- Saturday
- August 22nd, 2026
ಆಗಸ್ಟ್30 ರಂದು ಸುಳ್ಯದ ಕೆ.ವಿ.ಜಿ. ಇಂಜಿನಿಯರಿ0ಗ್ ಕಾಲೇಜಿನಲ್ಲಿ ಜಪಾನೀಸ್ ಭಾಷಾಕಾರ್ಯಾಗಾರವು ಕಾಲೇಜಿನ ಆಡಳಿತ ಮಂಡಳಿ ಮತ್ತು ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿ0ಗ್ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ಯು.ಜೆ. ಇವರ ಮಾರ್ಗದರ್ಶನದ ಮೇರೆಗೆ ಇಂಜಿನಿಯರಿ0ಗ್ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ನಡೆಯಿತು. ಶ್ರೀಮತಿ ಚರಿತಾ ಮಧುಕರ್, ಜಪಾನೀ ಭಾಷೆಯ ಸಲಹೆಗಾರರು ಹಾಗೂ ತರಬೇತುದಾರರು, ಐ.ಐ.ಐ.ಟಿ., ಜಬಲ್ಪುರ್...
ಸುಳ್ಯ: ಸುಳ್ಯ ಠಾಣಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಭೆಯು ದಿನಾಂಕ 30-08-2024 ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಈರಯ್ಯ ದುಂತೂರು ಪೊಲೀಸ್ ಉಪನೀರಿಕ್ಷಕರು ರವರ ನೇತೃತ್ವದಲ್ಲಿ ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಸಮಯ ಶಾಂತಿ ಕಾಪಾಡಿಕೊಳ್ಳುವಂತೆ ಸುಳ್ಯ ಠಾಣಾ ವ್ಯಾಪ್ತಿಯ ಸರ್ವ ಧರ್ಮಗಳ ಮುಖಂಡರುಗಳನ್ನು ಠಾಣೆಗೆ ಕರೆಸಿ ಶಾಂತಿಸಭೆ ನಡೆಸಲಾಯಿತು ಈ...
ಅರಂತೋಡು -ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಗ್ರಾಮ ಪಂಚಾಯತ್ ಅರಂತೋಡು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮತ್ತು ಇನ್ನರ್ ವೀಲ್ ಕ್ಲಬ್ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಕೃಷಿಯ ಸಮಗ್ರ ಬೆಳೆ ನಿರ್ವಹಣೆಯ ಕುರಿತು ಮಾಹಿತಿ – ಮಂಥನ ಕಾರ್ಯಕ್ರಮ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ ಆಗಸ್ಟ್ ೨೯...
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಜಾಲ್ಸೂರು ಅಡ್ಕಾರು ಇದರ ನೂತನ ಎಸ್.ಡಿ.ಎಂ.ಸಿ.ಯನ್ನು ರಚಿಸಲಾಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಗಣೇಶ್ ಅಂಬಾಡಿಮೂಲೆ, ಉಪಾಧ್ಯಕ್ಷರಾಗಿ ಶ್ರೀಮತಿ ಕವಿತ ಜಿ. ಆಯ್ಕೆಯಾದರು. ಸದಸ್ಯರುಗಳಾಗಿ ಮಹಮ್ಮದ್ ನೌಫಲ್, ಶ್ರೀಮತಿ ಪ್ರೇಮಾ ಜೆ., ಸಿದ್ಧೀಕ್, ಸತೀಶ, ಹಸೈನಾರ್, ಶ್ರೀಮತಿ ಲೋಕೇಶ್ವರಿ, ಶ್ರೀಮತಿ ಸರಸ್ವತಿ , ದಿವ್ಯ ಜೆ, ವನಿತ, ಕುಸುಮಾಧರ, ವಿಮಲ, ರಘು,...
ಬೆಳ್ಳಾರೆ ಸಬ್ ಸ್ಟೇಷನ್ ನಲ್ಲಿ ಕಳೆದ 10 ವರ್ಷಗಳಿಂದ ಮೆಕಾನಿಕ್ ಗ್ರೇಡ್ 1 ಆಗಿದ್ದ ರಫೀಕ್ ಅವರು ಶಾಖಾ ಮೇಲ್ವಿಚಾರಕರಾಗಿ ಭಡ್ತಿಗೊಂಡು ಸುಳ್ಯ ಮೆಸ್ಕಾಂ ಶಾಖೆಗೆ ವರ್ಗಾವಣೆಗೊಂಡಿರುತ್ತಾರೆ. ಇವರು ಐವರ್ನಾಡಿನ ನಿಡುಬೆ ನಿವಾಸಿ. ಬೆಳ್ಲಾರೆ 33 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆ.29 ರಂದು ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜೆಇ ರಂಜಿನಿ ಮತ್ತಿತರರು...
