- Sunday
- August 23rd, 2026
ಜೇಸೀಐ ಮಂಗಳೂರು ಶ್ರೇಷ್ಠ ಆತಿಥ್ಯದಲ್ಲಿ ನಡೆದ "ವೈಭವ" ವಲಯ ವ್ಯವಹಾರ ಸಮ್ಮೇಳನದಲ್ಲಿ ಸಮಾಜದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ಕೊಡ ಮಾಡುವ ಸಾಧನಾ ಶ್ರೀ ಪ್ರಶಸ್ತಿಯನ್ನು ಜೇಸಿಐ ಸುಳ್ಯ ಸಿಟಿಯ ಪೂರ್ವ ಅಧ್ಯಕ್ಷರಾದ ಜೇಸಿ ಚಂದ್ರಶೇಖರ ಕನಕಮಜಲು ರವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಲಯಾದ್ಯಕ್ಷ ಗಿರೀಶ್ ಎಸ್ಪಿ, ವಲಯ ಉಪಾಧ್ಯಕ್ಷ ಅಭಿಷೇಕ್, ಜೇಸಿ ರವಿಚಂದ್ರ ಪಾಟಾಳಿ,...
ಸುಬ್ರಹ್ಮಣ್ಯ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ 54ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಮೊಗ್ರ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಯಶೋಧಕೃಷ್ಣ ನೂಚಿಲ, ಭರತ್ ನೆಕ್ರಾಜೆ, ವಿನ್ಯಾಸ್ ಹೊಸೋಳಿಕೆ, ನಿತೀನ್ ಭಟ್, ಮಹೇಶ್ ಗುಡ್ಡೆಮನೆ, ಭಾರತಿ ದಿನೇಶ್ ನೇಮಕಗೊಂಡರು. ಎ.ವೆಂಕಟ್ರಾಜ್, ಕೆ.ಯಜ್ಞೇಶ್ ಆಚಾರ್ ಮತ್ತು ರಾಜೇಶ್ ಎನ್.ಎಸ್ ಸಮಿತಿಯ ಸಂಚಾಲಕರಾಗಿ ಮುಂದುವರೆದರು. 53ನೇ ವರ್ಷದ...
ಸುಳ್ಯ ಕಸಬಾ ನಿವಾಸಿ ಕಾನತ್ತಿಲ ದಿ.ಸುಬ್ಬಪ್ಪ ಗೌಡರ ಧರ್ಮಪತ್ನಿ ರಾಮಕ್ಕ ಇಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ದಾಮೋದರ, ವಸಂತ ಪುತ್ರಿಯರಾದ ನಾಗವೇಣಿ, ಶೇಷಮ್ಮ, ಮಲ್ಲಮ್ಮ, ಶಾರದಾ ಹಾಗೂ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ಕೆ. ಆರ್. ಎಲ್. ಪಿ.ಎಸ್ (ಸಂಜೀವಿನಿ) ಬೆಂಗಳೂರು, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಇಲಾಖೆ, ತಾಲೂಕು ಪಂಚಾಯತ್ ಸುಳ್ಯ, ಕೃಷಿ ಇಲಾಖೆ ಸುಳ್ಯ, ತೋಟಗಾರಿಕಾ ಇಲಾಖೆ ಸುಳ್ಯ, ರೈತ ಉತ್ಪಾದಕ ಕಂಪೆನಿ(ರಿ)ಸುಳ್ಯ, ಇವರುಗಳ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಟ ಜಾತಿ (sc)ರೈತ ಬಾಂಧವರಿಗೆ ಎಸ್.ಸಿ.ಎಸ್.ಪಿ. ಯೋಜನೆಯಡಿ 'ವೈಜ್ಞಾನಿಕ ತೆಂಗು ಕೃಷಿ ಕುರಿತು ತರಭೇತಿ'...
ಕಡಬದಿಂದ ಮರ್ದಾಳ, ಪಂಜ,ಬಳ್ಪ, ಕಮಿಲ, ಗುತ್ತಿಗಾರು ಹಾಲೆಮಜಲು ರಸ್ತೆಯ ಮಧ್ಯೆ ಅಮೂಲ್ಯ ದಾಖಲೆಗಳು ಇದ್ದ ಪರ್ಸ್ ಕಳೆದು ಹೋಗಿರುತ್ತದೆ. ಸಿಕ್ಕಿದವರು ಈ ನಂಬರಿಗೆ ಸಂಪರ್ಕಿಸಬೇಕಾಗಿ ವಿನಂತಿ. ಮೋಹನ ಕೆ.ಜಿ. ಕಡೆಪಾಲ94800419917022214949
ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ, ವರ್ಷವೊಂದರಲ್ಲಿ ಹೆಪಟೈಟಿಸ್...
