- Sunday
- August 23rd, 2026
ಒಳ್ಳೆಯ ಗುಣಕೆ, ಒಳ್ಳೆಯ ತನಕೆ ಬೆಲೆಯೇ ಇಲ್ಲ ಅನಿಸುವುದಿಲ್ಲಿ, ಕೆಲವೊಮ್ಮೆ ಅನಿಸುವುದಿಲ್ಲಿ...ಆದರೆ ಒಳ್ಳೆಯತನವೇ, ಒಳ್ಳೆಯ ಗುಣವೇ ಕೈ ಹಿಡಿಯುವುದಿಲ್ಲಿ, ಪ್ರತಿಕ್ಷಣವೂ ಕೈ ಹಿಡಿಯುವುದಿಲ್ಲಿ...ನಾವು ಮಾಡಿದ ಪಾಪ-ಪುಣ್ಯಗಳೇ ನಮ್ಮ ಬದುಕಿನ ಲೆಕ್ಕಾಚಾರಗಳು, ಹುಟ್ಟು-ಸಾವಿನ ಮಧ್ಯದಲ್ಲೇ ನಮಗೆ ಸಿಗುವವು ನಮ್ಮ ಕರ್ಮದ ಪ್ರತಿಫಲಗಳು...ಮೇಲ್ನೋಟಕ್ಕೆ ಎಲ್ಲರೂ ಒಳ್ಳೆಯವರಂತೆ ಕಾಣಿಸುವರಿಲ್ಲಿ, ಮನದೊಳಗಿನ ಹುಳುಕನ್ನು ಬಲ್ಲವರಾರು ಅಲ್ಲವೇ ಇಲ್ಲಿ...!?ಹಾಗೆಂದು ಎಲ್ಲರೂ ಇಲ್ಲಿ ಕೆಟ್ಟವರಲ್ಲ,...
ಅತೀವವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಹಿಂಬದಿಯ ಗೋಡೆ ಕುಸಿತಗೊಂಡು ಮನೆಯವರು ಕೂದಲೆಳೆಯ ಅಂತರದಲ್ಲಿ ಭಾರೀ ಅಪಾಯದಿಂದ ಪಾರಾಗಿರುವ ಘಟನೆ ಇದೀಗ ವರದಿಯಾಗಿದೆ.ಕಲ್ಲುಗುಂಡಿ ದಂಡಕಜೆಯ ಮಧುಸೂದನ ಎಂಬವರ ಮನೆಯ ಹಿಂಬದಿಯಲ್ಲಿ ಗೋಡೆ ಕುಸಿತಗೊಂಡಿದ್ದು, ಅಡುಗೆ ಕೋಣೆಗೆ ಸಂಪೂರ್ಣ ಹಾನಿ ಸಂಭವಿಸಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಮಾಜಿ ಗ್ರಾ.ಪಂ ಅಧ್ಯಕ್ಷರು ಮತ್ತು ವಿಪತ್ತು ನಿರ್ವಹಣಾ ತಂಡ ಮತ್ತು ಸ್ಥಳೀಯರು ತೆರಳಿದ್ದು...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಇಂದು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದಯಾನಂದ ಕಲ್ನಾರ್ ವಹಿಸಿದ್ದರು. ಸಭೆಯ ಕಾರ್ಯಕಲಾಪಗಳ ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷತೆಗೆ ಲೋಕೇಶ್ ಪೆರ್ಲಂಪಾಡಿ ಮತ್ತು ಪ್ರಜ್ಞಾ ಎಸ್. ನಾರಾಯಣ್ ಸ್ಪರ್ಧಿಸಿದ್ದರು. ಅಧ್ಯಕ್ಷತೆಗೆ ಚುನಾವಣೆ ನಡೆದು ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ...