ಸುಳ್ಯದ ಪಂಜಕ್ಕೂ ಪಿಎಂ ಜನ್ ಮನ್ ಅನುದಾನ ಬಳಕೆ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಜನ್ ಮನ್(ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ್ ಮಹಾ ಅಭಿಯಾನ್) ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ ಕೇಂದ್ರ ಸರ್ಕಾರದಿಂದ ಒಟ್ಟು 10.32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ...
ಸುಳ್ಯ ನಗರ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಬಿಜೆಪಿಯ ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ಬುದ್ಧ ನಾಯ್ಕ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷತೆ ಮತ್ತು ಉಪಾಧ್ಯಕ್ಷತೆಗೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿರುವುದರಿಂದ ಅವಿರೋಧ ಆಯ್ಕೆ ನಡೆದಿದೆ.ಕಳೆದ 15 ತಿಂಗಳುಗಳಿಂದ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಆಡಳಿತ ನಡೆದಿದ್ದು, ಇದೀಗ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯೊಂದಿಗೆ ಮತ್ತೊಮ್ಮೆ ಆಡಳಿತಕ್ಕೆ...
ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ ನಮ್ಮ ಮರಣಾನಂತರ ದಾನ ಮಾಡಬೇಕು. ನಮ್ಮ ಕಣ್ಣುಗಳ ಮುಖಾಂತರ ಮತ್ತೊಬ್ಬ ಅಂಧ ವ್ಯಕ್ತಿಯ ಬಾಳಿಗೆ ಬೆಳಕು ನೀಡಿದಾಗ ಸಿಗುವ ಸಾರ್ಥಕತೆ ಇನ್ನಾವುದೇ ದಾನದಲ್ಲಿ ದೊರಕಲಿಕ್ಕಿಲ್ಲ. ಭಾರತದಲ್ಲಿ ಸರಿ ಸುಮಾರು 10 ಮಿಲಿಯನ್ ಮಂದಿ ದೃಷ್ಟಿಹೀನತೆಯಿಂದ ಬಳಲುತ್ತಿದ್ದು 3ರಿಂದ 4...
ಸುಳ್ಯ: ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾಗಿಅಭ್ಯರ್ಥಿಯಾಗಿ ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷ ಅಭ್ಯರ್ಥಿಯಾಗಿ ಬುದ್ಧ ನಾಯ್ಕ ಅವರನ್ನು ಬಿಜೆಪಿ ಘೋಷಣೆ ಮಾಡಿ ನಾಮಪತ್ರ ಸಲ್ಲಿಸಿದೆ. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ , ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಅಲ್ಲದೇ ಕಾಂಗ್ರೆಸ್ ಯಾವುದೇ ನಾಮಪತ್ರ ಸಲ್ಲಿಸದೇ ಇರುವುದರಿಂದ ಬಹುತೇಕ...
ಮಳೆಯನ್ನು ಲೆಕ್ಕಿಸದೇ ರಸ್ತೆತಡೆ ನಡೆಸಿ ಘೋಷಣೆ ಕೂಗಿದ ಕಾರ್ಯಕರ್ತರು: https://youtu.be/uB8p-iemhvs?si=cFCYZGJX-z4eHtDz ಸುಳ್ಯ: ಬಿಜಪಿ ಯುವಮೋರ್ಚಾ ವತಿಯಿಂದ ಐವನ್ ಡಿಸೋಜರ ಹೇಳಿಕೆ ವಿರುದ್ದ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ವಿನಯ ಮುಳುಗಾಡು ಮಾತನಾಡುತ್ತಾ ಭಂಡ ಮುಖ್ಯಮಂತ್ರಿಗಳು ಜೈಲಿಗೆ ಹೋಗುವ ತನಕ ನಾವು ಪ್ರತಿಭಟನೆ ಮಾಡುತ್ತೆವೆ ಎಂದು ಹೇಳಿದರು. ರಾಜ್ಯಪಾಲರ ವಿರುದ್ದ ಮಾತನಾಡಿದ ಐವನ್...
Loading posts...
All posts loaded
No more posts
