಾಮದ ವಿವಿಧ ಬಾಗಗಳಲ್ಲಿ ಹುಚ್ಚು ನಾಯಿ ನಿರೋಧಕ ಲಸಿಕೆಯನ್ನು ಉಚಿತವಾಗಿ ನೀಡಲಾಯಿತು. ಮುಳ್ಳುಬಾಗಿಲು ಕಾಣಿಕೆ ಹುಂಡಿ ಬಳಿ, ಅಂಬೇಡ್ಕರ್ ಸಭಾಭವನ ಕಟ್ಟ, ಕೊಲ್ಲಮೊಗ್ರು ಪೇಟೆ, ಮಯೂರ ಸರ್ಕಲ್ ಮಲ್ಲಾಜೆ, ಅಗಲಡ್ಕ,...

ಸುಬ್ರಹ್ಮಣ್ಯದಲ್ಲಿ ಕಾರ್ತಿಕ್ ಸಸ್ಯಹಾರಿ ಉಪಾಹಾರ ಕೇಂದ್ರ ಆರಂಭ

ಸುಬ್ರಹ್ಮಣ್ಯ ಸೆ. 23: ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ಇರುವ ಮೋಂಟಿ ಕಂಫರ್ಟ್ಸ್ ನ ನೆಲ ಮಹಡಿಯಲ್ಲಿ ಇಂದು ನೂತನವಾಗಿ ಕಾರ್ತಿಕ್ ಸಸ್ಯಹಾರಿ ಉಪಹಾರ ಕೇಂದ್ರವು ಉದ್ಘಾಟನೆಗೊಂಡಿತು.ಸುಬ್ರಹ್ಮಣ್ಯದ ಸಮಾಜ ಸೇವಕ ಡಾ.ರವಿ ಕಕ್ಕೆಪದವು ಅವರ ಮಾಲಕತ್ವದ ಈ ಉಪಹಾರ ಕೇಂದ್ರವನ್ನು ಸುಬ್ರಹ್ಮಣ್ಯ ರಾಘವೇಂದ್ರ ಹೋಟೆಲ್ ಮಾಲಕ ಯಜ್ಞೇಶ್ ಆಚಾರ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಉಪಹಾರ...

ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆ ಪ್ರಕರಣ – ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡ ಯುವಕರ ವಿಚಾರಣೆ – ಡಿವೈಎಸ್ಪಿ ಸುಳ್ಯಕ್ಕೆ ಭೇಟಿ

ಸುಳ್ಯದ ಪೈಚಾರಿನಲ್ಲಿ ಅನ್ಯ ಕೋಮಿನ ಯುವಕನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಹಲವರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹಿಂದು ಪರ ಸಂಘಟನೆಗಳ ಕಾರ್ಯಕರ್ತರಾದ ವರ್ಷಿತ್ , ಮಿಥುನ್, ಕಿರಣ್ ಸೇರಿದಂತೆ  ಕೆಲ ಯುವಕರನ್ನು ಠಾಣೆಗೆ ಬರಹೇಳಿ ಪೋಲಿಸ್ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ಹಲ್ಲೆಗೊಳಗಾದ ವ್ಯಕ್ತಿ ಮತ್ತು...

ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ಅವರ ಸಾಧನೆಗೆ ಒಲಿದ ನೇಷನ್ ಬಿಲ್ಡರ್ ಅವಾರ್ಡ್ ಮತ್ತು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಸುಳ್ಯ ಇವರು ಈ ಬಾರಿ ನೀಡಿದ "ನೇಷನ್ ಬಿಲ್ಡರ್ ಅವಾರ್ಡ್" ಪ್ರತಿಷ್ಠಿತ ನೆಹರು ಮೆಮೋರಿಯಲ್ ಪ ಪೂ ಕಾಲೇಜು ಸುಳ್ಯ ಹಾಗೂ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ.ಬಿ.ಅವರಿಗೆ ಲಭಿಸಿದೆ.ದ.ಕ. ಜಿಲ್ಲಾ ಪ.ಪೂ ಕಾಲೇಜುಗಳ ಪ್ರಾಚಾರ್ಯರ ಸಂಘ(ರಿ )ಮಂಗಳೂರು, ವಿವಿಧ ವಿಷಯವಾರು ಉಪನ್ಯಾಸಕರ ಸಂಘ,...

ನಾಳೆ (ಸೆ.24) ಸುಳ್ಯದಲ್ಲಿ ವಿದ್ಯುತ್ ಕಡಿತ

33ಕೆ.ವಿ. ಕಾವು - ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿನಾಂಕ: 24-09-2024 ಮಂಗಳವಾರ ಪೂರ್ವಾಹ್ನ 09:30 ರಿಂದ ಸಾಯಂಕಾಲ 05:00 ಗಂಟೆಯವರೆಗೆ 33ಕೆ.ವಿ. ಕಾವು - ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆ.ವಿ. ಕಾವು ಹಾಗೂ ಸುಳ್ಯ ವಿದ್ಯುತ್ ಉಪಕೇಂದ್ರದಿಂದ...
Loading posts...

All posts loaded

No more posts

error: Content is protected !!