ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆ ಪ್ರಕರಣ – ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡ ಯುವಕರ ವಿಚಾರಣೆ – ಡಿವೈಎಸ್ಪಿ ಸುಳ್ಯಕ್ಕೆ ಭೇಟಿ

ಸುಳ್ಯದ ಪೈಚಾರಿನಲ್ಲಿ ಅನ್ಯ ಕೋಮಿನ ಯುವಕನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಹಲವರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹಿಂದು ಪರ ಸಂಘಟನೆಗಳ ಕಾರ್ಯಕರ್ತರಾದ ವರ್ಷಿತ್ , ಮಿಥುನ್, ಕಿರಣ್ ಸೇರಿದಂತೆ  ಕೆಲ ಯುವಕರನ್ನು ಠಾಣೆಗೆ ಬರಹೇಳಿ ಪೋಲಿಸ್ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ಹಲ್ಲೆಗೊಳಗಾದ ವ್ಯಕ್ತಿ ಮತ್ತು...

ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ಅವರ ಸಾಧನೆಗೆ ಒಲಿದ ನೇಷನ್ ಬಿಲ್ಡರ್ ಅವಾರ್ಡ್ ಮತ್ತು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಸುಳ್ಯ ಇವರು ಈ ಬಾರಿ ನೀಡಿದ "ನೇಷನ್ ಬಿಲ್ಡರ್ ಅವಾರ್ಡ್" ಪ್ರತಿಷ್ಠಿತ ನೆಹರು ಮೆಮೋರಿಯಲ್ ಪ ಪೂ ಕಾಲೇಜು ಸುಳ್ಯ ಹಾಗೂ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ.ಬಿ.ಅವರಿಗೆ ಲಭಿಸಿದೆ.ದ.ಕ. ಜಿಲ್ಲಾ ಪ.ಪೂ ಕಾಲೇಜುಗಳ ಪ್ರಾಚಾರ್ಯರ ಸಂಘ(ರಿ )ಮಂಗಳೂರು, ವಿವಿಧ ವಿಷಯವಾರು ಉಪನ್ಯಾಸಕರ ಸಂಘ,...
Ad Widget

ನಾಳೆ (ಸೆ.24) ಸುಳ್ಯದಲ್ಲಿ ವಿದ್ಯುತ್ ಕಡಿತ

33ಕೆ.ವಿ. ಕಾವು - ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿನಾಂಕ: 24-09-2024 ಮಂಗಳವಾರ ಪೂರ್ವಾಹ್ನ 09:30 ರಿಂದ ಸಾಯಂಕಾಲ 05:00 ಗಂಟೆಯವರೆಗೆ 33ಕೆ.ವಿ. ಕಾವು - ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆ.ವಿ. ಕಾವು ಹಾಗೂ ಸುಳ್ಯ ವಿದ್ಯುತ್ ಉಪಕೇಂದ್ರದಿಂದ...

ಆಸ್ಪತ್ರೆಗೆ ಹೇಳಿಕೆ ಪಡೆಯಲು ಆಗಮಿಸಿದ ನ್ಯಾಯಾಧೀಶರ ಜತೆ ವೈದ್ಯರ ದುರ್ವರ್ತನೆ ಆರೋಪ – ಸುಳ್ಯ ಠಾಣೆಯಲ್ಲಿ ದೂರು ನೀಡಿದ ನ್ಯಾಯಾಧೀಶರು

ಸುಳ್ಯ : ದೇಲಂಪಾಡಿ ಮೂಲದ ಮಹಿಳೆಯೋರ್ವರು ಆತ್ಮಹತ್ಯೆ ಯತ್ನ ನಡೆಸಿದ್ದಾರೆಂಬ ಬಗ್ಗೆ ಅದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.‌ ಈ ಬಗ್ಗೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯಿಂದ ಹೇಳಿಕೆ ಪಡೆಯುವ ಉದ್ದೇಶದಿಂದ ಸುಳ್ಯಕ್ಕೆ ಆದೂರು ಪೋಲಿಸ್ ಅಧಿಕಾರಿಗಳ ಜತೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಇಂಟಿಮೇಶನ್ ನೀಡಿದ ಬಳಿಕ ಬಂದಿದ್ದರು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ...

ಬಸ್ ನಲ್ಲಿ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ – ಯುವಕನಿಗೆ ಧರ್ಮದೇಟು – ಆಸ್ಪತ್ರೆಯಲ್ಲಿ ಚಿಕಿತ್ಸೆ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಡನೆ ಅಬ್ದುಲ್ ನಿಯಾಝ್ ಎಂಬ ಯುವಕ ಅನುಚಿತವಾಗಿ ವರ್ತಿಸಿದ್ದು, ಸುಳ್ಯದಲ್ಲಿ ಆಕೆಯ ಸಹಪಾಠಿ ವಿದ್ಯಾರ್ಥಿಗಳು ಧರ್ಮದೇಟು ನೀಡಿದ ಘಟನೆ ವರದಿಯಾಗಿದೆ. ಬೆಂಗಳೂರಿನಿಂದ ಸುಬ್ರಹ್ಮಣ್ಯ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್‌ಗೆ ಬಿಸಿಲೆ ಘಾಟ್ ಬಳಿ ಸುಳ್ಯದ ಕಾಲೇಜೊಂದರ ವಿದ್ಯಾರ್ಥಿನಿ ಹತ್ತಿದ್ದಳು. ಯುವಕನೊಬ್ಬ ಕುಳಿತಿದ್ದ ಸೀಟಿನ ಪಕ್ಕದ ಸೀಟು ಖಾಲಿ ಇದ್ದುದರಿಂದ ಆಕೆ ಅದರಲ್ಲಿ...