2023ರಿಂದ ಇದುವರೆಗೆ ಕನಕಮಜಲಿನಲ್ಲಿ ನಡೆದ ಸರಣಿ ಕಳ್ಳತನದ ಬಗ್ಗೆ ಸ್ವರ್ಣ ಮಹಿಳಾ ಮಂಡಲದಿಂದ ಕರ್ನಾಟಕ ಮಹಿಳಾ ಆಯೋಗಕ್ಕೆ ಹಾಗೂ ದ.ಕ ಎಸ್.ಪಿ ಯವರಿಗೆ ಮನವಿ ಸಲ್ಲಿಸಿದ್ದಾರೆ. ಶೀಘ್ರವಾಗಿ ಅಪರಾಧಿಗಳನ್ನು ಪತ್ತೆಹಚ್ಚಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದು, ಮನವಿಗೆ ಸ್ಪಂದಿಸಿದ ಮಹಿಳಾ ಆಯೋಗ ಪೋಲಿಸ್ ವರಿಷ್ಠಾಧಿಕಾರಿಯವರ ಮೂಲಕ ಸುಳ್ಯ ಠಾಣೆಗೆ ಶೀಘ್ರವಾಗಿ ತನಿಖೆ ನಡೆಸುವಂತೆ ಆದೇಶಿಸಿದೆ ಎಂದು ತಿಳಿದು...
ಗೌಡರ ಯುವ ಸೇವಾ ಸಂಘ ಸುಳ್ಯ, ತಾಲೂಕು ಮಹಿಳಾ ಘಟಕ, ತಾಲೂಕು ತರುಣ ಘಟಕಗಳ ಸಹಯೋಗದೊಂದಿಗೆ ಸುಳ್ಯ ನಗರ ಗೌಡ ಸಮಿತಿ, ಮಹಿಳಾ ಘಟಕ, ತರುಣ ಘಟಕಗಳ ನೇತೃತ್ವದಲ್ಲಿ ಗೌಡ ಸಮಾಜ- ಬಾಂಧವರುಗಳ ಆಟಿ ಸಂಭ್ರಮ ಕಾರ್ಯಕ್ರಮವನ್ನು ಆಗಸ್ಟ್ 4 ರಂದು ಕೊಡಿಯಾಲಬೈಲಿನ ಗೌಡ ಸಮುದಾಯಭವನದಲ್ಲಿ ಏರ್ಪಡಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಆಕರ್ಷಕ ಸ್ಪರ್ಧೆಗಳು...
ಮರ್ಕಂಜ ಗ್ರಾಮದ ಬಳ್ಳಕ್ಕಾನ ಮೋನಪ್ಪ ಪೂಜಾರಿ ಎಂಬವರ ಪುತ್ರ ರವಿಕುಮಾರ ಎಂಬವರು ನಿನ್ನೆ ರಾತ್ರಿ ಅಸೌಖ್ಯದಿಂದ ನಿಧನರಾದರು. ಅವರಿಗೆ 38 ವರ್ಷ ವಯಸ್ಸಾಗಿತ್ತು. ಮೃತರು ತಂದೆ, ತಾಯಿ ಪುಷ್ಪಾವತಿ, ಪತ್ನಿ ಪ್ರೇಮ, ಮಗಳು ವರ್ಷಿಣಿ, ಮಗ ಪ್ರೀತಮ್, ಸಹೋದರಿ ಜಯಶ್ರೀ ಸಹೋದರ ರಾಜೇಶ್ ರನ್ನು ಅಗಲಿದ್ದಾರೆ.
