- Sunday
- September 20th, 2026
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ತೋಟದಲ್ಲಿ 4.5 ಅಡಿ ಎತ್ತರದ 35 ಕೆಜಿ ತೂಕದ ಬೃಹತ್ ಕದಳಿ ಬಾಳೆಗೊನೆ ಬೆಳೆದಿದ್ದು, ಇದನ್ನು ಶ್ರೀದೇವರ ಪೂಜೆಗೆ ಸಮರ್ಪಿಸಲಾಗುವುದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 06 ಆಗಸ್ಟ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಸಂಪಾಜೆಯ ಬಳಿ ಕಾಡುಕೋಣ ಬೇಟೆಯಾಡಿ ಹತ್ಯೆ ಮಾಡಿ ಮಾಂಸ ಮಾಡಿದ ಇಬ್ಬರು ಆರೋಪಿಗಳನ್ನು ಹಾಗೂ ಇಕೋ ಕಾರನ್ನು ಕೊಡಗು ಸಂಪಾಜೆ ಅರಣ್ಯ ಇಲಾಖೆ ವಶಕ್ಕೆ ಪಡೆದ ಘಟನೆ ಆ.5 ರಂದು ಸಂಜೆ ನಡೆದಿದೆ. ಓರ್ವ ಆರೋಪಿ ತಲೆ ಮರೆಸಿಜೊಂಡಿದ್ದಾನೆ. ಕಲ್ಲುಗುಂಡಿಯ ಕಾಡುಪಂಜ ಬಳಿಯ ಅರಣ್ಯದಲ್ಲಿ ಇಬ್ಬರು ಆರೋಪಿಗಳಾದ ಚೆಂಬು ಗ್ರಾಮದ ಗೌತಮ್ ಕುಕ್ಕೆಟ್ಟಿ ಹಾಗೂ ಪೆರಾಜೆಯ...
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎನ್ಐಎ ಮೋಸ್ಟ್ ವಾಂಟೆಡ್ ಆರೋಪಿ ಉಮ್ಮರ್ ಫಾರೂಕ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದು, ಒಟ್ಟು ಬಂಧಿತ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಉಮ್ಮರ್ ಫಾರೂಕ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹಾಗೂ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿತ್ತು. ಆತನ ಬಂಧನಕ್ಕೆ...
ಸುಳ್ಯ ಮೆಸ್ಕಾಂ ಸಬ್ ಸ್ಟೇಷನ್ ನಲ್ಲಿ ಜಂಪರ್ ಕೊಡಲು ಲೈನ್ ಮ್ಯಾನ್ ವಿಳಂಬ ಮಾಡಿದ್ದಕ್ಕೆ ಕೋಪಗೊಂಡ ಎಇ ಸುಪ್ರೀತ್ ಅವರು ಲೈನ್ ಆಪ್ ಮಾಡಿಕೊಟ್ಟ ಸ್ಟೇಷನ್ ಆಪರೇಟರ್ ಗೆ ಹಲ್ಲೆ ನಡೆಸಿದ ಘಟನೆ ಆ. 2 ರಂದು ನಡೆದಿದ್ದು ಸುಳ್ಯ ಠಾಣೆ ಹಾಗೂ ಮೆಸ್ಕಾಂ ಮೇಲಾಧಿಕಾರಿಗಳಿಗೆ ದೂರು ಹೋದ ಬಗ್ಗೆ ವರದಿಯಾಗಿದೆ. ಆ.02 ರಂದು ಕಲ್ಲುಗುಂಡಿ...
ಹರಿಹರ ಪಲ್ಲತ್ತಡ್ಕ ನಡುಗಲ್ಲು ರಸ್ತೆಯ ಕೊರಂಬಠ ಬಳಿ ಬರೆ ಕುಸಿತದಿಂದ ಮರ ರಸ್ತೆಗೆ ಬಿದ್ದು ಬ್ಲಾಕ್ ಆಗಿದೆ ಎಂದು ತಿಳಿದುಬಂದಿದೆ.
ಕಳೆದ 22 ವರ್ಷಗಳಿಂದ ಭಾರತೀಯ ಭೂಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ದಯಾನಂದ ಜಾಲುಮನೆ ಅವರು ಹವಾಲ್ದಾರ್(ದಫೇದಾರ್) ಆಗಿ ಪದೋನ್ನತಿ ಹೊಂದಿದ್ದಾರೆ. ಪ್ರಸ್ತುತ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿರುವ ಆರ್ಮಿ ಟ್ರೈನಿಂಗ್ ಕಮಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರು 2005ರಲ್ಲಿ ಭಾರತೀಯ ಭೂಸೇನೆಗೆ ಸೇರ್ಪಡೆಯಾಗಿ ತಮ್ಮ ಕರ್ತವ್ಯನಿಷ್ಠೆ ಹಾಗೂ ಉತ್ತಮ ಸೇವೆಯಿಂದ ಕ್ರಮವಾಗಿ SOWAR...
ಕಾವು, ಆಗಸ್ಟ್ 4 : ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ರಿ. ಮಂಗಳೂರು ಮತ್ತು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಕಾವು ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ-ಲೇಖನ ಸಾಮಗ್ರಿ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ...
ಸುಳ್ಯ : ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಇದರ ಅಧೀನದಲ್ಲಿ ಬರುವ 13 ಜಮಾಅತ್ಗಳ ಸಂಯುಕ್ತ ಖಾಝಿಯಾಗಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಅಸ್ಸಯ್ಯದ್ ಜಿಫ್ರಿ ಮುತ್ತುಕೋಯ ತಂಙಳ್ ಅವರು ಆ.04ರಂದು ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಸಾಮಾಜಿಕ, ರಾಜಕೀಯ, ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು...
ಬೆಳ್ಳಾರೆಯಲ್ಲಿ ಬಿ.ಎಸ್.ಎನ್.ಎಲ್ 4G ಸೇವೆ ಲಭ್ಯವಿದ್ದರೂ, ಹೊಸ ಬಿ.ಎಸ್.ಎನ್.ಎಲ್ ಸಿಮ್ ಕಾರ್ಡ್ ಪಡೆಯಲು ಸಾರ್ವಜನಿಕರು ಹಾಗೂ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸ್ಥಳೀಯ ಮೊಬೈಲ್ ಅಂಗಡಿಗಳ ಮಾಹಿತಿಯಂತೆ, ಬಿ.ಎಸ್.ಎನ್.ಎಲ್ ಸಿಮ್ ಕಾರ್ಡ್ಗಳ ಸ್ಟಾಕ್ ದೀರ್ಘಕಾಲದಿಂದ ಲಭ್ಯವಾಗುತ್ತಿಲ್ಲ. ಈ ಕುರಿತು ವಿಚಾರಿಸಿದಾಗ, ಸ್ಥಳೀಯ ಬಿ.ಎಸ್.ಎನ್.ಎಲ್ ಡಿಸ್ಟ್ರಿಬ್ಯೂಟರ್ ಸಮರ್ಪಕವಾಗಿ ಸಿಮ್ ಪೂರೈಕೆ ಮಾಡುತ್ತಿಲ್ಲ ಎಂದು...
Loading posts...
All posts loaded
No more posts