ಶ್ರೀರಾಮಸೇನೆಯ ಮಂಗಳೂರು ವಿಭಾಗ ಕಾರ್ಯಾಧ್ಯಕ್ಷರಾಗಿ ಜಯರಾಂ ಅಂಬೆಕಲ್ಲು

ಉಡುಪಿಯ ಹೋಟೆಲ್ ಮಥುರಾ ಕಂಪರ್ಟ್ಸ್ ನಲ್ಲಿ ಆದಿತ್ಯವಾರ ಉಡುಪಿ ಜಿಲ್ಲಾ ಶ್ರೀರಾಮಸೇನೆಯ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಗಂಗಾಧರ್ ಕುಲಕರ್ಣಿ ಯವರು ಕಳೆದ 5 ವರ್ಷದಿಂದ ಉಡುಪಿ ಜಿಲ್ಲಾಧ್ಯಕ್ಷರಾಗಿದ್ದ ಜಯರಾಂ ಅಂಬೆಕಲ್ಲು ರವರನ್ನು ಮಂಗಳೂರು ವಿಭಾಗ( ದ.ಕ, ಉಡುಪಿ, ಉ.ಕ) ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ಘೋಷಿಸಿದರು. ಜಯರಾಂ ಅಂಬೆಕಲ್ಲುರವರು ಈ ಹಿಂದೆ ಉಡುಪಿ ನಗರ...

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 105 ಶಾಲೆಗಳಿಗೆ ಕರ್ನಾಟಕ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಜ್ನಾನ ಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಹಸ್ತಾಂತರಕ್ಕೆ ಚಾಲನೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ ೧೦೫ ಶಾಲೆಗಳಿಗೆ ಜ್ನಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಾಗು ಪುಸ್ತಕಗಳನ್ನು ನೀಡುವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ ಚಾಲನೆ ನೀಡಿದರು.ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಇದೊಂದು...

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ. ಚಿದಾನಂದ ಕೆ ವಿ ಇವರಿಗೆ ಗೌರವಾರ್ಪಣೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿಶಿಷ್ಟ ಸೇವಾ ಪುರಸ್ಕಾರ ಸ್ವೀಕರಿಸಿದ ಡಾ. ಕೆ ವಿ ಚಿದಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಸನ್ಮಾನಿಸಿ ಸಾಹಿತ್ಯ ಪರಿಶತ್ತು ಕಾರ್ಯಕ್ರಮಗಳ ಮಹಾ ಪೋಷಕರಾದ ಡಾ ಕೆ ವಿ ಚಿದಾನಂದ ಇವರನ್ನು ಗೌರವಿಸುವುದು ನಮ್ಮ...

ನಿನ್ನೆ ಬೈಕ್ ಕದ್ದ ಕಳ್ಳನಿಂದ ಇಂದು ಮತ್ತೆ ಕಳ್ಳತನಕ್ಕೆ ಯತ್ನ , ಮಾನಸಿಕ ಅಸ್ವಸ್ಥನಂತೆ ಕಂಡರೂ ಈತ ಕಳ್ಳನೇ, ಪೊಲೀಸ್ ಅಧಿಕಾರಿಗಳೇ ಎಚ್ಚೆತ್ತುಕೊಳ್ಳಿ !

ಅರಂತೋಡು: ನಿನ್ನೆ ಬೈಕ್ ಕದ್ದ ಕಳ್ಳ ಇಂದು ಮತ್ತೆ ಅರಂತೋಡಿನಲ್ಲಿ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಇದೀಗ ವರದಿಯಾಗಿದೆ. ಸೆ. 22 ರಂದು ಬೈಕ್ ನಲ್ಲಿ ಹೋಗುತ್ತಿದ್ದ ಶಂಕಿತ ವ್ಯಕ್ತಿಯನ್ನು ಕನಕಮಜಲು ಪರಿಸರದಲ್ಲಿ ಸ್ಥಳೀಯರು ತಡೆದು ನಿಲ್ಲಿಸಿ ವಿಚಾರಿಸಿದಾಗ ಆತ ಬೈಕ್ ಕಳ್ಳನೆಂದು ತಿಳಿದಿದ್ದು, ಬಳಿಕ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೆ ಒಪ್ಪಿಸಿದ್ದರು. ಆದರೆ...

ಸುಳ್ಯ : ಎಸ್.ಟಿ.ಮೋರ್ಚಾ ಸಭೆ -ನ.ಪಂ.ಉಪಾಧ್ಯಕ್ಷ ಬುದ್ಧ ನಾಯ್ಕ ಅವರಿಗೆ ಅಭಿನಂದನೆ

ಸುಳ್ಯ : ಬಿಜೆಪಿ ಸುಳ್ಯ ಮಂಡಲ ಎಸ್.ಟಿ.ಮೋರ್ಚಾ ಇದರ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ ಅವರು ಮಾತನಾಡಿ, ಸದಸ್ವತ್ವ ಅಭಿಯಾನ ಹಾಗೂ ಪಕ್ಷದ ಬಲವರ್ಧನೆ ಕುರಿತು ವಿವರಿಸಿದರು. ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ಮಾತನಾಡಿ, ದೇಶಾದ್ಯಂತ ಬಿಜೆಪಿಯಿಂದ...
Loading posts...

All posts loaded

No more posts

error: Content is protected !!