ಪತ್ರಿ ವರ್ಷ ಜುಲೈ 29ರಂದು ಭಾರತದಾದ್ಯಂತ “ಮರುಜಲೀಕರಣ ದ್ರಾವಣ ದಿನ ಅಥವಾ ಓಆರ್ಯಸ್ ದಿನ” ಎಂದು ಆಚರಿಸಿ ವಾಂತಿ, ಬೇಧಿ ಮತ್ತು ಅತಿಸಾರದಿಂದ ಉಂಟಾಗುವ ತೊಂದರೆಗಳ ಬಗ್ಗೆ ಜಾಗೃತಿ ಮೂಡಿಸಿ, ಓಆರ್ಯಸ್ ಬಳಕೆಯಿಂದ ಉಂಟಾಗುವ ಲಾಭ ಮತ್ತು ಪ್ರಯೋಜನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. 2001ರಿಂದ ಈ ಆಚರಣೆ ಜಾರಿಗೆ ಬಂದಿತು. ಭಾರತೀಯ ಮಕ್ಕಳ ತಜ್ಞರ...
ಅಜ್ಜಾವರ ಗ್ರಾಮದ ದೊಡ್ಡೇರಿ ಭಾಗದ ನಿವಾಸಿಗಳು ವಿದ್ಯುತ್ ಲೈನ್ ಟ್ರೀಕಟ್ಟಿಂಗ್ ಕಾರ್ಯವನ್ನು ಶ್ರಮದಾನ ಮೂಲಕ ಮಾಡಿದರು. ಸುಮಾರು 25 ಕ್ಕೂ ಮಿಕ್ಕಿ ಜನ ಶ್ರಮದಾನದಲ್ಲಿ ಭಾಗಿಯಾದರು. ಶ್ರಮದಾನದ ಖರ್ಚುವೆಚ್ಚಗಳಿಗಾಗಿ ದಯಾನಂದ ಡಿ.ಕೆ.ದೊಡ್ಡೇರಿ ರೂ.1000 ಧನಸಹಾಯ ನೀಡಿ ಸಹಕರಿಸಿದರು.
ಪೆರಾಜೆ ಗ್ರಾಮದ ಬಂಗಾರಕೋಡಿ ದರ್ಬೆಮಜಲಿನ ಯುವಕನೋರ್ವ ಮನೆಗೆ ಹಿಂತಿರುಗದೆ ಮನೆಯವರಿಗೆ ದೂರವಾಣಿ ಸಂಪರ್ಕಕ್ಕೂ ಸಿಗದ ಹಿನ್ನೆಯಲ್ಲಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ನೀಡಿದ ಘಟನೆ ವರದಿಯಾಗಿದೆ. ಪೆರಾಜೆಯ ಬಂಗಾರಕೋಡಿ ದರ್ಬೆಮಜಲಿನ ಚಂದ್ರಶೇಖರ ಹಾಗೂ ಶ್ರೀಮತಿ ಅನಂತೇಶ್ವರಿ ಎಂಬವರ ಪುತ್ರ ಶಿವರಾಜ್ ಕುಮಾರ್ ಜ.26ರಂದು ಮನೆಯಿಂದ ಹೋದವರು ಮನೆಗೆ ಮರಳಿ ಬಾರದೆ ನಾಪತ್ತೆಯಾಗಿದ್ದಾರೆ.ಶಿವರಾಜ್ ಕುಮಾರ್ ಅವರಿಗೆ...
ಸುಳ್ಯದ ಕುರುಂಜಿಭಾಗ್ ನಲ್ಲಿರುವ ಮಧುವನ ಹೋಟೇಲ್ ನಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಅಲ್ಪ ಕಾಲದ ಅನಾರೋಗ್ಯದಿಂದ ಜು.21 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದಿ.ರಾಮಣ್ಣ ಗೌಡರ ಪುತ್ರ ಶಿವಪ್ರಕಾಶ್ (32) ಮೃತಪಟ್ಟ ದುರ್ದೈವಿ. ಮೃತರು ಸಹೋದರರಾದ ಪದ್ಮನಾಭ, ಸುಳ್ಯದಲ್ಲಿ ಹೋಟೆಲ್ ಉದ್ಯಮಿಗಳಾಗಿರುವ ಚಿದಾನಂದ, ಲವಕುಮಾರ್,...
Loading posts...
All posts loaded
No more posts