ನಿಮ್ಮೂರಿನ ಬಿ.ಎಸ್.ಎನ್.ಎಲ್. ನೆಟ್ವರ್ಕ್ ಸಮಸ್ಯೆಗಳಿದ್ದರೇ, ಟವರ್ ನ ಸಮಸ್ಯೆಗಳಿದ್ದಲ್ಲಿ ನಿಮ್ಮ ಊರಿನ ಟವರ್ ಇರುವ ಸ್ಥಳದ ಮಾಹಿತಿಯನ್ನು ಶಾಸಕರ ಕಛೇರಿ ನಂಬರ್ 9972034089 ಸಂಖ್ಯೆಗೆ 3 ದಿನದ ಒಳಗಾಗಿ ಕಳುಹಿಸಿಕೊಡಿ.
ಸಂಸದರ ಉಪಸ್ಥಿತಿಯಲ್ಲಿ ಸಂಸದರ ಕಛೇರಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಿ.ಎಸ್.ಎನ್.ಎಲ್, ಟವರ್ ಗಳ ಸಮಸ್ಯೆಗಳನ್ನು ಸರಿಪಡಿಸುವಂತೆ ಮತ್ತು ನೂತನ ಟವರ್ ಗಳ ನಿರ್ಮಾಣ ಕಾರ್ಯವನ್ನು ಶೀಘ್ರವಾಗಿ ಮುಗಿಸಿ ಜನತೆಗೆ ಉಪಯೋಗಕ್ಕೆ ಬರುವಂತೆ ಅಧಿಕಾರಿಗಳೊಂದಿಗೆ ಶಾಸಕಿ ಭಾಗೀರಥಿ ಮುರುಳ್ಯ ಚರ್ಚೆ ನಡೆಸಿದರು. ಶೀಘ್ರವಾಗಿ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಕಾರ್ಗಿಲ್ ದಿನಾಚರಣೆ ಹಾಗೂ ಯೋಧರಿಗೆ ಸನ್ಮಾನ ಸಮಾರಂಭ ಸುಬ್ರಹ್ಮಣ್ಯ ಜುಲೈ 27: ಸುಬ್ರಹ್ಮಣ್ಯ ರೋಟರಿ ಕ್ಲಬ್, ರೈತ ಯುವಕ ಮಂಡಲ ಏನೆಕಲ್ಲು, ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ಲಿಜನ್ ಹಾಗೂ ಇನ್ನರ್ವೀಲ್ ಕ್ಲಬ್ ಸುಬ್ರಹ್ಮಣ್ಯ ಇವುಗಳ ಜಂಟಿ ಆಶಯದಲ್ಲಿ ಏನೇಕಲ್ಲಿನ ರೈತ ಯುವಕ ಮಂಡಲದ ಸಭಾಭವನದಲ್ಲಿ ಕಾರ್ಗಿಲ್ ವಿಜಯ ದಿವಸದ ದಿನಾಚರಣೆ...
ಸುಬ್ರಹ್ಮಣ್ಯ ಜುಲೈ 27 : ಸುಬ್ರಹ್ಮಣ್ಯ ಕುಮಾರಧಾರ ಪಕ್ಕದ ಪರ್ವತಮುಖಿಯಲ್ಲಿ ಬೃಹದಾಕಾರದ ಮರ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಮೇಲೆ ಬಿದ್ದಿದ್ದು ವಿದ್ಯುತ್ ಕಂಬ ತುಂಡಾಗಿ ಕಂಬಗಳು ಕೂಡ ಮುರಿದು ಬಿದ್ದು ಬೆಳಗಿನಿಂದ ತುಂಬಾ ಹೊತ್ತು ಸಂಚಾರಕ್ಕೆ ತೊಡಕುಂಟಾಯಿತು. ಕೂಡಲೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಅಧಿಕಾರಿಗಳ ತಂಡ ಹಾಗೂ ಅರಣ್ಯ ಅಧಿಕಾರಿಗಳ ತಂಡವು ಮರವನ್ನು ತೆರವುಗೊಳಿಸುವಲ್ಲಿ ಹಾಗೂ ವಿದ್ಯುತ್ ಕಂಬಗಳನ್ನು...
Loading posts...
All posts loaded
No more posts
